AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಒಳ್ಳೆಯ ಕಥೆ ಇದ್ರೆ ಹೇಳಿ ಸಿನಿಮಾ ಮಾಡೋಣ’; ರಾಜ್​ ಬಿ ಶೆಟ್ಟಿಗೆ ಅಕ್ಷಯ್ ಕುಮಾರ್ ಬುಲಾವ್

ರಾಜ್ ಬಿ ಶೆಟ್ಟಿ ಅವರ ‘ಸು ಫ್ರಮ್ ಸೋ’ ಚಿತ್ರ ಭಾರೀ ಯಶಸ್ಸು ಕಂಡಿದೆ. ಅವರು ಬಾಲಿವುಡ್ ಸೂಪರ್‌ಸ್ಟಾರ್ ಅಕ್ಷಯ್ ಕುಮಾರ್ ಅವರನ್ನು ಭೇಟಿಯಾಗಿದ್ದಾರೆ. ಸಿನಿಮಾ ಸಹಯೋಗದ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ. ಈ ಭೇಟಿಯ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

‘ಒಳ್ಳೆಯ ಕಥೆ ಇದ್ರೆ ಹೇಳಿ ಸಿನಿಮಾ ಮಾಡೋಣ’; ರಾಜ್​ ಬಿ ಶೆಟ್ಟಿಗೆ ಅಕ್ಷಯ್ ಕುಮಾರ್ ಬುಲಾವ್
ಅಕ್ಷಯ್-ರಾಜ್
ರಾಜೇಶ್ ದುಗ್ಗುಮನೆ
|

Updated on:Sep 13, 2025 | 12:33 PM

Share

ರಾಜ್ ಬಿ ಶೆಟ್ಟಿ ನಿರ್ಮಾಣದ ‘ಸು ಫ್ರಮ್ ಸೋ’ ಸಿನಿಮಾ ಸೂಪರ್ ಹಿಟ್ ಆಯಿತು. ಆ ಚಿತ್ರದ ಬಳಿಕ ಅವರು ದೊಡ್ಡ ಗೆಲುವು ಕಂಡಿದ್ದಾರೆ. ಈಗ ರಾಜ್ ಬಿ ಶೆಟ್ಟಿ ಅವರು ಬಾಲಿವುಡ್​ ನಟ ಅಕ್ಷಯ್ ಕುಮಾರ್ (Akshay Kumar) ಅವರನ್ನು ಭೇಟಿ ಆಗಿದ್ದಾರೆ. ಈ ವೇಳೆ ಸಿನಿಮಾ ಮಾಡುವ ಬಗ್ಗೆ ಚರ್ಚೆ ನಡೆದಿದೆ ಎಂದು ಹೇಳಲಾಗಿದೆ. ರಾಜ್ ಹಾಗೂ ಅಕ್ಷಯ್ ಭೇಟಿಯ ಫೋಟೋಗಳು ವೈರಲ್ ಆಗಿವೆ.

‘ಸು ಫ್ರಮ್ ಸೋ’ ಸಿನಿಮಾ ಕನ್ನಡ ಮಾತ್ರವಲ್ಲದೆ ಪರಭಾಷೆಗಳಲ್ಲೂ ಮೆಚ್ಚುಗೆ ಪಡೆದಿದೆ. ಈ ಚಿತ್ರ ಹಿಂದಿಗೂ ರಿಮೇಕ್ ಆಗುತ್ತಿದ್ದು, ಇದರ ಹಕ್ಕು ಮಾರಾಟ ಆಗಿದೆ. ಈ ಮೊದಲು ‘ಸು ಫ್ರಮ್ ಸೋ’ ಸಿನಿಮಾ ಗೆಲುವಿನ ಬಳಿಕ ಸಿನಿಮಾ ನಿರ್ದೇಶಕ ಜೆಪಿ ಅವರು ಬಾಲಿವುಡ್ ನಟ ಅಜಯ್ ದೇವಗನ್ ಅವರನ್ನು ಭೇಟಿ ಮಾಡಿದ್ದರು. ಈಗ ರಾಜ್ ಅವರು ಅಕ್ಷಯ್​ ಕುಮಾರ್​ನ ಭೇಟಿ ಮಾಡಿದ್ದಾರೆ.

ಅಕ್ಷಯ್ ಕುಮಾರ್ ಅವರು ‘ಹೈವಾನ್’ ಹೆಸರಿನ ಹಿಂದಿ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರವನ್ನು ಕನ್ನಡದ ಕೆವಿಎನ್ ನಿರ್ಮಾಣ ಮಾಡುತ್ತಿದೆ. ಸಿನಿಮಾದ ಶೂಟ್ ಊಟಿಯಲ್ಲಿ ನಡೆಯುತ್ತಿದೆ. ಚಿತ್ರದ ಸೆಟ್ಟಲ್ಲಿ ರಾಜ್ ಬಿ  ಶೆಟ್ಟಿ ಅವರು ಅಕ್ಷಯ್​ನ ಭೇಟಿ ಆಗಿದ್ದಾರೆ.

ಇದನ್ನೂ ಓದಿ
Image
ಆ ಒಂದು ಶಬ್ದ ಬಳಕೆ ಮಾಡಿದ್ದಕ್ಕೆ ಆಕ್ರೋಶ; ಕಪಿಲ್ ಶೋ ನಿಲ್ಲಿಸೋ ಎಚ್ಚರಿಕೆ
Image
‘ನೀವು ಊಹಿಸಿದಂತೆ ಕಥೆ ನಡೆಯಲ್ಲ’; ‘ಕರ್ಣ’ ಬಗ್ಗೆ ಕಿರಣ್ ರಾಜ್ ಹಿಂಟ್
Image
ಜೀ ಕನ್ನಡ ವೇದಿಕೆ ಮೇಲೆ ಅನುಶ್ರೀ ಮಡಿಲು ತುಂಬಿದ ತಾರಾ; ಮಗಳಂತೆ ಭಾವುಕ
Image
‘ತಾಳ್ಮೆಯಿಂದ ಕಾದಿದ್ದಕ್ಕೆ ಅರ್ಥಪೂರ್ಣವಾದ ತಾಳಿ ಬಿದ್ದಿದೆ’; ಅನುಶ್ರೀ

‘ಸು ಫ್ರಮ್ ಸೋ’ ನೋಡಿ ಅಕ್ಷಯ್ ಕುಮಾರ್ ಕೊಂಡಾಡಿದ್ದಾರೆ. ‘ಕಥೆ ಇದ್ದರೆ ಹೇಳಿ ಸಿನಿಮಾ ಮಾಡೋಣ’ ಎಂದು ರಾಜ್ ಬಿ. ರಾಜ್ ಬಿ ಶೆಟ್ಟಿ ಅವರನ್ನು ಅಕ್ಷಯ್ ಕುಮಾರ್‌ ಕೇಳಿದ್ದಾರೆ ಎನ್ನಲಾಗುತ್ತಿದೆ. ಈ ವಿಚಾರ ಕನ್ನಡಿಗರ ಪಾಲಿಗೆ ವಿಶೇಷ ಹೆಮ್ಮೆ ತಂದಿದೆ.

ಇದನ್ನೂ ಓದಿ: ‘ಗುಟ್ಕಾ ತಿನ್ನೋದು ಕೆಟ್ಟದ್ದು’: ಜನರಿಗೆ ಸಂದೇಶ ನೀಡಿದ ನಟ ಅಕ್ಷಯ್ ಕುಮಾರ್

ಅಕ್ಷಯ್ ಕುಮಾರ್ ಅವರು ಬಾಲಿವುಡ್​ನ ಸ್ಟಾರ್ ಹೀರೋ. ಹಲವು ಸಿನಿಮಾ ಕೆಲಸಗಳನ್ನು ಅವರು ಒಟ್ಟಾಗಿ ಮಾಡುತ್ತಾರೆ. ಈಗಾಗಲೇ ರಾಜ್ ಅವರು ಸ್ಟಾರ್​ಗಳ ಜೊತೆ ಸಿನಿಮಾ ಮಾಡೋದಿಲ್ಲ ಎಂದು ಹೇಳಿಯಾಗಿದೆ. ಅವರ ಕಾಲ್​ಶೀಟ್​ಗಾಗಿ ಒದ್ದಾಡೋದು ಅವರಿಗೆ ಇಷ್ಟವಿಲ್ಲವಂತೆ. ಹೀಗಾಗಿ, ಅವರು ಅಕ್ಷಯ್ ಜೊತೆ ಸಿನಿಮಾ ಮಾಡೋದು ಅನುಮಾನ ಎಂದು ಹೇಳಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:31 pm, Sat, 13 September 25

Follow Us
ಕರ್ನಾಟಕದಲ್ಲಿ ಕೆಜಿ ಈರುಳ್ಳಿ ದರ ಶೀಘ್ರವೇ 100 ರೂಪಾಯಿ?
ಕರ್ನಾಟಕದಲ್ಲಿ ಕೆಜಿ ಈರುಳ್ಳಿ ದರ ಶೀಘ್ರವೇ 100 ರೂಪಾಯಿ?
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗಳಿಗೆ ಬೀಗ?
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗಳಿಗೆ ಬೀಗ?
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್