AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಸ್ಪೆಷಲ್ ಹಾಡಿಗೆ ಹೆಜ್ಜೆ ಹಾಕಿದ ನಟಿ ರಾಗಿಣಿ; ‘ಗಜರಾಮ’ ಸಿನಿಮಾ ಸಾಂಗ್​ನಲ್ಲಿ ಕುಣಿದ ತುಪ್ಪದ ಬೆಡಗಿ

ಹಾಸ್ಯ ನಟ ಡಿಂಗ್ರಿ ನಾಗರಾಜ್ ಅವರ ಮಗ ರಾಜವರ್ಧನ್ ಚಿತ್ರರಂಗದಲ್ಲಿ ತೊಡಗಿಕೊಂಡಿದ್ದಾರೆ. ಅವರು ‘ಗಜರಾಮ’ ಚಿತ್ರದಲ್ಲಿ ನಟಿಸುತ್ತಿದ್ದು, ಈ ಚಿತ್ರದ ಕೆಲಸಗಳು ಪ್ರಗತಿಯಲ್ಲಿವೆ. ಈ ಚಿತ್ರದ ವಿಶೇಷ ಹಾಡಿನ ಚಿತ್ರೀಕರಣ ಚಿಕ್ಕಗುಬ್ಬಿಯಲ್ಲಿ ನಡೆದಿದೆ. ಭರ್ಜರಿ ಸೆಟ್​ನಲ್ಲಿ, ಧನು ಮಾಸ್ಟರ್ ಕೊರಿಯೋಗ್ರಫಿಯಲ್ಲಿ ಈ ಹಾಡು ಮೂಡಿ ಬಂದಿದೆ.

ಮತ್ತೆ ಸ್ಪೆಷಲ್ ಹಾಡಿಗೆ ಹೆಜ್ಜೆ ಹಾಕಿದ ನಟಿ ರಾಗಿಣಿ; ‘ಗಜರಾಮ’ ಸಿನಿಮಾ ಸಾಂಗ್​ನಲ್ಲಿ ಕುಣಿದ ತುಪ್ಪದ ಬೆಡಗಿ
ವಿಶೇಷ ಹಾಡಿನಲ್ಲಿ ರಾಗಿಣಿ
ರಾಜೇಶ್ ದುಗ್ಗುಮನೆ
|

Updated on: Oct 02, 2023 | 2:39 PM

Share

ನಟಿ ರಾಗಿಣಿ ದ್ವಿವೇದಿ (Ragini Dwivedi) ಅವರು ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಇದರ ಜೊತೆಗೆ ವಿಶೇಷ ಹಾಡಿಗೂ ಅವರು ಹೆಜ್ಜೆ ಹಾಕಿದ್ದಾರೆ. ‘ತಪ್ಪಾ ಬೇಕಾ ತುಪ್ಪಾ..’ ಹಾಡಿಗೆ ಹೆಜ್ಜೆ ಹಾಕಿ ಅವರು ತುಪ್ಪದ ಬೆಡಗಿ ಎಂದೇ ಫೇಮಸ್ ಆದರು. ಈಗ ‘ಗಜರಾಮ’ ಸಿನಿಮಾದ ವಿಶೇಷ ಹಾಡಿನಲ್ಲಿ ಅವರು ಡ್ಯಾನ್ಸ್ ಮಾಡಿದ್ದಾರೆ. ಈ ಸಾಂಗ್​ನಲ್ಲಿ ರಾಗಿಣಿ ಹೇಗೆ ಹೆಜ್ಜೆ ಹಾಕಿದ್ದಾರೆ ಎಂದು ನೋಡೋಕೆ ಅಭಿಮಾನಿಗಳು ಕಾದಿದ್ದಾರೆ.

ಹಾಸ್ಯ ನಟ ಡಿಂಗ್ರಿ ನಾಗರಾಜ್ ಅವರ ಮಗ ರಾಜವರ್ಧನ್ ಚಿತ್ರರಂಗದಲ್ಲಿ ತೊಡಗಿಕೊಂಡಿದ್ದಾರೆ. ಅವರು ‘ಗಜರಾಮ’ ಚಿತ್ರದಲ್ಲಿ ನಟಿಸುತ್ತಿದ್ದು, ಈ ಚಿತ್ರದ ಕೆಲಸಗಳು ಪ್ರಗತಿಯಲ್ಲಿವೆ. ಈ ಚಿತ್ರದ ವಿಶೇಷ ಹಾಡಿನ ಚಿತ್ರೀಕರಣ ಚಿಕ್ಕಗುಬ್ಬಿಯಲ್ಲಿ ನಡೆದಿದೆ. ಭರ್ಜರಿ ಸೆಟ್​ನಲ್ಲಿ, ಧನು ಮಾಸ್ಟರ್ ಕೊರಿಯೋಗ್ರಫಿಯಲ್ಲಿ ಈ ಹಾಡು ಮೂಡಿ ಬಂದಿದೆ. ರಾಗಿಣಿ‌ ಜೊತೆ ರಾಜವರ್ಧನ್ ಹೆಜ್ಜೆ ಹಾಕಿದ್ದಾರೆ.

‘ನಮ್ಮ ಇಂಡಸ್ಟ್ರಿಯಲ್ಲಿ ಹೊಸ ಪ್ರಯತ್ನ ಆಗಬೇಕಿದೆ. ನಮ್ಮ ಭಾಷೆಯ ಸಿನಿಮಾಗಳು ಒಳ್ಳೆ ರೀತಿಯಲ್ಲಿ ಬೆಳೆಯುತ್ತಿವೆ. ಇದನ್ನು ನೋಡಿ ನನಗೆ ಹೆಮ್ಮೆ ಎನಿಸುತ್ತಿದೆ. ಗಜರಾಮ ಸಿನಿಮಾದಲ್ಲಿ ನನಗಾಗಿ ವಿಶೇಷ ಸಾಂಗ್ ಮಾಡಲಾಗಿದೆ. ರಾಜವರ್ಧನ್ ಒಳ್ಳೆಯ ಕಲಾವಿದ. ಈ ವರ್ಷದ ಹಿಟ್ ಹಾಡುಗಳಲ್ಲಿ ಈ ಹಾಡು ಇರಲಿದೆ’ ಎಂದರು ರಾಗಿಣಿ.

‘ಗಜರಾಮ’ ಸಿನಿಮಾದ ಶೂಟಿಂಗ್ ಕೊನೆಯ ಹಂತ ತಲುಪಿದೆ. ಕಳೆದ ಒಂದು ವರ್ಷದಿಂದ ಸಿನಿಮಾದ ಶೂಟಿಂಗ್ ನಡೆಯುತ್ತಿದೆ. ಸಿನಿಮಾ ಒಳ್ಳೆಯ ರೀತಿಯಲ್ಲಿ ಮೂಡಿ ಬಂದಿದೆ ಅನ್ನೋದು ರಾಜವರ್ಧನ್ ಅವರ ಅಭಿಪ್ರಾಯ. ‘ರಾಮ್ ಅನ್ನೋದು ನನ್ನ ಪಾತ್ರದ ಹೆಸರು. ರಾಮ ರಾವಣ ಎರಡೂ ನಾನೇ’ ಎಂದಿದ್ದಾರೆ ರಾಜವರ್ಧನ್.

ಇದನ್ನೂ ಓದಿ: ಸ್ವಿಮ್ಮಿಂಗ್​ಪೂಲ್​ನಲ್ಲಿ ರಾಗಿಣಿ ದ್ವಿವೇದಿ; ಪಡ್ಡೆಗಳ ನಿದ್ದೆ ಕದ್ದ ತುಪ್ಪದ ಬೆಡಗಿ

ಪೊಲೀಸ್ ಪಾತ್ರದಲ್ಲಿ ದೀಪಕ ನಟಿಸಿದ್ದಾರೆ. ಕಬೀರ್ ಸಿಂಗ್ ಖಳನಾಯಕನ ಪಾತ್ರ ಮಾಡುತ್ತಿದ್ದಾರೆ. ರಾಜವರ್ಧನ್​ಗೆ ಜೊತೆಯಾಗಿ ತಪಸ್ವಿನಿ ಬಣ್ಣ ಹಚ್ಚಿದ್ದಾರೆ. ‘ದುನಿಯಾ’ ಸೂರಿ, ಯೋಗರಾಜ್ ಭಟ್ ಸೇರಿದಂತೆ ಹಲವರ ಜೊತೆ ಕೆಲಸ ಮಾಡಿದ ಅನುಭವವನ್ನು ಸುನಿಲ್ ಕುಮಾರ್ ವಿ.ಎ. ಹೊಂದಿದ್ದಾರೆ. ಅವರು ‘ಗಜರಾಮ’ ಸಿನಿಮಾದ ಮೂಲಕ ನಿರ್ದೇಶಕರಾಗುತ್ತಿದ್ದಾರೆ. ಮನೋಮೂರ್ತಿ ಸಂಗೀತ ಸಂಯೋಜನೆ ಚಿತ್ರಕ್ಕಿದೆ. ಕೆ.ಎಸ್. ಚಂದ್ರಶೇಖರ್ ಛಾಯಾಗ್ರಾಹಣ ಇದೆ. ‘ಲೈಫ್ ಲೈನ್ ಫಿಲ್ಮ್ ಪ್ರೊಡಕ್ಷನ್’ ಬ್ಯಾನರ್ ಅಡಿಯಲ್ಲಿ ನರಸಿಂಹಮೂರ್ತಿ ‘ಗಜರಾಮ’ ಸಿನಿಮಾನ ನಿರ್ಮಾಣ ಮಾಡುತ್ತಿದ್ದಾರೆ. ಝವೀಯರ್ ಫರ್ನಾಂಡಿಸ್ ಮಲ್ಲಿಕಾರ್ಜುನ್ ಕಾಶಿ ಸಹ ನಿರ್ಮಾಣ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​