‘ಮಾರಿಗೆ ಬಿಡಿ ದಾರಿ’ ಟೋಬಿಯಲ್ಲಿ ರಾಜ್ ಬಿ ಶೆಟ್ಟಿಯ ರಕ್ತ-ಸಿಕ್ತ ಅವತಾರ

Raj B Shetty: ರಾಜ್ ಬಿ ಶೆಟ್ಟಿ ನಟನೆಯ ಹೊಸ ಸಿನಿಮಾ ಟೋಬಿಯ ಫಸ್ಟ್ ಲುಕ್ ಟೀಸರ್ ಬಿಡುಗಡೆ ಆಗಿದೆ.

'ಮಾರಿಗೆ ಬಿಡಿ ದಾರಿ' ಟೋಬಿಯಲ್ಲಿ ರಾಜ್ ಬಿ ಶೆಟ್ಟಿಯ ರಕ್ತ-ಸಿಕ್ತ ಅವತಾರ
ಟೋಬಿ
Follow us
|

Updated on: Jun 29, 2023 | 5:50 PM

ರಾಜ್ ಬಿ ಶೆಟ್ಟಿ (Raj B Shetty) ನಟನೆಯ ಹೊಸ ಸಿನಿಮಾ ಟೋಬಿಯ (Toby) ಫಸ್ಟ್ ಲುಕ್ ಟೀಸರ್ ಇಂದು (ಜೂನ್ 29) ಬಿಡುಗಡೆ ಆಗಿದೆ. ಟೀಸರ್​ ತುಂಬೆಲ್ಲ ರಕ್ತದ ಕೆಂಪು ರಾಚುತ್ತಿದೆ. ಕಡು ಕೆಂಪು ಬಣ್ಣದ ರಾಜ್ ಬಿ ಶೆಟ್ಟಿಯ ಕಣ್ಣುಗಳು ಅಸೀಮ ದ್ವೇಷವನ್ನು ತುಂಬಿಕೊಂಡಂತೆ ತೋರುತ್ತಿದೆ. ಶೆಟ್ಟರ ಮೂಗಿನ ಹೊಳೆವ ಮೂಗುತಿಯ ಗುಟ್ಟು ಸಿನಿಮಾ ಬಿಡುಗಡೆಯಂದೇ ತಿಳಿಯಬೇಕಿದೆ. ಒಟ್ಟಾರೆ ಗರುಡ ಗಮನ ವೃಷಭ ವಾಹನ ಸಿನಿಮಾದ ಶಿವ ಪಾತ್ರದ ಅಪ್​ಡೇಟೆಡ್ ಆವೃತ್ತಿಯಂತೆ ಟೋಬಿಯಲ್ಲಿ ರಾಜ್ ಬಿ ಶೆಟ್ಟಿ ಕಾಣುತ್ತಿದ್ದಾರೆ.

ಟೀಸರ್ ಅನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ರಾಜ್ ಬಿ ಶೆಟ್ಟಿ, ‘ಕುರಿಯ ಕೆಣಕಿದ್ದಕ್ಕೆ ಧನ್ಯವಾದಗಳು. ಕುರಿ ಈಗ ಮಾರಿಯಾಗಿ ನಿಮ್ಮ ಮುಂದೆ, ಟೋಬಿ ಬಂದಿದ್ದಾನೆ…. ಮಾರಿಗೆ ದಾರಿ” ಎಂದಿದ್ದಾರೆ. ಮುಂದುವರೆದು, ಕೆಣಕಿದ ಕುರಿ ಈಗ ಮಾರಿಯಾಗಿದೆ. ಟೋಬಿ ಬಂದಾಗಿದೆ, ಮಾರಿಗೆ ದಾರಿ ಬಿಡಿ” ಎಂದು ಸಹ ಬರೆದುಕೊಂಡಿದ್ದಾರೆ.

ಶೆಟ್ಟರ ಟೋಬಿಯ ಫಸ್ಟ್​ ಲುಕ್​ನಲ್ಲಿ ಅವರ ಲುಕ್​ನಷ್ಟೆ ಗಮನ ಸೆಳೆಯುತ್ತಿರುವುದು ಹಿನ್ನೆಲೆ ಸಂಗೀತ. ಇಂಟೆನ್ಸ್ ಆದ ಹಿನ್ನೆಲೆ ಸಂಗೀತ ಕೆಲವೇ ಸೆಕೆಂಡ್​ಗಳ ಫಸ್ಟ್​ ಲುಕ್ ಟೀಸರ್ ನಲ್ಲಿದೆ. ಅಂದಹಾಗೆ ಸಿನಿಮಾಕ್ಕೆ ಸಂಗೀತ ನೀಡಿರುವುದು ಮಿಧುನ್ ಮುಕುಂದನ್. ಈ ಸಿನಿಮಾವು ದ್ವೇಷ ತೀರಿಕೊಳ್ಳುವ ಒಬ್ಬ ಸಾಮಾನ್ಯನ ಕತೆಯನ್ನು ಒಳಗೊಂಡಿದೆ. ಶೆಟ್ಟರ ಈ ಸಿನಿಮಾದಲ್ಲಿ ಮೊದಲ ಬಾರಿಗೆ ಆಕ್ಷನ್ ದೃಶ್ಯಗಳು ಇರಲಿವೆ ಎನ್ನಲಾಗುತ್ತಿದೆ.

ಇದನ್ನೂ ಓದಿ:ಚಿತ್ರೀಕರಣಕ್ಕೆ ಮುಂಚೆಯೇ ಶಿವಣ್ಣ, ಉಪ್ಪಿ, ರಾಜ್ ಬಿ ಶೆಟ್ಟಿಗೆ ಸಿನಿಮಾ ತೋರಿಸಿದ ಅರ್ಜುನ್ ಜನ್ಯ

ರಾಜ್ ಬಿ ಶೆಟ್ಟಿಯವರೇ ಕತೆ, ಚಿತ್ರಕತೆಯನ್ನು ಈ ಸಿನಿಮಾಕ್ಕೆ ಬರೆದಿದ್ದು ನಿರ್ದೇಶನದ ಜವಾಬ್ದಾರಿಯನ್ನು ತಮ್ಮದೇ ತಂಡದ ಬಾಸಿಲ್​ಗೆ ನೀಡಿದ್ದಾರೆ. ಸಿನಿಮಾದಲ್ಲಿ ಚೈತ್ರ ಆಚಾರ್ ಹಾಗೂ ಸಂಯುಕ್ತಾ ಹೊರನಾಡು ನಾಯಕಿಯರಾಗಿದ್ದಾರೆ. ಸಿನಿಮಾವನ್ನು ರಾಜ್ ಬಿ ಶೆಟ್ಟಿಯವರ ಲೈಟರ್ ಬುದ್ಧ ಫಿಲಮ್ಸ್ ಹಾಗೂ ಅಗಸ್ತ್ಯ ಫಿಲಮ್ಸ್ ಒಟ್ಟಾಗಿ ನಿರ್ಮಾಣ ಮಾಡುತ್ತಿದೆ. ಸಿನಿಮಾದ ಮೇಲೆ ಭರಪೂರ ನಿರೀಕ್ಷೆಯನ್ನು ಶೆಟ್ಟರು ಇರಿಸಿಕೊಂಡಿದ್ದಾರೆ. ಸಿನಿಮಾ ಆಗಸ್ಟ್ 25ಕ್ಕೆ ತೆರೆಗೆ ಬರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್