Sign In

By signing in or creating an account, you agree with Associated Broadcasting Company's Terms & Conditions and Privacy Policy.

Ragini Dwivedi: ರಾಗಿಣಿ ಏನು ಅಂತ ಎಲ್ಲರಿಗೂ ಗೊತ್ತು; ನಾನು ಅದನ್ನು ಸಮರ್ಥಿಸಿಕೊಳ್ಳುವ ಅವಶ್ಯಕತೆ ಇಲ್ಲ

2021ರ ಮೊದಲ ಸಿನಿಮಾ ಕರ್ವ 3. ಈ ರೀತಿಯ ಪಾತ್ರದಕಲ್ಲಿ ಮೊದಲ ಬಾರಿಗೆ ಕಾಣಿಸಿಕೊಳ್ಳುತ್ತಿದ್ದೇನೆ.ಸಾಕಷ್ಟು ವಿಚಾರಗಳ ಬಗ್ಗೆ ಯೋಜನೆಗಳು ನಡೆಯುತ್ತಿವೆ ಎಂದು ರಾಗಿಣಿ ಸಿನಿಮಾ ಬಗ್ಗೆ ಮಾಹಿತಿ ನೀಡಿದರು.

Ragini Dwivedi: ರಾಗಿಣಿ ಏನು ಅಂತ ಎಲ್ಲರಿಗೂ ಗೊತ್ತು; ನಾನು ಅದನ್ನು ಸಮರ್ಥಿಸಿಕೊಳ್ಳುವ ಅವಶ್ಯಕತೆ ಇಲ್ಲ
ರಾಗಿಣಿ ದ್ವಿವೇದಿ
Follow us
ರಾಜೇಶ್ ದುಗ್ಗುಮನೆ
|

Updated on: Feb 26, 2021 | 1:00 PM

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್​ ಕೇಸ್​ನಲ್ಲಿ ನಟಿ ರಾಗಿಣಿ ದ್ವಿವೇದಿ ಜೈಲಿಗೆ ಹೋಗಿ ಬಂದಿದ್ದರು. ಜೈಲಿನಿಂದ ಹೊರ ಬರುತ್ತಲೇ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ್ದ ಅವರು, ಕಾಲವೇ ಎಲ್ಲದಕ್ಕೂ ಉತ್ತರಿಸುತ್ತದೆ ಎಂದಿದ್ದರು. ನಂತರ ಇನ್​ಸ್ಟಾಗ್ರಾಂ ಲೈವ್​​ನಲ್ಲಿ ಬಂದು ಕಣ್ಣೀರು ಹಾಕಿದ್ದರು. ನಾನು ಮತ್ತೆ ಚೇತರಿಸಿಕೊಳ್ಳುತ್ತಿದ್ದೇನೆ. ಶೀಘ್ರವೇ ಎಲ್ಲವೂ ಸರಿಯಾಗಲಿದೆ ಎನ್ನುವ ಆಶಾಭಾವ ವ್ಯಕ್ತಪಡಿಸಿದ್ದರು. ಅಂತೆಯೇ, ರಾಗಿಣಿ ದ್ವಿವೇದಿಗೆ ಮತ್ತೆ ಸಿನಿಮಾ ಆಫರ್​ಗಳು ಬರಲು ಆರಂಭವಾಗಿದೆ. ಇದೇ ಖುಷಿಗೆ ಮಾಧ್ಯಮದ ಜತೆ ಅವರು ಇಂದು ಮಾತನಾಡಿದರು.

2021ರ ಮೊದಲ ಸಿನಿಮಾ ಕರ್ವ 3. ಈ ರೀತಿಯ ಪಾತ್ರದಲ್ಲಿ ಮೊದಲ ಬಾರಿಗೆ ಕಾಣಿಸಿಕೊಳ್ಳುತ್ತಿದ್ದೇನೆ. ಸಾಕಷ್ಟು ವಿಚಾರಗಳ ಬಗ್ಗೆ ಯೋಜನೆಗಳು ನಡೆಯುತ್ತಿವೆ. 2020ಯಲ್ಲಿ ಎಲ್ಲರೂ ನೊಂದಿದ್ದಾರೆ. ಈ ವರ್ಷ ವಿಭಿನ್ನ ಸಿನಿಮಾಗಳನ್ನು ಮಾಡಬೇಕೆಂದುಕೊಂಡಿದ್ದೇನೆ. ಅದೇ ರೀತಿ ಕಥೆಗಳನ್ನ ಕೇಳುತ್ತಿದ್ದೇನೆ ಎಂದು ಸಿನಿಮಾ ಬಗ್ಗೆ ಮಾಹಿತಿ ನೀಡಿದರು ರಾಗಿಣಿ.

ಖಾಸಗಿ ಜೀವನದ ಬಗ್ಗೆ ಮಾತನಾಡಿರುವ ರಾಗಿಣಿ, ಈಗ ಅಪ್ಪ ಅಮ್ಮನನ್ನ ನೋಡಿಕೊಳ್ಳುವುದು ತುಂಬಾನೇ ಮುಖ್ಯ. ಸಕಾರಾತ್ಮಕ ವಿಚಾರಗಳೊಂದಿಗೆ ಈ ವರ್ಷ ಆರಂಭವಾಗಿದೆ. ಸಣ್ಣ, ಸಣ್ಣ ವಿಚಾರಗಳಲ್ಲಿ ನಾವು ಖುಷಿ ಕಾಣಬೇಕು. ಎಷ್ಟೇ ದುಡ್ಡು, ಹೆಸರು ಇದ್ದರೂ ಯಾವುದೂ ಶಾಶ್ವತ ಅಲ್ಲ ಎನ್ನುವುದನ್ನು 2020 ಸಾಬೀತು ಮಾಡಿದೆ ಎಂದು ರಾಗಿಣಿ ಕೊರೊನಾ ದಿನಗಳನ್ನು ನೆನೆದರು.

ರಾಗಿಣಿಗೆ ಚಿತ್ರರಂಗದಿಂದ ತುಂಬಾನೇ ಬೆಂಬಲ ಸಿಗುತ್ತಿದೆಯಂತೆ. ಈ ಬಗ್ಗೆ ಖುಷಿ ಹಂಚಿಕೊಂಡಿರುವ ಅವರು, ಕನ್ನಡ ಚಿತ್ರರಂಗದ ಕಡೆಯಿಂದ ನನಗೆ ಸಿಗುತ್ತಿರುವ ಬೆಂಬಲ ಸಂತಸ ತಂದಿದೆ. ಒಂದಷ್ಟು ಜನ ಮನೆಗೆ ಬಂದು ನನ್ನ ಆರೋಗ್ಯ ವಿಚಾರಿಸಿದ್ದಾರೆ. ಅವರ ಮನಸಲ್ಲಿ ನಾನು ಇದ್ದೇನೆ ಎನ್ನುವ ಖುಷಿ ಇದೆ ಎಂದರು.

ಡ್ರಗ್​ ಕೇಸ್​ ಬಗ್ಗೆ ಮಾತನಾಡಿರುವ ರಾಗಿಣಿ, ಈ ಕೇಸ್ ಬಗ್ಗೆ ಮಾತನಾಡುವ ಅವಶ್ಯಕತೆ ಇಲ್ಲ. ರಾಗಿಣಿ ಏನು ಎಂಬುದು ಎಲ್ಲರಿಗೂ ಗೊತ್ತು. ನಾನು ಅದನ್ನ ಸಮರ್ಥಿಸಿಕೊಳ್ಳ ಅವಶ್ಯಕತೆ ಇಲ್ಲ. ಕೇಸ್​ ಬಗ್ಗೆ ಮಾತನಾಡಲು ಇಷ್ಟವೂ ಇಲ್ಲ ಎಂದರು.

ಇದನ್ನೂ ಓದಿ: ಮತ್ತೆ ಗಾಂಧಿನಗರಕ್ಕೆ ರಾಗಿಣಿ ಕಂಬ್ಯಾಕ್.. ಕರ್ವ 3 ಸಿನಿಮಾಗೆ ಬಣ್ಣ ಹಚ್ಚಲಿದ್ದಾರೆ ತುಪ್ಪದ ಬೆಡಗಿ

ಮನೆಗೆ ಬೆಂಕಿ ಬಿದ್ದಾಗ ಮಕ್ಕಳನ್ನು ಕಾಪಾಡಲು ಅಮ್ಮ ಮಾಡಿದ ಸಾಹಸ ನೀವೇ ನೋಡಿ
ಮನೆಗೆ ಬೆಂಕಿ ಬಿದ್ದಾಗ ಮಕ್ಕಳನ್ನು ಕಾಪಾಡಲು ಅಮ್ಮ ಮಾಡಿದ ಸಾಹಸ ನೀವೇ ನೋಡಿ
ಬೆಂಗಳೂರು ನಗರದ ಹಲವೆಡೆ ಏಕಾಏಕಿ ಮಳೆ
ಬೆಂಗಳೂರು ನಗರದ ಹಲವೆಡೆ ಏಕಾಏಕಿ ಮಳೆ
ಅತ್ತೆ-ಮಾವ ಅಥವಾ ಗಂಡನಿಂದ ಯಾವುದೇ ಕಿರುಕುಳವಿರಲಿಲ್ಲ: ಲಕ್ಷ್ಮಿಯ ತಂದೆ
ಅತ್ತೆ-ಮಾವ ಅಥವಾ ಗಂಡನಿಂದ ಯಾವುದೇ ಕಿರುಕುಳವಿರಲಿಲ್ಲ: ಲಕ್ಷ್ಮಿಯ ತಂದೆ
ಬೆಳಗ್ಗೆ ಮಂಗಳೂರಲ್ಲೂ ಜೋರು ಮಳೆ, ಜನರಲ್ಲಿ ಕೊಂಚ ನಿರಾಳತೆ
ಬೆಳಗ್ಗೆ ಮಂಗಳೂರಲ್ಲೂ ಜೋರು ಮಳೆ, ಜನರಲ್ಲಿ ಕೊಂಚ ನಿರಾಳತೆ
ದಶಕಗಳಿಂದ ಯತ್ನಾಳ್ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬಲ್ಲೆ: ಕಾಶಪ್ಪನವರ್
ದಶಕಗಳಿಂದ ಯತ್ನಾಳ್ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬಲ್ಲೆ: ಕಾಶಪ್ಪನವರ್
ವಾರಂಗಲ್​ನ ಉದ್ಯೋಗ ಮೇಳದಲ್ಲಿ ಕಾಲ್ತುಳಿತ; ಮೂವರು ಮಹಿಳೆಯರಿಗೆ ಗಾಯ
ವಾರಂಗಲ್​ನ ಉದ್ಯೋಗ ಮೇಳದಲ್ಲಿ ಕಾಲ್ತುಳಿತ; ಮೂವರು ಮಹಿಳೆಯರಿಗೆ ಗಾಯ
ತಾನೊಬ್ಬನೇ ಸಮಾಜದ ಪ್ರತಿನಿಧಿ ಅಂತ ಹೇಳೋದನ್ನ ಯತ್ನಾಳ್ ನಿಲ್ಲಿಸಬೇಕು: ಶಾಸಕ
ತಾನೊಬ್ಬನೇ ಸಮಾಜದ ಪ್ರತಿನಿಧಿ ಅಂತ ಹೇಳೋದನ್ನ ಯತ್ನಾಳ್ ನಿಲ್ಲಿಸಬೇಕು: ಶಾಸಕ
ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಗಂಭೀರವಾಗಿ ಗಾಯಗೊಂಡಿರುವ ಪತಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು
ಗಂಭೀರವಾಗಿ ಗಾಯಗೊಂಡಿರುವ ಪತಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ