AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸ್ವಾತಿ ಮುತ್ತಿನ ಮಳೆ ಹನಿಯೇ’ ಟ್ರೈಲರ್: ಸಾವಿನ ಕತೆಯಲ್ಲಿ ಪ್ರೇಮದ ಒರತೆ

Raj B Shetty: ರಾಜ್ ಬಿ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ 'ಸ್ವಾತಿ ಮುತ್ತಿನ ಮಳೆ ಹನಿಯೇ' ಸಿನಿಮಾದ ಟ್ರೈಲರ್ ಇಂದು (ನವೆಂಬರ್ 17) ಬಿಡುಗಡೆ ಆಗಿದೆ. ಸಿನಿಮಾ ನವೆಂಬರ್ 24ಕ್ಕೆ ತೆರೆಗೆ ಬರಲಿದೆ.

‘ಸ್ವಾತಿ ಮುತ್ತಿನ ಮಳೆ ಹನಿಯೇ’ ಟ್ರೈಲರ್: ಸಾವಿನ ಕತೆಯಲ್ಲಿ ಪ್ರೇಮದ ಒರತೆ
ರಾಜ್ ಬಿ ಶೆಟ್ಟಿ
Follow us
ಮಂಜುನಾಥ ಸಿ.
|

Updated on:Nov 17, 2023 | 8:52 PM

ರಾಜ್ ಬಿ ಶೆಟ್ಟಿ (Raj B Shetty) ಕತೆ ಬರೆದು ನಿರ್ದೇಶನ ಮಾಡಿರುವ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾದ ಟ್ರೈಲರ್ ಇಂದು (ನವೆಂಬರ್ 17) ಬಿಡುಗಡೆ ಆಗಿದೆ. ಸಿನಿಮಾ ತಂಡದ ನಡುವೆ ಅಸಮಾಧಾನಗಳು ತಲೆದೂರಿತ್ತಾದರೂ ಅವೆಲ್ಲವನ್ನೂ ಬದಿಗೊತ್ತಿ ಸಿನಿಮಾವನ್ನು ಬಿಡುಗಡೆ ಮಾಡಲು ಚಿತ್ರತಂಡ ಮುಂದಾಗಿದ್ದು, ಇದೀಗ ಟ್ರೈಲರ್ ಅನ್ನು ಬಿಡುಗಡೆ ಮಾಡಲಾಗಿದೆ. ಒಂದು ಸುಂದರ, ಸರಳವಾದ ಆದರೆ ಕಾಡುವ ಕತೆಯೊಂದನ್ನು ಪ್ರೇಕ್ಷಕರಿಗಾಗಿ ರಾಜ್ ಬಿ ಶೆಟ್ಟಿ ಕಟ್ಟಿಕೊಟ್ಟಿರುವ ಸುಳಿವನ್ನು ಸಿನಿಮಾದ ಟ್ರೈಲರ್ ನೀಡುತ್ತಿದೆ.

‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಾವು ಹಾಗೂ ಪ್ರೇಮದ ಕುರಿತಾದ ಕತೆ ಒಳಗೊಂಡಿದೆ ಎಂಬುದನ್ನು ಈ ಹಿಂದೆಯೇ ರಾಜ್ ಬಿ ಶೆಟ್ಟಿ ಹೇಳಿದ್ದರು. ಆದರೆ ಸಾಯುವ ವ್ಯಕ್ತಿಯ ಮೇಲೆ ಪ್ರೀತಿಯಾದರೆ? ಹಾಗೆ ಸಾಯಲು ರೆಡಿಯಾಗಿ ನಿಂತವರ ಮೇಲೆ ಪ್ರೀತಿ ಆಗಬಹುದೆ? ಅದು ಪ್ರೀತಿಯೇ ಅಥವಾ ಕರುಣೆಯೇ? ಹೀಗೆ ಹಲವು ಪ್ರಶ್ನೆಗಳನ್ನು ಸಿನಿಮಾದ ಟ್ರೈಲರ್ ಹುಟ್ಟಿಸುತ್ತಿದೆ. ಕೇವಲ ಟ್ರೈಲರ್​ ಇಷ್ಟು ಪ್ರಶ್ನೆಗಳನ್ನು ಹುಟ್ಟಿಸುತ್ತಿದೆಯಾದರೆ ಸಿನಿಮಾ ಇನ್ನೂ ಹಲವು ಭಾವಗಳನ್ನು ಹುಟ್ಟಿಸಬಹುದು ಎಂಬುದರಲ್ಲಿ ಅನುಮಾನವಿಲ್ಲ.

ಸಿನಿಮಾದಲ್ಲಿ ರಾಜ್ ಬಿ ಶೆಟ್ಟಿ ಅನಿಕೇತ್ ಹೆಸರಿನ ಪಾತ್ರದಲ್ಲಿ ನಟಿಸಿದ್ದಾರೆ. ಕೆಲವು ತಿಂಗಳಿಗೆ ಸಾಯಲಿರುವ ವ್ಯಕ್ತಿಯ ಪಾತ್ರವದು. ಸಿನಿಮಾದ ನಾಯಕಿಯದ್ದು ಸಾವು ನಿಶ್ಚಯವಾದವರಿಗೆ ಧೈರ್ಯ ತುಂಬುವ, ಅವರನ್ನು ಸಾವಿಗೆ ಅಣಿ ಮಾಡುವ ಕೌನ್ಸಲರ್ ಪಾತ್ರ. ಈ ಇಬ್ಬರ ನಡುವೆ ಆತ್ಮೀಯತೆ ಉಂಟಾಗಿದೆ, ಆ ಆತ್ಮೀಯತೆ ಉತ್ಕಟವಾಗಿದೆ. ಅಂದಹಾಗೆ ಸಿನಿಮಾದ ನಾಯಕಿಗೆ ಈಗಾಗಲೇ ಮದುವೆಯಾಗಿದೆ. ಆದರೂ ಸಾಯಲು ಸಿದ್ಧವಾದ ವ್ಯಕ್ತಿಯೊಬ್ಬನನ್ನು ಅತಿಯಾಗಿ ಹಚ್ಚಿಕೊಂಡಿದ್ದಾರೆ. ಇವರ ‘ಸಂಬಂಧ’ದ ಭವಿಷ್ಯವೇನು ಎಂಬುದನ್ನು ಸಿನಿಮಾ ನೋಡಿಯೇ ತಿಳಿದುಕೊಳ್ಳಬೇಕಿದೆ.

ಇದನ್ನೂ ಓದಿ:ನನ್ನ ಸಿನಿಮಾಗಳು ಮನುಷ್ಯನ ಹಾಗೂ ಹಿಂಸೆಯ ಅಧ್ಯಯನ: ರಾಜ್ ಬಿ ಶೆಟ್ಟಿ

ಹಸಿರಿನ ಮಡಿಲಲ್ಲಿ ಸಾವಿಗೆ ಸಿದ್ಧವಾದವರ ಕತೆ ನಡೆಯುತ್ತಿದೆ. ಕಣ್ಣಿಗೆ ತಂಪೆನಿಸುವ ಜಾಗಗಳಲ್ಲಿ ಸಿನಿಮಾವನ್ನು ರಾಜ್ ಬಿ ಶೆಟ್ಟಿ ಚಿತ್ರೀಕರಣ ಮಾಡಿದ್ದಾರೆ, ಟ್ರೈಲರ್​ನಲ್ಲಿ ಸಿನಿಮಾದ ಸುಂದರತೆಯ ಇಣುಕು ನೋಟಗಳು ಸಿಗುತ್ತವೆ. ಹಿನ್ನೆಲೆ ಸಂಗೀತದ ಮಧುರತೆಯ ಸಣ್ಣ ಝಲಕ್​ಗಳು ಸಹ ಟ್ರೈಲರ್​ನಲ್ಲಿದೆ. ರಾಜ್ ಬಿ ಶೆಟ್ಟಿಯ ಈ ಹಿಂದಿನ ಸಿನಿಮಾಗಳಲ್ಲಿ ಕೆಲಸ ಮಾಡಿರುವ ತಂಡದ ಬಹುತೇಕ ಸದಸ್ಯರು ತೆರೆಯ ಮೇಲೆ, ತೆರೆಯ ಹಿಂದೆ ಈ ಸಿನಿಮಾಕ್ಕೆ ಕೆಲಸ ಮಾಡಿದ್ದಾರೆ.

ರಾಜ್ ಬಿ ಶೆಟ್ಟಿ ಕತೆ ಬರೆದು, ನಿರ್ದೇಶನ ಮಾಡಿ, ಮುಖ್ಯ ಪಾತ್ರದಲ್ಲೂ ನಟಿಸಿರುವ ಈ ಸಿನಿಮಾದಲ್ಲಿ ಸಿರಿ ನಾಯಕಿ. ರಾಜ್ ಬಿ ಶೆಟ್ಟಿಯ ನಟನೆಗೆ ಸೆಡ್ಡು ಹೊಡೆಯುವಂತೆ ಸಿರಿ ನಟಿಸಿದ್ದಾರೆಂಬುದು ಟ್ರೈಲರ್​ನಲ್ಲಿಯೇ ತಿಳಿದು ಬರುತ್ತಿದೆ. ಸಿನಿಮಾದಲ್ಲಿ ಗೋಪಾಲ್ ದೇಶಪಾಂಡೆ ಸಹ ಇದ್ದಾರೆ. ರಾಜ್ ಬಿ ಶೆಟ್ಟಿಯವರ ಈ ಹಿಂದಿನ ಸಿನಿಮಾಗಳಿಗೆ ಕೆಲಸ ಮಾಡಿರುವ ಸಿನಿಮಾಟೊಗ್ರಾಫರ್ ಪ್ರವೀಣ್ ಶ್ರಿಯಾನ್ ಹಾಗೂ ಸಂಗೀತ ನಿರ್ದೇಶಕ ಮಿದುನ್ ಮುಕುಂದನ್ ಈ ಸಿನಿಮಾಕ್ಕೂ ಕೆಲಸ ಮಾಡಿದ್ದಾರೆ. ಸಿನಿಮಾ ನಿರ್ಮಾಣ ಮಾಡಿರುವುದು ನಟಿ ರಮ್ಯಾ. ಇದು ಅವರ ಮೊದಲ ನಿರ್ಮಾಣದ ಸಿನಿಮಾ ಆಗಿದ್ದು, ನವೆಂಬರ್ 24ಕ್ಕೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:42 pm, Fri, 17 November 23

ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
Krunal Pandya: 9 ವರ್ಷಗಳ ಬಳಿಕ ಅರ್ಧಶತಕ ಬಾರಿಸಿದ ಕೃನಾಲ್ ಪಾಂಡ್ಯ
Krunal Pandya: 9 ವರ್ಷಗಳ ಬಳಿಕ ಅರ್ಧಶತಕ ಬಾರಿಸಿದ ಕೃನಾಲ್ ಪಾಂಡ್ಯ