AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ragini Dwivedi: ರಾಗಿಣಿ ಏನು ಅಂತ ಎಲ್ಲರಿಗೂ ಗೊತ್ತು; ನಾನು ಅದನ್ನು ಸಮರ್ಥಿಸಿಕೊಳ್ಳುವ ಅವಶ್ಯಕತೆ ಇಲ್ಲ

2021ರ ಮೊದಲ ಸಿನಿಮಾ ಕರ್ವ 3. ಈ ರೀತಿಯ ಪಾತ್ರದಕಲ್ಲಿ ಮೊದಲ ಬಾರಿಗೆ ಕಾಣಿಸಿಕೊಳ್ಳುತ್ತಿದ್ದೇನೆ.ಸಾಕಷ್ಟು ವಿಚಾರಗಳ ಬಗ್ಗೆ ಯೋಜನೆಗಳು ನಡೆಯುತ್ತಿವೆ ಎಂದು ರಾಗಿಣಿ ಸಿನಿಮಾ ಬಗ್ಗೆ ಮಾಹಿತಿ ನೀಡಿದರು.

Ragini Dwivedi: ರಾಗಿಣಿ ಏನು ಅಂತ ಎಲ್ಲರಿಗೂ ಗೊತ್ತು; ನಾನು ಅದನ್ನು ಸಮರ್ಥಿಸಿಕೊಳ್ಳುವ ಅವಶ್ಯಕತೆ ಇಲ್ಲ
ರಾಗಿಣಿ ದ್ವಿವೇದಿ
ರಾಜೇಶ್ ದುಗ್ಗುಮನೆ
|

Updated on: Feb 26, 2021 | 1:00 PM

Share

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್​ ಕೇಸ್​ನಲ್ಲಿ ನಟಿ ರಾಗಿಣಿ ದ್ವಿವೇದಿ ಜೈಲಿಗೆ ಹೋಗಿ ಬಂದಿದ್ದರು. ಜೈಲಿನಿಂದ ಹೊರ ಬರುತ್ತಲೇ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ್ದ ಅವರು, ಕಾಲವೇ ಎಲ್ಲದಕ್ಕೂ ಉತ್ತರಿಸುತ್ತದೆ ಎಂದಿದ್ದರು. ನಂತರ ಇನ್​ಸ್ಟಾಗ್ರಾಂ ಲೈವ್​​ನಲ್ಲಿ ಬಂದು ಕಣ್ಣೀರು ಹಾಕಿದ್ದರು. ನಾನು ಮತ್ತೆ ಚೇತರಿಸಿಕೊಳ್ಳುತ್ತಿದ್ದೇನೆ. ಶೀಘ್ರವೇ ಎಲ್ಲವೂ ಸರಿಯಾಗಲಿದೆ ಎನ್ನುವ ಆಶಾಭಾವ ವ್ಯಕ್ತಪಡಿಸಿದ್ದರು. ಅಂತೆಯೇ, ರಾಗಿಣಿ ದ್ವಿವೇದಿಗೆ ಮತ್ತೆ ಸಿನಿಮಾ ಆಫರ್​ಗಳು ಬರಲು ಆರಂಭವಾಗಿದೆ. ಇದೇ ಖುಷಿಗೆ ಮಾಧ್ಯಮದ ಜತೆ ಅವರು ಇಂದು ಮಾತನಾಡಿದರು.

2021ರ ಮೊದಲ ಸಿನಿಮಾ ಕರ್ವ 3. ಈ ರೀತಿಯ ಪಾತ್ರದಲ್ಲಿ ಮೊದಲ ಬಾರಿಗೆ ಕಾಣಿಸಿಕೊಳ್ಳುತ್ತಿದ್ದೇನೆ. ಸಾಕಷ್ಟು ವಿಚಾರಗಳ ಬಗ್ಗೆ ಯೋಜನೆಗಳು ನಡೆಯುತ್ತಿವೆ. 2020ಯಲ್ಲಿ ಎಲ್ಲರೂ ನೊಂದಿದ್ದಾರೆ. ಈ ವರ್ಷ ವಿಭಿನ್ನ ಸಿನಿಮಾಗಳನ್ನು ಮಾಡಬೇಕೆಂದುಕೊಂಡಿದ್ದೇನೆ. ಅದೇ ರೀತಿ ಕಥೆಗಳನ್ನ ಕೇಳುತ್ತಿದ್ದೇನೆ ಎಂದು ಸಿನಿಮಾ ಬಗ್ಗೆ ಮಾಹಿತಿ ನೀಡಿದರು ರಾಗಿಣಿ.

ಖಾಸಗಿ ಜೀವನದ ಬಗ್ಗೆ ಮಾತನಾಡಿರುವ ರಾಗಿಣಿ, ಈಗ ಅಪ್ಪ ಅಮ್ಮನನ್ನ ನೋಡಿಕೊಳ್ಳುವುದು ತುಂಬಾನೇ ಮುಖ್ಯ. ಸಕಾರಾತ್ಮಕ ವಿಚಾರಗಳೊಂದಿಗೆ ಈ ವರ್ಷ ಆರಂಭವಾಗಿದೆ. ಸಣ್ಣ, ಸಣ್ಣ ವಿಚಾರಗಳಲ್ಲಿ ನಾವು ಖುಷಿ ಕಾಣಬೇಕು. ಎಷ್ಟೇ ದುಡ್ಡು, ಹೆಸರು ಇದ್ದರೂ ಯಾವುದೂ ಶಾಶ್ವತ ಅಲ್ಲ ಎನ್ನುವುದನ್ನು 2020 ಸಾಬೀತು ಮಾಡಿದೆ ಎಂದು ರಾಗಿಣಿ ಕೊರೊನಾ ದಿನಗಳನ್ನು ನೆನೆದರು.

ರಾಗಿಣಿಗೆ ಚಿತ್ರರಂಗದಿಂದ ತುಂಬಾನೇ ಬೆಂಬಲ ಸಿಗುತ್ತಿದೆಯಂತೆ. ಈ ಬಗ್ಗೆ ಖುಷಿ ಹಂಚಿಕೊಂಡಿರುವ ಅವರು, ಕನ್ನಡ ಚಿತ್ರರಂಗದ ಕಡೆಯಿಂದ ನನಗೆ ಸಿಗುತ್ತಿರುವ ಬೆಂಬಲ ಸಂತಸ ತಂದಿದೆ. ಒಂದಷ್ಟು ಜನ ಮನೆಗೆ ಬಂದು ನನ್ನ ಆರೋಗ್ಯ ವಿಚಾರಿಸಿದ್ದಾರೆ. ಅವರ ಮನಸಲ್ಲಿ ನಾನು ಇದ್ದೇನೆ ಎನ್ನುವ ಖುಷಿ ಇದೆ ಎಂದರು.

ಡ್ರಗ್​ ಕೇಸ್​ ಬಗ್ಗೆ ಮಾತನಾಡಿರುವ ರಾಗಿಣಿ, ಈ ಕೇಸ್ ಬಗ್ಗೆ ಮಾತನಾಡುವ ಅವಶ್ಯಕತೆ ಇಲ್ಲ. ರಾಗಿಣಿ ಏನು ಎಂಬುದು ಎಲ್ಲರಿಗೂ ಗೊತ್ತು. ನಾನು ಅದನ್ನ ಸಮರ್ಥಿಸಿಕೊಳ್ಳ ಅವಶ್ಯಕತೆ ಇಲ್ಲ. ಕೇಸ್​ ಬಗ್ಗೆ ಮಾತನಾಡಲು ಇಷ್ಟವೂ ಇಲ್ಲ ಎಂದರು.

ಇದನ್ನೂ ಓದಿ: ಮತ್ತೆ ಗಾಂಧಿನಗರಕ್ಕೆ ರಾಗಿಣಿ ಕಂಬ್ಯಾಕ್.. ಕರ್ವ 3 ಸಿನಿಮಾಗೆ ಬಣ್ಣ ಹಚ್ಚಲಿದ್ದಾರೆ ತುಪ್ಪದ ಬೆಡಗಿ

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!