AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​ ನಿಧನ ವಾರ್ತೆ ಕೇಳಿ ರಜನಿಕಾಂತ್​ ಪ್ರತಿಕ್ರಿಯೆ ಹೇಗಿತ್ತು? ಶಿವರಾಜ್​ಕುಮಾರ್​ ವಿವರಿಸಿದ್ದು ಹೀಗೆ

ರಜನಿಕಾಂತ್​ ಹಾಗೂ ಡಾ. ರಾಜ್​ಕುಮಾರ್​ ನಡುವೆ ಒಳ್ಳೆಯ ಬಾಂಧವ್ಯ ಇತ್ತು. ರಾಜ್​ ಕುಟಂಬವನ್ನು ತುಂಬಾ ಹತ್ತಿರದಿಂದ ನೋಡಿದವರು ಅವರು. ಪುನೀತ್ ಕಂಡರೆ ರಜನಿಕಾಂತ್​ಗೆ ಎಲ್ಲಿಲ್ಲದ ಪ್ರೀತಿ.

ಪುನೀತ್​ ನಿಧನ ವಾರ್ತೆ ಕೇಳಿ ರಜನಿಕಾಂತ್​ ಪ್ರತಿಕ್ರಿಯೆ ಹೇಗಿತ್ತು? ಶಿವರಾಜ್​ಕುಮಾರ್​ ವಿವರಿಸಿದ್ದು ಹೀಗೆ
ರಜನಿ-ಶಿವರಾಜ್​ಕುಮಾರ್​
TV9 Web
| Edited By: |

Updated on:Nov 03, 2021 | 4:02 PM

Share

ಪುನೀತ್​ ರಾಜ್​ಕುಮಾರ್​ ನಿಧನ ಹೊಂದಿದ್ದಾರೆ ಎನ್ನುವ ವಿಚಾರವನ್ನು ಯಾರಿಂದಲೂ ನಂಬೋಕೆ ಸಾಧ್ಯವಾಗುತ್ತಿಲ್ಲ. ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಅವರು ತೊರೆದು ಹೋಗಿದ್ದಾರೆ. ಅನೇಕ ಸ್ಟಾರ್​​ಗಳು ಕೂಡ ಅವರ ಅಂತಿಮ ದರ್ಶನ ಪಡೆದು ಹೋಗಿದ್ದಾರೆ. ಇದು ಕನಸೋ ಅಥವಾ ನನಸೋ ಎನ್ನುವ ಪ್ರಶ್ನೆ ಅವರಲ್ಲೂ ಇದೆ. ಸೂಪರ್​ಸ್ಟಾರ್​ ರಜನಿಕಾಂತ್​ ಕೂಡ ಪುನೀತ್​ ಸಾವಿನ ಸುದ್ದಿ ಕೇಳಿ ಶಾಕ್​ಗೆ ಒಳಗಾಗಿದ್ದರು. ಈ ಬಗ್ಗೆ ಶಿವರಾಜ್​ಕುಮಾರ್​ ಮಾಹಿತಿ ನೀಡಿದ್ದಾರೆ.

ರಜನಿಕಾಂತ್​ ಹಾಗೂ ಡಾ. ರಾಜ್​ಕುಮಾರ್​ ನಡುವೆ ಒಳ್ಳೆಯ ಬಾಂಧವ್ಯ ಇತ್ತು. ರಾಜ್​ ಕುಟುಂಬವನ್ನು ತುಂಬಾ ಹತ್ತಿರದಿಂದ ನೋಡಿದವರು ಅವರು. ಪುನೀತ್ ಕಂಡರೆ ರಜನಿಕಾಂತ್​ಗೆ ಎಲ್ಲಿಲ್ಲದ ಪ್ರೀತಿ. ಈ ಮೊದಲು ಪುನೀತ್​ ಅವರನ್ನು ರಜನಿ ಹಾಡಿಹೊಗಳಿದ್ದರು. ಈ ವಿಡಿಯೋ ಕೂಡ ವೈರಲ್​ ಆಗಿತ್ತು. ಪುನೀತ್​ ಸಾಯುವ ದಿನ ರಜನಿಕಾಂತ್​ ಆಸ್ಪತ್ರೆಯಲ್ಲಿ ಇದ್ದರು. ರಜನಿಕಾಂತ್​ ಅವರಿಗೆ ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಸದ್ಯ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಈ ಕಾರಣಕ್ಕೆ ಪುನೀತ್​ ಅಂತಿಮ ದರ್ಶನ ಪಡೆಯೋಕೆ ಅವರಿಗೆ ಬರಲು ಸಾಧ್ಯವಾಗಿರಲಿಲ್ಲ. ರಜನಿಕಾಂತ್​ ರಿಯಾಕ್ಷನ್​ ಹೇಗಿತ್ತು ಎಂಬುದನ್ನು ಶಿವರಾಜ್​ಕುಮಾರ್​ ವಿವರಿಸಿದ್ದಾರೆ.

‘ರಜನಿಕಾಂತ್​ ಈಗಷ್ಟೇ ಆಸ್ಪತ್ರೆಯಿಂದ ಬಂದಿದ್ದಾರೆ. ಅವರ ಮಗಳು, ಪತ್ನಿ ಕರೆ ಮಾಡಿದ್ದರು. ಅವರಿಗೆ ನಂಬೋಕೆ ಆಗ್ತಿಲ್ಲ. ಅವರು ಚಿಕ್ಕ ವಯಸ್ಸಿಂದ ನನ್ನ ತಮ್ಮನನ್ನು ನೋಡಿಕೊಂಡು ಬಂದಿದ್ದಾರೆ. ರಜನಿಕಾಂತ್​ ಅವರ ಜತೆ ಮಾತನಾಡೋಕೆ ಆಗಿಲ್ಲ. ಈ ವಿಚಾರ ಕೇಳಿ ರಜನಿಕಾಂತ್​ ತುಂಬಾನೇ ನೊಂದುಕೊಂಡರಂತೆ. ಅಪ್ಪು ಬಗ್ಗೆ ಅವರಿಗೆ ವಿಶೇಷ ಪ್ರೀತಿ ಇತ್ತು. ಪುನೀತ್​ ಮಗು ಇದ್ದಾಗಿನಿಂದಲೂ ಅವರು ನೋಡಿದ್ದರು. ಹೀಗಾಗಿ ನೋವು ಜಾಸ್ತಿ’ ಎಂದಿದ್ದಾರೆ ಶಿವಣ್ಣ.

‘ದಾದಾಸಾಹೇಬ್​ ಫಾಲ್ಕೆ ಪ್ರಶಸ್ತಿ’ ಸ್ವೀಕರಿಸಿ ಮಾತನಾಡಿದ ರಜನಿಕಾಂತ್​ ಅವರು ತಮ್ಮ ಬೆಂಗಳೂರಿನ ಗೆಳಯ ರಾಜ್​ ಬಹದ್ದೂರ್​ ಅವರನ್ನು ನೆನಪು ಮಾಡಿಕೊಂಡಿದ್ದರು. ತಮ್ಮ ಗುರು ಕೆ. ಬಾಲಚಂದರ್​ ಹಾಗೂ ಅಭಿಮಾನಿಗಳಿಗೂ ಧನ್ಯವಾದ ಅರ್ಪಿಸಿದ್ದರು. ಪ್ರಸ್ತುತ ರಜನಿ ಅಭಿನಯದ ‘ಅಣ್ಣಾತೆ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ದೀಪಾವಳಿ ಹಬ್ಬದ ಪ್ರಯುಕ್ತ ನ.4ರಂದು ಈ ಚಿತ್ರ ರಿಲೀಸ್​ ಆಗಲಿದೆ.

ಇದನ್ನೂ ಓದಿ: ಕೆನ್ನೆಗೆ ಬಾರಿಸಿ ಸುದ್ದಿಯಾದ ಪ್ರಕಾಶ್ ರೈ; ನಟನ ಬೆಂಬಲಕ್ಕೆ ನಿಂತ ದಕ್ಷಿಣ ಭಾರತದ ಮಂದಿ

Rajinikanth: ರಜನಿಕಾಂತ್​ಗೆ ಹೃದಯದ ಸಮಸ್ಯೆ; ಆಸ್ಪತ್ರೆಗೆ ದಾಖಲಾಗಿರುವ ತಲೈವಾ ಆರೋಗ್ಯ ಸ್ಥಿತಿ ಈಗ ಹೇಗಿದೆ?

Published On - 2:42 pm, Wed, 3 November 21

Follow Us
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ