AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಾರಿಗೆ ಬಿಡಿ ದಾರಿ’ ಟೋಬಿಯಲ್ಲಿ ರಾಜ್ ಬಿ ಶೆಟ್ಟಿಯ ರಕ್ತ-ಸಿಕ್ತ ಅವತಾರ

Raj B Shetty: ರಾಜ್ ಬಿ ಶೆಟ್ಟಿ ನಟನೆಯ ಹೊಸ ಸಿನಿಮಾ ಟೋಬಿಯ ಫಸ್ಟ್ ಲುಕ್ ಟೀಸರ್ ಬಿಡುಗಡೆ ಆಗಿದೆ.

'ಮಾರಿಗೆ ಬಿಡಿ ದಾರಿ' ಟೋಬಿಯಲ್ಲಿ ರಾಜ್ ಬಿ ಶೆಟ್ಟಿಯ ರಕ್ತ-ಸಿಕ್ತ ಅವತಾರ
ಟೋಬಿ
ಮಂಜುನಾಥ ಸಿ.
|

Updated on: Jun 29, 2023 | 5:50 PM

Share

ರಾಜ್ ಬಿ ಶೆಟ್ಟಿ (Raj B Shetty) ನಟನೆಯ ಹೊಸ ಸಿನಿಮಾ ಟೋಬಿಯ (Toby) ಫಸ್ಟ್ ಲುಕ್ ಟೀಸರ್ ಇಂದು (ಜೂನ್ 29) ಬಿಡುಗಡೆ ಆಗಿದೆ. ಟೀಸರ್​ ತುಂಬೆಲ್ಲ ರಕ್ತದ ಕೆಂಪು ರಾಚುತ್ತಿದೆ. ಕಡು ಕೆಂಪು ಬಣ್ಣದ ರಾಜ್ ಬಿ ಶೆಟ್ಟಿಯ ಕಣ್ಣುಗಳು ಅಸೀಮ ದ್ವೇಷವನ್ನು ತುಂಬಿಕೊಂಡಂತೆ ತೋರುತ್ತಿದೆ. ಶೆಟ್ಟರ ಮೂಗಿನ ಹೊಳೆವ ಮೂಗುತಿಯ ಗುಟ್ಟು ಸಿನಿಮಾ ಬಿಡುಗಡೆಯಂದೇ ತಿಳಿಯಬೇಕಿದೆ. ಒಟ್ಟಾರೆ ಗರುಡ ಗಮನ ವೃಷಭ ವಾಹನ ಸಿನಿಮಾದ ಶಿವ ಪಾತ್ರದ ಅಪ್​ಡೇಟೆಡ್ ಆವೃತ್ತಿಯಂತೆ ಟೋಬಿಯಲ್ಲಿ ರಾಜ್ ಬಿ ಶೆಟ್ಟಿ ಕಾಣುತ್ತಿದ್ದಾರೆ.

ಟೀಸರ್ ಅನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ರಾಜ್ ಬಿ ಶೆಟ್ಟಿ, ‘ಕುರಿಯ ಕೆಣಕಿದ್ದಕ್ಕೆ ಧನ್ಯವಾದಗಳು. ಕುರಿ ಈಗ ಮಾರಿಯಾಗಿ ನಿಮ್ಮ ಮುಂದೆ, ಟೋಬಿ ಬಂದಿದ್ದಾನೆ…. ಮಾರಿಗೆ ದಾರಿ” ಎಂದಿದ್ದಾರೆ. ಮುಂದುವರೆದು, ಕೆಣಕಿದ ಕುರಿ ಈಗ ಮಾರಿಯಾಗಿದೆ. ಟೋಬಿ ಬಂದಾಗಿದೆ, ಮಾರಿಗೆ ದಾರಿ ಬಿಡಿ” ಎಂದು ಸಹ ಬರೆದುಕೊಂಡಿದ್ದಾರೆ.

ಶೆಟ್ಟರ ಟೋಬಿಯ ಫಸ್ಟ್​ ಲುಕ್​ನಲ್ಲಿ ಅವರ ಲುಕ್​ನಷ್ಟೆ ಗಮನ ಸೆಳೆಯುತ್ತಿರುವುದು ಹಿನ್ನೆಲೆ ಸಂಗೀತ. ಇಂಟೆನ್ಸ್ ಆದ ಹಿನ್ನೆಲೆ ಸಂಗೀತ ಕೆಲವೇ ಸೆಕೆಂಡ್​ಗಳ ಫಸ್ಟ್​ ಲುಕ್ ಟೀಸರ್ ನಲ್ಲಿದೆ. ಅಂದಹಾಗೆ ಸಿನಿಮಾಕ್ಕೆ ಸಂಗೀತ ನೀಡಿರುವುದು ಮಿಧುನ್ ಮುಕುಂದನ್. ಈ ಸಿನಿಮಾವು ದ್ವೇಷ ತೀರಿಕೊಳ್ಳುವ ಒಬ್ಬ ಸಾಮಾನ್ಯನ ಕತೆಯನ್ನು ಒಳಗೊಂಡಿದೆ. ಶೆಟ್ಟರ ಈ ಸಿನಿಮಾದಲ್ಲಿ ಮೊದಲ ಬಾರಿಗೆ ಆಕ್ಷನ್ ದೃಶ್ಯಗಳು ಇರಲಿವೆ ಎನ್ನಲಾಗುತ್ತಿದೆ.

ಇದನ್ನೂ ಓದಿ:ಚಿತ್ರೀಕರಣಕ್ಕೆ ಮುಂಚೆಯೇ ಶಿವಣ್ಣ, ಉಪ್ಪಿ, ರಾಜ್ ಬಿ ಶೆಟ್ಟಿಗೆ ಸಿನಿಮಾ ತೋರಿಸಿದ ಅರ್ಜುನ್ ಜನ್ಯ

ರಾಜ್ ಬಿ ಶೆಟ್ಟಿಯವರೇ ಕತೆ, ಚಿತ್ರಕತೆಯನ್ನು ಈ ಸಿನಿಮಾಕ್ಕೆ ಬರೆದಿದ್ದು ನಿರ್ದೇಶನದ ಜವಾಬ್ದಾರಿಯನ್ನು ತಮ್ಮದೇ ತಂಡದ ಬಾಸಿಲ್​ಗೆ ನೀಡಿದ್ದಾರೆ. ಸಿನಿಮಾದಲ್ಲಿ ಚೈತ್ರ ಆಚಾರ್ ಹಾಗೂ ಸಂಯುಕ್ತಾ ಹೊರನಾಡು ನಾಯಕಿಯರಾಗಿದ್ದಾರೆ. ಸಿನಿಮಾವನ್ನು ರಾಜ್ ಬಿ ಶೆಟ್ಟಿಯವರ ಲೈಟರ್ ಬುದ್ಧ ಫಿಲಮ್ಸ್ ಹಾಗೂ ಅಗಸ್ತ್ಯ ಫಿಲಮ್ಸ್ ಒಟ್ಟಾಗಿ ನಿರ್ಮಾಣ ಮಾಡುತ್ತಿದೆ. ಸಿನಿಮಾದ ಮೇಲೆ ಭರಪೂರ ನಿರೀಕ್ಷೆಯನ್ನು ಶೆಟ್ಟರು ಇರಿಸಿಕೊಂಡಿದ್ದಾರೆ. ಸಿನಿಮಾ ಆಗಸ್ಟ್ 25ಕ್ಕೆ ತೆರೆಗೆ ಬರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ