AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಖತ್ ಗಮ್ಮತ್ತು; ಅನುಶ್ರೀ ಮದುವೆಯಲ್ಲಿ ‘ಬಾವ ಬಂದರು’ ಎಂದು ರೋಷನ್ ಕಾಲೆಳೆದ ರಾಜ್ ಬಿ. ಶೆಟ್ಟಿ

ರಾಜ್ ಬಿ ಶೆಟ್ಟಿ ಅವರು ಆ್ಯಂಕರ್ ಅನುಶ್ರೀ ರೋಷನ್ ಅವರ ಮದುವೆಗೆ ಹಾಜರಿ ಹಾಕಿದ್ದರು. ಅವರ ನೃತ್ಯ ಹಾಗೂ ಮೋಜಿನ ಕ್ಷಣಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಈ ವೇಳೆ ‘ಬಾವ ಬಂದರೋ’ ಹಾಡನ್ನು ಹಾಡಿದ್ದು ವಿಶೇಷ. ರಾಜ್ ಮತ್ತು ಅನುಶ್ರೀಯವರ ನಡುವಿನ ಉತ್ತಮ ಗೆಳೆತನವನ್ನು ಈ ವಿಡಿಯೋ ತೋರಿಸಿದೆ.

ಸಖತ್ ಗಮ್ಮತ್ತು; ಅನುಶ್ರೀ ಮದುವೆಯಲ್ಲಿ ‘ಬಾವ ಬಂದರು’ ಎಂದು ರೋಷನ್ ಕಾಲೆಳೆದ ರಾಜ್ ಬಿ. ಶೆಟ್ಟಿ
ಅನುಶ್ರೀ ವಿವಾಹದ ಫೋಟೋ
ರಾಜೇಶ್ ದುಗ್ಗುಮನೆ
|

Updated on: Aug 29, 2025 | 8:04 AM

Share

ರಾಜ್ ಬಿ. ಶೆಟ್ಟಿ (Raj B Shetty) ಹಾಗೂ ಅನುಶ್ರೀ ಮಧ್ಯೆ ಒಳ್ಳೆಯ ಗೆಳೆತನ ಇದೆ. ಇಬ್ಬರೂ ಮಂಗಳೂರು ಮೂಲದವರು. ಹೀಗಾಗಿ ಇವರ ಮಧ್ಯೆ ಒಳ್ಳೆಯ ಕನೆಕ್ಷನ್ ಬೆಳೆದಿದೆ. ಅನುಶ್ರೀ ಹಾಗೂ ರೋಷನ್ ವಿವಾಹಕ್ಕೆ ರಾಜ್ ಬಿ ಶೆಟ್ಟಿ ಅವರು ಆಗಮಿಸಿದ್ದರು. ಈ ವೇಳೆ ವಿವಿಧ ರೀತಿಯ ಸ್ಟೆಪ್ ಹಾಕಿದ್ದಾರೆ. ಅಲ್ಲದೆ, ಮಂಟಪದೊಳಗೆ ‘ಬಾವ ಬಂದರೋ’ ಹಾಡನ್ನು ಹಾಡಿ ರಾಜ್ ಅವರು ರೋಷನ್ ಕಾಲೆಳೆದಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಎಲ್ಲರೂ ಇದನ್ನು ಇಷ್ಟಪಟ್ಟಿದ್ದಾರೆ.

ರಾಜ್ ಅವರು ತುಂಬಾನೇ ಗಂಭೀರ ಸ್ವಭಾವದವರಲ್ಲ. ಅವರ ಗಂಭೀರತೆ ಕೇವಲ ಕೆಲಸದ ಮೇಲೆ ಮಾತ್ರ. ನಿಜ ಜೀವನದಲ್ಲಿ ಅವರು ಸಖಥ್ ಫನ್. ಅನುಶ್ರೀ ಕೂಡ ಇದೇ ಮನಸ್ಥಿತಿ ಹೊಂದಿದ್ದಾರೆ. ಇವರು ಒಟ್ಟಿಗೆ ಸೇರಿದರೆ ಅಲ್ಲಿ ನಗುವಿನ ಹೊಳೆ ಗ್ಯಾರಂಟಿ. ಇದು ಅನೇಕ ಬಾರಿ ಸಾಬೀತಾಗಿದೆ. ಆ್ಯಂಕರ್ ಅನುಶ್ರೀ ಮದುವೆಯಲ್ಲೂ ಇದು ಮುಂದುವರಿದಿದೆ.

ಇದನ್ನೂ ಓದಿ
Image
‘ಯಶ್ ಬಂದಾಗ ಇಡೀ ಸೆಟ್ ಸೈಲೆಂಟ್ ಆಗುತ್ತೆ’; ಬಾಲಿವುಡ್ ನಟ ಅಕ್ಷಯ್​ ಹೇಳಿಕೆ
Image
ಅಪರೂಪದಲ್ಲೇ ಅಪರೂಪದ ಫೋಟೋ ಹಂಚಿಕೊಂಡ ರಾಜ್ ಬಿ. ಶೆಟ್ಟಿ; ಇದರ ವಿಶೇಷತೆ ಏನು?
Image
Bigg Boss ಟೈಟಲ್​ನಲ್ಲಿ ಹೆಚ್ಚುವರಿ G ಏಕೆ? ಸಂಖ್ಯಾಶಾಸ್ತ್ರದ ಲೆಕ್ಕಾಚಾರ
Image
ಇಂದು ಆ್ಯಂಕರ್ ಅನುಶ್ರೀ ಮದುವೆ; ಮುಹೂರ್ತ, ವಿವಾಹದ ಬಗ್ಗೆ ಇಲ್ಲಿದೆ ವಿವರ

ರಾಜ್ ಅವರು ಅನುಶ್ರೀ ಮದುವೆಯಲ್ಲಿ ಕಾಣಿಸಿಕೊಂಡ ಫೋಟೋಗಳು ವೈರಲ್ ಆಗಿದ್ದವು. ಅದೇ ರೀತಿ ಅವರು ಮದುವೆಯಲ್ಲಿ ಸಖತ್ ಎಂಜಾಯ್ ಮಾಡಿದ್ದಾರೆ. ‘ಮೀಡಿಯಾ ಕಿಂಗ್’ ಹೆಸರಿನ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ರಾಜ್ ಅವರು ರೋಷನ್ ಜೊತೆ ಚೆನ್ನಾಗಿ ಬೆರೆತಿದ್ದಾರೆ.

ರೋಷನ್ ಮಾಧ್ಯಮಗಳ ಎದುರು ಬಂದಾಗ ಅಷ್ಟಾಗಿ ಮಾತನಾಡಿಲ್ಲ. ಇದಕ್ಕೆ ಇನ್ನೂ ಕೆಲ ಸಮಯ ಹಿಡಿಯಬಹುದು ಎಂದು ಫ್ಯಾನ್ಸ್ ಊಹಿಸಿದ್ದಾರೆ. ಅವರು ವಿವಾಹ ಮಂಟಪದಲ್ಲಿ ರಾಜ್ ಜೊತೆ ಚೆನ್ನಾಗಿ ಬೆರೆತಿದ್ದಾರೆ. ‘ಸು ಫ್ರಮ್ ಸೋ’ ಸಿನಿಮಾದ ‘ಬಾವ ಬಂದರೋ’ ಹಾಡನ್ನು ರಾಜ್ ಜೊತೆ ಅವರು ಕೂಡ ಹಾಡಿದ್ದಾರೆ ಅನ್ನೋದು ವಿಶೇಷ.

ಇದನ್ನೂ ಓದಿ: ಅಪರೂಪದಲ್ಲೇ ಅಪರೂಪದ ಫೋಟೋ ಹಂಚಿಕೊಂಡ ರಾಜ್ ಬಿ. ಶೆಟ್ಟಿ; ಇದರ ವಿಶೇಷತೆ ಏನು?

ಆಗಸ್ಟ್ 28ರಂದು ಬೆಂಗಳೂರಿನ ಹೊರವಲಯದಲ್ಲಿರುವ ಕಗ್ಗಲಿಪುರದಲ್ಲಿ ರೋಷನ್ ಮದುವೆ ಅದ್ದೂರಿಯಾಗಿ ನೆರವೇರಿದೆ. ಈ ವಿವಾಹಕ್ಕೆ ಅನೇಕ ಸೆಲೆಬ್ರಿಟಿಗಳು ಹಾಜರಿ ಹಾಕಿದ್ದರು. ಕುಟುಂಬದವರು, ಆಪ್ತರು ಮಾತ್ರ ಮದುವೆಗೆ ಬಂದಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ?
ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ?
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್