AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನೀವು ನನ್ನಿಂದ ಅದನ್ನು ನಿರೀಕ್ಷಿಸಬೇಡಿ’; ಅಭಿಮಾನಿಗಳಿಗೆ ನೇರವಾಗಿ ಹೇಳಿದ ರಾಜ್ ಬಿ. ಶೆಟ್ಟಿ

Raj B Shetty: ರಾಜ್ ಬಿ ಶೆಟ್ಟಿ ಅವರ ‘ಸು ಫ್ರಮ್ ಸೋ’ ಸಿನಿಮಾ ದೊಡ್ಡ ಯಶಸ್ಸು ಕಂಡಿದೆ. ಆದರೆ, ಈ ಯಶಸ್ಸನ್ನು ಅನುಕರಿಸಿ ಅದೇ ಮಾದರಿಯ ಚಿತ್ರಗಳನ್ನು ಮಾಡುವುದನ್ನು ಅವರು ವಿರೋಧಿಸುತ್ತಾರೆ. ಅವರ ಪ್ರಕಾರ, ಯಶಸ್ಸಿನ ಹಿಂದೆ ಓಡುವುದಕ್ಕಿಂತ ಹೊಸತನವನ್ನು ಪ್ರಯತ್ನಿಸುವುದು ಮುಖ್ಯ.

‘ನೀವು ನನ್ನಿಂದ ಅದನ್ನು ನಿರೀಕ್ಷಿಸಬೇಡಿ’; ಅಭಿಮಾನಿಗಳಿಗೆ ನೇರವಾಗಿ ಹೇಳಿದ ರಾಜ್ ಬಿ. ಶೆಟ್ಟಿ
ರಾಜ್ ಬಿ ಶೆಟ್ಟಿ
ರಾಜೇಶ್ ದುಗ್ಗುಮನೆ
| Updated By: Digi Tech Desk|

Updated on:Sep 05, 2025 | 3:28 PM

Share

‘ಸು ಫ್ರಮ್ ಸೋ’ ಸಿನಿಮಾ ಮೂಲಕ ರಾಜ್ ಬಿ ಶೆಟ್ಟಿ (Raj B Shetty) ಎಲ್ಲ ಕಡೆಗಳಲ್ಲೂ ಫೇಮಸ್ ಆಗಿದ್ದಾರೆ. ಈ ಮೊದಲು ಅವರು ಮಾಡುತ್ತಿದ್ದ ಚಿತ್ರಗಳು ಕನ್ನಡದಲ್ಲಿ ಮಾತ್ರ ಗಮನ ಸೆಳೆಯುತ್ತಿದ್ದವು. ಈಗ ಪರಭಾಷೆಯಲ್ಲೂ ಅವರ ಸಿನಿಮಾ ಸದ್ದು ಮಾಡಿದೆ. ‘ಸು ಫ್ರಮ್ ಸೋ’ ಯಶಸ್ಸಿನ ಬಳಿಕ ಅನೇಕರು ಅದನ್ನೇ ಕಾಪಿ ಮಾಡುವ ಸಾಧ್ಯತೆ ಇರುತ್ತದೆ. ಅಂದರೆ ಈ ರೀತಿಯ ಸಿನಿಮಾಗಳು ಜನರಿಗೆ ಹೆಚ್ಚು ಇಷ್ಟು ಆಗುತ್ತವೆ ಎಂದು ಭಾವಿಸಿ ಇದೇ ಮಾದರಿಯ ಚಿತ್ರಗಳನ್ನು ಮಾಡಲು ಹೋಗುವ ಸಾಧ್ಯತೆ ಇದೆ. ಈ ವಿಚಾರಕ್ಕೆ ಸಂಬಂಧಿಸಿ ರಾಜ್ ಅವರು ಕಿವಿ ಮಾತು ಹೇಳಿದ್ದಾರೆ.

‘ಕೆಜಿಎಫ್’ ಕನ್ನಡ ಚಿತ್ರರಂಗದ ಪಾಲಿಗೆ ಅತಿ ದೊಡ್ಡ ಹಿಟ್ ಆಗಿದೆ. ಈ ರೀತಿಯ ಚಿತ್ರಗಳನ್ನು ಜನರು ನೋಡುತ್ತಾರೆ ಎಂದು ಭಾವಿಸಿ ಅನೇಕರು ಇದೇ ಮಾದರಿಯ ಸಿನಿಮಾಗಳನ್ನು ಮಾಡಲು ಹೋಗಿ ಕೈ ಸುಟ್ಟುಕೊಂಡ ಉದಾಹರಣೆ ಇದೆ. ಇನ್ನೂ ಕೆಲವೊಮ್ಮೆ ಸಕ್ಸಸ್ ಫಾರ್ಮಲಾದಿಂದ ಹೊಸದೇನು ಬರೋದಿಲ್ಲ. ಆ ರೀತಿ ಆಗಬಾರದು ಎಂಬುದು ರಾಜ್ ಅವರ ಕಾಳಜಿ. ಹೀಗಾಗಿ, ಅವರು ಈ ಬಗ್ಗೆ ಮಾತನಾಡಿದ್ದಾರೆ.

ಇದನ್ನೂ ಓದಿ
Image
ಅನುಶ್ರೀ ಮದುವೆಯಲ್ಲಿ ‘ಬಾವ ಬಂದರು’ ಎಂದು ರೋಷನ್ ಕಾಲೆಳೆದ ರಾಜ್ ಬಿ. ಶೆಟ್ಟಿ
Image
‘ಯಶ್ ಬಂದಾಗ ಇಡೀ ಸೆಟ್ ಸೈಲೆಂಟ್ ಆಗುತ್ತೆ’; ಬಾಲಿವುಡ್ ನಟ ಅಕ್ಷಯ್​ ಹೇಳಿಕೆ
Image
ಅಪರೂಪದಲ್ಲೇ ಅಪರೂಪದ ಫೋಟೋ ಹಂಚಿಕೊಂಡ ರಾಜ್ ಬಿ. ಶೆಟ್ಟಿ; ಇದರ ವಿಶೇಷತೆ ಏನು?
Image
Bigg Boss ಟೈಟಲ್​ನಲ್ಲಿ ಹೆಚ್ಚುವರಿ G ಏಕೆ? ಸಂಖ್ಯಾಶಾಸ್ತ್ರದ ಲೆಕ್ಕಾಚಾರ

ಕನ್ನಡ ಪಿಚ್ಚರ್ ಯೂಟ್ಯೂಬ್ ಚಾನೆಲ್ ಕ್ಲಿಪ್​ನ ‘ಸಿನಿ ಚಿಂತಕ’ ಎಂಬ ಟ್ವಿಟರ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ‘ಇನ್ನುಮುಂದೆ ಒಳ್ಳೆಯ ಸಿನಿಮಾಗಳನ್ನು ಮಾಡುವ ಕೆಲಸ ಜಾರಿಯಲ್ಲಿ ಇರಲಿದೆ. ಇದೇ ರೀತಿಯ ಸಿನಿಮಾ ಕಡೊಬೇಕು ಎಂಬುದನ್ನು ನೀವು ನನ್ನಿಂದ ನಿರೀಕ್ಷಿಸಬಾರದು’ ಎಂದು ಷರತ್ತೊಂದನ್ನು ಹಾಕಿದ್ದಾರೆ.

‘ಇದೇ ತರಹದ ಸಿನಿಮಾ ಎಂಬುದು ಬಂದಾಗ ನಾವು ಯಶಸ್ಸಿನ ಹಾದಿಯನ್ನು ಮಾತ್ರ ಹಿಡಿಯಲು ಸಾಧ್ಯ. ನಾವು ಯಶಸ್ಸಿನ ಸೂತ್ರದ ಹಿಂದೆ ಹೋದಂತೆ ಆಗುತ್ತದೆ. ಆಗ ನಮ್ಮ ಇಂಡಸ್ಟ್ರಿ ಕೆಳಗೆ ಹೋಗುತ್ತದೆ. ಪ್ರತಿ ಸಿನಿಮಾಗಳಲ್ಲೂ ಹೊಸದನ್ನು ಮಾಡಬೇಕು ಎಂಬುದು ನಮ್ಮ ಉದ್ದೇಶ. ಇದಕ್ಕೆ ನಿಮ್ಮ ಬೆಂಬಲ ಬೇಕು’ ಎಂದಿದ್ದಾರೆ ರಾಜ್ ಬಿ ಶೆಟ್ಟಿ.

ಇದನ್ನೂ ಓದಿ: ಕೇರಳದಲ್ಲಿ ‘ಸು ಫ್ರಮ್ ಸೋ’ ಹಂಚಿಕೆಗೆ ಸಹಾಯ ಮಾಡಿದ್ದ ದುಲ್ಖರ್ ಸಲ್ಮಾನ್​ ಋಣ ತೀರಿಸಿದ ರಾಜ್ ಬಿ ಶೆಟ್ಟಿ

‘ಒಂದು ಸಿನಿಮಾ ಮಾಡಿದ ಬಳಿಕ ಎರಡನೇ ಪಾರ್ಟ್​ ಮಾಡಿದರೆ ಒಳ್ಳೆಯ ಬಿಸ್ನೆಸ್ ಆಗುತ್ತದೆ. ಆದರೆ, ನಾವು ಇಲ್ಲಿ ಬಿಸ್ನೆಸ್ ಮಾಡೋಕೆ ಬಂದಿಲ್ಲ. ಒಳ್ಳೆಯ ಸಿನಿಮಾ ಕೊಡೋಕೆ ಬಂದಿದ್ದೇವೆ’ ಎಂದು ರಾಜ್ ಅವರು ಹೇಳಿದ್ದಾರೆ. ಅವರ ಈ ಮಾತನ್ನು ಅನೇಕರು ಒಪ್ಪಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 3:08 pm, Fri, 29 August 25

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ