AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಾದಕ’ ನಟಿಯರು ಜೈಲಿಗೆ ತರಿಸಿಕೊಳ್ತಿದ್ದ ‘ಪಾರ್ಸಲ್’​ಗೆ ಜೈಲು ಸಿಬ್ಬಂದಿ ತಡೆ

ಬೆಂಗಳೂರು: ಇಷ್ಟು ದಿನ ಎಣ್ಣೆ ಸೀಗೆಕಾಯಿಯಂತಿದ್ದ ನಶೆರಾಣಿಯರಾದ ರಾಗಿಣಿ ಮತ್ತು ಸಂಜನಾರ ಕಾಟ ತಾಳಲಾರದೆ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳು ಇಬ್ಬರಿಗೂ ಪ್ರತ್ಯೇಕ ಕೊಠಡಿಯ ವ್ಯವಸ್ಥೆ ಮಾಡಿದ್ದರು. ಇದೀಗ, ಸೈಲೆಂಟಾಗಿದ್ದ ರಾಗಿಣಿ ಮತ್ತೆ ತನ್ನ ಕಿಲಾಡಿ ಬುದ್ಧಿ ತೋರಿದ್ದಾಳೆ. ಬೆನ್ನು ನೋವು ಎಂಬ ನೆಪವೊಡ್ಡಿ ಜೈಲಿನಿಂದ ಹೊರ ಬರಲು ತಂತ್ರ ನಡೆಸುತ್ತಿರುವ ರಾಗಿಣಿ ತಮಗೆ ಬೇಕಾದ ವಸ್ತುಗಳನ್ನು ಕೊರಿಯರ್ ಮೂಲಕ ತರಿಸಿಕೊಳ್ಳುತ್ತಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಅಂದ ಹಾಗೆ, ತುಪ್ಪದ ಬೆಡಗಿ ತಮ್ಮ ಮನೆಯವರಿಗೆ ಒಂದು ಬಾರಿ […]

‘ಮಾದಕ’ ನಟಿಯರು ಜೈಲಿಗೆ ತರಿಸಿಕೊಳ್ತಿದ್ದ ‘ಪಾರ್ಸಲ್’​ಗೆ ಜೈಲು ಸಿಬ್ಬಂದಿ ತಡೆ
KUSHAL V
|

Updated on:Oct 13, 2020 | 1:55 PM

Share

ಬೆಂಗಳೂರು: ಇಷ್ಟು ದಿನ ಎಣ್ಣೆ ಸೀಗೆಕಾಯಿಯಂತಿದ್ದ ನಶೆರಾಣಿಯರಾದ ರಾಗಿಣಿ ಮತ್ತು ಸಂಜನಾರ ಕಾಟ ತಾಳಲಾರದೆ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳು ಇಬ್ಬರಿಗೂ ಪ್ರತ್ಯೇಕ ಕೊಠಡಿಯ ವ್ಯವಸ್ಥೆ ಮಾಡಿದ್ದರು.

ಇದೀಗ, ಸೈಲೆಂಟಾಗಿದ್ದ ರಾಗಿಣಿ ಮತ್ತೆ ತನ್ನ ಕಿಲಾಡಿ ಬುದ್ಧಿ ತೋರಿದ್ದಾಳೆ. ಬೆನ್ನು ನೋವು ಎಂಬ ನೆಪವೊಡ್ಡಿ ಜೈಲಿನಿಂದ ಹೊರ ಬರಲು ತಂತ್ರ ನಡೆಸುತ್ತಿರುವ ರಾಗಿಣಿ ತಮಗೆ ಬೇಕಾದ ವಸ್ತುಗಳನ್ನು ಕೊರಿಯರ್ ಮೂಲಕ ತರಿಸಿಕೊಳ್ಳುತ್ತಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

ಅಂದ ಹಾಗೆ, ತುಪ್ಪದ ಬೆಡಗಿ ತಮ್ಮ ಮನೆಯವರಿಗೆ ಒಂದು ಬಾರಿ ಕರೆ ಮಾಡುತ್ತಾರಂತೆ. ಜೈಲಿನ ಬೂತ್​ನಿಂದ ಕರೆ ಮಾಡಿ ಇಂತಿಂಥ ವಸ್ತುಗಳ ಅಗತ್ಯವಿದೆ ಎಂದು ತಮ್ಮ ಪೋಷಕರಿಗೆ ತಿಳಿಸುತ್ತಾಳಂತೆ. ನಂತರ ಆಕೆಯ ಕುಟುಂಬಸ್ಥರು ರಾಗಿಣಿಯ ಹೆಸರಿಗೆ ಕೊರಿಯರ್ ಮಾಡುತ್ತಾರಂತೆ. ಕೊರಿಯರ್ ಮೂಲಕ ಬಂದರೆ ಆ ವಸ್ತುಗಳನ್ನು ಅಧಿಕಾರಿಗಳು ಜೈಲಿನಲ್ಲಿರುವ ವಿಶೇಷ ಸ್ಕ್ಯಾನರ್ ಮೂಲಕ ಸ್ಕ್ಯಾನ್​ ಮಾಡಿ ನೀಡುತ್ತಾರೆ. ಇದೇ ರೀತಿ, ತನಗೆ ಬೇಕಾದ ಎಲ್ಲಾ ವಸ್ತುಗಳನ್ನು ತರಿಸಿಕೊಳ್ಳುತ್ತಿದ್ದಾರಂತೆ.

ಅಂತೆಯೇ, ನಿನ್ನೆ ಕುಡಿಯುವ ನೀರಿನ ವಾಟರ್​ ಹೀಟರ್​ ಮೆಷಿನ್​ನ ರಾಗಿಣಿ ತರಿಸಿಕೊಂಡಿದ್ದರಂತೆ. ಆದರೆ, ಸ್ಕ್ಯಾನ್ ವೇಳೆ ಇದು ಬೆಳಕಿಗೆ ಬರುತ್ತಿದ್ದಂತೆ ಅಧಿಕಾರಿಗಳು ಕೊರಿಯರ್​ನ ವಾಪಸ್ ಕಳಿಸಿದ್ದಾರೆ ಎಂದು ತಿಳಿದುಬಂದಿದೆ. ವಿಚಾರಣಾಧೀನ ಕೈದಿಗಳಿಗೆ ಬಟ್ಟೆ ರೀತಿಯ ವಸ್ತುಗಳನ್ನು ನೀಡುವುದಕ್ಕೆ ಮಾತ್ರ ಅವಕಾಶವಿದೆ ಎಂಬ ನಿಯಮದಡಿ ಕೊರಿಯರ್​ಅನ್ನು ಅಧಿಕಾರಿಗಳು ವಾಪಸ್​ ಕಳಿಸಿದ್ದಾರೆ.

ಇತ್ತ ಗಂಡ ಹೆಂಡತಿ ಬೆಡಗಿ ಕಿರಿಕ್ ಸಂಜನಾ ಸ್ಟೈಲ್​ ಕೊಂಚ ಡಿಫರೆಂಟ್. ಸಂಜನಾ ನಿನ್ನೆ ಪೋಷಕರನ್ನು ಜೈಲಿಗೆ ಕರೆಸಿಕೊಂಡಿದ್ದು ಅವರ ಜೊತೆಗೆ ತನಗೆ ಬೇಕಾದ ಕೆಲ ವಸ್ತುಗಳನ್ನೂ ಸಹ ತರಿಸಿಕೊಂಡಿದ್ದರಂತೆ. ಆದರೆ, ತಿಂಡಿ ಹಾಗೂ ಬಟ್ಟೆಗಳನ್ನ ಹೊರತುಪಡಿಸಿ ಜೈಲು ಸಿಬ್ಬಂದಿ ಇತರೆ ವಸ್ತುಗಳನ್ನು ವಾಪಸ್ ಮಾಡಿದ್ದಾರೆ.

Published On - 1:53 pm, Tue, 13 October 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ