AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆರೆ ಮೇಲೆ ಮತ್ತೆ ಕುಸ್ತಿ ಕಥೆ; ‘ಗಜರಾಮ’ ಸಿನಿಮಾದಲ್ಲಿ ರಾಜವರ್ಧನ್ ಪೈಲ್ವಾನ್

ರಾಜವರ್ಧನ್ ಅಭಿನಯದ ‘ಗಜರಾಮ’ ಚಿತ್ರ ಫೆ.7ಕ್ಕೆ ತೆರೆಕಾಣಲಿದೆ. ಈ ಸಿನಿಮಾದ ಟ್ರೇಲರ್​ ಅನಾವರಣ ಆಗಿದೆ. ಕುಸ್ತಿ ಕಥೆ ಹೊಂದಿರುವ ಈ ಚಿತ್ರಕ್ಕೆ ಸುನಿಲ್ ಕುಮಾರ್‌ ನಿರ್ದೇಶನ ಮಾಡಿದ್ದಾರೆ. ನರಸಿಂಹಮೂರ್ತಿ ಅವರು ನಿರ್ಮಾಣ ಮಾಡಿದ್ದಾರೆ. ರಾಜವರ್ಧನ್ ಜೊತೆ ಕಬೀರ್ ಸಿಂಗ್, ತಪಸ್ವಿನಿ ಮುಂತಾದವರು ಪಾತ್ರವರ್ಗದಲ್ಲಿ ಇದ್ದಾರೆ.

ತೆರೆ ಮೇಲೆ ಮತ್ತೆ ಕುಸ್ತಿ ಕಥೆ; ‘ಗಜರಾಮ’ ಸಿನಿಮಾದಲ್ಲಿ ರಾಜವರ್ಧನ್ ಪೈಲ್ವಾನ್
Rajavardan
ಮದನ್​ ಕುಮಾರ್​
|

Updated on: Jan 28, 2025 | 5:25 PM

Share

ಕಿಚ್ಚ ಸುದೀಪ್ ನಟನೆಯ ‘ಪೈಲ್ವಾನ್’ ಸಿನಿಮಾದಲ್ಲಿ ಕುಸ್ತಿಯ ಕಹಾನಿ ಇತ್ತು. ಯೋಗರಾಜ್ ಭಟ್ ನಿರ್ದೇಶನ ಮಾಡಿದ್ದ ‘ಗರಡಿ’ ಸಿನಿಮಾ ಕೂಡ ಕುಸ್ತಿಯ ಕಥೆಯನ್ನು ಹೇಳಿತ್ತು. ಈಗ ಇನ್ನೊಂದು ಸಿನಿಮಾದ ಕೂಡ ಇದೇ ರೀತಿಯ ಕಥಾವಸ್ತು ಹೊಂದಿದೆ. ಹೌದು, ರಾಜವರ್ಧನ್ ನಟಿಸಿರುವ ‘ಗಜರಾಮ’ ಸಿನಿಮಾದಲ್ಲಿ ಸಹ ಕುಸ್ತಿ ಅಖಾಡದ ಕಥೆ ಇರಲಿದೆ ಎಂಬುದು ಟ್ರೇಲರ್​ ಮೂಲಕ ಗೊತ್ತಾಗಿದೆ. ಇತ್ತೀಚೆಗೆ ‘ಗಜರಾಮ’ ಸಿನಿಮಾದ ಟ್ರೇಲರ್​ ಬಿಡುಗಡೆ ಮಾಡಲಾಗಿದೆ. ಈ ಚಿತ್ರದಲ್ಲಿ ರಾಜವರ್ಧನ್ ಅವರು ಪೈಲ್ವಾನ್ ಪಾತ್ರ ಮಾಡಿದ್ದಾರೆ.

ನಟ ರಾಜವರ್ಧನ್ ಅವರು ಕನ್ನಡ ಚಿತ್ರರಂಗದಲ್ಲಿ ತಮ್ಮದೇ ರೀತಿಯಲ್ಲಿ ಗುರುತಿಸಿಕೊಂಡಿದ್ದಾರೆ. ‘ಗಜರಾಮ’ ಸಿನಿಮಾಗೆ ಅವರು ಎಷ್ಟು ಶ್ರಮ ಹಾಕಿದ್ದಾರೆ ಎಂಬುದು ಟ್ರೇಲರ್​ ಮೂಲಕ ಕಾಣುತ್ತಿದೆ. 2 ನಿಮಿಷ 46 ಸೆಕೆಂಡ್ ಅವಧಿಯ ಈ ಟ್ರೇಲರ್​ನಲ್ಲಿ ಆ್ಯಕ್ಷನ್, ಸೆಂಟಿಮೆಂಟ್, ಎಮೋಷನ್, ಲವ್, ಸಸ್ಪೆನ್ಸ್ ಮುಂತಾದ ಅಂಶಗಳು ಹೈಲೈಟ್ ಆಗಿವೆ. ಆದ್ದರಿಂದ ಸಿನಿಪ್ರಿಯರಿಗೆ ಚಿತ್ರದ ಮೇಲೆ ನಿರೀಕ್ಷೆ ಮೂಡಿದೆ. ಫೆಬ್ರವರಿ 7ರಂದು ಈ ಸಿನಿಮಾ ಬಿಡುಗಡೆ ಆಗಲಿದೆ.

ರಾಜವರ್ಧನ್ ಅವರು ಕುಸ್ತಿ ಅಖಾಡದಲ್ಲಿ ಪೈಲ್ವಾನ್ ಆಗಿ ತೊಡೆ ತಟ್ಟಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಖ್ಯಾತಿ ಹೊಂದಿರುವ ನಟ ಕಬೀರ್ ಸಿಂಗ್ ಅವರು ‘ಗಜರಾಮ’ ಸಿನಿಮಾದಲ್ಲಿ ವಿಲನ್ ಆಗಿ ಅಬ್ಬರಿಸಿದ್ದಾರೆ. ದೀಪಕ್‌ ಅವರು ಪೊಲೀಸ್ ಪಾತ್ರದಲ್ಲಿ ಖದರ್ ತೋರಿಸಿದ್ದಾರೆ. ಈ ಸಿನಿಮಾದಲ್ಲಿ ನಟಿ ತಪಸ್ವಿನಿ ಅವರು ನಾಯಕಿಯಾಗಿ ಅಭಿನಯಿಸಿದ್ದಾರೆ.

‘ಗಜರಾಮ’ ಸಿನಿಮಾ ಟ್ರೇಲರ್:

ಟ್ರೇಲರ್​ ಮಾತ್ರವಲ್ಲದೇ ಹಾಡುಗಳ ಮೂಲಕವೂ ‘ಗಜರಾಮ’ ಸಿನಿಮಾ ಸದ್ದು ಮಾಡಿದೆ. ಮನೋಮೂರ್ತಿ ಅವರ ಸಂಗೀತ ಈ ಸಿನಿಮಾಗಿದೆ. ಈ ಚಿತ್ರದಲ್ಲಿ ನಟಿ ರಾಗಿಣಿ ದ್ವಿವೇದಿ ಅವರು ಒಂದು ಹಾಡಿನಲ್ಲಿ ಹೆಜ್ಜೆ ಹಾಕಿದ್ದಾರೆ. ಅವರು ಕಾಣಿಸಿಕೊಂಡಿರುವ ‘ಸಾರಾಯಿ ಶಾಂತಮ್ಮ..’ ಹಾಡು ಈಗಾಗಲೇ ಹಿಟ್ ಆಗಿದೆ. ಈ ಸಿನಿಮಾಗೆ ಕೆ.ಎಸ್. ಚಂದ್ರಶೇಖರ್ ಅವರು ಛಾಯಾಗ್ರಹಣ ಮಾಡಿದ್ದಾರೆ. ಜ್ಞಾನೇಶ್ ಬಿ. ಮಠದ್ ಅವರು ಸಂಕಲನ ಮಾಡಿದ್ದಾರೆ. ಧನಂಜಯ್ ಅವರು ನೃತ್ಯ ನಿರ್ದೇಶನ ಮಾಡಿದ್ದಾರೆ. ಜಯಂತ್ ಕಾಯ್ಕಿಣಿ, ಚೇತನ್ ಕುಮಾರ್, ಚಿನ್ಮಯ್ ಭಾವಿಕೆರೆ ಅವರು ಸಾಹಿತ್ಯ ಬರೆದಿದ್ದಾರೆ.

ಇದನ್ನೂ ಓದಿ: ಮಕ್ಕಳಿಗೆ ಚಿತ್ರಮಂದಿರಕ್ಕೆ ಎಂಟ್ರಿ, ಸಮಯ ನಿಗದಿಗೊಳಿಸಿ ಕೋರ್ಟ್ ಸೂಚನೆ

ಕೆಲವು ನಿರ್ದೇಶಕರ ಜತೆ ಅಸಿಸ್ಟೆಂಟ್ ಹಾಗೂ ಅಸೋಸಿಯೇಟ್ ಡೈರೆಕ್ಟರ್ ಆಗಿ ಕೆಲಸ ಮಾಡಿ ಅನುಭವ ಹೊಂದಿರುವ ಸುನಿಲ್ ಕುಮಾರ್‌ ಅವರು ‘ಗಜರಾಮ’ ಚಿತ್ರದ ಮೂಲಕ ಸ್ವತಂತ್ರ್ಯ ನಿರ್ದೇಶಕರಾಗಿದ್ದಾರೆ. ಈ ಮೊದಲು ‘ಬಾಂಡ್ ರವಿ’ ಚಿತ್ರವನ್ನು ನಿರ್ಮಿಸಿದ್ದ ನರಸಿಂಹಮೂರ್ತಿ ಅವರು ‘ಲೈಫ್​ ಲೈನ್ ಫಿಲ್ಮ್ಸ್’ ಮೂಲಕ ‘ಗಜರಾಮ’ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಮಲ್ಲಿಕಾರ್ಜುನ್ ಕಾಶಿ ಹಾಗೂ ಝೇವಿಯರ್ ಫರ್ನಾಂಡಿಸ್ ಅವರು ಸಹ ನಿರ್ಮಾಪಕರಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?