AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಣ್ಣ-ಉಪೇಂದ್ರ ಮುಂದೆ ಕರಾಟೆ ಪ್ರದರ್ಶಿಸಿದ ರಾಜ್ ಬಿ ಶೆಟ್ಟಿ

Raj B Shetty: ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಮೊದಲ ಬಾರಿಗೆ ನಿರ್ದೇಶನ ಮಾಡಿರುವ ‘45’ ಸಿನಿಮಾನಲ್ಲಿ ಮೂರು ಜನ ಸ್ಟಾರ್ ನಟರು ನಟಿಸಿದ್ದು, ಸಿನಿಮಾದಲ್ಲಿ ನಟಿಸಿರುವ ರಾಜ್ ಬಿ ಶೆಟ್ಟಿಯವರ ಕ್ಯಾರೆಕ್ಟರ್ ಟೀಸರ್ ಬಿಡುಗಡೆ ಮಾಡಲಾಗಿದೆ.

ಶಿವಣ್ಣ-ಉಪೇಂದ್ರ ಮುಂದೆ ಕರಾಟೆ ಪ್ರದರ್ಶಿಸಿದ ರಾಜ್ ಬಿ ಶೆಟ್ಟಿ
ಮಂಜುನಾಥ ಸಿ.
|

Updated on: Nov 02, 2024 | 6:41 PM

Share

ಅರ್ಜುನ್ ಜನ್ಯ ಮೊದಲ ಬಾರಿಗೆ ನಿರ್ದೇಶಕನ ಮಾಡಿರುವ ಸಿನಿಮಾ ‘45’ ಚಿತ್ರೀಕರಣ ಬಹುತೇಕ ಅಂತ್ಯವಾಗಿದೆ. ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕಾರ್ಯ ಚಾಲ್ತಿಯಲ್ಲಿದ್ದು, ಕೆಲವೇ ತಿಂಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾದ ಬಗ್ಗೆ ಹೆಚ್ಚಿನ ಸುದ್ದಿಗಳು ಇಷ್ಟು ದಿನ ಹೊರಬಿದ್ದಿರಲಿಲ್ಲ. ಇದೀಗ ಒಮ್ಮೆಲೆ ರಾಜ್ ಬಿ ಶೆಟ್ಟಿಯ ಪಾತ್ರದ ಟೀಸರ್ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ರಾಜ್ ಬಿ ಶೆಟ್ಟಿ ಸಖತ್ ಭಿನ್ನವಾಗಿ ಈ ಸಿನಿಮಾದಲ್ಲಿ ಕಾಣಿಸಿಕೊಂಡಿರುವುದು ಈ ಟೀಸರ್​ನಿಂದ ತಿಳಿದು ಬರುತ್ತಿದೆ.

ಈಗ ಬಿಡುಗಡೆ ಆಗಿರುವ ರಾಜ್ ಬಿ ಶೆಟ್ಟಿ ಅವರ ಕ್ಯಾರೆಕ್ಟರ್ ಟೀಸರ್​ ಬ್ಲಾಕ್ ಆಂಡ್ ವೈಟ್​ನಲ್ಲಿ ಆರಂಭವಾಗುತ್ತದೆ. ರಾಜ್ ಬಿ ಶೆಟ್ಟಿಯನ್ನು ಇಬ್ಬರು ರೌಡಿಗಳು ಅಡ್ಡಗಟ್ಟಿದ್ದಾರೆ. ಅವರೊಟ್ಟಿಗೆ ತಮಾಷೆಯ ದನಿಯಲ್ಲಿ ಮಂಗಳೂರು ಶೈಲಿಯ ಕನ್ನಡದಲ್ಲಿ ಮಾತನಾಡುವ ರಾಜ್ ಬಿ ಶೆಟ್ಟಿ, ರೌಡಿಗಳು ಚಾಕು ತೆಗೆದು ಹೆದರಿಸಲು ಪ್ರಯತ್ನಿಸಿದಾಗ ‘ನನ್ನ ಮೈಮುಟ್ಟುವ ಪ್ರಯತ್ನ ಮಾಡಬೇಡಿ, ನಮ್ಮಣ್ಣ ನಾನು ಚಿಕ್ಕವನಿದ್ದಾಗ ಕರಾಟೆ ಕ್ಲಾಸ್​ಗೆ ಕಳಿಸಿದ್ದ’ ಎನ್ನುತ್ತಾ ಕರಾಟೆ ಪ್ರತಿಭೆ ಪ್ರದರ್ಶಿಸಲು ಮುಂದಾಗುತ್ತಾರೆ. ಅಲ್ಲಿಗೆ ಟೀಸರ್ ಅಂತ್ಯವಾಗಿದೆ. ಟೀಸರ್ ನೋಡಿದವರಿಗೆ ರಾಜ್ ಬಿ ಶೆಟ್ಟಿ ಅವರದ್ದು ಹಾಸ್ಯ ಭರಿತವಾಗಿರುವ ನಾಯಕ ಪಾತ್ರ ಅನಿಸುತ್ತದೆ. ಮಾತ್ರವಲ್ಲ, ಟೀಸರ್​ನಲ್ಲಿ ರಾಜ್ ಬಿ ಶೆಟ್ಟಿಯನ್ನು ಎದುರಾಗಿ ಚಾಕು ತೋರಿಸಿ ಹೆದರಿಸಲು ಯತ್ನಿಸಿರುವ ಇಬ್ಬರು ಶಿವರಾಜ್ ಕುಮಾರ್ ಹಾಗೂ ಉಪೇಂದ್ರ ಎನ್ನುವ ಅನುಮಾನವೂ ಮೂಡುತ್ತದೆ. ಏಕೆಂದರೆ ಅವರ ಒಬ್ಬರ ಚಾಕುವಿಗೆ ‘ಓಂ’ ಹೆಸರಿನ ಚೈನ್ ಇದ್ದರೆ ಇನ್ನೊಬ್ಬರ ಚಾಕುವಿಗೆ ತ್ರಿಶೂಲವಿದೆ.

ಇದನ್ನೂ ಓದಿ:ಹೊಸ ಸಿನಿಮಾ ಪ್ರಾರಂಭಿಸಿದ ರಾಜ್ ಬಿ ಶೆಟ್ಟಿ, ನಿರ್ದೇಶನ ಯಾರದ್ದು?

ಶರ್ಟ್, ಟೈ ಹಾಕಿಕೊಂಡು ಕಾರ್ಪೊರೇಟ್ ಉದ್ಯೋಗಿಯಂತೆ ರಾಜ್ ಬಿ ಶೆಟ್ಟಿ ಕಾಣಿಸುತ್ತಿದ್ದಾರೆ. ಕೈಯಲ್ಲಿ ಕಡಗ ಸಹ ಇದೆ. ಈಗ ಕಾರ್ಪೊರೇಟ್ ಉದ್ಯೋಗ ಮಾಡುತ್ತಿರುವ ಆದರೆ ಫ್ಲ್ಯಾಶ್​ಬ್ಯಾಕ್​​ನಲ್ಲಿ ರೌಡಿಸಂ ಹಿಸ್ಟರಿ ಇರುವ ಪಾತ್ರ ಇವರದ್ದಾಗಿರಬಹುದು ಎಂಬ ಅನುಮಾನವೂ ಸಹ ಮೂಡುತ್ತಿದೆ. ಈ ಟೀಸರ್ ಹಂಚಿಕೊಂಡಿರುವ ನಿರ್ದೇಶಕ ಅರ್ಜುನ್ ಜನ್ಯ, ‘ಕರಾಟೆ ಪಟು ಬರ್ತಿದ್ದಾರೆ ಎಲ್ಲಾರು ಹುಷಾರು’ ಎಂದು ಕ್ಯಾಪ್ಷನ್ ಬರೆದುಕೊಂಡಿದ್ದಾರೆ. ಸಿನಿಮಾದ ಬಗ್ಗೆ ಹೆಚ್ಚಿನ ಅಪ್​ಡೇಟ್​ಗಳನ್ನು ಮುಂದಿನ ದಿನದಲ್ಲಿ ಹಂಚಿಕೊಳ್ಳುವುದಾಗಿ ಅರ್ಜುನ್ ಜನ್ಯ ಹೇಳಿದ್ದಾರೆ.

ಸಂಗೀತ ನಿರ್ದೇಶಕ ಅರ್ಜುನ್ ಜನ್ಯ, ಇದೇ ಮೊದಲ ಬಾರಿಗೆ ಸಿನಿಮಾ ನಿರ್ದೇಶನಕ್ಕೆ ಕೈ ಹಾಕಿದ್ದಾರೆ. ಸಿನಿಮಾಕ್ಕೆ ‘45’ ಎಂದು ಹೆಸರಿಡಲಾಗಿದ್ದು, ಸಿನಿಮಾದಲ್ಲಿ ಶಿವರಾಜ್ ಕುಮಾರ್, ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾಕ್ಕೆ ಅರ್ಜುನ್ ಜನ್ಯ ಅವರೇ ಸಂಗೀತ ನೀಡಿದ್ದಾರೆ. ಸಿನಿಮಾವನ್ನು ರಮೇಶ್ ರೆಡ್ಡಿ ಅವರು ಸೃಜಾ ಪ್ರೊಡಕ್ಷನ್ ಹೌಸ್​ನಿಂದ ನಿರ್ಮಾಣ ಮಾಡುತ್ತಿದ್ದಾರೆ. ಕೆಲವೇ ದಿನಗಳಲ್ಲಿ ಶಿವರಾಜ್ ಕುಮಾರ್ ನಟನೆಯ ‘ಭೈರತಿ ರಣಗಲ್’ ಸಿನಿಮಾ ಬಿಡುಗಡೆ ಆಗಲಿದ್ದು, ಆ ಸಿನಿಮಾದ ಬಿಡುಗಡೆ ಬಳಿಕ ಶಿವಣ್ಣನ ಹೊಸ ಸಿನಿಮಾ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!