AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸು ಫ್ರಮ್ ಸೋ’ ಕಥೆ ಹುಟ್ಟಿದ್ದು ಹೇಗೆ? ಆ ಘಟನೆ ವಿವರಿಸಿದ ರಾಜ್ ಬಿ. ಶೆಟ್ಟಿ

ಎಲ್ಲ ಕಡೆಗಳಲ್ಲೂ ‘ಸು ಫ್ರಮ್ ಸೋ’ ಸಿನಿಮಾ ಬಗ್ಗೆಯೇ ಚರ್ಚೆ ನಡೆಯುತ್ತಿದೆ. ಅಷ್ಟರಮಟ್ಟಿಗೆ ಈ ಚಿತ್ರ ಹಿಟ್ ಆಗಿದೆ. ಹಾರರ್ ಕಾಮಿಡಿ ಕಥಾಹಂದರ ಈ ಸಿನಿಮಾದಲ್ಲಿ ಇದೆ. ಕಥೆ ಹುಟ್ಟಿದ್ದು ಹೇಗೆ ಎಂಬುದನ್ನು ತಿಳಿಯುವ ಕೌತುಕ ಎಲ್ಲರಿಗೂ ಇದೆ. ಈ ಚಿತ್ರದಲ್ಲಿ ನಟಿಸಿ, ನಿರ್ಮಾಣ ಮಾಡಿರುವ ರಾಜ್ ಬಿ. ಶೆಟ್ಟಿ ಅವರು ಆ ಕುರಿತು ಮಾತನಾಡಿದ್ದಾರೆ.

‘ಸು ಫ್ರಮ್ ಸೋ’ ಕಥೆ ಹುಟ್ಟಿದ್ದು ಹೇಗೆ? ಆ ಘಟನೆ ವಿವರಿಸಿದ ರಾಜ್ ಬಿ. ಶೆಟ್ಟಿ
Raj B Shetty, Jp Thuminad
ಮದನ್​ ಕುಮಾರ್​
|

Updated on: Aug 05, 2025 | 7:09 PM

Share

ನಿರ್ಮಾಪಕನಾಗಿ ಮತ್ತು ನಟನಾಗಿ ರಾಜ್ ಬಿ. ಶೆಟ್ಟಿ (Raj B Shetty) ಅವರಿಗೆ ‘ಸು ಫ್ರಮ್ ಸೋ’ ಸಿನಿಮಾದಿಂದ ದೊಡ್ಡ ಯಶಸ್ಸು ಸಿಕ್ಕಿದೆ. ಕರ್ನಾಟಕದಲ್ಲಿ ಈ ಸಿನಿಮಾ 50 ಕೋಟಿ ರೂಪಾಯಿ ಕಲೆಕ್ಷನ್ ಮಾಡುವ ಹಂತದಲ್ಲಿದೆ. ಉತ್ತರ ಭಾರತದ ಮಂದಿ ಕೂಡ ಈ ಚಿತ್ರದ ಬಗ್ಗೆ ಮಾತನಾಡುತ್ತಿದ್ದಾರೆ. ‘ಸು ಫ್ರಮ್ ಸೋ’ (Su From So) ಸಿನಿಮಾ ಸೂಪರ್ ಹಿಟ್ ಆದ ಬಳಿಕ ರಾಜ್ ಬಿ. ಶೆಟ್ಟಿ ಅವರು ‘ದಿ ಹಾಲಿವುಡ್ ರಿಪೋರ್ಟರ್ ಇಂಡಿಯಾ’ಗೆ ಸಂದರ್ಶನ ನೀಡಿದ್ದಾರೆ. ಈ ಚಿತ್ರದ ಕಥೆ ಹುಟ್ಟಿದ್ದು ಹೇಗೆ ಎಂಬುದನ್ನು ಅವರು ವಿವರಿಸಿದ್ದಾರೆ. ನಿರ್ದೇಶಕ ಜೆ.ಪಿ. ತುಮಿನಾಡು (JP Thuminad) ಮತ್ತು ತಮ್ಮ ನಡುವೆ ನಡೆದ ಸಂವಾದವನ್ನು ರಾಜ್ ಬಿ. ಶೆಟ್ಟಿ ಮೆಲುಕು ಹಾಕಿದ್ದಾರೆ.

‘ಸು ಫ್ರಮ್ ಸೋ ಐಡಿಯಾ ನನ್ನದು. ಏನಾಯ್ತು ಅಂದರೆ, ಜೆ.ಪಿ. ತುಮಿನಾಡು ಅವರು ರಂಗಭೂಮಿ ನಟ, ನಿರ್ದೇಶಕ. ಯಾವಾಗಲೂ ಅವರು ಜನರಿಗೆ ಕಥೆ ಹೇಳುತ್ತಿದ್ದರು. ತುಂಬಾ ಚೆನ್ನಾಗಿ ಅವರು ಕಥೆ ವಿವರಿಸುತ್ತಾರೆ. 6-7 ವರ್ಷಗಳ ಹಿಂದೆ ಅವರಿಗೆ ನಾನೊಂದು ಮಾತು ಹೇಳಿದ್ದೆ. ಬರೀ ಕಥೆ ಹೇಳಿಕೊಂಡು ಸಮಯ ಹಾಳು ಮಾಡುತ್ತೀರಾ ಅಥವಾ ಸಿನಿಮಾ ನಿರ್ದೇಶನ ಮಾಡುತ್ತೀರಾ ಅಂತ ಕೇಳಿದ್ದೆ’ ಎಂದಿದ್ದಾರೆ ರಾಜ್ ಬಿ. ಶೆಟ್ಟಿ.

‘ನಿಮಗೆ ಒಳ್ಳೆಯ ನಿರೂಪಣೆ ಶೈಲಿ ಇದೆ ಅಂತ ನಾನು ಹೇಳಿದಾಗ ತಾವು ಸಿನಿಮಾ ಮಾಡಬೇಕು ಅಂತ ತುಮಿನಾಡು ಹೇಳಿದರು. ಕನ್ನಡದಲ್ಲಿ ಜೋಗಿ ಬರೆದ ‘ಎಲ್ಲರೂ ಮಾಡುವುದು ಹೊಟ್ಟೆಗಾಗಿ’ ಎಂಬ ಪುಸ್ತಕ ಇದೆ. ಅದು ಬೊಜ್ಜಿನ ಬಗ್ಗೆ ಇರುವುದು. ಆ ಪುಸ್ತಕ ಓದಿ ಚಿತ್ರಕಥೆ ಮಾಡಿ ಅಂತ ತುಮಿನಾಡುಗೆ ಹೇಳಿದೆ. ಅವರಿಗೆ ಖುಷಿ ಆಯಿತು. ಆದರೆ ನನ್ನ ಇನ್ನೊಬ್ಬ ಸ್ನೇಹಿತರು ಅದೇ ಪುಸ್ತಕವನ್ನು ಸ್ಫೂರ್ತಿಯಾಗಿ ಇಟ್ಟುಕೊಂಡು ಸಿನಿಮಾ ಮಾಡುತ್ತಿದ್ದಾರೆ ಎಂಬುದು ನಂತರ ತಿಳಿಯಿತು. ಅಷ್ಟರಲ್ಲಾಗಲೇ ಮೂರು ತಿಂಗಳಿಂದ ಚಿತ್ರಕಥೆ ಬರೆಯುತ್ತಿದ್ದ ತುಮಿನಾಡು ಅವರಿಗೆ ಈ ಬೇಸರದ ಸುದ್ದಿಯನ್ನು ನಾನು ತಿಳಿಸಬೇಕಾಯಿತು’ ಎಂದು ರಾಜ್ ಬಿ. ಶೆಟ್ಟಿ ಹೇಳಿದ್ದಾರೆ.

ಇದನ್ನೂ ಓದಿ
Image
ಕೇರಳಕ್ಕೆ ಹೊರಟ ‘ಸು ಫ್ರಂ ಸೋ’: ಸ್ಟಾರ್ ನಟನ ಬೆಂಬಲ
Image
‘ಸು ಫ್ರಮ್ ಸೋ’ ನಿರ್ದೇಶಕ ಜೆಪಿ ತುಮ್ಮಿನಾಡ್ ಯಾರು? ಹಿನ್ನೆಲೆ ಏನು?
Image
3 ಪಟ್ಟಾಯ್ತು ಸು ಫ್ರಮ್ ಸೋ ಶೋ ಸಂಖ್ಯೆ; ಹೊಸ ಸ್ಟ್ರೆಟಜಿ ಮಾಡಿ ಗೆದ್ದ ರಾಜ್
Image
ಬುಕಿಂಗ್​ನಲ್ಲಿ ಪವನ್ ಕಲ್ಯಾಣ್ ಚಿತ್ರವನ್ನೂ ಬೀಟ್ ಮಾಡಿದ ‘ಸು ಫ್ರಮ್ ಸೋ’

‘ಜೆ.ಪಿ. ತುಮಿನಾಡು ಅವರಿಗೆ ತುಂಬಾ ಬೇಸರ ಆಯಿತು. ಅವರ ಬಗ್ಗೆ ಯೋಚಿಸೋದು ನಿಲ್ಲಿಸಲು ನನಗೆ ಸಾಧ್ಯವಾಗಲಿಲ್ಲ. ಆ ಕಷ್ಟ ಏನು ಎಂಬುದು ನನಗೆ ಗೊತ್ತು. ಮತ್ತೆ ಅವರಿಗೆ ಕರೆ ಮಾಡಿದೆ. ನೀವು ಜೀವನದಲ್ಲಿ ನೋಡಿದ ಆಸಕ್ತಿಕರ ಪಾತ್ರಗಳು ಯಾವವು ಅಂತ ನಾನು ಕೇಳಿದೆ. ಆಗ ಅವರು ರವಿ ಅಣ್ಣ ಪಾತ್ರದ ಬಗ್ಗೆ ಹೇಳಿದರು. ನಂತರ ನಾನು ನೋಡಿದ ಜನರ ಬಗ್ಗೆ, ಸನ್ನಿವೇಶಗಳ ಬಗ್ಗೆ ಅವರಿಗೆ ಹೇಳಿದೆ. ಅವುಗಳಿಂದ ಅವರು ಒಂದು ಕಥೆ ಪಡೆದರು. ಹಾಗೆ ಸು ಫ್ರಮ್ ಸೋ ಸಿನಿಮಾ ಶುರು ಆಯಿತು’ ಎಂದಿದ್ದಾರೆ ರಾಜ್ ಬಿ. ಶೆಟ್ಟಿ.

ಇದನ್ನೂ ಓದಿ: ಹಿಂದಿಗೆ ರಿಮೇಕ್ ಆಗಲಿದೆ ‘ಸು ಫ್ರಮ್ ಸೋ’: ಸಿಹಿ ಸುದ್ದಿ ನೀಡಿದ ರಾಜ್ ಬಿ. ಶೆಟ್ಟಿ

ಚೊಚ್ಚಲ ನಿರ್ದೇಶನದಲ್ಲೇ ನಿರ್ದೇಶಕ ಜೆ.ಪಿ. ತುಮಿನಾಡು ಅವರು ಸೂಪರ್ ಸಕ್ಸಸ್ ಪಡೆದಿದ್ದಾರೆ. ಕನ್ನಡ ಚಿತ್ರರಂಗದ ಭರವಸೆಯ ನಿರ್ದೇಶಕನಾಗಿ ಅವರು ಹೊರಹೊಮ್ಮಿದ್ದಾರೆ. ಇನ್ನು, ಈ ಸಿನಿಮಾದಲ್ಲಿ ನಟಿಸಿರುವ ಎಲ್ಲ ಕಲಾವಿದರು ಕೂಡ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ವಿಶೇಷವಾಗಿ ಶನೀಲ್ ಗೌತಮ್, ಸಂದ್ಯಾ ಅರಕೆರೆ ಮುಂತಾದವರು ಶೈನ್ ಆಗುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು