AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಹತೆ ಅಷ್ಟೇ ಮುಖ್ಯವಾಗಬೇಕು, ಬಡತನವಲ್ಲ; ರಾಜ್ ಮಾತಿಗೆ ಫಿದಾ ಆಗಿ ಕೈ ಮುಗಿದ ಉಪ್ಪಿ

ರಾಜ್ ಬಿ ಶೆಟ್ಟಿ ಅವರು ಚಿತ್ರರಂಗದಲ್ಲಿ ಕೇವಲ ಅರ್ಹತೆ ಮತ್ತು ಪ್ರತಿಭೆ ಮಾತ್ರ ಮುಖ್ಯ ಎಂದು ಒತ್ತಿ ಹೇಳಿದ್ದಾರೆ. 'ಬಡವರ ಮಕ್ಕಳು ಬೆಳೆಯಬೇಕು' ಎಂಬ ಮಾತನ್ನು ವಿರೋಧಿಸಿ, ಕಷ್ಟಪಟ್ಟದ್ದನ್ನು ಟ್ರಂಪ್ ಕಾರ್ಡ್ ಆಗಿ ಬಳಸುವುದನ್ನು ಖಂಡಿಸಿದ್ದಾರೆ. ಕಲಿಯುವ ಮನಸ್ಸಿನ ಬಡತನವೇ ಮುಖ್ಯ ಎಂಬ ಅವರ ಮಾತನ್ನು ಉಪೇಂದ್ರ ಕೂಡ ಬೆಂಬಲಿಸಿದ್ದಾರೆ.

ಅರ್ಹತೆ ಅಷ್ಟೇ ಮುಖ್ಯವಾಗಬೇಕು, ಬಡತನವಲ್ಲ; ರಾಜ್ ಮಾತಿಗೆ ಫಿದಾ ಆಗಿ ಕೈ ಮುಗಿದ ಉಪ್ಪಿ
ರಾಜ್ ಉಪೇಂದ್ರ
ರಾಜೇಶ್ ದುಗ್ಗುಮನೆ
|

Updated on:Dec 24, 2025 | 10:23 AM

Share

ರಾಜ್ ಬಿ ಶೆಟ್ಟಿ ಅವರು ಆಡುವ ಮಾತುಗಳು ಸಾಕಷ್ಟು ಗಮನ ಸೆಳೆಯುತ್ತವೆ. ಅವರು ಪ್ರತಿ ಮಾತನ್ನು ತೂಕದಿಂದಲೇ ಆಡುತ್ತಾರೆ. ‘ಬಡವರ ಮಕ್ಕಳು ಬೆಳಿಬೇಕು’ ಎಂಬ ಮಾತಿದೆ. ಈ ಮಾತಿಗೆ ರಾಜ್ (Raj B Shetty) ವಿರೋಧ ಹೊರಹಾಕಿದ್ದಾರೆ. ನಿಜವಾದ ಪ್ರತಿಭೆ ಬೆಳೆಯಬೇಕು ಎಂಬುದು ರಾಜ್ ಅವರ ಅಭಿಪ್ರಾಯ. ಆ್ಯಂಕರ್ ಅನುಶ್ರೀ ಚಾನೆಲ್​​ಗೆ ನೀಡಿದ ಸಂದರ್ಶನದಲ್ಲಿ ಅವರು ಮಾತನಾಡಿದ್ದಾರೆ.

ಚಿತ್ರರಂಗದಲ್ಲಿ ಅವಕಾಶ ಕೊಡೋದಿಲ್ಲ ಎಂಬ ಮಾತು ಆಗಾಗ ಹೊಸ ಮುಖಗಳು ಹೇಳೋದಿದೆ.ಆದರೆ, ಅವಕಾಶ ಏಕೆ ಕೊಡಬೇಕು ಎಂದು ರಾಜ್ ಬಿ ಶೆಟ್ಟಿ ಪ್ರಶ್ನೆ.‘ನಾವು ಯಾರಿಗೋ ಏಕೆ ಅವಕಾಶ ಕೊಡಬೇಕು? ಅವಕಾಶ ಕೊಡೋದು ಅಲ್ಲ. ಅವಕಾಶಕ್ಕೆ ನಾನು ಅರ್ಹನಾಗಬೇಕು’ ಎಂದು ಹೇಳಿದ್ದಾರೆ.

‘ಬಡವರ ಮಕ್ಕಳು ಬೆಳಿಬೇಕು ಅಂತಾರೆ. ಇಲ್ಲಿ ಅದು ಮುಖ್ಯವಲ್ಲ. ಅರ್ಹತೆ ಅಷ್ಟೇ ಮುಖ್ಯ. ಬಡತನ ತಲೆಯಲ್ಲಿ ಇರಬೇಕು. ನಾನು ಇನ್ನು ಕಲಿಯಬೇಕು ಎನ್ನುವ ಬಡತನ ಬೇಕು’ ಎಂದರು ರಾಜ್. ಅವರ ಮಾತಿಗೆ ಉಪ್ಪಿ ಕೈ ಮುಗಿದರು. ‘ರಾಜ್ ಹೇಳಿದ ರೀತಿ ಇಷ್ಟ ಆಯಿತು’ ಎಂದಿದ್ದಾರೆ ಉಪೇಂದ್ರ.

View this post on Instagram

A post shared by DEAR BROO✨ (@dearbroo_)

‘ಉಪೇಂದ್ರ ಕಷ್ಟದಿಂದಲೇ ಬಂದವರು. ನಾನು ಕಷ್ಟದಿಂದಲೇ ಬಂದಿದ್ದೇನೆ. ಅದು ಯಾರಿಗೆ ಬೇಕು? ಯಾಕೆ ಬೇಕು? ನಾನು ನನಗಸೋಸ್ಕರ ಕಷ್ಟಪಟ್ಟಿದ್ದು. ಅದರಲ್ಲಿ ಅಳೋದು ಏನಿದೆ? ಅದನ್ನು ಟ್ರಂಪ್ ಕಾರ್ಡ್ ಆಗಿ ಬಳಸೋದು ಏಕೆ’ ಎಂದು ರಾಜ್ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ:  ಅವರು ಯಾರನ್ನೂ ದೂರ ತಳ್ಳೋ ವ್ಯಕ್ತಿ ಅಲ್ಲ; ರಿಷಬ್ ಪರ ಬ್ಯಾಟ್ ಬೀಸಿದ ರಾಜ್ ಬಿ ಶೆಟ್ಟಿ

ರಾಜ್ ಮಾತನ್ನು ಅನೇಕರು ಒಪ್ಪಿದ್ದಾರೆ. ಚಿತ್ರರಂಗಕ್ಕೆ ಬಂದ ನಂತರ ಅನೇಕರು ಬಡವರ ಮಕ್ಕಳು, ಕಷ್ಟದಿಂದ ಬಂದಿದ್ದೇನೆ ಎಂದೆಲ್ಲ ಟ್ರಂಪ್ ಕಾರ್ಡ್ ಬಳಸಿಕೊಳ್ಲಲು ಹೋಗುತ್ತಾರೆ. ಇದೆಲ್ಲ ಮಾಡುವ ಬದಲು ಕೆಲಸ ಕಲಿಯಬೇಕು ಎಂಬುದು ರಾಜ್ ಅವರ ಕೋರಿಕೆ. ಅವರ ನಟನೆಯ ‘45’ ಸಿನಿಮಾ ಡಿಸೆಂಬರ್ 25ರಂದು ರಿಲೀಸ್ ಆಗುತ್ತಿದೆ. ಈ ಚಿತ್ರಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ. ಈ ಸಿನಿಮಾದಲ್ಲಿ ಉಪೇಂದ್ರ ಹಾಗೂ ಶಿವಣ್ಣ ಕೂಡ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:21 am, Wed, 24 December 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?