AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಮೀನು ಅರ್ಜಿ ವಜಾಗೊಳ್ಳುತ್ತಿದ್ದಂತೆ ಜೈಲಿನಲ್ಲಿ ಬಿಕ್ಕಿ ಬಿಕ್ಕಿ ಅತ್ತ ನಟಿಯರು

ಬೆಂಗಳೂರು: ರಾಗಿಣಿ ಮತ್ತು ಸಂಜನಾರ ಜಾಮೀನು ಅರ್ಜಿ ವಜಾಗೊಳ್ಳುತ್ತಿದ್ದಂತೆ ಇಬ್ಬರು ನಟಿಯರು ಬಿಕ್ಕಿ ಬಿಕ್ಕಿ ಅತ್ತರು ಎಂದು ತಿಳಿದುಬಂದಿದೆ. ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿಯರು ಇಂದು ಬಹುತೇಕ ಹೊರ ಬರುವ ನಿರೀಕ್ಷೆಯಲ್ಲಿದ್ದರು. ಆದರೆ, ಕೋರ್ಟ್​ ಆದೇಶ ಹೊರಬೀಳುತ್ತಿದ್ದಂತೆ ಬಿಕ್ಕಿ ಬಿಕ್ಕಿ ಅಳಲು ಪ್ರಾರಂಭಿಸಿದರು ಎಂದು ತಿಳಿದುಬಂದಿದೆ. ಜೈಲಿನ ಅಧಿಕಾರಿಗಳಿಗೆ ಕೈ ಮುಗಿದ ನಟಿಯರು, ನಾವು ಏನು ತಪ್ಪು ಮಾಡಿಲ್ಲ. ನಮ್ಮನ್ನು ಬಿಡಿ ಎಂದು ಗೋಗರೆದರಂತೆ. ರಾಗಿಣಿಯ ಜೈಲು ವಾಸ ಇಂದಿಗೆ ಹದಿನಾಲ್ಕು ದಿನ ಪೂರೈಸಿದೆ. ಜೈಲು […]

ಜಾಮೀನು ಅರ್ಜಿ ವಜಾಗೊಳ್ಳುತ್ತಿದ್ದಂತೆ ಜೈಲಿನಲ್ಲಿ ಬಿಕ್ಕಿ ಬಿಕ್ಕಿ ಅತ್ತ ನಟಿಯರು
KUSHAL V
|

Updated on: Sep 28, 2020 | 4:43 PM

Share

ಬೆಂಗಳೂರು: ರಾಗಿಣಿ ಮತ್ತು ಸಂಜನಾರ ಜಾಮೀನು ಅರ್ಜಿ ವಜಾಗೊಳ್ಳುತ್ತಿದ್ದಂತೆ ಇಬ್ಬರು ನಟಿಯರು ಬಿಕ್ಕಿ ಬಿಕ್ಕಿ ಅತ್ತರು ಎಂದು ತಿಳಿದುಬಂದಿದೆ.

ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿಯರು ಇಂದು ಬಹುತೇಕ ಹೊರ ಬರುವ ನಿರೀಕ್ಷೆಯಲ್ಲಿದ್ದರು. ಆದರೆ, ಕೋರ್ಟ್​ ಆದೇಶ ಹೊರಬೀಳುತ್ತಿದ್ದಂತೆ ಬಿಕ್ಕಿ ಬಿಕ್ಕಿ ಅಳಲು ಪ್ರಾರಂಭಿಸಿದರು ಎಂದು ತಿಳಿದುಬಂದಿದೆ. ಜೈಲಿನ ಅಧಿಕಾರಿಗಳಿಗೆ ಕೈ ಮುಗಿದ ನಟಿಯರು, ನಾವು ಏನು ತಪ್ಪು ಮಾಡಿಲ್ಲ. ನಮ್ಮನ್ನು ಬಿಡಿ ಎಂದು ಗೋಗರೆದರಂತೆ.

ರಾಗಿಣಿಯ ಜೈಲು ವಾಸ ಇಂದಿಗೆ ಹದಿನಾಲ್ಕು ದಿನ ಪೂರೈಸಿದೆ. ಜೈಲು ವಾಸದಿಂದ ನಟಿ ಹೈರಾಣಾಗಿದ್ದಾರೆ ಎಂದು ಹೇಳಲಾಗಿದೆ. ಜೊತೆಗೆ, ಸಂಜನಾಳ ಜೈಲು ವಾಸ ಹನ್ನೆರಡನೆ ದಿನಕ್ಕೆ ಕಾಲಿಟ್ಟಿದೆ. ಇದೀಗ, NDPS ಕೋರ್ಟ್‌ನಿಂದ ಜಾಮೀನು ಅರ್ಜಿ ವಜಾ ಆದ ಹಿನ್ನೆಲೆಯಲ್ಲಿ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾರನ್ನು ಸೆಲ್​ಗೆ ಶಿಫ್ಟ್ ಮಾಡಲು ಸಿದ್ಧತೆ ನಡೆಸಲಾಗುತ್ತಿದೆ ಎಂಬ ಮಾಹಿತಿ ದೊರೆತಿದೆ. ವಿಶೇಷ ಕೊಠಡಿಯಿಂದ ಸೆಲ್‌ಗೆ ಶಿಫ್ಟ್‌ ಮಾಡಲು ಸಿದ್ಧತೆ ನಡೆಸಲಾಗುತ್ತಿದ್ದು ಇಂದು ಅಥವಾ ನಾಳೆ ಇಬ್ಬರು ಜೈಲು ಸೆಲ್‌ಗೆ ಶಿಫ್ಟ್‌ ಆಗುವ ಸಾಧ್ಯತೆಯಿದೆ.

ಜೈಲ್‌ನ ಸೆಲ್‌ನಲ್ಲಿ ಇಬ್ಬರಿಗೂ ಒಂದೇ ಕೊಠಡಿ ಕೊಡಲಾಗುವುದು. ಜೈಲ್‌ನ ಸೆಲ್‌ನಿಂದ ಇಬ್ಬರೂ ಹತ್ತು ದಿನಗಳ ಕಾಲ ಸೆಲ್‌ನಿಂದ ಹೊರಬರುವಂತಿಲ್ಲ. ನಟಿಯರಿಗೆ ಜೈಲ್‌ನ ಸೆಲ್‌ನಲ್ಲಿ 2ನೇ ಹಂತದ ಕ್ವಾರಂಟೈನ್ ನಡೆಸಲಾಗುವುದು ಎಂಬ ಮಾಹಿತಿ ಸಿಕ್ಕಿದೆ.

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ