AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಣ್ಣಾಮುಚ್ಚೆ’ ಸಿನಿಮಾಗೆ ರಾಜೇಶ್​ ರಾಮನಾಥ್​ ಸಂಗೀತ; ಲಿರಿಕಲ್​ ವಿಡಿಯೋ ರಿಲೀಸ್​

2017ರ ಬಳಿಕ ಕಾರಣಾಂತರಗಳಿಂದ ಚಿತ್ರರಂಗದಿಂದ ಕೊಂಚ ದೂರ ಸರಿದಿದ್ದ ರಾಜೇಶ್​ ರಾಮನಾಥ್​ ಅವರು ಈಗ ಮತ್ತೆ ಕಮ್​ಬ್ಯಾಕ್​ ಮಾಡಿದ್ದಾರೆ. ‘ಕಣ್ಣಾಮುಚ್ಚೆ’ ಸಿನಿಮಾಗೆ ಸಂಗೀತ ನಿರ್ದೇಶನ ಮಾಡುವುದರ ಜೊತೆಗೆ ಒಂದು ಹಾಡಿಗೆ ಅವರು ಧ್ವನಿ ನೀಡಿದ್ದಾರೆ. ಈ ಸಿನಿಮಾಗೆ ಲೋಕಲ್​ ಲೋಕಿ ನಿರ್ದೇಶನ ಮಾಡಿದ್ದಾರೆ.

‘ಕಣ್ಣಾಮುಚ್ಚೆ’ ಸಿನಿಮಾಗೆ ರಾಜೇಶ್​ ರಾಮನಾಥ್​ ಸಂಗೀತ; ಲಿರಿಕಲ್​ ವಿಡಿಯೋ ರಿಲೀಸ್​
‘ಕಣ್ಣಾಮುಚ್ಚೆ’ ಸಿನಿಮಾ ಹಾಡು ಬಿಡುಗಡೆ ಸಮಾರಂಭ
ಮದನ್​ ಕುಮಾರ್​
|

Updated on: Dec 21, 2023 | 7:15 PM

Share

‘ಕೃಷಿ ಸ್ಟುಡಿಯೋಸ್’, ‘ಸಚಿತ್ ಫಿಲಿಂಸ್’ ಮತ್ತು ‘ಶಿವ ಸಿನಿಮಾಸ್’ ಮೂಲಕ ‘ಕಣ್ಣಾಮುಚ್ಚೆ’ ಸಿನಿಮಾ (Kanna Muchche movie) ನಿರ್ಮಾಣ ಆಗಿದೆ. ವಿತರಕ ವೆಂಕಟ್​ ಗೌಡ ಅವರ ಪತ್ನಿ ಮೀನಾ ವೆಂಕಟ್ ಅವರು ಇದಕ್ಕೆ ಬಂಡವಾಳ ಹೂಡಿದ್ದಾರೆ. ಜಿ.ವಿ. ವೆಂಕಟೇಶ್​ ಬಾಬು, ಲೋಕೇಶ್ ಎನ್.ಬಿ. ಅವರು ಸಹ ನಿರ್ಮಾಪಕರಾಗಿದ್ದಾರೆ. ಅನೇಕ ಸಿನಿಮಾಗಳಿಗೆ ಹಾಡು ಬರೆದಿರುವ ಲೋಕಲ್ ಲೋಕಿ (Local Loki) ಅವರು ‘ಕಣ್ಣಾಮುಚ್ಚೆ’ ಸಿನಿಮಾಗೆ ಕಥೆ, ಚಿತ್ರಕಥೆ, ಸಾಹಿತ್ಯ ಬರೆದು ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಈ ಸಿನಿಮಾದ ಆರು ಹಾಡುಗಳ ಪೈಕಿ, ಮೂರು ಗೀತೆಗಳ ಲಿರಿಕಲ್ ವಿಡಿಯೋ ಬಿಡುಗಡೆ ಮಾಡಲಾಗಿದೆ. ಡ್ಯಾನ್ಸರ್ ಆಗಿರುವ ರವಿಕೃಷ್ಣ ಅವರು ಈ ಚಿತ್ರಕ್ಕೆ ಹೀರೋ. ಅವರಿಗೆ ಜೋಡಿಯಾಗಿ ಸೀರಿಯಲ್​ ನಟಿ ತೇಜಸ್ವಿನಿ ಆನಂದ್​ ಕುಮಾರ್ ಅಭಿನಯಿಸಿದ್ದಾರೆ.

‘ಪ್ರೀತಿಯಲ್ಲಿ ಒಂದು ಹೊಸ ಆಯಾಮ’ ಎಂಬ ಟ್ಯಾಗ್​ಲೈನ್​ ಮೂಲಕ ‘ಕಣ್ಣಾಮುಚ್ಚೆ’ ಚಿತ್ರ ಕುತೂಹಲ ಮೂಡಿಸಿದೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಇರುವ ಕಲಾವಿದರ ಸಂಘದ ಕಟ್ಟಡದಲ್ಲಿ ಅದ್ದೂರಿಯಾಗಿ ಸಾಂಗ್​ ರಿಲೀಸ್​ ಕಾರ್ಯಕ್ರಮ ಜರುಗಿತು. ನಿರ್ಮಾಪಕರ ತಾಯಿ ಈ ಹಾಡುಗಳನ್ನು ಬಿಡುಗಡೆ ಮಾಡಿದರು. ಈ ವೇಳೆ ಹಿರಿಯ ನಟ ಸ್ವಸ್ತಿಕ್​ ಶಂಕರ್ ಕೂಡ ಉಪಸ್ಥಿತರಿದ್ದರು. ಈ ಸಿನಿಮಾಗೆ ರಾಜೇಶ್​ ರಾಮನಾಥ್​ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ.

2017ರ ಬಳಿಕ ಕಾರಣಾಂತಗಳಿಂದ ಚಿತ್ರರಂಗದಿಂದ ಕೊಂಚ ದೂರ ಸರಿದಿದ್ದ ರಾಜೇಶ್​ ರಾಮನಾಥ್​ ಅವರು ಈಗ ಮತ್ತೆ ಕಮ್​ಬ್ಯಾಕ್​ ಮಾಡಿದ್ದಾರೆ. ಈ ಸಿನಿಮಾಗೆ ಸಂಗೀತ ನಿರ್ದೇಶನ ಮಾಡುವುದರ ಜೊತೆ ಒಂದು ಹಾಡಿಗೆ ಧ್ವನಿ ನೀಡಿದ್ದಾರೆ. ‘ಎ2 ಮ್ಯೂಸಿಕ್’ ಮೂಲಕ ಹಾಡುಗಳು ಬಿಡುಗಡೆ ಆಗಿವೆ. ನಿರ್ದೇಶಕ ಲೋಕಲ್​ ಲೋಕಿ ಅವರಿಗೆ ಇದು ಎರಡನೇ ಸಿನಿಮಾ. ಮೊಬೈಲ್​ ಅಂಗಡಿ ಹುಡುಗನ ಪ್ರೇಮ್​ ಕಹಾನಿಯನ್ನು ಅವರು ಈ ಸಿನಿಮಾದ ಮೂಲಕ ಹೇಳಲಿದ್ದಾರೆ.

ಇದನ್ನೂ ಓದಿ: ರಜನಿಕಾಂತ್ ಗೆಳೆಯ ರಾಜ್‌ ಬಹದ್ದೂರ್ ಕಡೆಯಿಂದ ‘ಗಾರುಡಿಗ’ ಚಿತ್ರಕ್ಕೆ ಸಿಕ್ತು ಶುಭ ಹಾರೈಕೆ

ಉಗ್ರಂ ರವಿ, ಕೃಷ್ಣ, ನಾಗೇಂದ್ರ ಅರಸ್, ಪ್ರಶಾಂತ್​ ಸಿದ್ದಿ, ಮಮತಾ, ಜಯಸೂರ್ಯ ಸೇರಿದಂತೆ ಅನೇಕ ಕಲಾವಿದರು ಪಾತ್ರವರ್ಗದಲ್ಲಿ ಇದ್ದಾರೆ. ಜಗನ್ ಬಾಬು ಅವರ ಛಾಯಾಗ್ರಹಣ, ಇ.ಎಸ್. ಈಶ್ವರ್ ಅವರ ಸಂಕಲನ ಈ ಸಿನಿಮಾಗಿದೆ. ಈ ಚಿತ್ರದಲ್ಲಿ ಮಧ್ಯಮ ವರ್ಗದ ಪ್ರೇಮಿಗಳ ಕಥೆ ಇದ್ದರೂ ದೃಶ್ಯಗಳು ಶ್ರೀಮಂತವಾಗಿ ಮೂಡಿಬಂದಿವೆ ಎಂದು ನಿರ್ಮಾಪಕರು ಹೇಳಿದ್ದಾರೆ.

ಬೆಂಗಳೂರು, ಹೆಸರುಘಟ್ಟ, ರಾಮನಗರ ಮುಂತಾದ ಕಡೆಗಳಲ್ಲಿ 45 ದಿನಗಳ ಕಾಲ ಶೂಟಿಂಗ್​ ಮಾಡಲಾಗಿದೆ. ಸೆನ್ಸಾರ್​ ಮಂಡಳಿಯಿಂದ ‘ಕಣ್ಣಾಮುಚ್ಚೆ’ ಸಿನಿಮಾಗೆ ಈಗಾಗಲೇ ‘ಯು/ಎ’ ಪ್ರಮಾಣಪತ್ರ ಸಿಕ್ಕಿದೆ. 2024ರ ಫೆಬ್ರವರಿ ವೇಳೆಗೆ ಚಿತ್ರ ಬಿಡುಗಡೆ ಆಗುವ ನಿರೀಕ್ಷೆ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ
ಪ್ರಕಾಶ್ ರಾಜ್ ವಿರುದ್ಧ ಅರೆಸ್ಟ್ ವಾರೆಂಟ್; 4 ಕಡೆ ವೋಟರ್ ಐಡಿ ಇರುವ ಆರೋಪ
ಪ್ರಕಾಶ್ ರಾಜ್ ವಿರುದ್ಧ ಅರೆಸ್ಟ್ ವಾರೆಂಟ್; 4 ಕಡೆ ವೋಟರ್ ಐಡಿ ಇರುವ ಆರೋಪ
ವಾರ ಭವಿಷ್ಯ; ಜೂನ್ 22 ರಿಂದ 28 ರವರೆಗಿನ ದ್ವಾದಶ ರಾಶಿಗಳ ಫಲಾಫಲ
ವಾರ ಭವಿಷ್ಯ; ಜೂನ್ 22 ರಿಂದ 28 ರವರೆಗಿನ ದ್ವಾದಶ ರಾಶಿಗಳ ಫಲಾಫಲ