Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿನಯ್, ರಜತ್​ಗೆ ಹೆಚ್ಚಿದ ಸಂಕಷ್ಟ; ತಡರಾತ್ರಿ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್

ಬಿಗ್ ಬಾಸ್ ಮಾಜಿ ಸ್ಪರ್ಧಿಗಳು ರಜತ್ ಕಿಶನ್ ಮತ್ತು ವಿನಯ್ ಗೌಡ ಅವರು ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣಕ್ಕಾಗಿ ಬಂಧನಕ್ಕೊಳಗಾಗಿದ್ದಾರೆ. ಮಾರ್ಚ್ 25 ರಂದು ಬಂಧಿಸಲ್ಪಟ್ಟ ಅವರಿಗೆ ಒಂದು ದಿನದ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮಚ್ಚು ನಾಪತ್ತೆಯಾಗಿರುವುದರಿಂದ ಆರೋಪಿಗಳನ್ನು ಒಂದು ವಾರ ಪೊಲೀಸ್ ಕಸ್ಟಡಿಗೆ ಕೇಳುತ್ತಿದ್ದಾರೆ.

ವಿನಯ್, ರಜತ್​ಗೆ ಹೆಚ್ಚಿದ ಸಂಕಷ್ಟ; ತಡರಾತ್ರಿ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್
ವಿನಯ್-ರಜತ್
Follow us
ರಾಚಪ್ಪಾಜಿ ನಾಯ್ಕ್
| Updated By: ರಾಜೇಶ್ ದುಗ್ಗುಮನೆ

Updated on:Mar 26, 2025 | 7:08 AM

ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಬಿಗ್​ಬಾಸ್ ಮಾಜಿ ಸ್ಪರ್ಧಿಗಳಾದ ರಜತ್ ಕಿಶನ್ (Rajat Kishan) ಹಾಗೂ ವಿನಯ್​ ಗೌಡ ಅವರಿಗೆ ಸಂಕಷ್ಟ ಹೆಚ್ಚಿದೆ. ಮಾರ್ಚ್ 25ರ ರಾತ್ರಿ ಇಬ್ಬರನ್ನೂ ಕೋರಮಂಗಲದಲ್ಲಿರುವ 24ನೇ ಎಸಿಜೆಎಂ ಜಡ್ಜ್ ನಿವಾಸಕ್ಕೆ ಪೊಲೀಸರು ಕರೆದುಕೊಂಡು ಹೋದರು. ಈ ವೇಳೆ ಇಬ್ಬರಿಗೂ ಒಂದು ದಿನ ನ್ಯಾಯಾಂಗ ಬಂಧನ ನೀಡಿ ನ್ಯಾಯಾಧೀಶರು ಆದೇಶಿಸಿದರು. ಈ ಆದೇಶದ ಬೆನ್ನಲ್ಲೆ ಆರೋಪಿ ರಜತ್ ಪತ್ನಿ ಕಣ್ಣೀರು ಹಾಕಿದ್ದಾರೆ.

ರಾತ್ರಿ ಇಡೀ ಜೈಲಿನಲ್ಲಿ

ರಾತ್ರಿ ನ್ಯಾಯಾಧೀಶರು ವಿನಯ್ ಹಾಗೂ ರಜತ್​ಗೆ ನ್ಯಾಯಾಂಗ ಬಂಧನ ವಿಧಿಸಿದ ಬಳಿಕ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿದೆ. ರಾತ್ರಿ ಇಡೀ ಇಬ್ಬರೂ ಜೈಲಿನಲ್ಲಿ ಕಳೆದಿದ್ದು, ಇವರಿಗೆ ಸಂಕಷ್ಟ ಹೆಚ್ಚುವ ಸೂಚನೆ ಸಿಕ್ಕಿದೆ.

ಇಂದು ಮತ್ತೆ ನ್ಯಾಯಾಲಯದ ಮುಂದೆ

ಇಂದು (ಮಾರ್ಚ್​ 26) ಮತ್ತೆ ನ್ಯಾಯಾಲಯದ ಮುಂದೆ ಆರೋಪಿಗಳನ್ನು ಪೊಲೀಸರು ಹಾಜರುಪಡಿಸಲಿದ್ದಾರೆ. ಈ ವೇಳೆ ಒಂದು ವಾರ ಪೊಲೀಸ್ ಕಸ್ಟಡಿಗೆ ಕೊಡಿವಂತೆ ಪೊಲೀಸರು ಮನವಿ ಮಾಡಲಿದ್ದಾರೆ. ಇನ್ನೂ ವಿಚಾರಣೆ ಬಾಕಿ ಇದೆ. ಅಲ್ಲದೆ, ರೀಲ್ಸ್ ಮಾಡಲು ಬಳಕೆ ಮಾಡಿದ್ದ ಮಚ್ಚು ನಾಪತ್ತೆಯಾಗಿದೆ. ಹೀಗಾಗಿ, ಇದರ ಬಗ್ಗೆ ವಿಚಾರಣೆಯ ಅಗತ್ಯವಿದೆ ಎಂದು ಪೊಲೀಸರು ನ್ಯಾಯಾಧೀಶರಿಗೆ ಮನವರಿಕೆ ಮಾಡಿಕೊಡುವ ಆಲೋಚನೆಯಲ್ಲಿ ಇದ್ದಾರೆ.

ಇದನ್ನೂ ಓದಿ
Image
ಯಶ್​ನ ಪ್ರೀತಿಸುತ್ತಿದ್ದ ವಿಚಾರವನ್ನು ಈ ನಟಿಯರ ಬಳಿ ಹೇಳಿಕೊಂಡಿದ್ದ ರಾಧಿಕಾ
Image
ಪಿವಿಆರ್​ನಲ್ಲಿ ಸಿನಿಮಾ ಮಾತ್ರವಲ್ಲ, ಪ್ರದರ್ಶನ ಆಗಲಿದೆ ಐಪಿಎಲ್ ಮ್ಯಾಚ್
Image
ದಳಪತಿ ವಿಜಯ್​ಗೆ ಸಂದೇಶ ಕೊಟ್ಟ ಪವನ್ ಕಲ್ಯಾಣ್; ಹೇಳಿದ ಕಿವಿಮಾತೇನು?
Image
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ

ಜಾಮೀನು ಅರ್ಜಿ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಾಲ ಕಳೆದ ರಜತ್ ಹಾಗೂ ವಿನಯ್ ಇಂದು ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡುವ ಸಾಧ್ಯತೆ ಇದೆ. ಇವರ ಪರ ವಕೀಲರು ಇಬ್ಬರಿಗೂ ಜಾಮೀನು ಕೇಳಿ ಕೋರ್ಟ್​ನಲ್ಲಿ ಮನವಿ ಮಾಡಲಿದ್ದಾರೆ. ಕೋರ್ಟ್​​ನಲ್ಲಿ ಇಬ್ಬರ ಭವಿಷ್ಯ ನಿರ್ಧಾರವಾಗಲಿದೆ.

ಇದನ್ನೂ ಓದಿ: ರಜತ್, ವಿನಯ್ ಗೌಡ ಮೆಡಿಕಲ್ ಚೆಕಪ್; ಲಾಂಗ್ ಹಿಡಿದವರಿಗೆ ಕಾದಿದೆ ಕಷ್ಟ ಕಾಲ

ಕಳೆದ ಹೋದ ಮಚ್ಚು

‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋ ವೇಳೆ ವಿನಯ್ ಹಾಗೂ ರಜತ್ ಮಚ್ಚು ಹಿಡಿದು ರೀಲ್ಸ್ ಮಾಡಿದ್ದರು. ರೀಲ್ಸ್ ಮಾಡಲು ಮಚ್ಚು ಬಳಕೆ ಮಾಡಿದ್ದ ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿರುವ ಪೊಲೀಸರು ಕೇಸ್ ದಾಖಲಿಸಿ ತನಿಖೆ ಆರಂಭಿಸಿದರು. ವಿನಯ್ ಹಾಗೂ ರಜತ್ ಅವರನ್ನು ಬಂಧಿಸಿ ವಿಚಾರಣೆ ಮಾಡಿದರು. ಈ ವೇಳೆ ಮಚ್ಚನ್ನು ಹಾಜರುಪಡಿಸುವಂತೆ ಕೇಳಿದ್ದರು. ಪೊಲೀಸರಿಗೆ ರಜತ್ ಹಾಗೂ ವಿನಯ್ ಫೈಬರ್ ಮಚ್ಚನ್ನು ನೀಡಿದ್ದರು. ರೀಲ್ಸ್​ಗೆ ಬಳಕೆಯಾದ ನಿಜವಾದ ಮಚ್ಚು ಕಾಣೆಯಾಗಿರುವುದರಿಂದ ಪೊಲೀಸರಿಗೆ ಅನುಮಾನ ಹೆಚ್ಚಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:57 am, Wed, 26 March 25

ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ