AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ragini Dwivedi: ರಾಗಿಣಿ ಏನು ಅಂತ ಎಲ್ಲರಿಗೂ ಗೊತ್ತು; ನಾನು ಅದನ್ನು ಸಮರ್ಥಿಸಿಕೊಳ್ಳುವ ಅವಶ್ಯಕತೆ ಇಲ್ಲ

2021ರ ಮೊದಲ ಸಿನಿಮಾ ಕರ್ವ 3. ಈ ರೀತಿಯ ಪಾತ್ರದಕಲ್ಲಿ ಮೊದಲ ಬಾರಿಗೆ ಕಾಣಿಸಿಕೊಳ್ಳುತ್ತಿದ್ದೇನೆ.ಸಾಕಷ್ಟು ವಿಚಾರಗಳ ಬಗ್ಗೆ ಯೋಜನೆಗಳು ನಡೆಯುತ್ತಿವೆ ಎಂದು ರಾಗಿಣಿ ಸಿನಿಮಾ ಬಗ್ಗೆ ಮಾಹಿತಿ ನೀಡಿದರು.

Ragini Dwivedi: ರಾಗಿಣಿ ಏನು ಅಂತ ಎಲ್ಲರಿಗೂ ಗೊತ್ತು; ನಾನು ಅದನ್ನು ಸಮರ್ಥಿಸಿಕೊಳ್ಳುವ ಅವಶ್ಯಕತೆ ಇಲ್ಲ
ರಾಗಿಣಿ ದ್ವಿವೇದಿ
ರಾಜೇಶ್ ದುಗ್ಗುಮನೆ
|

Updated on: Feb 26, 2021 | 1:00 PM

Share

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್​ ಕೇಸ್​ನಲ್ಲಿ ನಟಿ ರಾಗಿಣಿ ದ್ವಿವೇದಿ ಜೈಲಿಗೆ ಹೋಗಿ ಬಂದಿದ್ದರು. ಜೈಲಿನಿಂದ ಹೊರ ಬರುತ್ತಲೇ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ್ದ ಅವರು, ಕಾಲವೇ ಎಲ್ಲದಕ್ಕೂ ಉತ್ತರಿಸುತ್ತದೆ ಎಂದಿದ್ದರು. ನಂತರ ಇನ್​ಸ್ಟಾಗ್ರಾಂ ಲೈವ್​​ನಲ್ಲಿ ಬಂದು ಕಣ್ಣೀರು ಹಾಕಿದ್ದರು. ನಾನು ಮತ್ತೆ ಚೇತರಿಸಿಕೊಳ್ಳುತ್ತಿದ್ದೇನೆ. ಶೀಘ್ರವೇ ಎಲ್ಲವೂ ಸರಿಯಾಗಲಿದೆ ಎನ್ನುವ ಆಶಾಭಾವ ವ್ಯಕ್ತಪಡಿಸಿದ್ದರು. ಅಂತೆಯೇ, ರಾಗಿಣಿ ದ್ವಿವೇದಿಗೆ ಮತ್ತೆ ಸಿನಿಮಾ ಆಫರ್​ಗಳು ಬರಲು ಆರಂಭವಾಗಿದೆ. ಇದೇ ಖುಷಿಗೆ ಮಾಧ್ಯಮದ ಜತೆ ಅವರು ಇಂದು ಮಾತನಾಡಿದರು.

2021ರ ಮೊದಲ ಸಿನಿಮಾ ಕರ್ವ 3. ಈ ರೀತಿಯ ಪಾತ್ರದಲ್ಲಿ ಮೊದಲ ಬಾರಿಗೆ ಕಾಣಿಸಿಕೊಳ್ಳುತ್ತಿದ್ದೇನೆ. ಸಾಕಷ್ಟು ವಿಚಾರಗಳ ಬಗ್ಗೆ ಯೋಜನೆಗಳು ನಡೆಯುತ್ತಿವೆ. 2020ಯಲ್ಲಿ ಎಲ್ಲರೂ ನೊಂದಿದ್ದಾರೆ. ಈ ವರ್ಷ ವಿಭಿನ್ನ ಸಿನಿಮಾಗಳನ್ನು ಮಾಡಬೇಕೆಂದುಕೊಂಡಿದ್ದೇನೆ. ಅದೇ ರೀತಿ ಕಥೆಗಳನ್ನ ಕೇಳುತ್ತಿದ್ದೇನೆ ಎಂದು ಸಿನಿಮಾ ಬಗ್ಗೆ ಮಾಹಿತಿ ನೀಡಿದರು ರಾಗಿಣಿ.

ಖಾಸಗಿ ಜೀವನದ ಬಗ್ಗೆ ಮಾತನಾಡಿರುವ ರಾಗಿಣಿ, ಈಗ ಅಪ್ಪ ಅಮ್ಮನನ್ನ ನೋಡಿಕೊಳ್ಳುವುದು ತುಂಬಾನೇ ಮುಖ್ಯ. ಸಕಾರಾತ್ಮಕ ವಿಚಾರಗಳೊಂದಿಗೆ ಈ ವರ್ಷ ಆರಂಭವಾಗಿದೆ. ಸಣ್ಣ, ಸಣ್ಣ ವಿಚಾರಗಳಲ್ಲಿ ನಾವು ಖುಷಿ ಕಾಣಬೇಕು. ಎಷ್ಟೇ ದುಡ್ಡು, ಹೆಸರು ಇದ್ದರೂ ಯಾವುದೂ ಶಾಶ್ವತ ಅಲ್ಲ ಎನ್ನುವುದನ್ನು 2020 ಸಾಬೀತು ಮಾಡಿದೆ ಎಂದು ರಾಗಿಣಿ ಕೊರೊನಾ ದಿನಗಳನ್ನು ನೆನೆದರು.

ರಾಗಿಣಿಗೆ ಚಿತ್ರರಂಗದಿಂದ ತುಂಬಾನೇ ಬೆಂಬಲ ಸಿಗುತ್ತಿದೆಯಂತೆ. ಈ ಬಗ್ಗೆ ಖುಷಿ ಹಂಚಿಕೊಂಡಿರುವ ಅವರು, ಕನ್ನಡ ಚಿತ್ರರಂಗದ ಕಡೆಯಿಂದ ನನಗೆ ಸಿಗುತ್ತಿರುವ ಬೆಂಬಲ ಸಂತಸ ತಂದಿದೆ. ಒಂದಷ್ಟು ಜನ ಮನೆಗೆ ಬಂದು ನನ್ನ ಆರೋಗ್ಯ ವಿಚಾರಿಸಿದ್ದಾರೆ. ಅವರ ಮನಸಲ್ಲಿ ನಾನು ಇದ್ದೇನೆ ಎನ್ನುವ ಖುಷಿ ಇದೆ ಎಂದರು.

ಡ್ರಗ್​ ಕೇಸ್​ ಬಗ್ಗೆ ಮಾತನಾಡಿರುವ ರಾಗಿಣಿ, ಈ ಕೇಸ್ ಬಗ್ಗೆ ಮಾತನಾಡುವ ಅವಶ್ಯಕತೆ ಇಲ್ಲ. ರಾಗಿಣಿ ಏನು ಎಂಬುದು ಎಲ್ಲರಿಗೂ ಗೊತ್ತು. ನಾನು ಅದನ್ನ ಸಮರ್ಥಿಸಿಕೊಳ್ಳ ಅವಶ್ಯಕತೆ ಇಲ್ಲ. ಕೇಸ್​ ಬಗ್ಗೆ ಮಾತನಾಡಲು ಇಷ್ಟವೂ ಇಲ್ಲ ಎಂದರು.

ಇದನ್ನೂ ಓದಿ: ಮತ್ತೆ ಗಾಂಧಿನಗರಕ್ಕೆ ರಾಗಿಣಿ ಕಂಬ್ಯಾಕ್.. ಕರ್ವ 3 ಸಿನಿಮಾಗೆ ಬಣ್ಣ ಹಚ್ಚಲಿದ್ದಾರೆ ತುಪ್ಪದ ಬೆಡಗಿ

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್