ಟೋಬಿ ಚಿತ್ರ ಚೆನ್ನಾಗಿಲ್ಲ ಎಂದ ಯುವತಿಗೆ ಥಿಯೇಟರ್ ಎದುರೇ ಅವಾಚ್ಯ ಶಬ್ದಗಳಿಂದ ನಿಂದನೆ; ಪ್ರತಿಕ್ರಿಯಿಸಿದ ರಾಜ್ ಶೆಟ್ಟಿ

‘ಟೋಬಿ ಚೆನ್ನಾಗಿಲ್ಲ’ ಎಂದು ಯುವತಿಯೊಬ್ಬರು ಥಿಯೇಟರ್ ಎದುರು ಹೇಳಿದ್ದಾರೆ. ಇದನ್ನು ಕೇಳಿಸಿಕೊಂಡ ಇಬ್ಬರು ಥಿಯೇಟರ್​​ ಆವರಣದಲ್ಲೇ ಯುವತಿಗೆ ಅವಾಜ್ ಹಾಕಿದ್ದಾರೆ. ಅಶ್ಲೀಲ ಶಬ್ದಗಳಿಂದ ಬೈದಿದ್ದಾರೆ. ಈ ವಿಡಿಯೋ ಸಾಕಷ್ಟು ವೈರಲ್ ಆಗಿದೆ. ಇದಕ್ಕೆ ಅವರು ಕ್ಷಮೆ ಕೇಳಿದ್ದಾರೆ.

ಟೋಬಿ ಚಿತ್ರ ಚೆನ್ನಾಗಿಲ್ಲ ಎಂದ ಯುವತಿಗೆ ಥಿಯೇಟರ್ ಎದುರೇ ಅವಾಚ್ಯ ಶಬ್ದಗಳಿಂದ ನಿಂದನೆ; ಪ್ರತಿಕ್ರಿಯಿಸಿದ ರಾಜ್ ಶೆಟ್ಟಿ
ರಾಜ್ ಬಿ ಶೆಟ್ಟಿ
Follow us
|

Updated on: Aug 26, 2023 | 2:51 PM

ಒಂದು ಸಿನಿಮಾ ಎಲ್ಲರಿಗೂ ಇಷ್ಟವಾಗಲೇಬೇಕೆಂದೇನೂ ಇಲ್ಲ. ಬಾಕ್ಸ್ ಆಫೀಸ್​ನಲ್ಲಿ ಸಾವಿರ ಕೋಟಿ ರೂಪಾಯಿ ಬಿಸ್ನೆಸ್ ಮಾಡಿದ ಚಿತ್ರಗಳು ಕೆಲವರಿಗೆ ಇಷ್ಟ ಆಗದೇ ಇದ್ದ ಉದಾಹರಣೆ ಸಾಕಷ್ಟಿದೆ. ಸಿನಿಮಾ ಇಷ್ಟವಾಗಿಲ್ಲ ಎಂಬುದನ್ನು ಓಪನ್ ಆಗಿ ಹೇಳಿಕೊಂಡಾಗ ಟೀಕೆ ಎದುರಿಸಬೇಕಾಗುವ ಪರಿಸ್ಥಿತಿ ಎದುರಾಗಬಹುದು. ಆಗಸ್ಟ್ 25ರಂದು ರಾಜ್ ಬಿ. ಶೆಟ್ಟಿ ನಟನೆಯ ಟೋಬಿ’ ಸಿನಿಮಾ (Toby Movie) ರಿಲೀಸ್ ಆಗಿದೆ. ಈ ಚಿತ್ರವನ್ನು ಜನರು ಇಷ್ಟಪಡುತ್ತಿದ್ದಾರೆ. ಯುವತಿಯೊಬ್ಬರು ಸಿನಿಮಾ ಇಷ್ಟವಾಗಿಲ್ಲ ಎಂಬುದನ್ನು ಹೇಳಿಕೊಂಡಿದ್ದಾರೆ. ಇದಕ್ಕೆ ಕೆಲವರು ಅವಾಚ್ಯ ಶಬ್ದಗಳಿಂದ ಯುವತಿಯನ್ನು ನಿಂದಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿ ರಾಜ್ ಬಿ. ಶೆಟ್ಟಿ (Raj B Shetty) ಪ್ರತಿಕ್ರಿಯೆ ನೀಡಿದ್ದಾರೆ.

‘ಟೋಬಿ ಚೆನ್ನಾಗಿಲ್ಲ’ ಎಂದು ಯುವತಿಯೊಬ್ಬರು ಥಿಯೇಟರ್ ಎದುರು ಹೇಳಿದ್ದಾರೆ. ಇದನ್ನು ಕೇಳಿಸಿಕೊಂಡ ಇಬ್ಬರು ಥಿಯೇಟರ್​​ ಆವರಣದಲ್ಲೇ ಯುವತಿಗೆ ಅವಾಜ್ ಹಾಕಿದ್ದಾರೆ. ಅಶ್ಲೀಲ ಶಬ್ದಗಳಿಂದ ಬೈದಿದ್ದಾರೆ. ಈ ವಿಡಿಯೋ ಸಾಕಷ್ಟು ವೈರಲ್ ಆಗಿದೆ. ಸೋಶಿಯಲ್ ಮೀಡಿಯಾ ಪೇಜ್​ಗಳಲ್ಲಿ ಪೋಸ್ಟ್ ಮಾಡಿ ರಾಜ್ ಬಿ ಶೆಟ್ಟಿ ಅವರನ್ನು ಪ್ರಶ್ನೆ ಮಾಡಲಾಯಿತು. ಇದಕ್ಕೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಅವರು ನಮ್ಮ ಸಿನಿಮಾ ಟೀಂನವರಲ್ಲ. ಆದರೂ ನಾನು ಕ್ಷಮೆ ಕೇಳುತ್ತೇನೆ’ ಎಂದಿದ್ದಾರೆ.

‘ಸಿನಿಮಾ ಕೂಡ ವಿಮರ್ಶೆಗೆ ಒಳಪಡುವ ಮಾಧ್ಯಮ. ನಮ್ಮ ಸಿನಿಮಾನ ದುಡ್ಡುಕೊಟ್ಟು ನೋಡುವ ಪ್ರೇಕ್ಷಕರು ತಮಗೆ ಅನಿಸಿದ್ದನ್ನು ಹೇಳುವ ಹಕ್ಕು ಹೊಂದಿದ್ದಾರೆ. ಅದನ್ನು ಒಪ್ಪಲು ಅಥವಾ ಒಪ್ಪದಿರಲು ನಾವು ಸ್ವತಂತ್ರರು. ಆದರೆ, ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ ಜನರಿಗೆ ಕಿರುಕುಳ ನೀಡಲು ಪ್ರಯತ್ನಿಸಬಾರದು. ಈ ವಿಡಿಯೋದಲ್ಲಿರುವ ವ್ಯಕ್ತಿಗಳಿಗೂ ನಮ್ಮ ಚಿತ್ರಕ್ಕೂ ಸಂಬಂಧ ಇಲ್ಲ. ಆದರೆ ಯುವತಿ ಎದುರಿಸಿದ ಕಿರುಕುಳಕ್ಕಾಗಿ ನಾನು ಕ್ಷಮೆ ಕೇಳುತ್ತೇನೆ. ನಮ್ಮನ್ನು ಕ್ಷಮಿಸಿ’ ಎಂದು ರಾಜ್ ಬಿ ಶೆಟ್ಟಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Toby Review: ಮಾತನಾಡದೆ ಮನಸ್ಸಿಗೆ ನಾಟುವ ‘ಟೋಬಿ’; ಇಲ್ಲಿದೆ ಒಂದಷ್ಟು ಪ್ಲಸ್​, ಇನ್ನೊಂದಿಷ್ಟು ಮೈನಸ್​

ಗನ ಪಾತ್ರದಲ್ಲಿ ಅವರು ಗಮನ ಸೆಳೆದಿದ್ದಾರೆ. ಚೈತ್ರಾ ಆಚಾರ್ ಪಾತ್ರ ಕೂಡ ಹೈಲೈಟ್ ಆಗಿದೆ. ಈ ಚಿತ್ರಕ್ಕೆ ಭರ್ಜರಿ ಪ್ರಚಾರ ನೀಡಲಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಸಿನಿಮಾ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಎಲ್ಲರೂ ಹಂಚಿಕೊಳ್ಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ