Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಣ’ ಚಿತ್ರದಲ್ಲಿ ರಾಗಿಣಿ ಸಖತ್​ ಡ್ಯಾನ್ಸ್​; ಕಮಾಲ್​ ಮಾಡಲು ಸಜ್ಜಾದ ‘ತುಪ್ಪದ ಬೆಡಗಿ’

ನಟಿ ರಾಗಿಣಿ ದ್ವಿವೇದಿ ಅವರು ‘ರಾಣ’ ಚಿತ್ರಕ್ಕೆ ಸಾಥ್​ ನೀಡಿದ್ದಾರೆ. ಈ ಚಿತ್ರದ ಒಂದು ಸ್ಪೆಷಲ್​ ಹಾಡಿನಲ್ಲಿ ಅವರು ಬಿಂದಾಸ್​ ಆಗಿ ಸ್ಟೆಪ್​​ ಹಾಕಲಿದ್ದು, ಇಮ್ರಾನ್​ ಸರ್ದಾರಿಯಾ ನೃತ್ಯ ನಿರ್ದೇಶನ ಮಾಡಲಿದ್ದಾರೆ.

‘ರಾಣ’ ಚಿತ್ರದಲ್ಲಿ ರಾಗಿಣಿ ಸಖತ್​ ಡ್ಯಾನ್ಸ್​; ಕಮಾಲ್​ ಮಾಡಲು ಸಜ್ಜಾದ ‘ತುಪ್ಪದ ಬೆಡಗಿ’
ರಾಗಿಣಿ ದ್ವಿವೇದಿ
Follow us
TV9 Web
| Updated By: ಮದನ್​ ಕುಮಾರ್​

Updated on: Oct 12, 2021 | 9:47 AM

ಖ್ಯಾತ ನಿರ್ಮಾಪಕ ಕೆ. ಮಂಜು ಪುತ್ರ ಶ್ರೇಯಸ್​ ನಟಿಸುತ್ತಿರುವ ‘ರಾಣ’ ಚಿತ್ರದ ಕೆಲಸಗಳು ಭರದಿಂದ ಸಾಗುತ್ತಿವೆ. ಈ ಚಿತ್ರತಂಡದಿಂದ ಈಗೊಂದು ಹೊಸ ನ್ಯೂಸ್​ ಹೊರಬಿದ್ದಿದೆ. ‘ರಾಣ’ ಸಿನಿಮಾತಂಡಕ್ಕೆ ನಟಿ ರಾಗಿಣಿ ದ್ವಿವೇದಿ ಸೇರ್ಪಡೆ ಆಗಿದ್ದಾರೆ. ಹಾಗಂತ ಅವರು ಹೀರೋಯಿನ್​ ಅಲ್ಲ. ಒಂದು ಸ್ಪೆಷಲ್​ ಹಾಡಿನಲ್ಲಿ ‘ತುಪ್ಪದ ಬೆಡಗಿ’ ಹೆಜ್ಜೆ ಹಾಕಲಿದ್ದಾರೆ. ಆ ಮೂಲಕ ಅವರು ‘ರಾಣ’ ತಂಡದ ಭಾಗವಾಗಿದ್ದಾರೆ.

ಈ ವಿಶೇಷ ಹಾಡಿಗೆ ಸಾಹಿತ್ಯ ಬರೆದಿರುವುದು ಶಿವು ಬೇರಗಿ. ಈ ಹಿಂದೆ ‘ಚುಟು ಚುಟು ಅಂತೈತಿ..’, ‘ಯಕ್ಕಾ ನಿನ್​ ಮಗಳು ನಂಗೆ ಚಿಕ್ಕೋಳಾಗಲ್ವಾ..’ ಮುಂತಾದ ಹಾಡುಗಳನ್ನು ಬರೆದು ಅವರು ಜನಮನ ಗೆದ್ದಿದ್ದಾರೆ. ಈಗ ಅವರು ‘ರಾಣ’ ಚಿತ್ರಕ್ಕಾಗಿ ಆಕರ್ಷಕ ಸಾಹಿತ್ಯ ಬರೆದಿದ್ದು, ಆ ಹಾಡಿಗೆ ಡ್ಯಾನ್ಸ್​ ಮಾಡುವ ಅವಕಾಶ ರಾಗಿಣಿ ಪಾಲಿಗೆ ಒಲಿದು ಬಂದಿದೆ.

ರಾಗಿಣಿಗೆ ಸ್ಪೆಷಲ್ ಸಾಂಗ್​ಗಳು ಹೊಸದೇನೂ ಅಲ್ಲ. ‘ವಿಕ್ಟರಿ’ ಚಿತ್ರದ ‘ಯಕ್ಕಾ ನಿನ್​ ಮಗಳು ನಂಗೆ ಚಿಕ್ಕೋಳಾಗಲ್ವಾ..’ ಹಾಡಿನಲ್ಲಿ ಅವರು ನಟ ಶರಣ್​ ಜೊತೆ ಬಿಂದಾಸ್​ ಆಗಿ ಸ್ಟೆಪ್​ ಹಾಕಿದ್ದರು. ಈಗ ‘ರಾಣ’ ಸಿನಿಮಾದಲ್ಲಿ ಯಾವ ರೀತಿ ಮೋಡಿ ಮಾಡಲಿದ್ದಾರೆ ಎಂದು ತಿಳಿಯಲು ಅವರ ಫ್ಯಾನ್ಸ್​ ಕಾದಿದ್ದಾರೆ. ಈ ಹಾಡಿಗೆ ಖ್ಯಾತ ಕೊರಿಯೋಗ್ರಾಫರ್​ ಇಮ್ರಾನ್​ ಸರ್ದಾರಿಯಾ ಅವರು ನೃತ್ಯ ನಿರ್ದೇಶನ ಮಾಡಲಿದ್ದಾರೆ. ಆ ಕಾರಣದಿಂದಲೂ ನಿರೀಕ್ಷೆ ಹೆಚ್ಚಿದೆ.

‘ರಾಣ’ ಚಿತ್ರಕ್ಕೆ ನಂದಕಿಶೋರ್ ನಿರ್ದೇಶನ ಮಾಡುತ್ತಿದ್ದಾರೆ. ಚಂದನ್ ಶೆಟ್ಟಿ ಸಂಗೀತ ನೀರ್ದೇಶನದಲ್ಲಿ ಹಾಡುಗಳು ಮೂಡಿಬರುತ್ತಿವೆ. ಶ್ರೇಯಸ್​ ಮಂಜುಗೆ ನಾಯಕಿಯರಾಗಿ‌ ರೀಷ್ಮಾ ನಾಣಯ್ಯ ಹಾಗೂ ರಜನಿ ಭಾರದ್ವಾಜ್ ನಟಿಸುತ್ತಿದ್ದಾರೆ. ಕೆ. ಮಂಜು ಅರ್ಪಿಸುವ ಈ ಚಿತ್ರವನ್ನು ಗುಜ್ಜಲ್ ಪುರುಷೋತ್ತಮ್ ನಿರ್ಮಿಸುತ್ತಿದ್ದಾರೆ. ಶೇಖರ್ ಚಂದ್ರ ಛಾಯಾಗ್ರಹಣ, ಕೆ.ಎಂ. ಪ್ರಕಾಶ್ ಸಂಕಲನ, ವಿಶ್ವ ಕಲಾ ನಿರ್ದೇಶನ, ರವಿವರ್ಮ ಸಾಹಸ ನಿರ್ದೇಶನ ಹಾಗೂ ಪ್ರಶಾಂತ್ ರಾಜಪ್ಪ ಸಂಭಾಷಣೆಯ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದಾರೆ.

ಕೆಲವೇ ದಿನಗಳ ಹಿಂದೆ ಈ ಸಿನಿಮಾದ ಫಸ್ಟ್​ಲುಕ್​ ಟೀಸರ್​ ಬಿಡುಗಡೆ ಆಗಿತ್ತು. ಆ ಕಾರ್ಯಕ್ರಮಕ್ಕೆ ನಟ ಉಪೇಂದ್ರ ಮುಖ್ಯ ಅತಿಥಿಯಾಗಿ ಬಂದು ಶುಭ ಹಾರೈಸಿದ್ದರು.

ಇದನ್ನೂ ಓದಿ:

ವಯಸ್ಸಿನ ಬಗ್ಗೆ ರಮ್ಯಾ ಆಡಿದ ಮಾತಿಗೆ ಕಿಚ್ಚನ ಪ್ರತಿಕ್ರಿಯೆ; ‘ಕೋಟಿಗೊಬ್ಬ 3’ ಸುದ್ದಿಗೋಷ್ಠಿಯಲ್ಲಿ ಸುದೀಪ್​ ಹೇಳಿದ್ದೇನು?

‘ಚರಂಡಿ ಕ್ಲೀನ್​ ಮಾಡುವವನ ಪಾತ್ರ ಮಾಡ್ತೀನಿ’: ದುನಿಯಾ ವಿಜಯ್​ ನಿರ್ದೇಶನದಲ್ಲಿ ಶಿವಣ್ಣನಿಗೆ ನಟಿಸುವ ಆಸೆ

ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!