AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜನ್ ನಾಗೇಂದ್ರ ಸಂಗೀತ ನೀಡಿರುವ ಹಾಡುಗಳಿಗೆ ಹೊಸ ರೂಪ; ಯುವ ಜನತೆಗೂ ಇಷ್ಟ ಗೋಲ್ಡನ್​ ಗೀತೆಗಳು

Rajan Nagendra Songs: ರಾಜನ್ ಹುಟ್ಟುಹಬ್ಬದ ಸಂದರ್ಭದಲ್ಲಿ ಅವರ ಪುತ್ರ ಅನಂತ ರಾಜನ್, ‘ರಾಜನ್ ನಾಗೇಂದ್ರ ಗಾನಯಾನ’ ಎಂಬ ಹೆಸರಿನಲ್ಲಿ ತಮ್ಮ ಯೋಜನೆಯನ್ನು ಘೋಷಿಸಿದ್ದಾರೆ. ಆ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ರಾಜನ್ ನಾಗೇಂದ್ರ ಸಂಗೀತ ನೀಡಿರುವ ಹಾಡುಗಳಿಗೆ ಹೊಸ ರೂಪ; ಯುವ ಜನತೆಗೂ ಇಷ್ಟ ಗೋಲ್ಡನ್​ ಗೀತೆಗಳು
ಅನಂತ ರಾಜನ್ ಸುದ್ದಿಗೋಷ್ಠಿ
Follow us
ಮದನ್​ ಕುಮಾರ್​
|

Updated on: May 30, 2023 | 2:28 PM

ಸ್ಯಾಂಡಲ್​ವುಡ್​ನ ಖ್ಯಾತ ಸಂಗೀತ ನಿರ್ದೇಶಕ ರಾಜನ್ (ರಾಜನ್ ನಾಗೇಂದ್ರ) ಅವರು ಸಂಗೀತ ಕ್ಷೇತ್ರದಲ್ಲಿ ಹೊಸ ಪ್ರತಿಭೆಗಳನ್ನು ಸಂಗೀತಗಾರರನ್ನಾಗಿ ಪರಿಚಯಿಸುವುದಕ್ಕಾಗಿ ‘ಸಪ್ತ ಸ್ವರಾಂಜಲಿ ಇನ್ಸ್​ಟಿಟ್ಯೂಟ್ ಆಫ್ ಮ್ಯೂಸಿಕ್’ ಎಂಬ ಸಂಸ್ಥೆಯನ್ನು ಆರಂಭಿಸಿದ್ದರು. ಈ ಸಂಸ್ಥೆಯಲ್ಲಿ ಕಲಿತಿರುವ ಅನೇಕರು ಇಂದು ಸಂಗೀತ (Movie) ಕ್ಷೇತ್ರದಲ್ಲಿ ಕಲಾವಿದರಾಗಿ ಗುರುತಿಸಿಕೊಂಡಿದ್ದಾರೆ. ಈಗ ರಾಜನ್ ಅವರ ಪುತ್ರ ಅನಂತ ರಾಜನ್, ‘ರಾಜನ್ ನಾಗೇಂದ್ರ ಟ್ರಸ್ಟ್‌’ ವತಿಯಿಂದ ರಾಜನ್ ನಾಗೇಂದ್ರ (Rajan Nagendra) ಅವರ ಗೀತೆಗಳಿಗೆ ಹೊಸರೂಪ ನೀಡಿ ಕೇಳುಗರ ಮುಂದೆ ತರುವ ಪ್ರಯತ್ನದಲ್ಲಿದ್ದಾರೆ. ಅಂದಹಾಗೆ, ರಾಜನ್ ಹುಟ್ಟುಹಬ್ಬದ ಸಂದರ್ಭದಲ್ಲಿ ಅವರ ಪುತ್ರ ಅನಂತ ರಾಜನ್, ‘ರಾಜನ್ ನಾಗೇಂದ್ರ ಗಾನಯಾನ’ ಎಂಬ ಹೆಸರಿನಲ್ಲಿ ತಮ್ಮ ಯೋಜನೆಯನ್ನು ಘೋಷಿಸಿದ್ದಾರೆ. ಆ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಇತ್ತೀಚೆಗೆ ನಡೆದ ಸುದ್ದಿಗೋಷ್ಠಿಯಲ್ಲಿ ಅನಂತ ರಾಜನ್ ಮಾತನಾಡಿದರು. ‘ಕನ್ನಡದಿಂದ ಸಂಗೀತ ಲೋಕಕ್ಕೆ ಹೊಸ ಪ್ರತಿಭೆಗಳು ಬರಬೇಕು ಎಂಬ ಆಶಯದಿಂದ ನಮ್ಮ ತಂದೆ ರಾಜನ್ ಬದುಕಿರುವಾಗಲೇ ‘ಸಪ್ತ ಸ್ವರಾಂಜಲಿ’ ಎಂಬ ಸಂಗೀತ ಸಂಸ್ಥೆಯನ್ನು ಸ್ಥಾಪಿಸಿದರು. ಈ ಸಂಸ್ಥೆಯಿಂದ ಈಗಾಗಲೇ ಅನೇಕ ಪ್ರತಿಭೆಗಳು ಕಲಾವಿದರಾಗಿ ಸಂಗೀತ ಲೋಕಕ್ಕೆ ಪರಿಚಯವಾಗಿದ್ದಾರೆ. ಇನ್ನು ಕನ್ನಡ ಸಿನಿಮಾ ಸಂಗೀತದಲ್ಲಿ ರಾಜನ್- ನಾಗೇಂದ್ರ ಅವರ ಹಾಡುಗಳು ಚಿನ್ನ ಇದ್ದಂತೆ. ಹಳೆಯದಾದರೂ ಚಿನ್ನಕ್ಕೆ ಇರುವ ಬೆಲೆ ಇದ್ದೇ ಇರುತ್ತದೆ. ಹಳೆಯ ಚಿನ್ನವನ್ನು ಪಾಲಿಶ್ ಮಾಡಿ ಮತ್ತೆ ಬಳಸುವಂತೆ, ರಾಜನ್ ನಾಗೇಂದ್ರ ಅವರ ಈ ಗೋಲ್ಡನ್ ಹಾಡುಗಳನ್ನು ಇಂದಿನ ಕೇಳುಗರಿಗೆ ಇಷ್ಟವಾಗುವಂತೆ, ಹೊಸ ರೂಪದಲ್ಲಿ ಮತ್ತೆ ತರುತ್ತಿದ್ದೇವೆ’ಎಂದು ಅವರು ಹೇಳಿದರು.

ಇದನ್ನೂ ಓದಿ: ಪ್ರತಿ ಬಾರಿ ಕೇಳುವಾಗಲೂ ಕನ್ನಡಿಗರಿಗೆ ರೋಮಾಂಚನ ನೀಡುವ ಅದ್ಭುತ ಚಿತ್ರಗೀತೆಗಳಿವು

‘ನಾನು ನನ್ನ ಶಾಲಾ ದಿನಗಳಿಂದಲೇ ತಂದೆಯವರ ಬಹುತೇಕ ಮ್ಯೂಸಿಕ್ ರೆಕಾರ್ಡಿಂಗ್‌ಗಳನ್ನು ಹತ್ತಿರದಿಂದ ನೋಡಿದ್ದೆ. ಶಾಲೆಯಿಂದ ನೇರವಾಗಿ ರೆಕಾರ್ಡಿಂಗ್ ಸ್ಟುಡಿಯೋಗೆ ಹೋಗುತ್ತಿದ್ದೆ. ಹಾಗಾಗಿ ಅವರು ಮಾಡಿರುವ ಬಹುತೇಕ ಹಾಡುಗಳ ರೆಕಾರ್ಡಿಂಗ್ ಬಗ್ಗೆ ನನಗೆ ಅರಿವಿದೆ. ತುಂಬ ವೃತ್ತಿಪರವಾಗಿ ರೆಕಾರ್ಡಿಂಗ್ ಕೆಲಸ ಮಾಡುತ್ತಿದ್ದರು’ ಎಂದಿದ್ದಾರೆ ಅನಂತ ರಾಜನ್.

ಇದನ್ನೂ ಓದಿ: ಗಂಧರ್ವ ಗಾಯಕಿ ಪಿ.ಸುಶೀಲರಿಗೆ 85ನೇ ಹುಟ್ಟುಹಬ್ಬದ ಸಂಭ್ರಮ!

‘ತಂದೆಯ ನಿಧನದ ನಂತರ ಅವರ ಕೆಲಸವನ್ನು ಟ್ರಸ್ಟ್‌ ಮೂಲಕ ನಾವು ಮಾಡಲು ಮುಂದಾದೆವು. ಈಗಾಗಲೇ ರಾಜನ್ ನಾಗೇಂದ್ರ ಅವರ ಒಂದಷ್ಟು ಹಳೆಯ ಹಾಡುಗಳಿಗೆ ಹೊಸರೂಪ ಕೊಟ್ಟಿದ್ದೇವೆ. ರಾಜನ್ ಬದುಕಿದ್ದಾಗ ತಮ್ಮ ಸಂಸ್ಥೆಯಲ್ಲಿ ತರಬೇತಿ ಪಡೆದ ಪ್ರತಿಭೆಗಳಿಗೆ ವರ್ಷಕ್ಕೆ ಮೂರು ನಾಲ್ಕು ಕಾರ್ಯಕ್ರಮಗಳ ಮೂಲಕ ಅವರನ್ನು ಸಂಗೀತ ಲೋಕಕ್ಕೆ ಪರಿಚಯಿಸುವ ಕೆಲಸ ಮಾಡುತ್ತಿದ್ದರು. ಅದನ್ನು ಮುಂದುವರಿಸುವ ಕೆಲಸ ಟ್ರಸ್ಟ್‌ ಮೂಲಕ ನಾವು ಮಾಡುತ್ತಿದ್ದೇವೆ’ ಎಂದು ಅನಂತ ರಾಜನ್ ಮಾಹಿತಿ ಹಂಚಿಕೊಂಡರು.

ಇದನ್ನೂ ಓದಿ: ಮಗಳ ವಿಡಿಯೋಗೆ ಕನ್ನಡ ಹಾಡು ಹಾಕಿದ ಡೇವಿಡ್​ ವಾರ್ನರ್​; ಕನ್ನಡಿಗರು ಫುಲ್​ ಫಿದಾ

ಸುದ್ದಿಗೋಷ್ಠಿಯಲ್ಲಿ ಗುರುದತ್, ಲಹರಿ ವೇಲು, ಹಿರಿಯ ನಿರ್ದೇಶಕ ಭಾರ್ಗವ ಉಪಸ್ಥಿತರಿದ್ದರು. ‘ನನ್ನ ನಿರ್ದೇಶನದ 26 ಸಿನಿಮಾಗಳಿಗೆ ರಾಜನ್ ನಾಗೇಂದ್ರ ಸಂಗೀತ ನೀಡಿದ್ದಾರೆ. ಸುಮಾರು 38 ಸಿನಿಮಾಗಳಿಗೆ ಅವರೊಂದಿಗೆ ಕೆಲಸ ಮಾಡಿದ್ದೇನೆ. ಕನ್ನಡ ಚಿತ್ರರಂಗದ ತುಂಬಾ ಅಪರೂಪದ ಸದಭಿರುಚಿಯ ಸಂಗೀತ ನಿರ್ದೇಶಕರಲ್ಲಿ ರಾಜನ್-ನಾಗೇಂದ್ರ ಜೋಡಿ ಕೂಡ ಒಂದು. ಕೆಲಸದಲ್ಲಿ ದೊಡ್ಡ ಮಟ್ಟಕ್ಕೆ ಏರಿದವರು ರಾಜನ್. ಇಂದಿಗೂ ಪ್ರತಿದಿನ ಅವರ ಹಾಡುಗಳನ್ನು ಕೇಳುಗರು ಗುನುಗುತ್ತಿರುವುದೇ ಅವರ ಹಾಡುಗಳ ಜನಪ್ರಿಯತೆಗೆ ದೊಡ್ಡ ಸಾಕ್ಷಿ’ ಎಂದರು ಭಾರ್ಗವ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!