AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಷಬ್ ಜೊತೆಗಿನ ಫ್ರೆಂಡ್​ಶಿಪ್ ಈಗ ಹೇಗಿದೆ? ವಿವರಿಸಿದ ರಾಜ್ ಬಿ. ಶೆಟ್ಟಿ

ರಿಷಬ್ ಶೆಟ್ಟಿ ಮತ್ತು ರಾಜ್ ಬಿ ಶೆಟ್ಟಿ ಹಲವು ಸಿನಿಮಾಗಳಲ್ಲಿ ಒಟ್ಟಾಗಿ ಕೆಲಸ ಮಾಡಿದ್ದಾರೆ. ಈ ಮಧ್ಯೆ ‘ಕಾಂತಾರ 2’ ಚಿತ್ರದಲ್ಲಿ ರಾಜ್ ಬರಹಗಾರನಾಗಿ ಕೆಲಸ ಮಾಡೋದಿಲ್ಲ ಎಂದಿದ್ದು ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿತ್ತು. ಹೊಸ ಚಿತ್ರದ ಪ್ರಚಾರದ ವೇಳೆ, ರಿಷಬ್ ಅವರೊಂದಿಗಿನ ತಮ್ಮ ಬಾಂಡಿಂಗ್ ಉತ್ತಮವಾಗಿದೆ ಎಂದು ಅವರು ತಿಳಿಸಿದ್ದಾರೆ.  

ರಿಷಬ್ ಜೊತೆಗಿನ ಫ್ರೆಂಡ್​ಶಿಪ್ ಈಗ ಹೇಗಿದೆ? ವಿವರಿಸಿದ ರಾಜ್ ಬಿ. ಶೆಟ್ಟಿ
ರಾಜ್-ರಿಷಬ್
ರಾಜೇಶ್ ದುಗ್ಗುಮನೆ
|

Updated on: Aug 11, 2025 | 12:47 PM

Share

ರಿಷಬ್ ಶೆಟ್ಟಿ ಹಾಗೂ ರಾಜ್ ಬಿ. ಶೆಟ್ಟಿ ಅವರು ಹಲವು ಸಿನಿಮಾಗಳಲ್ಲಿ ಒಟ್ಟಾಗಿ ಕೆಲಸ ಮಾಡಿದ್ದಾರೆ. ‘ಗರುಡ ಗಮನ ವೃಷಭ ವಾಹನ’ ಚಿತ್ರದಲ್ಲಿ ಇವರು ಒಟ್ಟಾಗಿ ನಟಿಸಿದ್ದರು. ‘ಕಾಂತಾರ’ ಚಿತ್ರದ ಕೆಲವು ದೃಶ್ಯಗಳನ್ನು ರಾಜ್ (Raj B Shetty) ಅವರೇ ಬರೆದಿದ್ದರು. ಆದರೆ, ‘ಕಾಂತಾರ 2’ ಚಿತ್ರದಲ್ಲಿ ರಾಜ್ ಅವರು ಕೆಲಸ ಮಾಡಿರಲಿಲ್ಲ. ಇದಕ್ಕೆ ಕಾರಣವನ್ನು ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದ್ದರು. ಈ ಬೆನ್ನಲ್ಲೇ ರಾಜ್ ಹಾಗೂ ರಿಷಬ್ ಗೆಳೆತನ ಹಳಸಿದೆ ಎಂದೆಲ್ಲ ವದಂತಿ ಹಬ್ಬಿತ್ತು. ಇದಕ್ಕೆ ರಾಜ್ ಸ್ಪಷ್ಟನೆ ನೀಡಿದ್ದಾರೆ.

ರಾಜ್ ಬಿ. ಶೆಟ್ಟಿ ಅವರು ‘ಸು ಫ್ರಮ್ ಸೋ’ ಸಿನಿಮಾನ ನಟಿಸಿ, ನಿರ್ಮಿಸಿ ಗಮನ ಸೆಳೆದಿದ್ದಾರೆ. ಈ ಚಿತ್ರ ಎಲ್ಲ ಕಡೆಗಳಿಂದ ಮೆಚ್ಚುಗೆ ಪಡೆದಿದೆ. ಈ ಸಿನಿಮಾ ತೆಲುಗಿನಲ್ಲೂ ಬಿಡುಗಡೆ ಕಂಡಿದೆ. ಈ ಚಿತ್ರದ ಪ್ರಚಾರಕ್ಕಾಗಿ ರಾಜ್ ತೆಲುಗು ಯೂಟ್ಯೂಬ್ ಚಾನೆಲ್​ಗಳಿಗೆ ಸಂದರ್ಶನ ಕೊಟ್ಟಿದ್ದಾರೆ. ಈ ವೇಳೆ ಅವರು ರಿಷಬ್ ಬಗ್ಗೆ ಮಾತನಾಡಿದ್ದಾರೆ.

ಇದನ್ನೂ ಓದಿ: ‘ಕಾಟೇರ’ ಒಟ್ಟಾರೆ ಕಲೆಕ್ಷನ್​ ದಾಖಲೆ ಮುರಿಯಲು ‘ಸು ಫ್ರಮ್ ಸೋ’ಗೆ ಬೇಕು ಕೆಲವೇ ಕೋಟಿ

ಇದನ್ನೂ ಓದಿ
Image
ಎಷ್ಟು ಅರ್ಥಗರ್ಭಿತವಾಗಿತ್ತು ನೋಡಿ 11 ವರ್ಷಗಳ ಹಿಂದೆ ಬಂದ ರಾಜ್ ಕಿರುಚಿತ್ರ
Image
‘ಕಾಟೇರ’ ಕಲೆಕ್ಷನ್​ ದಾಖಲೆ ಮುರಿಯಲು ‘ಸು ಫ್ರಮ್ ಸೋ’ಗೆ ಬೇಕು ಕೆಲವೇ ಕೋಟಿ
Image
‘ಕೂಲಿ’ ಚಿತ್ರದ ರಜನಿ ಸಂಭಾವನೆಯಲ್ಲಿ ಬಿಗ್ ಬಜೆಟ್ ಸಿನಿಮಾ ಮಾಡಬಹುದು
Image
‘ಬ್ಲಾಕ್​ಬಸ್ಟರ್’; ಒಂದು ವಾರ ಮೊದಲೇ ಹೊರಬಿತ್ತು ಕೂಲಿ ಸಿನಿಮಾ ವಿಮರ್ಶೆ

ರಾಜ್ ಬಿ. ಶೆಟ್ಟಿ ಅವರು ‘ಚಾಯ್ ಬಿಸ್ಕೆಟ್ ಫುಡ್’ ಹೆಸರಿನ ಯೂಟ್ಯೂಬ್ ಚಾನೆಲ್​ಗೆ ಸಂದರ್ಶನ ನೀಡಿದ್ದಾರೆ. ತೆಲಂಗಾಣ ಸರ್ಕಾರದವರೇ ನಡೆಸೋ ಫಿಷ್ ಕ್ಯಾಂಟೀನ್​ಗೆ ಈ ಯೂಟ್ಯೂಬರ್ ಜೊತೆ ರಾಜ್ ತೆರಳಿದ್ದರು. ರಾಜ್ ಹೇಳಿ ಕೇಳಿ ಮಂಗಳೂರಿನವರು. ಮೀನು ಎಂದರೆ ಅವರಿಗೆ ಪಂಚ ಪ್ರಾಣ. ಹೈದರಾಬಾದ್​ನಲ್ಲಿ ಮೀನು ಸಿಗುತ್ತದೆ ಎಂದರೆ ಅವರು ಅದನ್ನು ಮಿಸ್ ಮಾಡಿಕೊಳ್ಳುವುದೇ ಇಲ್ಲ. ಹೀಗಾಗಿ, ಖುಷಿ ಖುಷಿಯಿಂದ ಈ ಕ್ಯಾಂಟೀನ್​ಗೆ ಭೇಟಿ ಕೊಟ್ಟಿದ್ದಾರೆ.

ರಾಜ್ ಬಿ. ಶೆಟ್ಟಿ ತೆಲುಗಿಗೆ ನೀಡಿದ ಸಂದರ್ಶನ

ಚಾಯ್ ಬಿಸ್ಕೆಟ್ ಫುಡ್ ಯೂಟ್ಯೂಬ್ ಚಾನೆಲ್ ನಿರೂಪಕ ವಿಡಿಯೋ ಕೊನೆಯಲ್ಲಿ ಪ್ರಶ್ನೆ ಒಂದನ್ನು ಕೇಳಿದರು. ‘ಆರ್​ಆರ್​ಆರ್​’ ಬಗ್ಗೆ ಹೇಳಿ ಎಂದರು. ‘ಆರ್​ಆರ್​ಆರ್ ಎಂದರೆ ರಿಷಬ್, ರಕ್ಷಿತ್ ಹಾಗೂ ರಾಜ್. ನಾವು ಕರಾವಳಿಯವರು. ನಮ್ಮನ್ನು ಶೆಟ್ಟಿ ಗ್ಯಾಂಗ್ ಎಂದು ಕರೆಯುತ್ತಾರೆ. ನಮಗೆ ಕರ್ನಾಟಕದ ಜನತೆ ಸಾಕಷ್ಟು ಪ್ರೀತಿ ತೋರಿಸಿದೆ. ನಾನು ಇಲ್ಲಿಗೆ ಬರೋದಕ್ಕೂ ಮೊದಲು ರಿಷಬ್ ನನಗೆ ಕರೆ ಮಾಡಿದ್ದ. ಅವನು ಅಭಿನಂದನೆ ತಿಳಿಸಿದ. ಈ ಸಿನಿಮಾದ ಕಲೆಕ್ಷನ್ ಫಾಲೋಅಪ್​ನ ಅವನು ಹೆಚ್ಚು ಮಾಡಿದ್ದಾನೆ’ ಎಂದರು ರಾಜ್. ಈ ಮೂಲಕ ಇಬ್ಬರ ಬಾಂಡಿಂಗ್ ಚೆನ್ನಾಗಿಯೇ ಇದೆ ಎಂಬುದನ್ನು ಸ್ಪಷ್ಟಪಡಿಸಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು