AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸ್ವಾತಿ ಮುತ್ತಿನ ಮಳೆ ಹನಿಯೇ’ ವಿಡಿಯೋ ಹಂಚಿಕೊಂಡ ಆಪಲ್ ಬಾಕ್ಸ್: ಮುನಿಸು ಮರೆತರೇ ರಮ್ಯಾ?

Ramya-Raj B Shetty: ರಮ್ಯಾ ನಿರ್ಮಾಣ ಮಾಡಿ ರಾಜ್ ಬಿ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ 'ಸ್ವಾತಿ ಮುತ್ತಿನ ಮಳೆ ಹನಿಯೇ' ಸಿನಿಮಾದ ವಿಡಿಯೋ ಒಂದನ್ನು ರಮ್ಯಾರ ಆಪಲ್ ಬಾಕ್ಸ್ ಶೇರ್ ಮಾಡಿದೆ.

'ಸ್ವಾತಿ ಮುತ್ತಿನ ಮಳೆ ಹನಿಯೇ' ವಿಡಿಯೋ ಹಂಚಿಕೊಂಡ ಆಪಲ್ ಬಾಕ್ಸ್: ಮುನಿಸು ಮರೆತರೇ ರಮ್ಯಾ?
ರಾಜ್ ಬಿ ಶೆಟ್ಟಿ-ರಮ್ಯಾ
Follow us
ಮಂಜುನಾಥ ಸಿ.
|

Updated on: Aug 08, 2023 | 7:40 PM

ರಾಜ್ ಬಿ ಶೆಟ್ಟಿ (Raj B Shetty) ನಟಿಸಿ ನಿರ್ದೇಶನ ಮಾಡಿರುವ ‘ಟೋಬಿ’ ಸಿನಿಮಾ ಆಗಸ್ಟ್ 25ರಂದು ಬಿಡುಗಡೆ ಆಗಲಿದೆ. ಸಿನಿಮಾದ ಪ್ರಚಾರ ಜೋರಾಗಿ ನಡೆದಿದೆ. ಆದರೆ ‘ಟೋಬಿ’ ಸಿನಿಮಾಕ್ಕೆ ಮುನ್ನ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾದ ಚಿತ್ರೀಕರಣವನ್ನು ರಾಜ್ ಬಿ ಶೆಟ್ಟಿ ಮುಗಿಸಿದ್ದರು. ಆದರೆ ಅದರ ನಂತರ ಶುರು ಮಾಡಿದ ‘ಟೋಬಿ’ ಸಿನಿಮಾ ಮೊದಲು ಬಿಡುಗಡೆ ಆಗುತ್ತಿದೆ. ಇದಕ್ಕೆ ರಮ್ಯಾ (Ramya) ಹಾಗೂ ರಾಜ್ ಬಿ ಶೆಟ್ಟಿ ನಡುವಿನ ಭಿನ್ನಾಭಿಪ್ರಾಯವೇ ಕಾರಣ ಎಂಬ ಮಾತುಗಳು ಕೇಳಿ ಬಂದಿದ್ದವು. ಇದೀಗ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾದ ಅಪ್​ಡೇಟ್ ಒಂದನ್ನು ರಮ್ಯಾರ ನಿರ್ಮಾಣ ಸಂಸ್ಥೆ ಹಂಚಿಕೊಂಡಿದೆ.

ಹಲವು ವರ್ಷಗಳ ಬಳಿಕ ಚಿತ್ರರಂಗಕ್ಕೆ ಮರಳಿರುವ ನಟಿ ರಮ್ಯಾ, ಆಪಲ್ ಬಾಕ್ಸ್ ಹೆಸರಿನ ನಿರ್ಮಾಣ ಸಂಸ್ಥೆ ಮೂಲಕ ಚಿತ್ರನಿರ್ಮಾಣಕ್ಕೆ ಇಳಿದಿದ್ದಾರೆ. ತಮ್ಮ ನಿರ್ಮಾಣ ಸಂಸ್ಥೆಯ ಮೊದಲ ಸಿನಿಮಾಕ್ಕೆ ರಾಜ ಬಿ ಶೆಟ್ಟಿಯನ್ನು ನಾಯಕ ಹಾಗೂ ನಿರ್ದೇಶಕನನ್ನಾಗಿ ಆಯ್ಕೆ ಮಾಡಿದ್ದರು ರಮ್ಯಾ. ಅಂತೆಯೇ ರಾಜ್ ಬಿ ಶೆಟ್ಟಿ ಸಹ ಸಿನಿಮಾವನ್ನು ಮುಗಿಸಿಕೊಟ್ಟಿದ್ದಾರೆ.

ಇದೀಗ ಆಪಲ್ ಬಾಕ್ಸ್ ಸೋಷಿಯಲ್ ಮೀಡಿಯಾ ಮೂಲಕ ‘ಸ್ವಾಮಿ ಮುತ್ತಿನ ಮಳೆ ಹನಿಯೇ’ ಸಿನಿಮಾ ಚಿತ್ರೀಕರಣದ ಬಿಹೈಂಡ್ ದಿ ಸೀನ್ಸ್ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ನಿರ್ದೇಶಕ ರಾಜ್ ಬಿ ಶೆಟ್ಟಿ ಇನ್ನಿತರೆ ನಟ ಹಾಗೂ ತಂತ್ರಜ್ಞರು ಸಿನಿಮಾಕ್ಕಾಗಿ ಪಟ್ಟ ಕಷ್ಟವನ್ನು ವಿಡಿಯೋನಲ್ಲಿ ತೋರಿಸಲಾಗಿದೆ. ಆದರೆ ನಾಯಕಿಯನ್ನು ಮಾತ್ರ ಸರಿಯಾಗಿ ತೋರಿಸದೆ ಕುತೂಹಲ ಕಾಯ್ದುಕೊಳ್ಳಲಾಗಿದೆ.

ಇದನ್ನೂ ಓದಿ:ರಮ್ಯಾ v/s ಹಾಸ್ಟೆಲ್ ಹುಡುಗರು: ನ್ಯಾಯಾಲಯ ಹೇಳಿದ್ದೇನು?

‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾವು ಪ್ರೇಮಕತೆಯಾಗಿದ್ದು ಸಿನಿಮಾದಲ್ಲಿ ರಾಜ್ ಬಿ ಶೆಟ್ಟಿ ಎದುರು ನಾಯಕಿಯಾಗಿ ಸಿರಿ ನಟಿಸಿದ್ದಾರೆ. ಅಸಲಿಗೆ ರಮ್ಯಾ ಅವರೇ ಈ ಸಿನಿಮಾದ ನಾಯಕಿ ಆಗಬೇಕಿತ್ತು. ಆದರೆ ಅದು ಸಾಧ್ಯವಾಗಲಿಲ್ಲ ಆದರೆ ಈ ಸಿನಿಮಾವನ್ನು ರಮ್ಯಾ ಅವರೇ ನಿರ್ಮಾಣ ಮಾಡಿದ್ದಾರೆ.

ಆದರೆ ರಾಜ್ ಬಿ ಶೆಟ್ಟಿ ಹಾಗೂ ನಿರ್ಮಾಪಕಿ ರಮ್ಯಾ ನಡುವೆ ಮನಸ್ಥಾಪ ಏರ್ಪಟ್ಟ ಕಾರಣ ಸಿನಿಮಾ ಬಿಡುಗಡೆ ತಡವಾಗುತ್ತಿದೆ ಎನ್ನಲಾಗುತ್ತಿದೆ. ಇಬ್ಬರಿಗೂ ಮನಸ್ಥಾಪ ಏರ್ಪಟ್ಟಿರುವುದು ಬಹುತೇಕ ಖಾತ್ರಿಯಾಗಿದೆ. ರಾಜ್ ಬಿ ಶೆಟ್ಟಿ ಸಹ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾದ ಬಗ್ಗೆ ಅನ್ಯಮನಸ್ಕರಾಗಿ ಮಾತನಾಡುತ್ತಿದ್ದಾರೆ. ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾದ ವಿರುದ್ಧ ರಮ್ಯಾ ಪ್ರಕರಣ ದಾಖಲಿಸಿದಾಗಲೂ ರಾಜ್ ಬಿ ಶೆಟ್ಟಿ ‘ಹಾಸ್ಟೆಲ್ ಹುಡುಗರ’ ಪರವಾಗಿ, ರಮ್ಯಾಗೆ ಟಾಂಗ್​​ ನೀಡುವ ರೀತಿಯಲ್ಲಿಯೇ ಪೋಸ್ಟ್ ಹಂಚಿಕೊಂಡಿದ್ದರು.

ಆದರೆ ಕೊನೆಗೂ ಈಗ ಆಪಲ್​ ಬಾಕ್ಸ್ ಕಡೆಯಿಂದ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾದ ವಿಡಿಯೋ ಒಂದು ಬಿಡುಗಡೆ ಮಾಡಿದೆ. ಅಲ್ಲಿದೆ ನಿರ್ಮಾಣ ಸಂಸ್ಥೆ ತಮ್ಮ ಸಿನಿಮಾವನ್ನು ಮರೆತಿಲ್ಲ ಎಂಬುದಂತೂ ಖಾತ್ರಿಯಾಗಿದೆ. ಆದರೆ ಸಿನಿಮಾದ ಬಿಡುಗಡೆ ದಿನಾಂಕವನ್ನಾಗಲಿ, ಟೀಸರ್, ಟ್ರೈಲರ್ ಬಿಡುಗಡೆ ದಿನಾಂಕಗಳನ್ನಾಗಲಿ ಘೋಷಿಸಲಾಗಿಲ್ಲ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ