AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಸಿನಿಮಾರಂಗದ ರೂಪಾಂತರದ ಕಾಲದಲ್ಲಿ ಬರುತ್ತಿರುವ ‘ರೂಪಾಂತರ’

ರಾಜ್ ಬಿ ಶೆಟ್ಟಿ ಸೇರಿದಂತೆ ಹಲವು ಪ್ರತಿಭಾವಂತ ನಟರು ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ‘ರೂಪಾಂತರ’ ಸಿನಿಮಾದ ಟ್ರೈಲರ್ ಇತ್ತೀಚೆಗೆ ಬಿಡುಗಡೆ ಆಗಿದ್ದು ಸಿನಿಮಾ ಜುಲೈ 26ಕ್ಕೆ ತೆರೆಗೆ ಬರಲಿದೆ.

ಕನ್ನಡ ಸಿನಿಮಾರಂಗದ ರೂಪಾಂತರದ ಕಾಲದಲ್ಲಿ ಬರುತ್ತಿರುವ ‘ರೂಪಾಂತರ’
ಮಂಜುನಾಥ ಸಿ.
|

Updated on: Jul 17, 2024 | 9:45 PM

Share

ಕನ್ನಡ ಚಿತ್ರರಂಗ ಕಾಲ-ಕಾಲಕ್ಕೆ ರೂಪಾಂತರ ಹೊಂದುತ್ತಲೇ ಬಂದಿದೆ. ಹೊಸ ಪ್ರತಿಭೆಗಳು ಹೊಸ ಬಗೆಯ ಸಿನಿಮಾಗಳೊಟ್ಟಿಗೆ, ಕತೆಗಳೊಟ್ಟಿಗೆ ಬರುತ್ತಿದ್ದಾರೆ. ಪ್ರೇಕ್ಷಕ ತನಗೆ ಇಷ್ಟವಾದುದನ್ನು ಇರಿಸಿಕೊಂಡು ಉಳಿದವರನ್ನು ಹೊರಗೆ ಕಳಿಸುತ್ತಿದ್ದಾನೆ. ಇತ್ತೀಚೆಗೆ ಪ್ಯಾನ್ ಇಂಡಿಯಾ ಮಾಸ್ ಮಸಾಲ ಸಿನಿಮಾಗಳ ಜೊತೆಗೆ ಸಂವೇದನಾತ್ಮಕ ಸಿನಿಮಾಗಳನ್ನು ನೋಡುವ ಅಭಿರುಚಿಯೂ ಕನ್ನಡ ಪ್ರೇಕ್ಷಕರಿಗೆ ಹೆಚ್ಚಿದೆ. ಅವರ ಅಭಿರುಚಿಯ ತಣಿಸುವ ಕೆಲವು ಸಿನಿಮಾಗಳೂ ಸಹ ಕನ್ನಡ ಚಿತ್ರರಂಗದಲ್ಲಿ ನಿರ್ಮಾಣ ಆಗುತ್ತಿವೆ. ಅದೇ ಸಾಲಿನಲ್ಲಿ ನಿಲ್ಲುವ ‘ರೂಪಾಂತರ’ ಹೆಸರಿನ ಹೊಸ ಸಿನಿಮಾದ ಟ್ರೈಲರ್ ಇದೀಗ ಬಿಡುಗಡೆ ಆಗಿದೆ.

ತಮ್ಮ ಅಭಿನಯ, ಸಿನಿಮಾ ನಿರ್ದೇಶನದಿಂದ ಈಗಾಗಲೇ ಕನ್ನಡ ಸಿನಿಮಾ ಪ್ರೇಕ್ಷಕರ ಮನದಲ್ಲಿ ಜಾಗ ಪಡೆದಿರುವ ರಾಜ್ ಬಿ ಶೆಟ್ಟಿ ‘ರೂಪಾಂತರ’ ಸಿನಿಮಾದ ಪ್ರಮುಖ ಪಾತ್ರವೊಂದರಲ್ಲಿ ನಟಿಸಿದ್ದಾರೆ. ಇದೀಗ ಬಿಡುಗಡೆ ಆಗಿರುವ ‘ರೂಪಾಂತರ’ ಸಿನಿಮಾದ ಟ್ರೈಲರ್ ತನ್ನ ಭಿನ್ನತೆಯಿಂದ ಗಮನ ಸೆಳೆಯುತ್ತಿದೆ. ಟ್ರೈಲರ್​ನಲ್ಲಿ ಹಿಂಸಾತ್ಮಕ ಪ್ರವೃತ್ತಿಯವೊಬ್ಬನಿದ್ದಾನೆ, ಹಳ್ಳಿಯ ಮುದಿ ಪತಿ-ಪತ್ನಿ ಮತ್ತು ಅವರ ನಗರದ ಕನಸುಗಳಿವೆ. ಒಬ್ಬಂಟಿ ಯುವಕನಿದ್ದಾನೆ, ಭಿಕ್ಷೆ ಬೇಡುವ ಯುವತಿ ಇದ್ದಾಳೆ, ಅವಳೊಟ್ಟಿಗೆ ಪುಟ್ಟ ಮಗುವೊಂದಿದೆ, ಇದೆಲ್ಲದರ ಜೊತೆಗೆ ನೂರಾರು ವರ್ಷಗಳ ನಂತರ ಭೂಮಿ ಅಲ್ಲಿ ವಾಸಿಸುತ್ತಿರುವ ಕೈಯಲ್ಲಿ ಅತ್ಯಾಧುನಿಕ ಆಯುಧಗಳನ್ನು ಹಿಡಿದ ಜನರಿದ್ದಾರೆ. ಒಟ್ಟಾರೆಯಾಗಿ ಟ್ರೈಲರ್ ಬಹಳ ಕುತೂಹಲ ಮೂಡಿಸುತ್ತಿದ್ದು ಸಿನಿಮಾ ಜುಲೈ 26 ರಂದು ಬಿಡುಗಡೆಯಾಗುತ್ತಿದೆ.

ಇದನ್ನೂ ಓದಿ:ಸಿನಿಮಾಕ್ಕೆ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಎಂದು ಹೆಸರಿಟ್ಟಿದ್ದೇಕೆ? ವಿವರಿಸಿದ್ದಾರೆ ರಾಜ್ ಬಿ ಶೆಟ್ಟಿ

ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ನಟ, ನಿರ್ದೇಶಕ ರಾಜ್ ಬಿ ಶೆಟ್ಟಿ, ‘ನಾವು ಮಂಗಳೂರಿನಲ್ಲಿ ಸಿನಿಮಾ ಮಾಡಬೇಕಾದರೆ ಈಗ ಮಾರುಕಟ್ಟೆಯಲ್ಲಿರುವುದಕ್ಕಿಂತಲೂ ಭಿನ್ನವಾದ ಒಳ್ಳೆಯ ಸಿನಿಮಾಗಳನ್ನು ಮಾಡಬೇಕು. ಆಗ ಜನರು ಸಿನಿಮಾಗಳನ್ನು ನೋಡುತ್ತಾರೆ ಎಂಬ ಉದ್ದೇಶದಿಂದ ಸಿನಿಮಾ ಮಾಡಲು ಆರಂಭಿಸಿದ್ದೆವು. ಅದೇ ಉದ್ದೇಶದಿಂದ ಈ ಸಿನಿಮಾವನ್ನು ಮಾಡಿದ್ದೇವೆ. ಇದು ನನಗೆ ಬಹಳ ಇಷ್ಟವಾದ ಸಿನಿಮಾ. ಏಕೆಂದರೆ ಈ ಚಿತ್ರದಲ್ಲಿ ನಾನು ನಟ ಮಾತ್ರ. ಸಂಭಾಷಣೆಗೆ ಸ್ವಲ್ಪ ಸಹಾಯ ಮಾಡಿದ್ದೇನೆ. ಮಿಕ್ಕಿದೆಲ್ಲಾ ಈ ತಂಡದ ಕನಸು. ನನ್ನ ಬಿಟ್ಟು ಬೇರೆ ಮುಖ್ಯಪಾತ್ರಗಳು ಈ ಸಿನಿಮಾದಲ್ಲಿವೆ. ಅವರೆಲ್ಲಾ “ರೂಪಾಂತರ” ಗೊಳ್ಳುವುದೆ ಚಿತ್ರದ ಕಥೆ. “ಒಂದು ಮೊಟ್ಟೆಯ ಕಥೆ ” ಚಿತ್ರ ಮಾಡಿದ ತಂಡದೊಂದಿಗೆ ಈ ಚಿತ್ರ ಮಾಡಿರುವುದು ಖುಷಿಯಾಗಿದೆ’ ಎಂದರು.

ನಿರ್ಮಾಪಕ ಸುಹಾನ್ ಪ್ರಸಾದ್ ಮಾತನಾಡಿ, ‘ಮಂಗಳೂರಿನವರು ಮಂಗಳೂರಿಗರಿಗೆ ಸಿನಿಮಾ ಮಾಡುತ್ತಾರೆ ಎಂಬ ಮಾತಿದೆ‌. ಆದರೆ ಈ ಚಿತ್ರವನ್ನು ನಾವು ಬೆಂಗಳೂರಿನಲ್ಲಿ ಮಾಡಿದ್ದೇವೆ‌. ರಾಜ್ ಬಿ ಶೆಟ್ಟಿ ಅವರನ್ನು ಹೊರತು ಪಡಿಸಿ ಮಿಕ್ಕೆಲ್ಲ ನಟರು ಬೇರೆ ಬೇರೆ ಪ್ರಾಂತ್ಯದವರು. ಇದೇ 26 ರಂದು ಚಿತ್ರ ಬಿಡುಗಡೆಯಾಗಲಿದೆ‌. ನಮ್ಮ ಚಿತ್ರಕ್ಕೆ ನಿಮ್ಮ ಪ್ರೋತ್ಸಾಹವಿರಲಿ’ ಎಂದರು.

ಐದು ಪ್ರಮುಖಪಾತ್ರಗಳ ಸುತ್ತ ಈ ಚಿತ್ರದ ಕಥೆ ಸುತ್ತುತ್ತದೆ. ರಾಜ್ ಬಿ ಶೆಟ್ಟಿ ಸೇರಿದಂತೆ ಚಿತ್ರತಂಡದ ಸಹಕಾರದಿಂದ ಈ ಚಿತ್ರ ಚೆನ್ನಾಗಿ ಬಂದಿದೆ ಎಂದರು ನಿರ್ದೇಶಕ ಮಿಥಿಲೇಶ್ ಎಡವಲತ್. ಚಿತ್ರದಲ್ಲಿ ನಟಿಸಿರುವ ಅಂಜನ್ ಭಾರದ್ವಾಜ್ ಹಾಗೂ ಲೇಖಾ ನಾಯ್ಡು ಅವರು ತಮ್ಮ ಪಾತ್ರದ ಕುರಿತು ಮಾತನಾಡಿದರು. ಸಂಗೀತವನ್ನು ಮಿದುನ್ ಮುಕುಂದನ್ ನೀಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!