AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನೀವು ನನ್ನಿಂದ ಅದನ್ನು ನಿರೀಕ್ಷಿಸಬೇಡಿ’; ಅಭಿಮಾನಿಗಳಿಗೆ ನೇರವಾಗಿ ಹೇಳಿದ ರಾಜ್ ಬಿ. ಶೆಟ್ಟಿ

Raj B Shetty: ರಾಜ್ ಬಿ ಶೆಟ್ಟಿ ಅವರ ‘ಸು ಫ್ರಮ್ ಸೋ’ ಸಿನಿಮಾ ದೊಡ್ಡ ಯಶಸ್ಸು ಕಂಡಿದೆ. ಆದರೆ, ಈ ಯಶಸ್ಸನ್ನು ಅನುಕರಿಸಿ ಅದೇ ಮಾದರಿಯ ಚಿತ್ರಗಳನ್ನು ಮಾಡುವುದನ್ನು ಅವರು ವಿರೋಧಿಸುತ್ತಾರೆ. ಅವರ ಪ್ರಕಾರ, ಯಶಸ್ಸಿನ ಹಿಂದೆ ಓಡುವುದಕ್ಕಿಂತ ಹೊಸತನವನ್ನು ಪ್ರಯತ್ನಿಸುವುದು ಮುಖ್ಯ.

‘ನೀವು ನನ್ನಿಂದ ಅದನ್ನು ನಿರೀಕ್ಷಿಸಬೇಡಿ’; ಅಭಿಮಾನಿಗಳಿಗೆ ನೇರವಾಗಿ ಹೇಳಿದ ರಾಜ್ ಬಿ. ಶೆಟ್ಟಿ
ರಾಜ್ ಬಿ ಶೆಟ್ಟಿ
ರಾಜೇಶ್ ದುಗ್ಗುಮನೆ
| Edited By: |

Updated on:Sep 05, 2025 | 3:28 PM

Share

‘ಸು ಫ್ರಮ್ ಸೋ’ ಸಿನಿಮಾ ಮೂಲಕ ರಾಜ್ ಬಿ ಶೆಟ್ಟಿ (Raj B Shetty) ಎಲ್ಲ ಕಡೆಗಳಲ್ಲೂ ಫೇಮಸ್ ಆಗಿದ್ದಾರೆ. ಈ ಮೊದಲು ಅವರು ಮಾಡುತ್ತಿದ್ದ ಚಿತ್ರಗಳು ಕನ್ನಡದಲ್ಲಿ ಮಾತ್ರ ಗಮನ ಸೆಳೆಯುತ್ತಿದ್ದವು. ಈಗ ಪರಭಾಷೆಯಲ್ಲೂ ಅವರ ಸಿನಿಮಾ ಸದ್ದು ಮಾಡಿದೆ. ‘ಸು ಫ್ರಮ್ ಸೋ’ ಯಶಸ್ಸಿನ ಬಳಿಕ ಅನೇಕರು ಅದನ್ನೇ ಕಾಪಿ ಮಾಡುವ ಸಾಧ್ಯತೆ ಇರುತ್ತದೆ. ಅಂದರೆ ಈ ರೀತಿಯ ಸಿನಿಮಾಗಳು ಜನರಿಗೆ ಹೆಚ್ಚು ಇಷ್ಟು ಆಗುತ್ತವೆ ಎಂದು ಭಾವಿಸಿ ಇದೇ ಮಾದರಿಯ ಚಿತ್ರಗಳನ್ನು ಮಾಡಲು ಹೋಗುವ ಸಾಧ್ಯತೆ ಇದೆ. ಈ ವಿಚಾರಕ್ಕೆ ಸಂಬಂಧಿಸಿ ರಾಜ್ ಅವರು ಕಿವಿ ಮಾತು ಹೇಳಿದ್ದಾರೆ.

‘ಕೆಜಿಎಫ್’ ಕನ್ನಡ ಚಿತ್ರರಂಗದ ಪಾಲಿಗೆ ಅತಿ ದೊಡ್ಡ ಹಿಟ್ ಆಗಿದೆ. ಈ ರೀತಿಯ ಚಿತ್ರಗಳನ್ನು ಜನರು ನೋಡುತ್ತಾರೆ ಎಂದು ಭಾವಿಸಿ ಅನೇಕರು ಇದೇ ಮಾದರಿಯ ಸಿನಿಮಾಗಳನ್ನು ಮಾಡಲು ಹೋಗಿ ಕೈ ಸುಟ್ಟುಕೊಂಡ ಉದಾಹರಣೆ ಇದೆ. ಇನ್ನೂ ಕೆಲವೊಮ್ಮೆ ಸಕ್ಸಸ್ ಫಾರ್ಮಲಾದಿಂದ ಹೊಸದೇನು ಬರೋದಿಲ್ಲ. ಆ ರೀತಿ ಆಗಬಾರದು ಎಂಬುದು ರಾಜ್ ಅವರ ಕಾಳಜಿ. ಹೀಗಾಗಿ, ಅವರು ಈ ಬಗ್ಗೆ ಮಾತನಾಡಿದ್ದಾರೆ.

ಇದನ್ನೂ ಓದಿ
Image
ಅನುಶ್ರೀ ಮದುವೆಯಲ್ಲಿ ‘ಬಾವ ಬಂದರು’ ಎಂದು ರೋಷನ್ ಕಾಲೆಳೆದ ರಾಜ್ ಬಿ. ಶೆಟ್ಟಿ
Image
‘ಯಶ್ ಬಂದಾಗ ಇಡೀ ಸೆಟ್ ಸೈಲೆಂಟ್ ಆಗುತ್ತೆ’; ಬಾಲಿವುಡ್ ನಟ ಅಕ್ಷಯ್​ ಹೇಳಿಕೆ
Image
ಅಪರೂಪದಲ್ಲೇ ಅಪರೂಪದ ಫೋಟೋ ಹಂಚಿಕೊಂಡ ರಾಜ್ ಬಿ. ಶೆಟ್ಟಿ; ಇದರ ವಿಶೇಷತೆ ಏನು?
Image
Bigg Boss ಟೈಟಲ್​ನಲ್ಲಿ ಹೆಚ್ಚುವರಿ G ಏಕೆ? ಸಂಖ್ಯಾಶಾಸ್ತ್ರದ ಲೆಕ್ಕಾಚಾರ

ಕನ್ನಡ ಪಿಚ್ಚರ್ ಯೂಟ್ಯೂಬ್ ಚಾನೆಲ್ ಕ್ಲಿಪ್​ನ ‘ಸಿನಿ ಚಿಂತಕ’ ಎಂಬ ಟ್ವಿಟರ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ‘ಇನ್ನುಮುಂದೆ ಒಳ್ಳೆಯ ಸಿನಿಮಾಗಳನ್ನು ಮಾಡುವ ಕೆಲಸ ಜಾರಿಯಲ್ಲಿ ಇರಲಿದೆ. ಇದೇ ರೀತಿಯ ಸಿನಿಮಾ ಕಡೊಬೇಕು ಎಂಬುದನ್ನು ನೀವು ನನ್ನಿಂದ ನಿರೀಕ್ಷಿಸಬಾರದು’ ಎಂದು ಷರತ್ತೊಂದನ್ನು ಹಾಕಿದ್ದಾರೆ.

‘ಇದೇ ತರಹದ ಸಿನಿಮಾ ಎಂಬುದು ಬಂದಾಗ ನಾವು ಯಶಸ್ಸಿನ ಹಾದಿಯನ್ನು ಮಾತ್ರ ಹಿಡಿಯಲು ಸಾಧ್ಯ. ನಾವು ಯಶಸ್ಸಿನ ಸೂತ್ರದ ಹಿಂದೆ ಹೋದಂತೆ ಆಗುತ್ತದೆ. ಆಗ ನಮ್ಮ ಇಂಡಸ್ಟ್ರಿ ಕೆಳಗೆ ಹೋಗುತ್ತದೆ. ಪ್ರತಿ ಸಿನಿಮಾಗಳಲ್ಲೂ ಹೊಸದನ್ನು ಮಾಡಬೇಕು ಎಂಬುದು ನಮ್ಮ ಉದ್ದೇಶ. ಇದಕ್ಕೆ ನಿಮ್ಮ ಬೆಂಬಲ ಬೇಕು’ ಎಂದಿದ್ದಾರೆ ರಾಜ್ ಬಿ ಶೆಟ್ಟಿ.

ಇದನ್ನೂ ಓದಿ: ಕೇರಳದಲ್ಲಿ ‘ಸು ಫ್ರಮ್ ಸೋ’ ಹಂಚಿಕೆಗೆ ಸಹಾಯ ಮಾಡಿದ್ದ ದುಲ್ಖರ್ ಸಲ್ಮಾನ್​ ಋಣ ತೀರಿಸಿದ ರಾಜ್ ಬಿ ಶೆಟ್ಟಿ

‘ಒಂದು ಸಿನಿಮಾ ಮಾಡಿದ ಬಳಿಕ ಎರಡನೇ ಪಾರ್ಟ್​ ಮಾಡಿದರೆ ಒಳ್ಳೆಯ ಬಿಸ್ನೆಸ್ ಆಗುತ್ತದೆ. ಆದರೆ, ನಾವು ಇಲ್ಲಿ ಬಿಸ್ನೆಸ್ ಮಾಡೋಕೆ ಬಂದಿಲ್ಲ. ಒಳ್ಳೆಯ ಸಿನಿಮಾ ಕೊಡೋಕೆ ಬಂದಿದ್ದೇವೆ’ ಎಂದು ರಾಜ್ ಅವರು ಹೇಳಿದ್ದಾರೆ. ಅವರ ಈ ಮಾತನ್ನು ಅನೇಕರು ಒಪ್ಪಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 3:08 pm, Fri, 29 August 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ