AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಪರಿಕಲ್ಪನೆಯ ಟೂರ್ನಿವಲ್​ಗೆ ಸಾಥ್​ ನೀಡಿದ ಕನ್ನಡದ ಸ್ಟಾರ್​ ಕಲಾವಿದರು

‘ಸಿನಿಮಾ, ಸಂಸ್ಕೃತಿ ಮತ್ತು ಕ್ರೀಡೆ ಎಂದರೆ ಎಲ್ಲರಿಗೂ ಇಷ್ಟ. ಟೂರ್ನಿವಲ್​ನಲ್ಲಿ ಈ ಮೂರೂ ಇದೆ’ ಎಂದಿದ್ದಾರೆ ನಟಿ ಪ್ರಿಯಾಂಕಾ ಉಪೇಂದ್ರ.

ಹೊಸ ಪರಿಕಲ್ಪನೆಯ ಟೂರ್ನಿವಲ್​ಗೆ ಸಾಥ್​ ನೀಡಿದ ಕನ್ನಡದ ಸ್ಟಾರ್​ ಕಲಾವಿದರು
ರಾಗಿಣಿ ದ್ವಿವೇದಿ, ಪ್ರಿಯಾಂಕಾ ಉಪೇಂದ್ರ, ಅಜಯ್​ ರಾವ್
TV9 Web
| Edited By: |

Updated on: Oct 25, 2022 | 7:45 AM

Share

ಕಲಾವಿದರಿಗೆ ಮತ್ತು ಕಲೆಗೆ ಯಾವುದೇ ಗಡಿ ಇಲ್ಲ. ಅದೇ ಪರಿಕಲ್ಪನೆಯಲ್ಲಿ ಟೂರ್ನಿವಲ್​ ಆಯೋಜನೆ ಮಾಡಲಾಗಿದೆ. ಟೂರ್ನಮೆಂಟ್​ ಮತ್ತು ಕಾರ್ನಿವಲ್​ ಎಂಬ ಎರಡು ಪದಗಳ ಮಿಲನದಿಂದ ‘ಟೂರ್ನಿವಲ್​’ (Tournival) ಆಗಿದೆ. ಇದರಲ್ಲಿ ಮೂರು ದೇಶಗಳ ಸೆಲೆಬ್ರಿಟಿಗಳು ಪರಸ್ಪರ ಸಾಂಸ್ಕೃತಿಕ ವಿಚಾರಗಳ ವಿನಿಮಯ ಮಾಡಿಕೊಳ್ಳುತ್ತಾರೆ ಎಂಬುದು ವಿಶೇಷ. ANYELP ಎಂಟರ್​ಟೇನ್ಮೆಂಟ್ ಮತ್ತು ವೈಟ್​ ಲೋಟಸ್​ ಎಂಟರ್​ಟೇನ್ಮೆಂಟ್​ ಸಂಸ್ಥೆಗಳು ಜೊತೆಯಾಗಿ ಇದನ್ನು ಆಯೋಜಿಸಿವೆ. ಇತ್ತೀಚೆಗೆ ಇದರ ಉದ್ಘಾಟನೆ ನಡೆಯಿತು. ಈ ವೇಳೆ ಪ್ರಿಯಾಂಕಾ ಉಪೇಂದ್ರ (Priyanka Upendra) ರಾಗಿಣಿ ದ್ವಿವೇದಿ, ಅಜಯ್​ ರಾವ್​ (Ajay Rao), ನಾಗತಿಹಳ್ಳಿ ಚಂದ್ರಶೇಖರ್​ ಮುಂತಾದ ಸೆಲೆಬ್ರಿಟಿಗಳು ಭಾಗಿ ಆಗಿದ್ದರು. ‘ಟೂರ್ನಿವಲ್ ಎಂದರೆ ಸೌತ್ ಏಷ್ಯಾ ದೇಶಗಳ ನಡುವಿನ ಸಾಂಸ್ಕೃತಿಕ ವಿನಿಮಯ. ಬೇರೆಬೇರೆ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು ಭಾರತ, ಶ್ರೀಲಂಕಾ ಮತ್ತು ಮಾಲ್ಡೀವ್ಸ್​ ದೇಶಗಳಲ್ಲಿ ನಡೆಸುವ ಉದ್ದೇಶವಿದೆ’ ಎಂದಿದ್ದಾರೆ ಇದರ ಮ್ಯಾನೇಜಿಂಗ್ ಡೈರೆಕ್ಟರ್ ಪೂಜಾಶ್ರೀ.

ಶ್ರೀಲಂಕಾ ಪ್ರವಾಸೋದ್ಯಮ ಸಚಿವರಾದ ಡಯಾನ ಗ್ಯಾಮೇಜ್, ಮಾಲ್ಡೀವ್ಸ್ ಪ್ರವಾಸೋದ್ಯಮ ಸಚಿವರಾದ ಇಬ್ರಾಹಿಂ ರಷೀದ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ. ಹರೀಶ್ ಮುಂತಾದ ಗಣ್ಯರ ಸಮ್ಮುಖದಲ್ಲಿ ಈ ಕಾರ್ಯಕ್ರಮ ನಡೆಯಿತು. ಈ ಟೂರ್ನಿವಲ್​ ಪ್ರಯುಕ್ತ ಮಾಲ್ಡೀವ್ಸ್​ನಲ್ಲಿ ಕನ್ನಡ ಸಿನಿಮಾಗಳು ರಿಲೀಸ್​ ಆಗುತ್ತವೆ. ಭಾರತ, ಶ್ರೀಲಂಕಾ ಮತ್ತು ಮಾಲ್ಡೀವ್ಸ್​ನ ಸೆಲೆಬ್ರಿಟಿಗಳ ನಡುವೆ ಫುಟ್​ಬಾಲ್​ ಪಂದ್ಯ ಸಹ ನಡೆಯುತ್ತದೆ.

‘ಈ ಕಾನ್ಸೆಪ್ಟ್​ ಚೆನ್ನಾಗಿದೆ. ಭಾರತ ನಮ್ಮ ಸಹೋದರ ರಾಷ್ಟ್ರ. ಸದಾ ನಮ್ಮ ಬೆಂಬಲಕ್ಕೆ ನಿಲ್ಲುತ್ತದೆ. ಭಾರತ ಮತ್ತು ಮಾಲ್ಡೀವ್ಸ್​ ನಡುವೆ ಬಹುಕಾಲದ ಸ್ನೇಹ ಇದೆ. ಈ ದೇಶದಿಂದ ಮಾಲ್ಡೀವ್ಸ್​ಗೆ ಅತಿ ಹೆಚ್ಚು ಪ್ರವಾಸಿಗರು ಬರುತ್ತಾರೆ. ಅದಕ್ಕಾಗಿ ಭಾರತ ಸರ್ಕಾರಕ್ಕೆ ಮತ್ತು ಸಿನಿಮಾ ಸೆಲೆಬ್ರಿಟಿಗಳಿಗೆ ನಾನು ಧನ್ಯವಾದ ತಿಳಿಸುತ್ತೇನೆ’ ಎಂದಿದ್ದಾರೆ ಮಾಲ್ಡೀವ್ಸ್ ಪ್ರವಾಸೋದ್ಯಮ ಸಚಿವರಾದ ಇಬ್ರಾಹಿಂ ರಷೀದ್.

ಇದನ್ನೂ ಓದಿ
Image
ಮೂರು ದಿನಕ್ಕೆ ಬಂಗಾರದ ಬೆಳೆ ತೆಗೆದ ‘ಹೆಡ್​ ಬುಷ್​’ ಸಿನಿಮಾ; ಇಲ್ಲಿದೆ ಕಲೆಕ್ಷನ್ ವಿವರ
Image
ಕರ್ನಾಟಕದಲ್ಲಿ ‘ಕೆಜಿಎಫ್ 2’ ಮಾಡಿದ್ದ ದಾಖಲೆಯನ್ನು ಮುರಿದ ‘ಕಾಂತಾರ’; ನಿಲ್ಲುತ್ತಿಲ್ಲ ಅಬ್ಬರ
Image
‘ಗಂಧದ ಗುಡಿ’ಗೆ ಪ್ರೀ-ಬುಕಿಂಗ್ ಆರಂಭ; ಹಬ್ಬಕ್ಕೆ ಸಾಕ್ಷಿ ಆಗಲಿದೆ ಅಕ್ಟೋಬರ್ 28
Image
Akshay Kumar: ‘ರಾಮ್​ ಸೇತು’ ಚಿತ್ರದಿಂದಲೂ ಅಕ್ಷಯ್​ ಕುಮಾರ್​​ಗೆ ಗೆಲುವು ಸಿಗೋದು ಡೌಟು?

‘ಕಳೆದ ಎರಡು ವರ್ಷಗಳಿಂದ ಪ್ರವಾಸೋದ್ಯಮಕ್ಕೆ ತೊಂದರೆ ಆಗಿತ್ತು. ಶ್ರೀಲಂಕಾದಲ್ಲಿ ಅಹಿತಕರ ಘಟನೆಗಳು ನಡೆದವು. ಕೊವಿಡ್​ನಿಂದ ಸಮಸ್ಯೆ ಎದುರಿಸುವಂತಾಯಿತು. ನಮಗೆ ಪ್ರವಾಸೋದ್ಯಮ ತುಂಬ ಮುಖ್ಯ. ಈಗ ನಮ್ಮ ದೇಶದ ಪರಿಸ್ಥಿತಿ ಹೇಗಿದೆ ಎಂಬುದು ಎಲ್ಲರಿಗೂ ಗೊತ್ತು. ಟೂರ್ನಿವಲ್​ಗೆ ಬೆಂಬಲ ನೀಡಲು ನಾನಿಲ್ಲಿಗೆ ಬಂದಿದ್ದೇನೆ. ಟೂರ್ನಿವಲ್​ನಿಂದ ನಮ್ಮ ದೇಶಕ್ಕೆ ಸಹಾಯ ಆಗಲಿದೆ. ನಮ್ಮ ಆರ್ಥಿಕತೆ ದಿವಾಳಿ ಆಗಿರಬಹುದು. ಆದರೆ ನಮ್ಮ ನೆಲೆದ ಸೌಂದರ್ಯ ದಿವಾಳಿ ಆಗಿಲ್ಲ. ನಮ್ಮ ಆಥಿತ್ಯದ ಗುಣಮಟ್ಟ ಕಡಿಮೆ ಆಗಿಲ್ಲ’ ಎಂಬುದು ಶ್ರೀಲಂಕಾ ಪ್ರವಾಸೋದ್ಯಮ ಸಚಿವರಾದ ಡಯಾನ ಗ್ಯಾಮೇಜ್ ಅವರ ಮಾತುಗಳು.

‘ಪೂಜಾ, ಝಾಕೀರ್ ಹುಸೇನ್​​ ಮತ್ತು ರುದ್ರ ಅವರು ಈ ರೀತಿ ಕಾನ್ಸೆಪ್ಟ್​ ಪರಿಚಯಿಸುತ್ತಿರುವುದಕ್ಕೆ ಅಭಿನಂದನೆಗಳು. ನನ್ನ ಸಿನಿಮಾ ಇದರಲ್ಲಿ ಪ್ರದರ್ಶನ ಆಗುತ್ತಿರುವುದಕ್ಕೆ ಖುಷಿ ಇದೆ. ಸಿನಿಮಾ, ಸಂಸ್ಕೃತಿ ಮತ್ತು ಕ್ರೀಡೆ ಎಲ್ಲರಿಗೂ ಇಷ್ಟ. ಟೂರ್ನಿವಲ್​ನಲ್ಲಿ ಈ ಮೂರೂ ಇದೆ’ ಎಂದಿದ್ದಾರೆ ಪ್ರಿಯಾಂಕಾ ಉಪೇಂದ್ರ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ