AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಣ’ ಚಿತ್ರದಲ್ಲಿ ರಾಗಿಣಿ ಸಖತ್​ ಡ್ಯಾನ್ಸ್​; ಕಮಾಲ್​ ಮಾಡಲು ಸಜ್ಜಾದ ‘ತುಪ್ಪದ ಬೆಡಗಿ’

ನಟಿ ರಾಗಿಣಿ ದ್ವಿವೇದಿ ಅವರು ‘ರಾಣ’ ಚಿತ್ರಕ್ಕೆ ಸಾಥ್​ ನೀಡಿದ್ದಾರೆ. ಈ ಚಿತ್ರದ ಒಂದು ಸ್ಪೆಷಲ್​ ಹಾಡಿನಲ್ಲಿ ಅವರು ಬಿಂದಾಸ್​ ಆಗಿ ಸ್ಟೆಪ್​​ ಹಾಕಲಿದ್ದು, ಇಮ್ರಾನ್​ ಸರ್ದಾರಿಯಾ ನೃತ್ಯ ನಿರ್ದೇಶನ ಮಾಡಲಿದ್ದಾರೆ.

‘ರಾಣ’ ಚಿತ್ರದಲ್ಲಿ ರಾಗಿಣಿ ಸಖತ್​ ಡ್ಯಾನ್ಸ್​; ಕಮಾಲ್​ ಮಾಡಲು ಸಜ್ಜಾದ ‘ತುಪ್ಪದ ಬೆಡಗಿ’
ರಾಗಿಣಿ ದ್ವಿವೇದಿ
TV9 Web
| Edited By: |

Updated on: Oct 12, 2021 | 9:47 AM

Share

ಖ್ಯಾತ ನಿರ್ಮಾಪಕ ಕೆ. ಮಂಜು ಪುತ್ರ ಶ್ರೇಯಸ್​ ನಟಿಸುತ್ತಿರುವ ‘ರಾಣ’ ಚಿತ್ರದ ಕೆಲಸಗಳು ಭರದಿಂದ ಸಾಗುತ್ತಿವೆ. ಈ ಚಿತ್ರತಂಡದಿಂದ ಈಗೊಂದು ಹೊಸ ನ್ಯೂಸ್​ ಹೊರಬಿದ್ದಿದೆ. ‘ರಾಣ’ ಸಿನಿಮಾತಂಡಕ್ಕೆ ನಟಿ ರಾಗಿಣಿ ದ್ವಿವೇದಿ ಸೇರ್ಪಡೆ ಆಗಿದ್ದಾರೆ. ಹಾಗಂತ ಅವರು ಹೀರೋಯಿನ್​ ಅಲ್ಲ. ಒಂದು ಸ್ಪೆಷಲ್​ ಹಾಡಿನಲ್ಲಿ ‘ತುಪ್ಪದ ಬೆಡಗಿ’ ಹೆಜ್ಜೆ ಹಾಕಲಿದ್ದಾರೆ. ಆ ಮೂಲಕ ಅವರು ‘ರಾಣ’ ತಂಡದ ಭಾಗವಾಗಿದ್ದಾರೆ.

ಈ ವಿಶೇಷ ಹಾಡಿಗೆ ಸಾಹಿತ್ಯ ಬರೆದಿರುವುದು ಶಿವು ಬೇರಗಿ. ಈ ಹಿಂದೆ ‘ಚುಟು ಚುಟು ಅಂತೈತಿ..’, ‘ಯಕ್ಕಾ ನಿನ್​ ಮಗಳು ನಂಗೆ ಚಿಕ್ಕೋಳಾಗಲ್ವಾ..’ ಮುಂತಾದ ಹಾಡುಗಳನ್ನು ಬರೆದು ಅವರು ಜನಮನ ಗೆದ್ದಿದ್ದಾರೆ. ಈಗ ಅವರು ‘ರಾಣ’ ಚಿತ್ರಕ್ಕಾಗಿ ಆಕರ್ಷಕ ಸಾಹಿತ್ಯ ಬರೆದಿದ್ದು, ಆ ಹಾಡಿಗೆ ಡ್ಯಾನ್ಸ್​ ಮಾಡುವ ಅವಕಾಶ ರಾಗಿಣಿ ಪಾಲಿಗೆ ಒಲಿದು ಬಂದಿದೆ.

ರಾಗಿಣಿಗೆ ಸ್ಪೆಷಲ್ ಸಾಂಗ್​ಗಳು ಹೊಸದೇನೂ ಅಲ್ಲ. ‘ವಿಕ್ಟರಿ’ ಚಿತ್ರದ ‘ಯಕ್ಕಾ ನಿನ್​ ಮಗಳು ನಂಗೆ ಚಿಕ್ಕೋಳಾಗಲ್ವಾ..’ ಹಾಡಿನಲ್ಲಿ ಅವರು ನಟ ಶರಣ್​ ಜೊತೆ ಬಿಂದಾಸ್​ ಆಗಿ ಸ್ಟೆಪ್​ ಹಾಕಿದ್ದರು. ಈಗ ‘ರಾಣ’ ಸಿನಿಮಾದಲ್ಲಿ ಯಾವ ರೀತಿ ಮೋಡಿ ಮಾಡಲಿದ್ದಾರೆ ಎಂದು ತಿಳಿಯಲು ಅವರ ಫ್ಯಾನ್ಸ್​ ಕಾದಿದ್ದಾರೆ. ಈ ಹಾಡಿಗೆ ಖ್ಯಾತ ಕೊರಿಯೋಗ್ರಾಫರ್​ ಇಮ್ರಾನ್​ ಸರ್ದಾರಿಯಾ ಅವರು ನೃತ್ಯ ನಿರ್ದೇಶನ ಮಾಡಲಿದ್ದಾರೆ. ಆ ಕಾರಣದಿಂದಲೂ ನಿರೀಕ್ಷೆ ಹೆಚ್ಚಿದೆ.

‘ರಾಣ’ ಚಿತ್ರಕ್ಕೆ ನಂದಕಿಶೋರ್ ನಿರ್ದೇಶನ ಮಾಡುತ್ತಿದ್ದಾರೆ. ಚಂದನ್ ಶೆಟ್ಟಿ ಸಂಗೀತ ನೀರ್ದೇಶನದಲ್ಲಿ ಹಾಡುಗಳು ಮೂಡಿಬರುತ್ತಿವೆ. ಶ್ರೇಯಸ್​ ಮಂಜುಗೆ ನಾಯಕಿಯರಾಗಿ‌ ರೀಷ್ಮಾ ನಾಣಯ್ಯ ಹಾಗೂ ರಜನಿ ಭಾರದ್ವಾಜ್ ನಟಿಸುತ್ತಿದ್ದಾರೆ. ಕೆ. ಮಂಜು ಅರ್ಪಿಸುವ ಈ ಚಿತ್ರವನ್ನು ಗುಜ್ಜಲ್ ಪುರುಷೋತ್ತಮ್ ನಿರ್ಮಿಸುತ್ತಿದ್ದಾರೆ. ಶೇಖರ್ ಚಂದ್ರ ಛಾಯಾಗ್ರಹಣ, ಕೆ.ಎಂ. ಪ್ರಕಾಶ್ ಸಂಕಲನ, ವಿಶ್ವ ಕಲಾ ನಿರ್ದೇಶನ, ರವಿವರ್ಮ ಸಾಹಸ ನಿರ್ದೇಶನ ಹಾಗೂ ಪ್ರಶಾಂತ್ ರಾಜಪ್ಪ ಸಂಭಾಷಣೆಯ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದಾರೆ.

ಕೆಲವೇ ದಿನಗಳ ಹಿಂದೆ ಈ ಸಿನಿಮಾದ ಫಸ್ಟ್​ಲುಕ್​ ಟೀಸರ್​ ಬಿಡುಗಡೆ ಆಗಿತ್ತು. ಆ ಕಾರ್ಯಕ್ರಮಕ್ಕೆ ನಟ ಉಪೇಂದ್ರ ಮುಖ್ಯ ಅತಿಥಿಯಾಗಿ ಬಂದು ಶುಭ ಹಾರೈಸಿದ್ದರು.

ಇದನ್ನೂ ಓದಿ:

ವಯಸ್ಸಿನ ಬಗ್ಗೆ ರಮ್ಯಾ ಆಡಿದ ಮಾತಿಗೆ ಕಿಚ್ಚನ ಪ್ರತಿಕ್ರಿಯೆ; ‘ಕೋಟಿಗೊಬ್ಬ 3’ ಸುದ್ದಿಗೋಷ್ಠಿಯಲ್ಲಿ ಸುದೀಪ್​ ಹೇಳಿದ್ದೇನು?

‘ಚರಂಡಿ ಕ್ಲೀನ್​ ಮಾಡುವವನ ಪಾತ್ರ ಮಾಡ್ತೀನಿ’: ದುನಿಯಾ ವಿಜಯ್​ ನಿರ್ದೇಶನದಲ್ಲಿ ಶಿವಣ್ಣನಿಗೆ ನಟಿಸುವ ಆಸೆ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ