AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಟಾರ್ ಹೀರೋಗಳಿಗೆ ನಿರ್ದೇಶನ ಮಾಡಲ್ಲ ರಾಜ್ ಬಿ. ಶೆಟ್ಟಿ; ದಿಟ್ಟ ನಿರ್ಧಾರಕ್ಕೆ ಕಾರಣ ಇಲ್ಲಿದೆ

ರಾಜ್ ಬಿ ಶೆಟ್ಟಿ ಅವರು ಸ್ಟಾರ್ ನಟರೊಂದಿಗೆ ಕೆಲಸ ಮಾಡಲು ಇಷ್ಟಪಡೋದಿಲ್ಲ. ಹೊಸಬರನ್ನು ಪ್ರೋತ್ಸಾಹಿಸುವುದು ಅವರ ಮುಖ್ಯ ಗುರಿ. ‘ಸು ಫ್ರಮ್ ಸೋ’ ಚಿತ್ರದ ಯಶಸ್ಸಿನ ಹೊರತಾಗಿಯೂ, ಅವರು ತಮ್ಮ ನೀತಿಯನ್ನು ಬದಲಾಯಿಸಿಲ್ಲ. ಹೊಸ ತಂಡಗಳೊಂದಿಗೆ ಕೆಲಸ ಮಾಡುವುದರ ಮಹತ್ವವನ್ನು ಅವರು ವಿವರಿಸಿದ್ದಾರೆ.

ಸ್ಟಾರ್ ಹೀರೋಗಳಿಗೆ ನಿರ್ದೇಶನ ಮಾಡಲ್ಲ ರಾಜ್ ಬಿ. ಶೆಟ್ಟಿ; ದಿಟ್ಟ ನಿರ್ಧಾರಕ್ಕೆ ಕಾರಣ ಇಲ್ಲಿದೆ
ರಾಜ್
ರಾಜೇಶ್ ದುಗ್ಗುಮನೆ
|

Updated on:Aug 05, 2025 | 1:30 PM

Share

ರಾಜ್​ ಬಿ. ಶೆಟ್ಟಿ (Raj B Shetty) ಅವರು ಹಲವು ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ವಿವಿಧ ಪಾತ್ರಗಳಲ್ಲಿ ನಟಿಸಿದ್ದಾರೆ. ಅವರು ಹೊಸಬರ ಸಿನಿಮಾಗಳನ್ನು ನಿರ್ಮಾಣ ಮಾಡುತ್ತಾರೆ. ಈ ಕಾರಣಕ್ಕೆ ಅವರು ಇಷ್ಟ ಆಗುತ್ತಾರೆ. ರಾಜ್ ಅವರು ಇಷ್ಟು ವರ್ಷಗಳ ಕಾಲ ಅವರು ಹೊಸ ತಂಡದ ಜೊತೆ ಕೆಲಸ ಮಾಡಲು ಇಷ್ಟಡುತ್ತಾರೆ. ಇದಕ್ಕೆ ಕಾರಣ ಏನು ಎಂಬುದನ್ನು ಅವರು ವಿವರಿಸಿದ್ದಾರೆ.

‘ದುಲ್ಕರ್ ಸಲ್ಮಾನ್ ಅವರ ಚಿತ್ರಕ್ಕೆ ನಿರ್ದೇಶನ ಮಾಡ್ತೀರಾ’ ಎಂದು ಹಾಲಿವುಡ್ ರಿಪೋರ್ಟರ್​ ಯೂಟ್ಯೂಬ್ ಚಾನೆಲ್ ಆ್ಯಂಕರ್ ಅನುಪಮಾ ಚೋಪ್ರಾ ಕೇಳಿದರು. ಇದಕ್ಕೆ ರಾಜ್ ಬಿ. ಶೆಟ್ಟಿ ಇಲ್ಲ ಎನ್ನುವ ಉತ್ತರ ನೀಡಿದ್ದಾರೆ. ‘ನಾನು ಸ್ಟಾರ್​ಗಳಿಗೆ ನಿರ್ದೇಶನ ಮಾಡಲ್ಲ. ಅದು ತುಂಬಾನೇ ನೋವಿನ ಪ್ರಕ್ರಿಯೆ. ಸಿನಿಮಾ ನನಗೆ ತುಂಬಾನೇ ವೈಯಕ್ತಿಕ ವಿಷಯ. ನಾನು ಬೇರೆಯವರಿಗೆ ಕಾಯಬೇಕು, ಕೆಲವರು ಇದನ್ನು ಒಪ್ಪಬೇಕು, ಆ ಬಳಿಕ ಓಕೆ ಹೇಳಬೇಕು ಎಂದರೆ ಅದು ಸಾಧ್ಯವಿಲ್ಲ. ನನಗೆ ಹಾಗೆ ಕೆಲಸ ಮಾಡೋಕೆ ಆಗಲ್ಲ’ ಎಂದಿದ್ದಾರೆ ರಾಜ್.

ರಾಜ್ ಬಿ ಶೆಟ್ಟಿ ಸಂದರ್ಶನ

ಇದನ್ನೂ ಓದಿ
Image
‘ನೀವು ಗ್ಯಾಂಗ್ ಮಾಡಿ ಬ್ರದರ್’; ‘ಶೆಟ್ಟಿ ಮಾಫಿಯಾ’ ಎಂದವರಿಗೆ ರಾಜ್ ಉತ್ತರ
Image
ತಗ್ಗೋ ಮಾತೇ ಇಲ್ಲ; 50 ಕೋಟಿ ರೂ. ಕ್ಲಬ್ ಸೇರಲಿದೆ ‘ಸು ಫ್ರಮ್ ಸೋ’
Image
ಕೆಟ್ಟದಾಗಿ ಕಮೆಂಟ್ ಮಾಡಿದವರ ವಿರುದ್ಧ ರಮ್ಯಾ ರೀತಿಯೇ ಕೇಸ್ ಹಾಕಿದ ನಟಿ
Image
ನಟಿ ಕಾಜೋಲ್ ಬಳಿ ಆಸ್ತಿ ಇಷ್ಟೊಂದಾ? ಅಜಯ್ ದಂಪತಿ ಪೈಕಿ ಯಾರು ಶ್ರೀಮಂತರು?

‘ಇದು ನನ್ನ ಆಯ್ಕೆಯೂ ಹೌದು. ಹಣ ಮಾಡಬೇಕು ಎಂಬುದು ನನಗೆ ಇಲ್ಲ. ನನಗೆ ಸ್ಟಾರ್ ಸಿನಿಮಾ ಮಾಡಬೇಕು ಎಂಬುದಿಲ್ಲ. ಹೊಸ ತಂಡದ ಜೊತೆ ಸಿನಿಮಾ ಮಾಡಬೇಕು. ನಾನು ಒಂದು ಥ್ರಿಲ್ಲರ್ ಸಿನಿಮಾ ಮಾಡುತ್ತಿದ್ದೇನೆ. ನಾನೇ ಬರೆಯುತ್ತಿದ್ದೇನೆ. ವೆಬ್ ಸೀರಿಸ್ ಮಾಡುತ್ತಿದ್ದೇನೆ, ಇದು ಆಗುತ್ತದೆಯೋ ಇಲ್ಲವೋ ಗೊತ್ತಿಲ್ಲ. ಇದರ ಜೊತೆ ಹೊಸಬರ ಸಿನಿಮಾ ನಿರ್ಮಾಣ ಮಾಡುತ್ತೇನೆ’ ಎನ್ನುತ್ತಾರೆ ಅವರು.

ಇದನ್ನೂ ಓದಿ: ಬಾವ ಬಂದರು ಹಾಡಿಗೆ ರಾಜ್ ಬಿ ಶೆಟ್ಟಿ ಗ್ಯಾಂಗ್​ನಿಂದ ಭರ್ಜರಿ ಸ್ಟೆಪ್

ರಾಜ್ ಬಿ ಶೆಟ್ಟಿ ಅವರು ಮೊದಲ ಬಾರಿಗೆ ‘ಒಂದು ಮೊಟ್ಟೆಯ ಕಥೆ’ ಸಿನಿಮಾ ಮಾಡಿದರು. ಈ ಚಿತ್ರ ಮೆಚ್ಚುಗೆ ಪಡೆಯಿತು. ಆ ಬಳಿಕ ಅವರು ಹೊಸ ತಂಡಗಳ ಜೊತೆ ಹೆಚ್ಚು ಕೆಲಸ ಮಾಡಲು ಇಷ್ಟಪಡುತ್ತಾರೆ. ಈಗ ‘ಸು ಫ್ರಮ್ ಸೋ’ ಸಿನಿಮಾದಿಂದ ದೊಡ್ಡ ಗೆಲುವು ಕಂಡ ಹೊರತಾಗಿಯೂ ಅವರು ತಮ್ಮ ಮೂಲಕ ನಿಯಮ ಬಿಡುತ್ತಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 1:24 pm, Tue, 5 August 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು