AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಷಬ್ ಜೊತೆಗಿನ ಫ್ರೆಂಡ್​ಶಿಪ್ ಈಗ ಹೇಗಿದೆ? ವಿವರಿಸಿದ ರಾಜ್ ಬಿ. ಶೆಟ್ಟಿ

ರಿಷಬ್ ಶೆಟ್ಟಿ ಮತ್ತು ರಾಜ್ ಬಿ ಶೆಟ್ಟಿ ಹಲವು ಸಿನಿಮಾಗಳಲ್ಲಿ ಒಟ್ಟಾಗಿ ಕೆಲಸ ಮಾಡಿದ್ದಾರೆ. ಈ ಮಧ್ಯೆ ‘ಕಾಂತಾರ 2’ ಚಿತ್ರದಲ್ಲಿ ರಾಜ್ ಬರಹಗಾರನಾಗಿ ಕೆಲಸ ಮಾಡೋದಿಲ್ಲ ಎಂದಿದ್ದು ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿತ್ತು. ಹೊಸ ಚಿತ್ರದ ಪ್ರಚಾರದ ವೇಳೆ, ರಿಷಬ್ ಅವರೊಂದಿಗಿನ ತಮ್ಮ ಬಾಂಡಿಂಗ್ ಉತ್ತಮವಾಗಿದೆ ಎಂದು ಅವರು ತಿಳಿಸಿದ್ದಾರೆ.  

ರಿಷಬ್ ಜೊತೆಗಿನ ಫ್ರೆಂಡ್​ಶಿಪ್ ಈಗ ಹೇಗಿದೆ? ವಿವರಿಸಿದ ರಾಜ್ ಬಿ. ಶೆಟ್ಟಿ
ರಾಜ್-ರಿಷಬ್
ರಾಜೇಶ್ ದುಗ್ಗುಮನೆ
|

Updated on: Aug 11, 2025 | 12:47 PM

Share

ರಿಷಬ್ ಶೆಟ್ಟಿ ಹಾಗೂ ರಾಜ್ ಬಿ. ಶೆಟ್ಟಿ ಅವರು ಹಲವು ಸಿನಿಮಾಗಳಲ್ಲಿ ಒಟ್ಟಾಗಿ ಕೆಲಸ ಮಾಡಿದ್ದಾರೆ. ‘ಗರುಡ ಗಮನ ವೃಷಭ ವಾಹನ’ ಚಿತ್ರದಲ್ಲಿ ಇವರು ಒಟ್ಟಾಗಿ ನಟಿಸಿದ್ದರು. ‘ಕಾಂತಾರ’ ಚಿತ್ರದ ಕೆಲವು ದೃಶ್ಯಗಳನ್ನು ರಾಜ್ (Raj B Shetty) ಅವರೇ ಬರೆದಿದ್ದರು. ಆದರೆ, ‘ಕಾಂತಾರ 2’ ಚಿತ್ರದಲ್ಲಿ ರಾಜ್ ಅವರು ಕೆಲಸ ಮಾಡಿರಲಿಲ್ಲ. ಇದಕ್ಕೆ ಕಾರಣವನ್ನು ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದ್ದರು. ಈ ಬೆನ್ನಲ್ಲೇ ರಾಜ್ ಹಾಗೂ ರಿಷಬ್ ಗೆಳೆತನ ಹಳಸಿದೆ ಎಂದೆಲ್ಲ ವದಂತಿ ಹಬ್ಬಿತ್ತು. ಇದಕ್ಕೆ ರಾಜ್ ಸ್ಪಷ್ಟನೆ ನೀಡಿದ್ದಾರೆ.

ರಾಜ್ ಬಿ. ಶೆಟ್ಟಿ ಅವರು ‘ಸು ಫ್ರಮ್ ಸೋ’ ಸಿನಿಮಾನ ನಟಿಸಿ, ನಿರ್ಮಿಸಿ ಗಮನ ಸೆಳೆದಿದ್ದಾರೆ. ಈ ಚಿತ್ರ ಎಲ್ಲ ಕಡೆಗಳಿಂದ ಮೆಚ್ಚುಗೆ ಪಡೆದಿದೆ. ಈ ಸಿನಿಮಾ ತೆಲುಗಿನಲ್ಲೂ ಬಿಡುಗಡೆ ಕಂಡಿದೆ. ಈ ಚಿತ್ರದ ಪ್ರಚಾರಕ್ಕಾಗಿ ರಾಜ್ ತೆಲುಗು ಯೂಟ್ಯೂಬ್ ಚಾನೆಲ್​ಗಳಿಗೆ ಸಂದರ್ಶನ ಕೊಟ್ಟಿದ್ದಾರೆ. ಈ ವೇಳೆ ಅವರು ರಿಷಬ್ ಬಗ್ಗೆ ಮಾತನಾಡಿದ್ದಾರೆ.

ಇದನ್ನೂ ಓದಿ: ‘ಕಾಟೇರ’ ಒಟ್ಟಾರೆ ಕಲೆಕ್ಷನ್​ ದಾಖಲೆ ಮುರಿಯಲು ‘ಸು ಫ್ರಮ್ ಸೋ’ಗೆ ಬೇಕು ಕೆಲವೇ ಕೋಟಿ

ಇದನ್ನೂ ಓದಿ
Image
ಎಷ್ಟು ಅರ್ಥಗರ್ಭಿತವಾಗಿತ್ತು ನೋಡಿ 11 ವರ್ಷಗಳ ಹಿಂದೆ ಬಂದ ರಾಜ್ ಕಿರುಚಿತ್ರ
Image
‘ಕಾಟೇರ’ ಕಲೆಕ್ಷನ್​ ದಾಖಲೆ ಮುರಿಯಲು ‘ಸು ಫ್ರಮ್ ಸೋ’ಗೆ ಬೇಕು ಕೆಲವೇ ಕೋಟಿ
Image
‘ಕೂಲಿ’ ಚಿತ್ರದ ರಜನಿ ಸಂಭಾವನೆಯಲ್ಲಿ ಬಿಗ್ ಬಜೆಟ್ ಸಿನಿಮಾ ಮಾಡಬಹುದು
Image
‘ಬ್ಲಾಕ್​ಬಸ್ಟರ್’; ಒಂದು ವಾರ ಮೊದಲೇ ಹೊರಬಿತ್ತು ಕೂಲಿ ಸಿನಿಮಾ ವಿಮರ್ಶೆ

ರಾಜ್ ಬಿ. ಶೆಟ್ಟಿ ಅವರು ‘ಚಾಯ್ ಬಿಸ್ಕೆಟ್ ಫುಡ್’ ಹೆಸರಿನ ಯೂಟ್ಯೂಬ್ ಚಾನೆಲ್​ಗೆ ಸಂದರ್ಶನ ನೀಡಿದ್ದಾರೆ. ತೆಲಂಗಾಣ ಸರ್ಕಾರದವರೇ ನಡೆಸೋ ಫಿಷ್ ಕ್ಯಾಂಟೀನ್​ಗೆ ಈ ಯೂಟ್ಯೂಬರ್ ಜೊತೆ ರಾಜ್ ತೆರಳಿದ್ದರು. ರಾಜ್ ಹೇಳಿ ಕೇಳಿ ಮಂಗಳೂರಿನವರು. ಮೀನು ಎಂದರೆ ಅವರಿಗೆ ಪಂಚ ಪ್ರಾಣ. ಹೈದರಾಬಾದ್​ನಲ್ಲಿ ಮೀನು ಸಿಗುತ್ತದೆ ಎಂದರೆ ಅವರು ಅದನ್ನು ಮಿಸ್ ಮಾಡಿಕೊಳ್ಳುವುದೇ ಇಲ್ಲ. ಹೀಗಾಗಿ, ಖುಷಿ ಖುಷಿಯಿಂದ ಈ ಕ್ಯಾಂಟೀನ್​ಗೆ ಭೇಟಿ ಕೊಟ್ಟಿದ್ದಾರೆ.

ರಾಜ್ ಬಿ. ಶೆಟ್ಟಿ ತೆಲುಗಿಗೆ ನೀಡಿದ ಸಂದರ್ಶನ

ಚಾಯ್ ಬಿಸ್ಕೆಟ್ ಫುಡ್ ಯೂಟ್ಯೂಬ್ ಚಾನೆಲ್ ನಿರೂಪಕ ವಿಡಿಯೋ ಕೊನೆಯಲ್ಲಿ ಪ್ರಶ್ನೆ ಒಂದನ್ನು ಕೇಳಿದರು. ‘ಆರ್​ಆರ್​ಆರ್​’ ಬಗ್ಗೆ ಹೇಳಿ ಎಂದರು. ‘ಆರ್​ಆರ್​ಆರ್ ಎಂದರೆ ರಿಷಬ್, ರಕ್ಷಿತ್ ಹಾಗೂ ರಾಜ್. ನಾವು ಕರಾವಳಿಯವರು. ನಮ್ಮನ್ನು ಶೆಟ್ಟಿ ಗ್ಯಾಂಗ್ ಎಂದು ಕರೆಯುತ್ತಾರೆ. ನಮಗೆ ಕರ್ನಾಟಕದ ಜನತೆ ಸಾಕಷ್ಟು ಪ್ರೀತಿ ತೋರಿಸಿದೆ. ನಾನು ಇಲ್ಲಿಗೆ ಬರೋದಕ್ಕೂ ಮೊದಲು ರಿಷಬ್ ನನಗೆ ಕರೆ ಮಾಡಿದ್ದ. ಅವನು ಅಭಿನಂದನೆ ತಿಳಿಸಿದ. ಈ ಸಿನಿಮಾದ ಕಲೆಕ್ಷನ್ ಫಾಲೋಅಪ್​ನ ಅವನು ಹೆಚ್ಚು ಮಾಡಿದ್ದಾನೆ’ ಎಂದರು ರಾಜ್. ಈ ಮೂಲಕ ಇಬ್ಬರ ಬಾಂಡಿಂಗ್ ಚೆನ್ನಾಗಿಯೇ ಇದೆ ಎಂಬುದನ್ನು ಸ್ಪಷ್ಟಪಡಿಸಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು