‘ವೈಕುಂಠ ಸಮಾರಾಧನೆ’: ಇದು ಹೊಸ ಕನ್ನಡ ಸಿನಿಮಾದ ಶೀರ್ಷಿಕೆ, ಪೋಸ್ಟರ್​!

ಬೇರೆಲ್ಲ ಸಿನಿಮಾಗಳು ಫಸ್ಟ್​ ಲುಕ್​ ಪೋಸ್ಟರ್​ ಬಿಡುಗಡೆ ಮಾಡುತ್ತವೆ. ಆದರೆ ‘ವೈಕುಂಠ ಸಮಾರಾಧನೆ’ ಸಿನಿಮಾದವರು ‘ಡೆತ್ ಲುಕ್ ಪೋಸ್ಟರ್’ ರಿಲೀಸ್​ ಮಾಡಿದ್ದಾರೆ. ವೈಕುಂಠ ಸಮಾರಾಧನೆ ಕಾರ್ಯದ ಆಮಂತ್ರಣ ಪತ್ರಿಕೆ ರೀತಿಯಲ್ಲೇ ಕಪ್ಪು-ಬಿಳುಪಿನಲ್ಲಿ ಇದು ವಿನ್ಯಾಸಗೊಂಡಿದೆ. ಜನನ, ಮರಣ ದಿನಾಂಕಗಳ ಶೈಲಿಯಲ್ಲಿ ಮುಹೂರ್ತ ಮತ್ತು ರಿಲೀಸ್ ದಿನಾಂಕಗಳ ಮಾಹಿತಿ ನೀಡಲಾಗಿದೆ.

‘ವೈಕುಂಠ ಸಮಾರಾಧನೆ’: ಇದು ಹೊಸ ಕನ್ನಡ ಸಿನಿಮಾದ ಶೀರ್ಷಿಕೆ, ಪೋಸ್ಟರ್​!
‘ವೈಕುಂಠ ಸಮಾರಾಧನೆ’ ಡೆತ್ ಲುಕ್ ಪೋಸ್ಟರ್
Follow us
|

Updated on: Aug 14, 2024 | 4:00 PM

ಕೇವಲ ಸಿನಿಮಾ ಮಾಡಿದರೆ ಸಾಲದು. ಅದನ್ನು ಜನರಿಗೆ ತಲುಪಿಸಲು ಹತ್ತಾರು ಬಗೆಯ ಕ್ರಿಯೇಟಿವಿಟಿ ಬೇಕಾಗುತ್ತದೆ. ಶೀರ್ಷಿಕೆಯಿಂದ ಶುಭಂ ತನಕ ಎಷ್ಟು ಹೊಸದಾಗಿ ಯೋಚಿಸಿದರೂ ಸಾಲದು. ಹಾಗಾಗಿ ನಿರ್ಮಾಪಕರು, ನಿರ್ದೇಶಕರು, ಕಲಾವಿದರು, ತಂತ್ರಜ್ಞರು ಹೊಸ ಹೊಸ ಐಡಿಯಾಗಳನ್ನು ಪ್ರಯತ್ನಿಸುತ್ತಲೇ ಇರುತ್ತಾರೆ. ಅದರಲ್ಲೂ ಜನರ ಗಮನ ಸೆಳೆಯುವಂತಹ ಶೀರ್ಷಿಕೆ ಹಾಗೂ ಪೋಸ್ಟರ್​ ತುಂಬ ಮುಖ್ಯವಾಗುತ್ತದೆ. ಈ ಹಿನ್ನೆಲೆಯಲ್ಲಿ ಹೊಸ ಚಿತ್ರತಂಡವೊಂದು ‘ವೈಕುಂಠ ಸಮಾರಾಧನೆ’ ಎಂಬ ಶೀರ್ಷಿಕೆಯಲ್ಲಿ ಸಿನಿಮಾ ಮಾಡಿದೆ. ಅದೇ ಥೀಮ್​ನಲ್ಲಿ ಪೋಸ್ಟರ್​ ಬಿಡುಗಡೆ ಮಾಡಿ ಅಚ್ಚರಿ ಮೂಡಿಸಿದೆ.

‘ವೈಕುಂಠ ಸಮಾರಾಧನೆ’ ಸಿನಿಮಾದ ಪೋಸ್ಟರ್​ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ವೃತ್ತಿಯಲ್ಲಿ ಅಡ್ವೋಕೇಟ್ ಆಗಿರುವ ರಜತ್ ಮೌರ್ಯ ಅವರು ಚಿತ್ರರಂಗದ ಬಗ್ಗೆ ಆಸಕ್ತಿ ಹೊಂದಿದ್ದಾರೆ. ಬಿಡುವಿನ ಸಮಯದಲ್ಲಿ ಅವರು ಅಭಿನಯ, ನಿರ್ದೇಶನ ಮುಂತಾದ ತರಬೇತಿ ಪಡೆದುಕೊಂಡು ಈಗ ಸಿನಿಮಾ ಕೆಲಸಕ್ಕೆ ಕೈ ಹಾಕಿದ್ದಾರೆ. ‘ವೈಕುಂಠ ಸಮಾರಾಧನೆ’ ಸಿನಿಮಾಗೆ ಅವರೇ ಹೀರೋ. ಜೊತೆಗೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಕೂಡ ಮಾಡುತ್ತಿದ್ದಾರೆ.

ಮಾಡೆಲ್ ಕೂಡ ಆಗಿರುವ ರಜತ್​ ಮೌರ್ಯ ಅವರು ಜಾಹಿರಾತುಗಳಲ್ಲಿ ಕಾಣಿಸಿಕೊಂಡು ಅನುಭವ ಪಡೆದಿದ್ದಾರೆ. ಐಪಿಎಲ್ ಪಂದ್ಯಗಳ ವೇಳೆ ಅವರ ಜಾಹೀರಾತುಗಳು ಪ್ರಸಾರ ಆಗಿವೆ. ಈ ಎಲ್ಲ ಅನುಭವಗಳ ಆಧಾರದಲ್ಲಿ ಅವರು ಹೀರೋ ಆಗಿ ಚಿತ್ರರಂಗಕ್ಕೆ ಎಂಟ್ರಿ ನೀಡುತ್ತಿದ್ದಾರೆ. ಕಲ್ಕಿ ಜಯಂತಿ ಶ್ರಾವಣ ಶನಿವಾರದ ಪ್ರಯುಕ್ತ ಈ ಸಿನಿಮಾದ ಪೋಸ್ಟರ್ ಬಿಡುಗಡೆ ಮಾಡಲಾಯಿತು. ‘ಗೇರ್‌ಗಲ್ ಫಿಲ್ಮ್ಸ್​’ ಬ್ಯಾನರ್ ಮೂಲಕ ಆಶಾ ಗೇರ್‌ಗಲ್ ಅವರು ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ.

ಇತರೆ ಚಿತ್ರತಂಡಗಳು ಫಸ್ಟ್​ ಲುಕ್​ ಪೋಸ್ಟರ್​ ರಿಲೀಸ್​ ಮಾಡುತ್ತವೆ. ಆದರೆ ‘ವೈಕುಂಠ ಸಮಾರಾಧನೆ’ ಚಿತ್ರದವರು ‘ಡೆತ್ ಲುಕ್ ಪೋಸ್ಟರ್’ ಬಿಡುಗಡೆ ಮಾಡಿದ್ದಾರೆ. ವೈಕುಂಠ ಸಮಾರಾಧನೆಯ ಆಮಂತ್ರಣ ಪತ್ರದ ಹಾಗೆಯೇ ಕಪ್ಪು-ಬಿಳುಪಿನ ವಿನ್ಯಾಸ ಇದರಲ್ಲಿದೆ. ಜನನ-ಮರಣ ದಿನಾಂಕಗಳ ಶೈಲಿಯಲ್ಲಿ ಮುಹೂರ್ತ ಹಾಗೂ ರಿಲೀಸ್ ಡೇಟ್​ಗಳ ಮಾಹಿತಿಯನ್ನು ನೀಡಲಾಗಿದೆ. ಸೋಶಿಯಲ್​ ಮೀಡಿಯಾದಲ್ಲಿ ಡೆತ್ ಲುಕ್ ಪೋಸ್ಟರ್ ವೈರಲ್ ಆಗಿದೆ. ಆ ಮೂಲಕ ಜನರ ಗಮನ ಸೆಳೆಯುವಲ್ಲಿ ಯಶಸ್ವಿ ಆಗಿದೆ.

‘ವೈಕುಂಠ ಸಮಾರಾಧನೆ’ ಸಿನಿಮಾದ ಪೋಸ್ಟರ್​ ಬಿಡುಗಡೆ ಕಾರ್ಯಕ್ರಮ

ರಿತ್ವಿಕ್‌ ಮುರಳಿಧರ್ ಅವರು ಈ ಸಿನಿಮಾಗೆ ಸಂಗೀತ ನೀಡುತ್ತಿದ್ದಾರೆ. ಛಾಯಾಗ್ರಹಣ ಹರ್ಷಿತ್ ಬಿ. ಗೌಡ ಅವರದ್ದು. ಕಾರ್ಯಕಾರಿ ನಿರ್ಮಾಪಕರಾಗಿ ನಾಗೇಂದ್ರ ಯಡಿಯಾಳ್ ಕೆಲಸ ಮಾಡುತ್ತಿದ್ದಾರೆ. ಆದರ್ಶ್‌ ಬೆಳ್ಳೂರು, ಸಿದ್ದಾನ್ ವಿಜಯ್, ದರ್ಶನ್‌ ಕುಮಾರ್, ನವೀನ್, ಸಚ್ಚಿನ್ ಅವರು ಡೈರೆಕ್ಷನ್​ ಟೀಮ್​ನಲ್ಲಿದ್ದಾರೆ. ಮಲೆನಾಡಿನಲ್ಲಿ ಶೇಕಡ 60ರಷ್ಟು ಹಾಗೂ ಬೆಂಗಳೂರು ಸುತ್ತಮತ್ತ ಇನ್ನುಳಿದ ದೃಶ್ಯಗಳ ಶೂಟಿಂಗ್​ ಮಾಡಲು ನಿರ್ಧರಿಸಲಾಗಿದೆ.

ಇದನ್ನೂ ಓದಿ: ಕನ್ನಡ ಚಿತ್ರರಂಗದಲ್ಲಿ ‘ತೂಫಾನ್​’ ಬರಲಿದೆ; ‘ತಡೆಯೋ ಪ್ರಯತ್ನ ಮಾಡಬೇಡಿ’ ಎಂದ ಟೀಮ್

ಪೋಸ್ಟರ್​ ರಿಲೀಸ್​ ಕಾರ್ಯಕ್ರಮಕ್ಕೆ ಅನೇಕ ಸ್ನೇಹಿತರು ಬಂದ ವಿಶ್​ ಮಾಡಿದರು. ಇತ್ತೀಚಿನ ದಿನಗಳಲ್ಲಿ ಗಮನ ಸೆಳೆದ ಬ್ಲಿಂಕ್, ಶಾಖಾಹಾರಿ, ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ, ಜಲಪಾತ, ಕೆರೆಬೇಟೆ, 4ಎನ್6 ಸಿನಿಮಾಗಳು ನಿರ್ಮಾಪಕರು, ನಿರ್ದೇಶಕರು ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿ ಶುಭ ಕೋರಿದರು. ‘ಹಾಸ್ಟಲ್ ಹುಡುಗರು ಬೇಕಾಗಿದ್ದಾರೆ’ ಖ್ಯಾತಿಯ ನಟ ಮಂಜುನಾಥ್ ಕೂಡ ಉಪಸ್ಥಿತರಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪ್ರಧಾನಿ ಮೋದಿ ಬಗ್ಗೆ ಅಪಾರ ಗೌರವ ಇದೆ ಎಂದ ಡಿಕೆ ಸುರೇಶ್
ಪ್ರಧಾನಿ ಮೋದಿ ಬಗ್ಗೆ ಅಪಾರ ಗೌರವ ಇದೆ ಎಂದ ಡಿಕೆ ಸುರೇಶ್
ಹೀಗೂ ಉಂಟು! ಸಾರಿಗೆ ಬಸ್ಸಿಗೂ ಗ್ರಾಮಸ್ಥರಿಂದ ಭಾವನಾತ್ಮಕ ಬೀಳ್ಕೊಡುಗೆ
ಹೀಗೂ ಉಂಟು! ಸಾರಿಗೆ ಬಸ್ಸಿಗೂ ಗ್ರಾಮಸ್ಥರಿಂದ ಭಾವನಾತ್ಮಕ ಬೀಳ್ಕೊಡುಗೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?