AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪು​ ನಿವಾಸಕ್ಕೆ ರಾಹುಲ್​ ಗಾಂಧಿ ಭೇಟಿ; ಅಶ್ವಿನಿ ಪುನೀತ್​ ರಾಜ್​ಕುಮಾರ್​ ಜತೆ ಮಾತುಕತೆ

ತುಮಕೂರಿನಿಂದ ರಾತ್ರಿ ವೇಳೆಗೆ ರಾಹುಲ್​ ಗಾಂಧಿ ಬೆಂಗಳೂರಿಗೆ ಆಗಮಿಸಿದರು. ಆ ಬಳಿಕ ಪುನೀತ್ ನಿವಾಸಕ್ಕೆ ತೆರಳಿ, ಕುಟುಂಬದವರಿಗೆ ಸಾಂತ್ವನ ಹೇಳಿದರು.

ಅಪ್ಪು​ ನಿವಾಸಕ್ಕೆ ರಾಹುಲ್​ ಗಾಂಧಿ ಭೇಟಿ; ಅಶ್ವಿನಿ ಪುನೀತ್​ ರಾಜ್​ಕುಮಾರ್​ ಜತೆ ಮಾತುಕತೆ
ಪುನೀತ್ ನಿವಾಸಕ್ಕೆ ರಾಹುಲ್
TV9 Web
| Edited By: |

Updated on: Mar 31, 2022 | 8:45 PM

Share

ಪುನೀತ್​ ರಾಜ್​ಕುಮಾರ್ (Puneeth Rajkumar) ಅವರನ್ನು ನಾವು ಕಳೆದುಕೊಂಡಿದ್ದೇವೆ. ಇದು ಇಡೀ ಭಾರತದ ಸಿನಿಮಾ ಇಂಡಸ್ಟ್ರಿಗೆ ತುಂಬಲಾರದ ನಷ್ಟ. ಪುನೀತ್ ನಿಧನದ ನಂತರದಲ್ಲಿ ಅವರ ನಿವಾಸಕ್ಕೆ ಸಾಕಷ್ಟು ಸೆಲೆಬ್ರಿಟಿಗಳು, ರಾಜಕಾರಣಿಗಳು ಭೇಟಿ ನೀಡಿ, ಅಪ್ಪು ಪತ್ನಿ ಅಶ್ವಿನಿ ಪುನೀತ್​ ರಾಜ್​ಕುಮಾರ್ (Ashwini Puneeth Rajkumar) ಅವರಿಗೆ ಸಾಂತ್ವನ ಹೇಳಿದ್ದಾರೆ. ಅಲ್ಲು ಅರ್ಜುನ್, ರಾಮ್​ ಚರಣ್​ ಸೇರಿ ಹಲವು ಟಾಲಿವುಡ್​ ಸ್ಟಾರ್​ಗಳು ಪುನೀತ್​ ಮನೆಗೆ ಭೇಟಿ ನೀಡಿದ್ದರು. ಇಂದು (ಮಾರ್ಚ್​ 31) ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರು ಪುನೀತ್ ನಿವಾಸಕ್ಕೆ ತೆರಳಿದ್ದಾರೆ. ಈ ಮೂಲಕ ಕುಟುಂಬಕ್ಕೆ ಅವರು ಸಾಂತ್ವನ ಹೇಳಿದ್ದಾರೆ.

ಶುಕ್ರವಾರ (ಏಪ್ರಿಲ್​ 1) ಶಿವಕುಮಾರ ಶ್ರೀಗಳ 115ನೇ ಜಯಂತಿ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಂದು (ಮಾರ್ಚ್​ 31) ತುಮಕೂರಿನ ಸಿದ್ದಗಂಗಾ ಮಠಕ್ಕೆ ರಾಹುಲ್ ಗಾಂಧಿ ಭೇಟಿ ನೀಡಿದ್ದಾರೆ. ಸಿದ್ದಗಂಗಾ ಮಠದ ಶಿವಕುಮಾರ ಶ್ರೀ ಗಳ ಗದ್ದುಗೆ ದರ್ಶನ ಪಡೆದು ಪೂಜೆ ಸಲ್ಲಿಸಿದ್ದಾರೆ. ರಾತ್ರಿ ವೇಳೆಗೆ ಅವರು ಬೆಂಗಳೂರಿಗೆ ಆಗಮಿಸಿದರು. ಆ ಬಳಿಕ ಪುನೀತ್ ನಿವಾಸಕ್ಕೆ ತೆರಳಿ, ಕುಟುಂಬದವರಿಗೆ ಸಾಂತ್ವನ ಹೇಳಿದರು ರಾಹುಲ್​ ಗಾಂಧಿ.

ರಾಹುಲ್​ ಗಾಂಧಿ ಆಗಮನದ ಹಿನ್ನೆಲೆಯಲ್ಲಿ ಪುನೀತ್​ ನಿವಾಸಕ್ಕೆ ಬಿಗಿ ಬಂದೋಬಸ್ತ್ ನಿಯೋಜನೆ ಮಾಡಲಾಗಿತ್ತು. 15ಕ್ಕೂ ಅಧಿಕ ಪೊಲೀಸರು ಪುನೀತ್​ ನಿವಾಸಕ್ಕೆ ಭದ್ರತೆ ನೀಡಿದರು.

ಪುನೀತ್​ ರಾಜ್​ಕುಮಾರ್ ಅವರನ್ನು ಕಳೆದುಕೊಂಡಿರುವುದು ಅವರ ಅಭಿಮಾನಿಗಳಿಗೆ ತೀವ್ರ ನೋವು ತಂದಿದೆ. ಏಪ್ರಿಲ್​ 17ರಂದು ಪುನೀತ್​ ಜನ್ಮದಿನ ಆಚರಿಸಲಾಗಿದೆ. ಈ ಪ್ರಯುಕ್ತ ಅವರ ನಟನೆಯ ‘ಜೇಮ್ಸ್’ ಸಿನಿಮಾ ತೆರೆಗೆ ಬಂತು. ಹೀರೋ ಆಗಿ ನಟಿಸಿದ ಕೊನೆಯ ಸಿನಿಮಾ ಎಂಬ ಕಾರಣಕ್ಕೆ ಈ ಚಿತ್ರ ದೊಡ್ಡ ಮಟ್ಟದಲ್ಲಿ ಹೈಪ್​ ಸೃಷ್ಟಿ ಮಾಡಿತ್ತು. ಈ ಚಿತ್ರಕ್ಕೆ ಅಭಿಮಾನಿಗಳು ಭಾವನಾತ್ಮಕವಾಗಿ ಕನೆಕ್ಟ್ ಆದರು. ಈ ಸಿನಿಮಾ ನಾಲ್ಕೇ ದಿನಕ್ಕೆ 100 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತು.

ಇದನ್ನೂ ಓದಿ: ‘RRR​’ ನೋಡಲು ಬಂದರು, ಪುನೀತ್​ಗೆ ಜೈಕಾರ ಹಾಕಿದರು; ಅಪ್ಪು ಮೇಲಿನ ಅಭಿಮಾನ ನಿರಂತರ

ಪುನೀತ್ ನಿಧನರಾಗಿ 5 ತಿಂಗಳು, ಕುಟುಂಬ ಸದಸ್ಯರಿಂದ ಪೂಜೆ ಸಲ್ಲಿಕೆ; ಸಮಾಧಿಗೆ ಭೇಟಿ ನೀಡಿ, ನಮನ ಸಲ್ಲಿಸಿದ ಆರ್​ಜಿವಿ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್