‘ಒಳ್ಳೆಯ ಕಥೆ ಇದ್ರೆ ಹೇಳಿ ಸಿನಿಮಾ ಮಾಡೋಣ’; ರಾಜ್​ ಬಿ ಶೆಟ್ಟಿಗೆ ಅಕ್ಷಯ್ ಕುಮಾರ್ ಬುಲಾವ್

ರಾಜ್ ಬಿ ಶೆಟ್ಟಿ ಅವರ ‘ಸು ಫ್ರಮ್ ಸೋ’ ಚಿತ್ರ ಭಾರೀ ಯಶಸ್ಸು ಕಂಡಿದೆ. ಅವರು ಬಾಲಿವುಡ್ ಸೂಪರ್‌ಸ್ಟಾರ್ ಅಕ್ಷಯ್ ಕುಮಾರ್ ಅವರನ್ನು ಭೇಟಿಯಾಗಿದ್ದಾರೆ. ಸಿನಿಮಾ ಸಹಯೋಗದ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ. ಈ ಭೇಟಿಯ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

‘ಒಳ್ಳೆಯ ಕಥೆ ಇದ್ರೆ ಹೇಳಿ ಸಿನಿಮಾ ಮಾಡೋಣ’; ರಾಜ್​ ಬಿ ಶೆಟ್ಟಿಗೆ ಅಕ್ಷಯ್ ಕುಮಾರ್ ಬುಲಾವ್
ಅಕ್ಷಯ್-ರಾಜ್

Updated on: Sep 13, 2025 | 12:33 PM

ರಾಜ್ ಬಿ ಶೆಟ್ಟಿ ನಿರ್ಮಾಣದ ‘ಸು ಫ್ರಮ್ ಸೋ’ ಸಿನಿಮಾ ಸೂಪರ್ ಹಿಟ್ ಆಯಿತು. ಆ ಚಿತ್ರದ ಬಳಿಕ ಅವರು ದೊಡ್ಡ ಗೆಲುವು ಕಂಡಿದ್ದಾರೆ. ಈಗ ರಾಜ್ ಬಿ ಶೆಟ್ಟಿ ಅವರು ಬಾಲಿವುಡ್​ ನಟ ಅಕ್ಷಯ್ ಕುಮಾರ್ (Akshay Kumar) ಅವರನ್ನು ಭೇಟಿ ಆಗಿದ್ದಾರೆ. ಈ ವೇಳೆ ಸಿನಿಮಾ ಮಾಡುವ ಬಗ್ಗೆ ಚರ್ಚೆ ನಡೆದಿದೆ ಎಂದು ಹೇಳಲಾಗಿದೆ. ರಾಜ್ ಹಾಗೂ ಅಕ್ಷಯ್ ಭೇಟಿಯ ಫೋಟೋಗಳು ವೈರಲ್ ಆಗಿವೆ.

‘ಸು ಫ್ರಮ್ ಸೋ’ ಸಿನಿಮಾ ಕನ್ನಡ ಮಾತ್ರವಲ್ಲದೆ ಪರಭಾಷೆಗಳಲ್ಲೂ ಮೆಚ್ಚುಗೆ ಪಡೆದಿದೆ. ಈ ಚಿತ್ರ ಹಿಂದಿಗೂ ರಿಮೇಕ್ ಆಗುತ್ತಿದ್ದು, ಇದರ ಹಕ್ಕು ಮಾರಾಟ ಆಗಿದೆ. ಈ ಮೊದಲು ‘ಸು ಫ್ರಮ್ ಸೋ’ ಸಿನಿಮಾ ಗೆಲುವಿನ ಬಳಿಕ ಸಿನಿಮಾ ನಿರ್ದೇಶಕ ಜೆಪಿ ಅವರು ಬಾಲಿವುಡ್ ನಟ ಅಜಯ್ ದೇವಗನ್ ಅವರನ್ನು ಭೇಟಿ ಮಾಡಿದ್ದರು. ಈಗ ರಾಜ್ ಅವರು ಅಕ್ಷಯ್​ ಕುಮಾರ್​ನ ಭೇಟಿ ಮಾಡಿದ್ದಾರೆ.

ಅಕ್ಷಯ್ ಕುಮಾರ್ ಅವರು ‘ಹೈವಾನ್’ ಹೆಸರಿನ ಹಿಂದಿ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರವನ್ನು ಕನ್ನಡದ ಕೆವಿಎನ್ ನಿರ್ಮಾಣ ಮಾಡುತ್ತಿದೆ. ಸಿನಿಮಾದ ಶೂಟ್ ಊಟಿಯಲ್ಲಿ ನಡೆಯುತ್ತಿದೆ. ಚಿತ್ರದ ಸೆಟ್ಟಲ್ಲಿ ರಾಜ್ ಬಿ  ಶೆಟ್ಟಿ ಅವರು ಅಕ್ಷಯ್​ನ ಭೇಟಿ ಆಗಿದ್ದಾರೆ.

ಇದನ್ನೂ ಓದಿ
ಆ ಒಂದು ಶಬ್ದ ಬಳಕೆ ಮಾಡಿದ್ದಕ್ಕೆ ಆಕ್ರೋಶ; ಕಪಿಲ್ ಶೋ ನಿಲ್ಲಿಸೋ ಎಚ್ಚರಿಕೆ
‘ನೀವು ಊಹಿಸಿದಂತೆ ಕಥೆ ನಡೆಯಲ್ಲ’; ‘ಕರ್ಣ’ ಬಗ್ಗೆ ಕಿರಣ್ ರಾಜ್ ಹಿಂಟ್
ಜೀ ಕನ್ನಡ ವೇದಿಕೆ ಮೇಲೆ ಅನುಶ್ರೀ ಮಡಿಲು ತುಂಬಿದ ತಾರಾ; ಮಗಳಂತೆ ಭಾವುಕ
‘ತಾಳ್ಮೆಯಿಂದ ಕಾದಿದ್ದಕ್ಕೆ ಅರ್ಥಪೂರ್ಣವಾದ ತಾಳಿ ಬಿದ್ದಿದೆ’; ಅನುಶ್ರೀ

‘ಸು ಫ್ರಮ್ ಸೋ’ ನೋಡಿ ಅಕ್ಷಯ್ ಕುಮಾರ್ ಕೊಂಡಾಡಿದ್ದಾರೆ. ‘ಕಥೆ ಇದ್ದರೆ ಹೇಳಿ ಸಿನಿಮಾ ಮಾಡೋಣ’ ಎಂದು ರಾಜ್ ಬಿ. ರಾಜ್ ಬಿ ಶೆಟ್ಟಿ ಅವರನ್ನು ಅಕ್ಷಯ್ ಕುಮಾರ್‌ ಕೇಳಿದ್ದಾರೆ ಎನ್ನಲಾಗುತ್ತಿದೆ. ಈ ವಿಚಾರ ಕನ್ನಡಿಗರ ಪಾಲಿಗೆ ವಿಶೇಷ ಹೆಮ್ಮೆ ತಂದಿದೆ.

ಇದನ್ನೂ ಓದಿ: ‘ಗುಟ್ಕಾ ತಿನ್ನೋದು ಕೆಟ್ಟದ್ದು’: ಜನರಿಗೆ ಸಂದೇಶ ನೀಡಿದ ನಟ ಅಕ್ಷಯ್ ಕುಮಾರ್

ಅಕ್ಷಯ್ ಕುಮಾರ್ ಅವರು ಬಾಲಿವುಡ್​ನ ಸ್ಟಾರ್ ಹೀರೋ. ಹಲವು ಸಿನಿಮಾ ಕೆಲಸಗಳನ್ನು ಅವರು ಒಟ್ಟಾಗಿ ಮಾಡುತ್ತಾರೆ. ಈಗಾಗಲೇ ರಾಜ್ ಅವರು ಸ್ಟಾರ್​ಗಳ ಜೊತೆ ಸಿನಿಮಾ ಮಾಡೋದಿಲ್ಲ ಎಂದು ಹೇಳಿಯಾಗಿದೆ. ಅವರ ಕಾಲ್​ಶೀಟ್​ಗಾಗಿ ಒದ್ದಾಡೋದು ಅವರಿಗೆ ಇಷ್ಟವಿಲ್ಲವಂತೆ. ಹೀಗಾಗಿ, ಅವರು ಅಕ್ಷಯ್ ಜೊತೆ ಸಿನಿಮಾ ಮಾಡೋದು ಅನುಮಾನ ಎಂದು ಹೇಳಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Published On - 12:31 pm, Sat, 13 September 25

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us