AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದಲ್ಲಿ ‘ಸು ಫ್ರಮ್ ಸೋ’ ಹಂಚಿಕೆಗೆ ಸಹಾಯ ಮಾಡಿದ್ದ ದುಲ್ಖರ್ ಸಲ್ಮಾನ್​ ಋಣ ತೀರಿಸಿದ ರಾಜ್ ಬಿ ಶೆಟ್ಟಿ

ಒಂದು ಸಿನಿಮಾ ಪರಭಾಷೆಯಲ್ಲಿ ಹೋಗಿ ಯಶಸ್ಸು ಕಾಣಬೇಕು ಎಂದರೆ ಅಲ್ಲಿ ಒಳ್ಳೆಯ ಹಂಚಿಕೆದಾರರು ಬೇಕೆ ಬೇಕು. ಅದೇ ರೀತಿ ‘ಸು ಫ್ರಮ್ ಸೋ’ ಚಿತ್ರವನ್ನು ದುಲ್ಖರ್ ಅವರು ಮಲಯಾಳಂನಲ್ಲಿ ಹಂಚಿಕೆ ಮಾಡಿದ್ದರು. ಇದರಿಂದ ಸಿನಿಮಾಗೆ ಅಲ್ಲಿ ಮೈಲೇಜ್ ಸಿಕ್ಕಿತು. ಈಗ ರಾಜ್ ಅವರು ದುಲ್ಖರ್ ನಿರ್ಮಾಣದ ಸಿನಿಮಾನ ಕರ್ನಾಟಕದಲ್ಲಿ ಹಂಚಿಕೆ ಮಾಡುತ್ತಿದ್ದಾರೆ.

ಕೇರಳದಲ್ಲಿ ‘ಸು ಫ್ರಮ್ ಸೋ’ ಹಂಚಿಕೆಗೆ ಸಹಾಯ ಮಾಡಿದ್ದ ದುಲ್ಖರ್ ಸಲ್ಮಾನ್​ ಋಣ ತೀರಿಸಿದ ರಾಜ್ ಬಿ ಶೆಟ್ಟಿ
ರಾಜ್-ದುಲ್ಖರ್
ರಾಜೇಶ್ ದುಗ್ಗುಮನೆ
| Edited By: |

Updated on:Sep 05, 2025 | 3:28 PM

Share

ರಾಜ್ ಬಿ. ಶೆಟ್ಟಿ (Raj B Shetty) ನಿರ್ಮಾಣದ ‘ಸು ಫ್ರಮ್ ಸೋ’ ಕೇವಲ ಕನ್ನಡ ಮಾತ್ರವಲ್ಲದೆ, ಪರಭಾಷೆಯಲ್ಲೂ ಭೇಷ್ ಎನಿಸಿಕೊಂಡಿತು. ಮಲಯಾಳಂನಲ್ಲಿ ಜನರು ಸಿನಿಮಾನ ಇಷ್ಟಪಟ್ಟರು. ಅಲ್ಲಿ ದುಲ್ಖರ್ ಸಲ್ಮಾನ್ ಅವರು ಚಿತ್ರವನ್ನು ಹಂಚಿಕೆ ಮಾಡಿದ್ದರು. ಈಗ ಈ ಸಹಾಯಕ್ಕೆ ಪ್ರತಿಯಾಗಿ ರಾಜ್​ ಬಿ. ಶೆಟ್ಟಿ ಅವರು ದುಲ್ಖರ್​ಗೆ ಸಹಾಯ ಒಂದನ್ನು ಮಾಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

ಒಂದು ಸಿನಿಮಾ ಪರಭಾಷೆಯಲ್ಲಿ ಹೋಗಿ ಯಶಸ್ಸು ಕಾಣಬೇಕು ಎಂದರೆ ಅಲ್ಲಿ ಒಳ್ಳೆಯ ಹಂಚಿಕೆದಾರರು ಬೇಕೆ ಬೇಕು. ಅದೇ ರೀತಿ ‘ಸು ಫ್ರಮ್ ಸೋ’ ಚಿತ್ರವನ್ನು ದುಲ್ಖರ್ ಅವರು ಮಲಯಾಳಂನಲ್ಲಿ ಹಂಚಿಕೆ ಮಾಡಿದ್ದರು. ಇದರಿಂದ ಸಿನಿಮಾಗೆ ಅಲ್ಲಿ ಮೈಲೇಜ್ ಸಿಕ್ಕಿತು. ದುಲ್ಖರ್ ಅವರ ಮಲಯಾಳಂ ಸಿನಿಮಾವನ್ನು ಈಗ ರಾಜ್ ಅವರು ಕನ್ನಡದಲ್ಲಿ ಹಂಚಿಕೆ ಮಾಡುತ್ತಿದ್ದಾರೆ.

‘ಹೃದಯಂ’ ಸಿನಿಮಾ ಮೂಲಕ ಫೇಮಸ್ ಆದ ಕಲ್ಯಾಣಿ ಪ್ರಿಯದರ್ಶನ್ ಹಾಗೂ ‘ಪ್ರೇಮಲು’ ಸಿನಿಮಾ ಖ್ಯಾತಿಯ ನಸ್ಲೆನ್ ‘ಲೋಕಃ’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರ ಆಗಸ್ಟ್ 28ರಂದು ರಿಲೀಸ್ ಆಗುತ್ತಿದೆ. ಇದು ಮೂಲತಃ ಮಲಯಾಳಂ ಸಿನಿಮಾ. ಇದನ್ನು ನಿರ್ಮಾಣ ಮಾಡಿದ್ದು ದುಲ್ಖರ್ ಸಲ್ಮಾನ್ ಅವರು. ಈ ಚಿತ್ರವನ್ನು ಕರ್ನಾಟಕದಲ್ಲಿ ರಾಜ್​ ಬಿ. ಶೆಟ್ಟಿ ಅವರ ಲೈಟರ್ ಬುದ್ಧ ಫಿಲ್ಮ್ಸ್ಸ್ ಹಂಚಿಕೆ ಮಾಡುತ್ತಿದೆ. ಈ ಬಗ್ಗೆ ದುಲ್ಖರ್ ಸಲ್ಮಾನ್ ಪ್ರೊಡಕ್ಷನ್ ಕಡೆಯಿಂದ ಅಧಿಕೃತ ಘೋಷಣೆ ಆಗಿದೆ.

ಇದನ್ನೂ ಓದಿ
Image
ನಟ ಚಿರಂಜೀವಿ ಅದೆಷ್ಟು ಶ್ರೀಮಂತ ನೋಡಿ; ಪ್ರೈವೆಟ್ ಜೆಟ್ ಒಡೆಯ
Image
ದಳಪತಿ ವಿಜಯ್ ಸಮಾವೇಶಕ್ಕೆ ಸೇರಿದ ಜನರ ಸಂಖ್ಯೆ ನೋಡಿ; ಅಬ್ಬಬ್ಬಾ ಇಷ್ಟೊಂದಾ
Image
ಸ್ಪರ್ಧಿಸೋ ಕ್ಷೇತ್ರದ ಹೆಸರು ಘೋಷಿಸಿದ ದಳಪತಿ ವಿಜಯ್; ಮೈತ್ರಿ ನಿಲುವೇನು?|
Image
‘ಕ್ವಾಟ್ಲೆ ಕಿಚನ್’ ಶೋ​ನಿಂದ ದಿಢೀರ್​ ಹೊರ ನಡೆದ ಕೆಂಪಮ್ಮ; ಇಲ್ಲಿದೆ ವಿವರ

ಇದನ್ನೂ ಓದಿ: ಶಿವಣ್ಣ-ಉಪ್ಪಿ-ರಾಜ್ ಬಿ ಶೆಟ್ಟಿ​ ನಟನೆಯ ‘45’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ

ದುಲ್ಖರ್ ಸಲ್ಮಾನ್ ಅವರು ಹೊಸ ಪ್ರತಿಭೆಗಳಿಗೆ ಹೆಚ್ಚು ಅವಕಾಶ ನೀಡುತ್ತಿದ್ದಾರೆ. ಅವರ ನಿರ್ಮಾಣ ಸಂಸ್ಥೆಯಲ್ಲಿ ಮೂಡಿ ಬರುತ್ತಿರುವ ಏಳನೇ ಸಿನಿಮಾ ಇದಾಗಿದೆ. ಸೂಪರ್ ಹೀರೋ ಶೈಲಿಯಲ್ಲಿ ಚಿತ್ರ ಮೂಡಿ ಬರುತ್ತಿದೆ. ಡಾಮಿನಿಕ್ ಅರುಣ್ ಅವರು ಇದನ್ನು ನಿರ್ದೇಶನ ಮಾಡಿದ್ದಾರೆ. 2017ರಲ್ಲಿ ‘ತರಂಗಂ’ ಹೆಸರಿನ ಸಿನಿಮಾ ಮಾಡಿ ಅವರು ಜನಪ್ರಿಯತೆ ಪಡೆದಿದ್ದರು. ಈ ಸಿನಿಮಾಗೆ ಕರ್ನಾಟಕದಲ್ಲಿ ಒಳ್ಳೆಯ ಬೇಡಿಕೆ ಸೃಷ್ಟಿ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:58 am, Fri, 22 August 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್