AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಣ್ಣಾಮುಚ್ಚೆ’ ಸಿನಿಮಾಗೆ ರಾಜೇಶ್​ ರಾಮನಾಥ್​ ಸಂಗೀತ; ಲಿರಿಕಲ್​ ವಿಡಿಯೋ ರಿಲೀಸ್​

2017ರ ಬಳಿಕ ಕಾರಣಾಂತರಗಳಿಂದ ಚಿತ್ರರಂಗದಿಂದ ಕೊಂಚ ದೂರ ಸರಿದಿದ್ದ ರಾಜೇಶ್​ ರಾಮನಾಥ್​ ಅವರು ಈಗ ಮತ್ತೆ ಕಮ್​ಬ್ಯಾಕ್​ ಮಾಡಿದ್ದಾರೆ. ‘ಕಣ್ಣಾಮುಚ್ಚೆ’ ಸಿನಿಮಾಗೆ ಸಂಗೀತ ನಿರ್ದೇಶನ ಮಾಡುವುದರ ಜೊತೆಗೆ ಒಂದು ಹಾಡಿಗೆ ಅವರು ಧ್ವನಿ ನೀಡಿದ್ದಾರೆ. ಈ ಸಿನಿಮಾಗೆ ಲೋಕಲ್​ ಲೋಕಿ ನಿರ್ದೇಶನ ಮಾಡಿದ್ದಾರೆ.

‘ಕಣ್ಣಾಮುಚ್ಚೆ’ ಸಿನಿಮಾಗೆ ರಾಜೇಶ್​ ರಾಮನಾಥ್​ ಸಂಗೀತ; ಲಿರಿಕಲ್​ ವಿಡಿಯೋ ರಿಲೀಸ್​
‘ಕಣ್ಣಾಮುಚ್ಚೆ’ ಸಿನಿಮಾ ಹಾಡು ಬಿಡುಗಡೆ ಸಮಾರಂಭ
ಮದನ್​ ಕುಮಾರ್​
|

Updated on: Dec 21, 2023 | 7:15 PM

Share

‘ಕೃಷಿ ಸ್ಟುಡಿಯೋಸ್’, ‘ಸಚಿತ್ ಫಿಲಿಂಸ್’ ಮತ್ತು ‘ಶಿವ ಸಿನಿಮಾಸ್’ ಮೂಲಕ ‘ಕಣ್ಣಾಮುಚ್ಚೆ’ ಸಿನಿಮಾ (Kanna Muchche movie) ನಿರ್ಮಾಣ ಆಗಿದೆ. ವಿತರಕ ವೆಂಕಟ್​ ಗೌಡ ಅವರ ಪತ್ನಿ ಮೀನಾ ವೆಂಕಟ್ ಅವರು ಇದಕ್ಕೆ ಬಂಡವಾಳ ಹೂಡಿದ್ದಾರೆ. ಜಿ.ವಿ. ವೆಂಕಟೇಶ್​ ಬಾಬು, ಲೋಕೇಶ್ ಎನ್.ಬಿ. ಅವರು ಸಹ ನಿರ್ಮಾಪಕರಾಗಿದ್ದಾರೆ. ಅನೇಕ ಸಿನಿಮಾಗಳಿಗೆ ಹಾಡು ಬರೆದಿರುವ ಲೋಕಲ್ ಲೋಕಿ (Local Loki) ಅವರು ‘ಕಣ್ಣಾಮುಚ್ಚೆ’ ಸಿನಿಮಾಗೆ ಕಥೆ, ಚಿತ್ರಕಥೆ, ಸಾಹಿತ್ಯ ಬರೆದು ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಈ ಸಿನಿಮಾದ ಆರು ಹಾಡುಗಳ ಪೈಕಿ, ಮೂರು ಗೀತೆಗಳ ಲಿರಿಕಲ್ ವಿಡಿಯೋ ಬಿಡುಗಡೆ ಮಾಡಲಾಗಿದೆ. ಡ್ಯಾನ್ಸರ್ ಆಗಿರುವ ರವಿಕೃಷ್ಣ ಅವರು ಈ ಚಿತ್ರಕ್ಕೆ ಹೀರೋ. ಅವರಿಗೆ ಜೋಡಿಯಾಗಿ ಸೀರಿಯಲ್​ ನಟಿ ತೇಜಸ್ವಿನಿ ಆನಂದ್​ ಕುಮಾರ್ ಅಭಿನಯಿಸಿದ್ದಾರೆ.

‘ಪ್ರೀತಿಯಲ್ಲಿ ಒಂದು ಹೊಸ ಆಯಾಮ’ ಎಂಬ ಟ್ಯಾಗ್​ಲೈನ್​ ಮೂಲಕ ‘ಕಣ್ಣಾಮುಚ್ಚೆ’ ಚಿತ್ರ ಕುತೂಹಲ ಮೂಡಿಸಿದೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಇರುವ ಕಲಾವಿದರ ಸಂಘದ ಕಟ್ಟಡದಲ್ಲಿ ಅದ್ದೂರಿಯಾಗಿ ಸಾಂಗ್​ ರಿಲೀಸ್​ ಕಾರ್ಯಕ್ರಮ ಜರುಗಿತು. ನಿರ್ಮಾಪಕರ ತಾಯಿ ಈ ಹಾಡುಗಳನ್ನು ಬಿಡುಗಡೆ ಮಾಡಿದರು. ಈ ವೇಳೆ ಹಿರಿಯ ನಟ ಸ್ವಸ್ತಿಕ್​ ಶಂಕರ್ ಕೂಡ ಉಪಸ್ಥಿತರಿದ್ದರು. ಈ ಸಿನಿಮಾಗೆ ರಾಜೇಶ್​ ರಾಮನಾಥ್​ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ.

2017ರ ಬಳಿಕ ಕಾರಣಾಂತಗಳಿಂದ ಚಿತ್ರರಂಗದಿಂದ ಕೊಂಚ ದೂರ ಸರಿದಿದ್ದ ರಾಜೇಶ್​ ರಾಮನಾಥ್​ ಅವರು ಈಗ ಮತ್ತೆ ಕಮ್​ಬ್ಯಾಕ್​ ಮಾಡಿದ್ದಾರೆ. ಈ ಸಿನಿಮಾಗೆ ಸಂಗೀತ ನಿರ್ದೇಶನ ಮಾಡುವುದರ ಜೊತೆ ಒಂದು ಹಾಡಿಗೆ ಧ್ವನಿ ನೀಡಿದ್ದಾರೆ. ‘ಎ2 ಮ್ಯೂಸಿಕ್’ ಮೂಲಕ ಹಾಡುಗಳು ಬಿಡುಗಡೆ ಆಗಿವೆ. ನಿರ್ದೇಶಕ ಲೋಕಲ್​ ಲೋಕಿ ಅವರಿಗೆ ಇದು ಎರಡನೇ ಸಿನಿಮಾ. ಮೊಬೈಲ್​ ಅಂಗಡಿ ಹುಡುಗನ ಪ್ರೇಮ್​ ಕಹಾನಿಯನ್ನು ಅವರು ಈ ಸಿನಿಮಾದ ಮೂಲಕ ಹೇಳಲಿದ್ದಾರೆ.

ಇದನ್ನೂ ಓದಿ: ರಜನಿಕಾಂತ್ ಗೆಳೆಯ ರಾಜ್‌ ಬಹದ್ದೂರ್ ಕಡೆಯಿಂದ ‘ಗಾರುಡಿಗ’ ಚಿತ್ರಕ್ಕೆ ಸಿಕ್ತು ಶುಭ ಹಾರೈಕೆ

ಉಗ್ರಂ ರವಿ, ಕೃಷ್ಣ, ನಾಗೇಂದ್ರ ಅರಸ್, ಪ್ರಶಾಂತ್​ ಸಿದ್ದಿ, ಮಮತಾ, ಜಯಸೂರ್ಯ ಸೇರಿದಂತೆ ಅನೇಕ ಕಲಾವಿದರು ಪಾತ್ರವರ್ಗದಲ್ಲಿ ಇದ್ದಾರೆ. ಜಗನ್ ಬಾಬು ಅವರ ಛಾಯಾಗ್ರಹಣ, ಇ.ಎಸ್. ಈಶ್ವರ್ ಅವರ ಸಂಕಲನ ಈ ಸಿನಿಮಾಗಿದೆ. ಈ ಚಿತ್ರದಲ್ಲಿ ಮಧ್ಯಮ ವರ್ಗದ ಪ್ರೇಮಿಗಳ ಕಥೆ ಇದ್ದರೂ ದೃಶ್ಯಗಳು ಶ್ರೀಮಂತವಾಗಿ ಮೂಡಿಬಂದಿವೆ ಎಂದು ನಿರ್ಮಾಪಕರು ಹೇಳಿದ್ದಾರೆ.

ಬೆಂಗಳೂರು, ಹೆಸರುಘಟ್ಟ, ರಾಮನಗರ ಮುಂತಾದ ಕಡೆಗಳಲ್ಲಿ 45 ದಿನಗಳ ಕಾಲ ಶೂಟಿಂಗ್​ ಮಾಡಲಾಗಿದೆ. ಸೆನ್ಸಾರ್​ ಮಂಡಳಿಯಿಂದ ‘ಕಣ್ಣಾಮುಚ್ಚೆ’ ಸಿನಿಮಾಗೆ ಈಗಾಗಲೇ ‘ಯು/ಎ’ ಪ್ರಮಾಣಪತ್ರ ಸಿಕ್ಕಿದೆ. 2024ರ ಫೆಬ್ರವರಿ ವೇಳೆಗೆ ಚಿತ್ರ ಬಿಡುಗಡೆ ಆಗುವ ನಿರೀಕ್ಷೆ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ