AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಟ್ಟಿಗೆ ನಟಿಸಲಿದ್ದಾರೆ ರಾಜ್, ರಕ್ಷಿತ್, ರಿಷಬ್; ಅಪ್​​ಡೇಟ್ ಕೊಟ್ಟ ರಾಜ್ ಬಿ ಶೆಟ್ಟಿ

ರಾಜ್ ಬಿ ಶೆಟ್ಟಿ, ರಿಷಬ್ ಶೆಟ್ಟಿ ಮತ್ತು ರಕ್ಷಿತ್ ಶೆಟ್ಟಿ ಒಟ್ಟಿಗೆ ಸಿನಿಮಾ ಮಾಡುವ ಬಗ್ಗೆ ಅಭಿಮಾನಿಗಳಲ್ಲಿ ಬಹಳ ನಿರೀಕ್ಷೆ ಇದೆ. ಆದರೆ, ರಾಜ್ ಬಿ ಶೆಟ್ಟಿ ಇತ್ತೀಚೆಗೆ ನೀಡಿದ ಸಂದರ್ಶನದಲ್ಲಿ, ಈ ಮೂವರೂ ಒಟ್ಟಿಗೆ ಸಿನಿಮಾ ಮಾಡುವುದು ಸದ್ಯಕ್ಕೆ ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ರಿಷಬ್ ಮತ್ತು ರಕ್ಷಿತ್ ಇಬ್ಬರೂ ತಮ್ಮದೇ ಆದ ಚಿತ್ರಗಳಲ್ಲಿ ಬ್ಯುಸಿ ಇದ್ದಾರೆ ಎಂದು ಅವರು ತಿಳಿಸಿದ್ದಾರೆ.

ಒಟ್ಟಿಗೆ ನಟಿಸಲಿದ್ದಾರೆ ರಾಜ್, ರಕ್ಷಿತ್, ರಿಷಬ್; ಅಪ್​​ಡೇಟ್ ಕೊಟ್ಟ ರಾಜ್ ಬಿ ಶೆಟ್ಟಿ
ರಕ್ಷಿತ್-ರಾಜ್​-ರಿಷಬ್
ರಾಜೇಶ್ ದುಗ್ಗುಮನೆ
|

Updated on: Aug 13, 2025 | 3:03 PM

Share

ರಾಜ್ ಬಿ. ಶೆಟ್ಟಿ ಅವರು ‘ಸು ಫ್ರಮ್ ಸೋ’ ಸಿನಿಮಾದ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಈ ಸಿನಿಮಾ ಪರಭಾಷೆಯಲ್ಲೂ ಮೆಚ್ಚುಗೆ ಪಡೆದಿದೆ. ಅವರು ಹೋದಲ್ಲಿ, ಬಂದಲ್ಲಿ ‘ಆರ್​ಆರ್​ಆರ್​’ ಬಗ್ಗೆ ಕೇಳಲಾಗುತ್ತಿದೆ. ಹಾಗಂತ ರಾಜಮೌಳಿ ಸಿನಿಮಾ ಬಗ್ಗೆ ಅಲ್ಲ. ರಕ್ಷಿತ್, ರಿಷಬ್ ಹಾಗೂ ರಾಜ್ ಬಿ ಶೆಟ್ಟಿ (Raj b Shetty) ಕಾಂಬಿನೇಷನ್ ಬಗ್ಗೆ. ಮೂವರು ಒಟ್ಟಾಗಿ ಸಿನಿಮಾ ಮಾಡೋದು ಯಾವಾಗ ಎಂದು ಕೇಳಲಾಯಿತು. ಇದಕ್ಕೆ ಅವರು ಉತ್ತರ ನೀಡಿದ್ದಾರೆ.

ರಾಜ್ ಬಿ ಶೆಟ್ಟಿ ಅವರು ರಿಷಬ್ ಜೊತೆ ‘ಗರುಡ ಗಮನ ವೃಷಭ ವಾಹನ’ ಸಿನಿಮಾ ಮಾಡಿದ್ದಾರೆ. ರಿಷಬ್ ಹಾಗೂ ರಕ್ಷಿತ್ ‘ಕಿರಿಕ್ ಪಾರ್ಟಿ’ ಮೊದಲಾದ ಚಿತ್ರಗಳಲ್ಲಿ ಒಟ್ಟಾಗಿ ಕೆಲಸ ಮಾಡಿದ್ದಾರೆ. ಇನ್ನು ರಕ್ಷಿತ್ ಹಾಗೂ ರಾಜ್ ಕೂಡ ಒಟ್ಟಾಗಿ ನಟಿಸಿದ್ದಾರೆ. ಆದರೆ, ಈ ಮೂವರು ಒಂದೇ ಸಿನಿಮಾದಲ್ಲಿ ಕೆಲಸ ಮಾಡಿಲ್ಲ. ಇದು ಯಾವಾಗ ಎನ್ನುವ ಪ್ರಶ್ನೆ ಅಭಿಮಾನಿಗಳಿಗೆ ಮೂಡಿತ್ತು. ಇದಕ್ಕೆ ರಾಜ್ ಉತ್ತರಿಸಿದ್ದಾರೆ. ಆದರೆ, ಇದು ಸದ್ಯಕ್ಕಂತೂ ಸೆಟ್ಟೇರಲ್ಲ ಎಂದಿದ್ದಾರೆ.

ರಾಜ್ ಬಿ. ಶೆಟ್ಟಿ ಮಾತು

ಸಂದರ್ಶನ ಒಂದರಲ್ಲಿ ರಾಜ್​ ಅವರಿಗೆ ಈ ಬಗ್ಗೆ ಪ್ರಶ್ನೆ ಮಾಡಲಾಯಿತು. ಈ ವೇಳೆ ಉತ್ತರಿಸಿದ ರಾಜ್, ‘ಅದು ಸದ್ಯಕ್ಕಂತೂ ಆಗಲ್ಲ. ರಿಷಬ್ ಈಗ ದೊಡ್ಡ ನಟ ಹಾಗೂ ತುಂಬಾನೇ ಬ್ಯುಸಿ ಆಗಿದ್ದಾರೆ ಕೂಡ. ರಕ್ಷಿತ್ ಕೂಡ ಅವರದ್ದೇ ಪ್ರಾಜೆಕ್ಟ್​ನಲ್ಲಿ ಬ್ಯುಸಿ ಇದ್ದಾರೆ. ರಕ್ಷಿತ್ ಸ್ಕ್ರಿಪ್ಟ್ ಬರೆದಿದ್ದರು. ಮಿಡ್​ ವೇ ಟು ಮೋಕ್ಷ ಎಂಬುದು ಚಿತ್ರದ ಟೈಟಲ್ ಆಗಿತ್ತು. ನಾನು ಕೂಡ ಆ ಚಿತ್ರದ ಬರಹಗಾರ. ಇದರಲ್ಲಿ ಮೂರು ಪಾತ್ರಗಳು ಇದ್ದವು. ನಾನು, ರಕ್ಷಿತ್, ರಿಷಬ್ ನಟಿಸಬೇಕಿತ್ತು. ಆದರೆ, ಕೊವಿಡ್ ಕಾರಣದಿಂದ ಸಿನಿಮಾ ಸೆಟ್ಟೇರಲಿಲ್ಲ. ಇದು ಸದ್ಯಕ್ಕಂತೂ ಸೆಟ್ಟೇರಲ್ಲ. ರಕ್ಷಿತ್ ಅವರು ಈಗ ಮಾಡುತ್ತಿರುವ ಪ್ರಾಜೆಕ್ಟ್​ಗೆ ಎರಡೂವರೆ ವರ್ಷ ಬೇಕು ಎಂದಿದ್ದಾರೆ’ ಅವರು.

ಇದನ್ನೂ ಓದಿ: ನೀವು ಬಿಡಿ ಚಿತ್ರರಂಗ ಆಳುವವರು ಎಂದ ತೆಲುಗು ರಿಪೋರ್ಟರ್​ಗೆ ಬಟ್ಟೆ ತೋರಿಸಿ ಉತ್ತರ ಕೊಟ್ಟ ರಾಜ್ ಬಿ ಶೆಟ್ಟಿ

ರಕ್ಷಿತ್ ಅವರು ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದ ಬಳಿಕ ಅಷ್ಟಾಗಿ ಎಲ್ಲಿಯೂ ಕಾಣಿಸಿಕೊಂಡಿಲ್ಲ. ‘ರಿಚರ್ಡ್ ಆ್ಯಂಟನಿ’ ಸಿನಿಮಾದ ಸ್ಕ್ರಿಪ್ಟ್ ಕೆಲಸದಲ್ಲಿ ಅವರು ಬ್ಯುಸಿ ಇದ್ದಾರೆ ಎನ್ನಲಾಗಿದೆ. ಅವರು ಸದ್ಯ ಹುಟ್ಟೂರಾದ ಉಡುಪಿಯಲ್ಲಿ ಇದ್ದಾರೆ ಎನ್ನಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು