AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಣ’ ಚಿತ್ರದಲ್ಲಿ ರಾಗಿಣಿ ಸಖತ್​ ಡ್ಯಾನ್ಸ್​; ಕಮಾಲ್​ ಮಾಡಲು ಸಜ್ಜಾದ ‘ತುಪ್ಪದ ಬೆಡಗಿ’

ನಟಿ ರಾಗಿಣಿ ದ್ವಿವೇದಿ ಅವರು ‘ರಾಣ’ ಚಿತ್ರಕ್ಕೆ ಸಾಥ್​ ನೀಡಿದ್ದಾರೆ. ಈ ಚಿತ್ರದ ಒಂದು ಸ್ಪೆಷಲ್​ ಹಾಡಿನಲ್ಲಿ ಅವರು ಬಿಂದಾಸ್​ ಆಗಿ ಸ್ಟೆಪ್​​ ಹಾಕಲಿದ್ದು, ಇಮ್ರಾನ್​ ಸರ್ದಾರಿಯಾ ನೃತ್ಯ ನಿರ್ದೇಶನ ಮಾಡಲಿದ್ದಾರೆ.

‘ರಾಣ’ ಚಿತ್ರದಲ್ಲಿ ರಾಗಿಣಿ ಸಖತ್​ ಡ್ಯಾನ್ಸ್​; ಕಮಾಲ್​ ಮಾಡಲು ಸಜ್ಜಾದ ‘ತುಪ್ಪದ ಬೆಡಗಿ’
ರಾಗಿಣಿ ದ್ವಿವೇದಿ
TV9 Web
| Edited By: |

Updated on: Oct 12, 2021 | 9:47 AM

Share

ಖ್ಯಾತ ನಿರ್ಮಾಪಕ ಕೆ. ಮಂಜು ಪುತ್ರ ಶ್ರೇಯಸ್​ ನಟಿಸುತ್ತಿರುವ ‘ರಾಣ’ ಚಿತ್ರದ ಕೆಲಸಗಳು ಭರದಿಂದ ಸಾಗುತ್ತಿವೆ. ಈ ಚಿತ್ರತಂಡದಿಂದ ಈಗೊಂದು ಹೊಸ ನ್ಯೂಸ್​ ಹೊರಬಿದ್ದಿದೆ. ‘ರಾಣ’ ಸಿನಿಮಾತಂಡಕ್ಕೆ ನಟಿ ರಾಗಿಣಿ ದ್ವಿವೇದಿ ಸೇರ್ಪಡೆ ಆಗಿದ್ದಾರೆ. ಹಾಗಂತ ಅವರು ಹೀರೋಯಿನ್​ ಅಲ್ಲ. ಒಂದು ಸ್ಪೆಷಲ್​ ಹಾಡಿನಲ್ಲಿ ‘ತುಪ್ಪದ ಬೆಡಗಿ’ ಹೆಜ್ಜೆ ಹಾಕಲಿದ್ದಾರೆ. ಆ ಮೂಲಕ ಅವರು ‘ರಾಣ’ ತಂಡದ ಭಾಗವಾಗಿದ್ದಾರೆ.

ಈ ವಿಶೇಷ ಹಾಡಿಗೆ ಸಾಹಿತ್ಯ ಬರೆದಿರುವುದು ಶಿವು ಬೇರಗಿ. ಈ ಹಿಂದೆ ‘ಚುಟು ಚುಟು ಅಂತೈತಿ..’, ‘ಯಕ್ಕಾ ನಿನ್​ ಮಗಳು ನಂಗೆ ಚಿಕ್ಕೋಳಾಗಲ್ವಾ..’ ಮುಂತಾದ ಹಾಡುಗಳನ್ನು ಬರೆದು ಅವರು ಜನಮನ ಗೆದ್ದಿದ್ದಾರೆ. ಈಗ ಅವರು ‘ರಾಣ’ ಚಿತ್ರಕ್ಕಾಗಿ ಆಕರ್ಷಕ ಸಾಹಿತ್ಯ ಬರೆದಿದ್ದು, ಆ ಹಾಡಿಗೆ ಡ್ಯಾನ್ಸ್​ ಮಾಡುವ ಅವಕಾಶ ರಾಗಿಣಿ ಪಾಲಿಗೆ ಒಲಿದು ಬಂದಿದೆ.

ರಾಗಿಣಿಗೆ ಸ್ಪೆಷಲ್ ಸಾಂಗ್​ಗಳು ಹೊಸದೇನೂ ಅಲ್ಲ. ‘ವಿಕ್ಟರಿ’ ಚಿತ್ರದ ‘ಯಕ್ಕಾ ನಿನ್​ ಮಗಳು ನಂಗೆ ಚಿಕ್ಕೋಳಾಗಲ್ವಾ..’ ಹಾಡಿನಲ್ಲಿ ಅವರು ನಟ ಶರಣ್​ ಜೊತೆ ಬಿಂದಾಸ್​ ಆಗಿ ಸ್ಟೆಪ್​ ಹಾಕಿದ್ದರು. ಈಗ ‘ರಾಣ’ ಸಿನಿಮಾದಲ್ಲಿ ಯಾವ ರೀತಿ ಮೋಡಿ ಮಾಡಲಿದ್ದಾರೆ ಎಂದು ತಿಳಿಯಲು ಅವರ ಫ್ಯಾನ್ಸ್​ ಕಾದಿದ್ದಾರೆ. ಈ ಹಾಡಿಗೆ ಖ್ಯಾತ ಕೊರಿಯೋಗ್ರಾಫರ್​ ಇಮ್ರಾನ್​ ಸರ್ದಾರಿಯಾ ಅವರು ನೃತ್ಯ ನಿರ್ದೇಶನ ಮಾಡಲಿದ್ದಾರೆ. ಆ ಕಾರಣದಿಂದಲೂ ನಿರೀಕ್ಷೆ ಹೆಚ್ಚಿದೆ.

‘ರಾಣ’ ಚಿತ್ರಕ್ಕೆ ನಂದಕಿಶೋರ್ ನಿರ್ದೇಶನ ಮಾಡುತ್ತಿದ್ದಾರೆ. ಚಂದನ್ ಶೆಟ್ಟಿ ಸಂಗೀತ ನೀರ್ದೇಶನದಲ್ಲಿ ಹಾಡುಗಳು ಮೂಡಿಬರುತ್ತಿವೆ. ಶ್ರೇಯಸ್​ ಮಂಜುಗೆ ನಾಯಕಿಯರಾಗಿ‌ ರೀಷ್ಮಾ ನಾಣಯ್ಯ ಹಾಗೂ ರಜನಿ ಭಾರದ್ವಾಜ್ ನಟಿಸುತ್ತಿದ್ದಾರೆ. ಕೆ. ಮಂಜು ಅರ್ಪಿಸುವ ಈ ಚಿತ್ರವನ್ನು ಗುಜ್ಜಲ್ ಪುರುಷೋತ್ತಮ್ ನಿರ್ಮಿಸುತ್ತಿದ್ದಾರೆ. ಶೇಖರ್ ಚಂದ್ರ ಛಾಯಾಗ್ರಹಣ, ಕೆ.ಎಂ. ಪ್ರಕಾಶ್ ಸಂಕಲನ, ವಿಶ್ವ ಕಲಾ ನಿರ್ದೇಶನ, ರವಿವರ್ಮ ಸಾಹಸ ನಿರ್ದೇಶನ ಹಾಗೂ ಪ್ರಶಾಂತ್ ರಾಜಪ್ಪ ಸಂಭಾಷಣೆಯ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದಾರೆ.

ಕೆಲವೇ ದಿನಗಳ ಹಿಂದೆ ಈ ಸಿನಿಮಾದ ಫಸ್ಟ್​ಲುಕ್​ ಟೀಸರ್​ ಬಿಡುಗಡೆ ಆಗಿತ್ತು. ಆ ಕಾರ್ಯಕ್ರಮಕ್ಕೆ ನಟ ಉಪೇಂದ್ರ ಮುಖ್ಯ ಅತಿಥಿಯಾಗಿ ಬಂದು ಶುಭ ಹಾರೈಸಿದ್ದರು.

ಇದನ್ನೂ ಓದಿ:

ವಯಸ್ಸಿನ ಬಗ್ಗೆ ರಮ್ಯಾ ಆಡಿದ ಮಾತಿಗೆ ಕಿಚ್ಚನ ಪ್ರತಿಕ್ರಿಯೆ; ‘ಕೋಟಿಗೊಬ್ಬ 3’ ಸುದ್ದಿಗೋಷ್ಠಿಯಲ್ಲಿ ಸುದೀಪ್​ ಹೇಳಿದ್ದೇನು?

‘ಚರಂಡಿ ಕ್ಲೀನ್​ ಮಾಡುವವನ ಪಾತ್ರ ಮಾಡ್ತೀನಿ’: ದುನಿಯಾ ವಿಜಯ್​ ನಿರ್ದೇಶನದಲ್ಲಿ ಶಿವಣ್ಣನಿಗೆ ನಟಿಸುವ ಆಸೆ

Follow Us
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ