AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತುಂಬಾ ಹಿಂದಿನಿಂದಲೂ ಥಿಯೇಟರ್​ಗೆ ಜನ ಬರ್ತಿಲ್ಲ; ದರ್ಶನ್ ಫ್ಯಾನ್ಸ್​ ಸಿನಿಮಾ ನೋಡಲ್ಲ ಎಂಬ ಹೇಳಿಕೆ ಬಗ್ಗೆ ರಾಜ್ ಬಿ ಶೆಟ್ಟಿ ಮಾತು

ದರ್ಶನ್ ತೂಗುದೀಪ ಅವರನ್ನು ಕಾಣಲು ಕೆಲವು ನಟರು, ಆತ್ಮೀಯರು, ಕುಟುಂಬದವರು ಪರಪ್ಪನ ಅಗ್ರಹಾರ ಜೈಲಿಗೆ ಹೋಗುತ್ತಿದ್ದಾರೆ. ದರ್ಶನ್ ಅವರನ್ನು ಭೇಟಿ ಮಾಡಲು ನಾನು ಹೋಗಲ್ಲ ಎಂದು ರಾಜ್ ಬಿ ಶೆಟ್ಟಿ ಹೇಳಿದ್ದರು. ಈ ಬೆನ್ನಲ್ಲೇ ಅವರು ‘ದರ್ಶನ್ ಫ್ಯಾನ್ಸ್ ಸಿನಿಮಾ ನೋಡಲ್ಲ’ ಎಂಬ ಹೇಳಿಕೆ ಬಗ್ಗೆ ಮಾತನಾಡಿದ್ದಾರೆ.

‘ತುಂಬಾ ಹಿಂದಿನಿಂದಲೂ ಥಿಯೇಟರ್​ಗೆ ಜನ ಬರ್ತಿಲ್ಲ; ದರ್ಶನ್ ಫ್ಯಾನ್ಸ್​ ಸಿನಿಮಾ ನೋಡಲ್ಲ ಎಂಬ ಹೇಳಿಕೆ ಬಗ್ಗೆ ರಾಜ್ ಬಿ ಶೆಟ್ಟಿ ಮಾತು
ದರ್ಶನ್-ರಾಜ್ ಬಿ ಶೆಟ್ಟಿ
ರಾಜೇಶ್ ದುಗ್ಗುಮನೆ
|

Updated on:Jul 30, 2024 | 12:05 PM

Share

ದರ್ಶನ್ ಬಂಧನದ ಬಳಿಕ ಅವರ ಅಭಿಮಾನಿಗಳ ಪೈಕಿ ಕೆಲವರು ‘ಡಿ ಬಾಸ್ ರಿಲೀಸ್ ಆಗೋವರೆಗೆ ಬೇರೆ ಯಾವ ಹೀರೋಗಳ ಸಿನಿಮಾನೂ ನೋಡಲ್ಲ’ ಎಂದು ಹೇಳಿಕೆ ನೀಡಿದ್ದರು. ಹೀಗಿರುವಾಗಲೇ ಕೆಲವು ಸಿನಿಮಾಗಳನ್ನು ಜನರು ನೋಡಿಲ್ಲ. ಇದಕ್ಕೆ ದರ್ಶನ್ ಫ್ಯಾನ್ಸ್ ಸಿನಿಮಾ ನೋಡದೇ ಇರುವುದೇ ಕಾರಣ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ. ಈ ಬಗ್ಗೆ ನಿರ್ದೇಶಕ, ನಟ ರಾಜ್ ಬಿ ಶೆಟ್ಟಿ ಮಾತನಾಡಿದ್ದಾರೆ. ಅವರ ನಟನೆಯ ‘ರೂಪಾಂತರ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಇದೇ ಖುಷಿಯಲ್ಲಿ ಟಿವಿ9 ಕನ್ನಡದ ಡಿಜಿಟಲ್ ಬಗ್ಗೆ ಮಾತನಾಡಿದ್ದಾರೆ.

ದರ್ಶನ್ ಫ್ಯಾನ್ಸ್ ಸಿನಿಮಾ ನೋಡದೇ ಇರುವುದಕ್ಕೆ ಕನ್ನಡ ಸಿನಿಮಾಗಳು ಸೋಲುತ್ತಿವೆಯೇ ಎನ್ನುವ ಬಗ್ಗೆ ಅವರು ಮಾತನಾಡಿದ್ದಾರೆ. ‘ಇಷ್ಟು ಜನ ದರ್ಶನ್ ಫ್ಯಾನ್ಸ್ ಇದ್ದಾರೆ, ಇವರಲ್ಲಿ ಯಾರು ಸಿನಿಮಾ ನೋಡಿದ್ದಾರೆ, ಯಾರು ನೋಡಿಲ್ಲ ಎಂದು ಹೇಳೋಕೆ ನಮ್ಮಲ್ಲಿ ಲೆಕ್ಕ ಇಲ್ಲ. ದರ್ಶನ್ ಅಭಿಮಾನಿಗಳೆಲ್ಲರೂ ಒಟ್ಟಾಗಿ ಕುಳಿತು ಹೇಳುತ್ತಿರುವ ಹೇಳಿಕೆ ಇದಲ್ಲ. ಯಾರೋ ಓರ್ವ ದರ್ಶನ್ ಅಭಿಮಾನಿ ಸ್ಟೇಟಸ್ ಹಾಕಿಕೊಂಡು ಇರ್ತಾನೆ. ಅದನ್ನು ಒಂದಷ್ಟು ಜನರು ಶೇರ್ ಮಾಡಿಕೊಂಡಿರಬಹುದು. ಈ ಕಾರಣದಿಂದ ಅದು ವೈರಲ್ ರೀತಿ ಕಾಣುತ್ತದೆ. ಆದರೆ, ಇದು ಎಲ್ಲಾ ದರ್ಶನ್ ಅಭಿಮಾನಿಗಳನ್ನು ಪ್ರತಿನಿಧಿಸುವುದಿಲ್ಲ’ ಎಂದಿದ್ದಾರೆ ಅವರು.

‘ತುಂಬಾ ಹಿಂದೆಯಿಂದಲೂ ಕನ್ನಡ ಸಿನಿಮಾಗಳಿಗೆ ಜನರು ಬರುತ್ತಿಲ್ಲ. ಒಳ್ಳೆಯ ಸಿನಿಮಾಗಳು ಈ ಮೊದಲು ಬಂದಿವೆ. ಆದರೆ, ಜನರು ಸಿನಿಮಾ ನೋಡುತ್ತಿಲ್ಲ. ನಾಳೆ ನಾನು ಥಿಯೇಟರ್​ನ ತುಂಬಿಸುತ್ತೇನೆ ಎಂದು ಹೇಳಿಕೆ ನೀಡಬಹುದು. ಅದೇ ಸಮಯಕ್ಕೆ ಒಳ್ಳೆಯ ಸಿನಿಮಾ ಬಂದು ಜನರು ಥಿಯೇಟರ್​ನತ್ತ ಹೋದರೆ ನನ್ನಿಂದಲೇ ಸಿನಿಮಾ ಥಿಯೇಟರ್ ತುಂಬಿದೆ ಎಂದು ಹೇಳೊಕೆ ಆಗಲ್ಲ’ ಎಂದಿದ್ದಾರೆ ರಾಜ್ ಬಿ ಶೆಟ್ಟಿ.

ಇದನ್ನೂ ಓದಿ:  ‘ಮಲಯಾಳಂ ರೀತಿಯ ಸಿನಿಮಾ ಮಾಡೋಕೆ ಅವರಿದ್ದಾರೆ, ನಾವು ನಮ್ಮ ಕಥೆ ಹೇಳಬೇಕು’; ರಾಜ್ ಬಿ. ಶೆಟ್ಟಿ

‘ಸಿನಿಮಾ ನೋಡುವವರು ನೋಡುತ್ತಲೇ ಇರುತ್ತಾರೆ. ಅಭಿಮಾನ ಇರುವವರು ಸಿನಿಮಾ ವೀಕ್ಷಿಸುತ್ತಾರೆ. ಒಳ್ಳೆಯ ಸಿನಿಮಾಗಳಿಗೆ ಜನ ಬಂದೇ ಬರುತ್ತಾರೆ. ಸಿನಿಮಾ ಸೋತಾಗ ಇದರಿಂದಲೇ ಆಗುತ್ತಿದೆ ಎಂದು ಅನಿಸೋದು ಸಹಜ. ಒಂದೆರಡು ಜನರು ಹೇಳಿಕೆ ನೀಡಿದರೆ ಅದು ಅವರ ವೈಯಕ್ತಿಕ’ ಎಂಬುದು ರಾಜ್ ಬಿ ಶೆಟ್ಟಿ ಅಭಿಪ್ರಾಯ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:47 am, Tue, 30 July 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?