AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಾರಿಗೆ ಬಿಡಿ ದಾರಿ’ ಟೋಬಿಯಲ್ಲಿ ರಾಜ್ ಬಿ ಶೆಟ್ಟಿಯ ರಕ್ತ-ಸಿಕ್ತ ಅವತಾರ

Raj B Shetty: ರಾಜ್ ಬಿ ಶೆಟ್ಟಿ ನಟನೆಯ ಹೊಸ ಸಿನಿಮಾ ಟೋಬಿಯ ಫಸ್ಟ್ ಲುಕ್ ಟೀಸರ್ ಬಿಡುಗಡೆ ಆಗಿದೆ.

'ಮಾರಿಗೆ ಬಿಡಿ ದಾರಿ' ಟೋಬಿಯಲ್ಲಿ ರಾಜ್ ಬಿ ಶೆಟ್ಟಿಯ ರಕ್ತ-ಸಿಕ್ತ ಅವತಾರ
ಟೋಬಿ
ಮಂಜುನಾಥ ಸಿ.
|

Updated on: Jun 29, 2023 | 5:50 PM

Share

ರಾಜ್ ಬಿ ಶೆಟ್ಟಿ (Raj B Shetty) ನಟನೆಯ ಹೊಸ ಸಿನಿಮಾ ಟೋಬಿಯ (Toby) ಫಸ್ಟ್ ಲುಕ್ ಟೀಸರ್ ಇಂದು (ಜೂನ್ 29) ಬಿಡುಗಡೆ ಆಗಿದೆ. ಟೀಸರ್​ ತುಂಬೆಲ್ಲ ರಕ್ತದ ಕೆಂಪು ರಾಚುತ್ತಿದೆ. ಕಡು ಕೆಂಪು ಬಣ್ಣದ ರಾಜ್ ಬಿ ಶೆಟ್ಟಿಯ ಕಣ್ಣುಗಳು ಅಸೀಮ ದ್ವೇಷವನ್ನು ತುಂಬಿಕೊಂಡಂತೆ ತೋರುತ್ತಿದೆ. ಶೆಟ್ಟರ ಮೂಗಿನ ಹೊಳೆವ ಮೂಗುತಿಯ ಗುಟ್ಟು ಸಿನಿಮಾ ಬಿಡುಗಡೆಯಂದೇ ತಿಳಿಯಬೇಕಿದೆ. ಒಟ್ಟಾರೆ ಗರುಡ ಗಮನ ವೃಷಭ ವಾಹನ ಸಿನಿಮಾದ ಶಿವ ಪಾತ್ರದ ಅಪ್​ಡೇಟೆಡ್ ಆವೃತ್ತಿಯಂತೆ ಟೋಬಿಯಲ್ಲಿ ರಾಜ್ ಬಿ ಶೆಟ್ಟಿ ಕಾಣುತ್ತಿದ್ದಾರೆ.

ಟೀಸರ್ ಅನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ರಾಜ್ ಬಿ ಶೆಟ್ಟಿ, ‘ಕುರಿಯ ಕೆಣಕಿದ್ದಕ್ಕೆ ಧನ್ಯವಾದಗಳು. ಕುರಿ ಈಗ ಮಾರಿಯಾಗಿ ನಿಮ್ಮ ಮುಂದೆ, ಟೋಬಿ ಬಂದಿದ್ದಾನೆ…. ಮಾರಿಗೆ ದಾರಿ” ಎಂದಿದ್ದಾರೆ. ಮುಂದುವರೆದು, ಕೆಣಕಿದ ಕುರಿ ಈಗ ಮಾರಿಯಾಗಿದೆ. ಟೋಬಿ ಬಂದಾಗಿದೆ, ಮಾರಿಗೆ ದಾರಿ ಬಿಡಿ” ಎಂದು ಸಹ ಬರೆದುಕೊಂಡಿದ್ದಾರೆ.

ಶೆಟ್ಟರ ಟೋಬಿಯ ಫಸ್ಟ್​ ಲುಕ್​ನಲ್ಲಿ ಅವರ ಲುಕ್​ನಷ್ಟೆ ಗಮನ ಸೆಳೆಯುತ್ತಿರುವುದು ಹಿನ್ನೆಲೆ ಸಂಗೀತ. ಇಂಟೆನ್ಸ್ ಆದ ಹಿನ್ನೆಲೆ ಸಂಗೀತ ಕೆಲವೇ ಸೆಕೆಂಡ್​ಗಳ ಫಸ್ಟ್​ ಲುಕ್ ಟೀಸರ್ ನಲ್ಲಿದೆ. ಅಂದಹಾಗೆ ಸಿನಿಮಾಕ್ಕೆ ಸಂಗೀತ ನೀಡಿರುವುದು ಮಿಧುನ್ ಮುಕುಂದನ್. ಈ ಸಿನಿಮಾವು ದ್ವೇಷ ತೀರಿಕೊಳ್ಳುವ ಒಬ್ಬ ಸಾಮಾನ್ಯನ ಕತೆಯನ್ನು ಒಳಗೊಂಡಿದೆ. ಶೆಟ್ಟರ ಈ ಸಿನಿಮಾದಲ್ಲಿ ಮೊದಲ ಬಾರಿಗೆ ಆಕ್ಷನ್ ದೃಶ್ಯಗಳು ಇರಲಿವೆ ಎನ್ನಲಾಗುತ್ತಿದೆ.

ಇದನ್ನೂ ಓದಿ:ಚಿತ್ರೀಕರಣಕ್ಕೆ ಮುಂಚೆಯೇ ಶಿವಣ್ಣ, ಉಪ್ಪಿ, ರಾಜ್ ಬಿ ಶೆಟ್ಟಿಗೆ ಸಿನಿಮಾ ತೋರಿಸಿದ ಅರ್ಜುನ್ ಜನ್ಯ

ರಾಜ್ ಬಿ ಶೆಟ್ಟಿಯವರೇ ಕತೆ, ಚಿತ್ರಕತೆಯನ್ನು ಈ ಸಿನಿಮಾಕ್ಕೆ ಬರೆದಿದ್ದು ನಿರ್ದೇಶನದ ಜವಾಬ್ದಾರಿಯನ್ನು ತಮ್ಮದೇ ತಂಡದ ಬಾಸಿಲ್​ಗೆ ನೀಡಿದ್ದಾರೆ. ಸಿನಿಮಾದಲ್ಲಿ ಚೈತ್ರ ಆಚಾರ್ ಹಾಗೂ ಸಂಯುಕ್ತಾ ಹೊರನಾಡು ನಾಯಕಿಯರಾಗಿದ್ದಾರೆ. ಸಿನಿಮಾವನ್ನು ರಾಜ್ ಬಿ ಶೆಟ್ಟಿಯವರ ಲೈಟರ್ ಬುದ್ಧ ಫಿಲಮ್ಸ್ ಹಾಗೂ ಅಗಸ್ತ್ಯ ಫಿಲಮ್ಸ್ ಒಟ್ಟಾಗಿ ನಿರ್ಮಾಣ ಮಾಡುತ್ತಿದೆ. ಸಿನಿಮಾದ ಮೇಲೆ ಭರಪೂರ ನಿರೀಕ್ಷೆಯನ್ನು ಶೆಟ್ಟರು ಇರಿಸಿಕೊಂಡಿದ್ದಾರೆ. ಸಿನಿಮಾ ಆಗಸ್ಟ್ 25ಕ್ಕೆ ತೆರೆಗೆ ಬರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ