AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜನ್ ನಾಗೇಂದ್ರ ಸಂಗೀತ ನೀಡಿರುವ ಹಾಡುಗಳಿಗೆ ಹೊಸ ರೂಪ; ಯುವ ಜನತೆಗೂ ಇಷ್ಟ ಗೋಲ್ಡನ್​ ಗೀತೆಗಳು

Rajan Nagendra Songs: ರಾಜನ್ ಹುಟ್ಟುಹಬ್ಬದ ಸಂದರ್ಭದಲ್ಲಿ ಅವರ ಪುತ್ರ ಅನಂತ ರಾಜನ್, ‘ರಾಜನ್ ನಾಗೇಂದ್ರ ಗಾನಯಾನ’ ಎಂಬ ಹೆಸರಿನಲ್ಲಿ ತಮ್ಮ ಯೋಜನೆಯನ್ನು ಘೋಷಿಸಿದ್ದಾರೆ. ಆ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ರಾಜನ್ ನಾಗೇಂದ್ರ ಸಂಗೀತ ನೀಡಿರುವ ಹಾಡುಗಳಿಗೆ ಹೊಸ ರೂಪ; ಯುವ ಜನತೆಗೂ ಇಷ್ಟ ಗೋಲ್ಡನ್​ ಗೀತೆಗಳು
ಅನಂತ ರಾಜನ್ ಸುದ್ದಿಗೋಷ್ಠಿ
ಮದನ್​ ಕುಮಾರ್​
|

Updated on: May 30, 2023 | 2:28 PM

Share

ಸ್ಯಾಂಡಲ್​ವುಡ್​ನ ಖ್ಯಾತ ಸಂಗೀತ ನಿರ್ದೇಶಕ ರಾಜನ್ (ರಾಜನ್ ನಾಗೇಂದ್ರ) ಅವರು ಸಂಗೀತ ಕ್ಷೇತ್ರದಲ್ಲಿ ಹೊಸ ಪ್ರತಿಭೆಗಳನ್ನು ಸಂಗೀತಗಾರರನ್ನಾಗಿ ಪರಿಚಯಿಸುವುದಕ್ಕಾಗಿ ‘ಸಪ್ತ ಸ್ವರಾಂಜಲಿ ಇನ್ಸ್​ಟಿಟ್ಯೂಟ್ ಆಫ್ ಮ್ಯೂಸಿಕ್’ ಎಂಬ ಸಂಸ್ಥೆಯನ್ನು ಆರಂಭಿಸಿದ್ದರು. ಈ ಸಂಸ್ಥೆಯಲ್ಲಿ ಕಲಿತಿರುವ ಅನೇಕರು ಇಂದು ಸಂಗೀತ (Movie) ಕ್ಷೇತ್ರದಲ್ಲಿ ಕಲಾವಿದರಾಗಿ ಗುರುತಿಸಿಕೊಂಡಿದ್ದಾರೆ. ಈಗ ರಾಜನ್ ಅವರ ಪುತ್ರ ಅನಂತ ರಾಜನ್, ‘ರಾಜನ್ ನಾಗೇಂದ್ರ ಟ್ರಸ್ಟ್‌’ ವತಿಯಿಂದ ರಾಜನ್ ನಾಗೇಂದ್ರ (Rajan Nagendra) ಅವರ ಗೀತೆಗಳಿಗೆ ಹೊಸರೂಪ ನೀಡಿ ಕೇಳುಗರ ಮುಂದೆ ತರುವ ಪ್ರಯತ್ನದಲ್ಲಿದ್ದಾರೆ. ಅಂದಹಾಗೆ, ರಾಜನ್ ಹುಟ್ಟುಹಬ್ಬದ ಸಂದರ್ಭದಲ್ಲಿ ಅವರ ಪುತ್ರ ಅನಂತ ರಾಜನ್, ‘ರಾಜನ್ ನಾಗೇಂದ್ರ ಗಾನಯಾನ’ ಎಂಬ ಹೆಸರಿನಲ್ಲಿ ತಮ್ಮ ಯೋಜನೆಯನ್ನು ಘೋಷಿಸಿದ್ದಾರೆ. ಆ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಇತ್ತೀಚೆಗೆ ನಡೆದ ಸುದ್ದಿಗೋಷ್ಠಿಯಲ್ಲಿ ಅನಂತ ರಾಜನ್ ಮಾತನಾಡಿದರು. ‘ಕನ್ನಡದಿಂದ ಸಂಗೀತ ಲೋಕಕ್ಕೆ ಹೊಸ ಪ್ರತಿಭೆಗಳು ಬರಬೇಕು ಎಂಬ ಆಶಯದಿಂದ ನಮ್ಮ ತಂದೆ ರಾಜನ್ ಬದುಕಿರುವಾಗಲೇ ‘ಸಪ್ತ ಸ್ವರಾಂಜಲಿ’ ಎಂಬ ಸಂಗೀತ ಸಂಸ್ಥೆಯನ್ನು ಸ್ಥಾಪಿಸಿದರು. ಈ ಸಂಸ್ಥೆಯಿಂದ ಈಗಾಗಲೇ ಅನೇಕ ಪ್ರತಿಭೆಗಳು ಕಲಾವಿದರಾಗಿ ಸಂಗೀತ ಲೋಕಕ್ಕೆ ಪರಿಚಯವಾಗಿದ್ದಾರೆ. ಇನ್ನು ಕನ್ನಡ ಸಿನಿಮಾ ಸಂಗೀತದಲ್ಲಿ ರಾಜನ್- ನಾಗೇಂದ್ರ ಅವರ ಹಾಡುಗಳು ಚಿನ್ನ ಇದ್ದಂತೆ. ಹಳೆಯದಾದರೂ ಚಿನ್ನಕ್ಕೆ ಇರುವ ಬೆಲೆ ಇದ್ದೇ ಇರುತ್ತದೆ. ಹಳೆಯ ಚಿನ್ನವನ್ನು ಪಾಲಿಶ್ ಮಾಡಿ ಮತ್ತೆ ಬಳಸುವಂತೆ, ರಾಜನ್ ನಾಗೇಂದ್ರ ಅವರ ಈ ಗೋಲ್ಡನ್ ಹಾಡುಗಳನ್ನು ಇಂದಿನ ಕೇಳುಗರಿಗೆ ಇಷ್ಟವಾಗುವಂತೆ, ಹೊಸ ರೂಪದಲ್ಲಿ ಮತ್ತೆ ತರುತ್ತಿದ್ದೇವೆ’ಎಂದು ಅವರು ಹೇಳಿದರು.

ಇದನ್ನೂ ಓದಿ: ಪ್ರತಿ ಬಾರಿ ಕೇಳುವಾಗಲೂ ಕನ್ನಡಿಗರಿಗೆ ರೋಮಾಂಚನ ನೀಡುವ ಅದ್ಭುತ ಚಿತ್ರಗೀತೆಗಳಿವು

‘ನಾನು ನನ್ನ ಶಾಲಾ ದಿನಗಳಿಂದಲೇ ತಂದೆಯವರ ಬಹುತೇಕ ಮ್ಯೂಸಿಕ್ ರೆಕಾರ್ಡಿಂಗ್‌ಗಳನ್ನು ಹತ್ತಿರದಿಂದ ನೋಡಿದ್ದೆ. ಶಾಲೆಯಿಂದ ನೇರವಾಗಿ ರೆಕಾರ್ಡಿಂಗ್ ಸ್ಟುಡಿಯೋಗೆ ಹೋಗುತ್ತಿದ್ದೆ. ಹಾಗಾಗಿ ಅವರು ಮಾಡಿರುವ ಬಹುತೇಕ ಹಾಡುಗಳ ರೆಕಾರ್ಡಿಂಗ್ ಬಗ್ಗೆ ನನಗೆ ಅರಿವಿದೆ. ತುಂಬ ವೃತ್ತಿಪರವಾಗಿ ರೆಕಾರ್ಡಿಂಗ್ ಕೆಲಸ ಮಾಡುತ್ತಿದ್ದರು’ ಎಂದಿದ್ದಾರೆ ಅನಂತ ರಾಜನ್.

ಇದನ್ನೂ ಓದಿ: ಗಂಧರ್ವ ಗಾಯಕಿ ಪಿ.ಸುಶೀಲರಿಗೆ 85ನೇ ಹುಟ್ಟುಹಬ್ಬದ ಸಂಭ್ರಮ!

‘ತಂದೆಯ ನಿಧನದ ನಂತರ ಅವರ ಕೆಲಸವನ್ನು ಟ್ರಸ್ಟ್‌ ಮೂಲಕ ನಾವು ಮಾಡಲು ಮುಂದಾದೆವು. ಈಗಾಗಲೇ ರಾಜನ್ ನಾಗೇಂದ್ರ ಅವರ ಒಂದಷ್ಟು ಹಳೆಯ ಹಾಡುಗಳಿಗೆ ಹೊಸರೂಪ ಕೊಟ್ಟಿದ್ದೇವೆ. ರಾಜನ್ ಬದುಕಿದ್ದಾಗ ತಮ್ಮ ಸಂಸ್ಥೆಯಲ್ಲಿ ತರಬೇತಿ ಪಡೆದ ಪ್ರತಿಭೆಗಳಿಗೆ ವರ್ಷಕ್ಕೆ ಮೂರು ನಾಲ್ಕು ಕಾರ್ಯಕ್ರಮಗಳ ಮೂಲಕ ಅವರನ್ನು ಸಂಗೀತ ಲೋಕಕ್ಕೆ ಪರಿಚಯಿಸುವ ಕೆಲಸ ಮಾಡುತ್ತಿದ್ದರು. ಅದನ್ನು ಮುಂದುವರಿಸುವ ಕೆಲಸ ಟ್ರಸ್ಟ್‌ ಮೂಲಕ ನಾವು ಮಾಡುತ್ತಿದ್ದೇವೆ’ ಎಂದು ಅನಂತ ರಾಜನ್ ಮಾಹಿತಿ ಹಂಚಿಕೊಂಡರು.

ಇದನ್ನೂ ಓದಿ: ಮಗಳ ವಿಡಿಯೋಗೆ ಕನ್ನಡ ಹಾಡು ಹಾಕಿದ ಡೇವಿಡ್​ ವಾರ್ನರ್​; ಕನ್ನಡಿಗರು ಫುಲ್​ ಫಿದಾ

ಸುದ್ದಿಗೋಷ್ಠಿಯಲ್ಲಿ ಗುರುದತ್, ಲಹರಿ ವೇಲು, ಹಿರಿಯ ನಿರ್ದೇಶಕ ಭಾರ್ಗವ ಉಪಸ್ಥಿತರಿದ್ದರು. ‘ನನ್ನ ನಿರ್ದೇಶನದ 26 ಸಿನಿಮಾಗಳಿಗೆ ರಾಜನ್ ನಾಗೇಂದ್ರ ಸಂಗೀತ ನೀಡಿದ್ದಾರೆ. ಸುಮಾರು 38 ಸಿನಿಮಾಗಳಿಗೆ ಅವರೊಂದಿಗೆ ಕೆಲಸ ಮಾಡಿದ್ದೇನೆ. ಕನ್ನಡ ಚಿತ್ರರಂಗದ ತುಂಬಾ ಅಪರೂಪದ ಸದಭಿರುಚಿಯ ಸಂಗೀತ ನಿರ್ದೇಶಕರಲ್ಲಿ ರಾಜನ್-ನಾಗೇಂದ್ರ ಜೋಡಿ ಕೂಡ ಒಂದು. ಕೆಲಸದಲ್ಲಿ ದೊಡ್ಡ ಮಟ್ಟಕ್ಕೆ ಏರಿದವರು ರಾಜನ್. ಇಂದಿಗೂ ಪ್ರತಿದಿನ ಅವರ ಹಾಡುಗಳನ್ನು ಕೇಳುಗರು ಗುನುಗುತ್ತಿರುವುದೇ ಅವರ ಹಾಡುಗಳ ಜನಪ್ರಿಯತೆಗೆ ದೊಡ್ಡ ಸಾಕ್ಷಿ’ ಎಂದರು ಭಾರ್ಗವ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ