AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗಜರಾಮ’ ಚಿತ್ರದ ಪೋಸ್ಟರ್​ ರಿಲೀಸ್​; ರಗಡ್​ ಲುಕ್​ನಲ್ಲಿ ಡಿಂಗ್ರಿ ನಾಗರಾಜ್​ ಪುತ್ರ ರಾಜವರ್ಧನ್​

Rajavardhan | Gajarama Kannada Movie: ಸೆಪ್ಟೆಂಬರ್​ ಕೊನೇ ವಾರದಲ್ಲಿ ‘ಗಜರಾಮ’ ಚಿತ್ರದ ಶೂಟಿಂಗ್ ಶುರುವಾಲಿದೆ. ಫಸ್ಟ್​ಲುಕ್​ ಪೋಸ್ಟರ್​ನಲ್ಲಿ ರಾಜವರ್ಧನ್​ ಅವರ ರಗಡ್​ ಗೆಟಪ್​ ಹೈಲೈಟ್​ ಆಗಿದೆ.

‘ಗಜರಾಮ’ ಚಿತ್ರದ ಪೋಸ್ಟರ್​ ರಿಲೀಸ್​; ರಗಡ್​ ಲುಕ್​ನಲ್ಲಿ ಡಿಂಗ್ರಿ ನಾಗರಾಜ್​ ಪುತ್ರ ರಾಜವರ್ಧನ್​
ರಾಜವರ್ಧನ್
TV9 Web
| Updated By: ಮದನ್​ ಕುಮಾರ್​|

Updated on: Sep 17, 2022 | 8:36 PM

Share

ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಡಿಂಗ್ರಿ ನಾಗರಾಜ್ (Dingri Nagaraj) ಅವರು ಅನೇಕ ಸಿನಿಮಾಗಳ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ. ಅವರ ಪುತ್ರ ರಾಜವರ್ಧನ್​ ಕೂಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಹೀರೋ ಆಗಿ ಅವರು ಸ್ಯಾಂಡಲ್​ವುಡ್​ನಲ್ಲಿ ಗುರುಸಿಕೊಂಡಿದ್ದಾರೆ. ಸಾಲು ಸಾಲು ಸಿನಿಮಾಗಳಲ್ಲಿ ರಾಜವರ್ಧನ್​ (Rajavardhan) ನಟಿಸುತ್ತಿದ್ದಾರೆ. ಪ್ರತಿ ಚಿತ್ರದಲ್ಲೂ ಬೇರೆ ಬೇರೆ ಬಗೆಯ ಪಾತ್ರಗಳಿಗೆ ಬಣ್ಣ ಹಚ್ಚುತ್ತಿದ್ದಾರೆ. ಸದ್ಯ ಅವರ ಕೈಯಲ್ಲಿ ಹಲವು ಆಫರ್​ಗಳಿಗೆ. ಅವುಗಳ ನಡುವೆ ರಾಜವರ್ಧನ್​ ನಟಿಸುತ್ತಿರುವ ‘ಗಜರಾಮ’ (Gajarama) ಸಿನಿಮಾದ ಕೆಲಸಗಳು ಭರದಿಂದ ಸಾಗಿವೆ. ಈಗ ಫಸ್ಟ್​ ಲುಕ್​ ಪೋಸ್ಟರ್​ ರಿಲೀಸ್​ ಮಾಡಲಾಗಿದೆ. ಒಂದಷ್ಟು ಕಾರಣದಿಂದಾಗಿ ಈ ಚಿತ್ರ ಕೌತುಕ ಮೂಡಿಸಿದೆ.

‘ಗಜರಾಮ’ ಶೀರ್ಷಿಕೆಯೇ ಸಿನಿಪ್ರಿಯರ ಗಮನ ಸೆಳೆದಿದೆ. ಯುವ ನಿರ್ದೇಶಕ ಸುನೀಲ್ ಕುಮಾರ್ ವಿ.ಎ. ಅವರು ಈ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಈ ಸಿನಿಮಾದಲ್ಲಿ ಹೀರೋ ಗೆಟಪ್​ ಹೇಗಿರಲಿದೆ ಎಂಬುದನ್ನು ತಿಳಿಸಲು ಫಸ್ಟ್​ ಲುಕ್​ ಪೋಸ್ಟರ್​ ಬಿಡುಗಡೆ ಮಾಡಲಾಗಿದೆ. ಸಖತ್​ ರಗಡ್​ ಲುಕ್​ನಲ್ಲಿ ರಾಜವರ್ಧನ್​ ಕಾಣಿಸಿಕೊಂಡಿದ್ದಾರೆ. ಈ ಚಿತ್ರದಲ್ಲಿ ಅವರು ಆ್ಯಕ್ಷನ್​ ಹೀರೋ ಅವತಾರ ತಾಳಿದ್ದಾರೆ ಎಂಬುದಕ್ಕೆ ಪೋಸ್ಟರ್​ನಲ್ಲೇ ಸಾಕ್ಷಿ ಸಿಗುತ್ತಿದೆ.

ನಿರ್ದೇಶಕ ಸುನೀಲ್​ ಕುಮಾರ್​ ಅವರಿಗೆ ‘ಗಜರಾಮ’ ಮೊದಲ ಸಿನಿಮಾ. ಈ ಹಿಂದೆ ಅವರು ಖ್ಯಾತ ನಿರ್ದೇಶಕರಾದ ಯೋಗರಾಜ್ ಭಟ್, ‘ದುನಿಯಾ’ ಸೂರಿ ಸೇರಿದಂತೆ ಒಂದಷ್ಟು ನಿರ್ದೇಶಕರ ಜೊತೆ ಸಹಾಯಕ ಹಾಗೂ ಸಹ-ನಿರ್ದೇಶಕನಾಗಿ ಕೆಲಸ ಮಾಡಿ ಅನುಭವ ಪಡೆದುಕೊಂಡಿದ್ದಾರೆ. ಇದೇ ಮೊದಲ ಬಾರಿಗೆ ಅವರು ಸ್ವತಂತ್ರ ನಿರ್ದೇಶಕನಾಗಿ ‘ಗಜರಾಮ’ ಚಿತ್ರವನ್ನು ತೆರೆಗೆ ತರುತ್ತಿದ್ದಾರೆ.

ಇದನ್ನೂ ಓದಿ
Image
‘ಮಾಯಾಮೃಗ’ ಧಾರಾವಾಹಿಗೆ ಸೀಕ್ವೆಲ್​; ಈ ಬಾರಿ ಟಿ.ಎನ್​. ಸೀತಾರಾಮ್ ಹೇಳ ಹೊರಟಿರುವ ವಿಚಾರಗಳೇನು?
Image
‘ಜೊತೆ ಜೊತೆಯಲಿ ಧಾರಾವಾಹಿಯ ಆರ್ಯವರ್ಧನ್​ ಪಾತ್ರಕ್ಕೆ ಆಫರ್ ಬಂದಿದ್ದು ನಿಜ, ಆದರೆ…’: ಅನೂಪ್ ಭಂಡಾರಿ ಸ್ಪಷ್ಟನೆ
Image
Anirudh Jatkar: ‘ಜೊತೆ ಜೊತೆಯಲಿ’ ಧಾರಾವಾಹಿಯಿಂದ ಸಿಕ್ಕ ಸಂಬಳದ ಬಗ್ಗೆ ನೇರವಾಗಿ ಮಾತನಾಡಿದ ಅನಿರುದ್ಧ್​
Image
‘ನಾನು ಮತ್ತೆ ಆ ಧಾರಾವಾಹಿ ಮಾಡಲ್ಲ’; ತೆಲುಗು ಸೀರಿಯಲ್​ನಿಂದ ಹೊರ ಬರುವ ನಿರ್ಧಾರ ತೆಗೆದುಕೊಂಡ ಚಂದನ್ ಕುಮಾರ್

ಅನುಭವಿ ತಂತ್ರಜ್ಞರು ಈ ಚಿತ್ರದ ತೆರೆ ಹಿಂದೆ ಕೆಲಸ ಮಾಡುತ್ತಿದ್ದಾರೆ. ಮಾಸ್ ಪ್ರೇಕ್ಷಕರಿಗೆ ಇಷ್ಟ ಆಗುವಂತಹ ಆ್ಯಕ್ಷನ್ ಚಿತ್ರವಾಗಿ ‘ಗಜರಾಮ’ ಮೂಡಿಬರುತ್ತಿದೆ. ಮನೋಮೂರ್ತಿ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಕೆ.ಎಸ್. ಚಂದ್ರಶೇಖರ್ ಛಾಯಾಗ್ರಾಹಣದ ಜವಾಬ್ದಾರಿ ಗೊತ್ತಿದ್ದಾರೆ. ಜ್ಞಾನೇಶ್ ಬಿ. ಮಠದ್ ಸಂಕಲನ, ಧನಂಜಯ್ ನೃತ್ಯ ನಿರ್ದೇಶಕ ಮಾಡಲಿದ್ದಾರೆ. ಚಿನ್ಮಯ್ ಭಾವಿಕೆರೆ ಮತ್ತು ಜಯಂತ್ ಕಾಯ್ಕಿಣಿ ಅವರು ಸಾಹಿತ್ಯ ಬರೆಯಲಿದ್ದಾರೆ.

ಸೆಪ್ಟೆಂಬರ್​ ಕೊನೇ ವಾರದಲ್ಲಿ ‘ಗಜರಾಮ’ ಚಿತ್ರದ ಶೂಟಿಂಗ್ ಶುರುವಾಲಿದೆ. ‘ಲೈಫ್ ಲೈನ್ ಫಿಲ್ಮ್ಸ್​’ ಬ್ಯಾನರ್​ ಮೂಲಕ ನರಸಿಂಹ ಮೂರ್ತಿ ನಿರ್ಮಾಣ ಮಾಡುತ್ತಿದ್ದು, ಮಲ್ಲಿಕಾರ್ಜುನ್ ಕಾಶಿ ಮತ್ತು ಝವೀಯರ್ ಫರ್ನಾಂಡಿಸ್ ಸಹ-ನಿರ್ಮಾಪಕರಾಗಿ ಸಾಥ್​ ನೀಡಿದ್ದಾರೆ. ರಾಜವರ್ಧನ್​ ಜೊತೆ ಇನ್ನೂ ಯಾರೆಲ್ಲ ನಟಿಸಲಿದ್ದಾರೆ ಎಂಬುದನ್ನು ಚಿತ್ರತಂಡ ಶೀಘ್ರದಲ್ಲೇ ತಿಳಿಸಲಿದೆ.

‘ಹಿರಣ್ಯ’, ‘ಪ್ರಣಯಂ’ ಮುಂತಾದ ಸಿನಿಮಾಗಳು ರಾಜವರ್ಧನ್ ಕೈಯಲ್ಲಿ ಇವೆ. ಅವುಗಳ ಸಾಲಿಗೆ ‘ಗಜರಾಮ’ ಸಿನಿಮಾ ಕೂಡ ಸೇರ್ಪಡೆ ಆಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ