AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಣ್ಣಾಮುಚ್ಚೆ’ ಸಿನಿಮಾಗೆ ರಾಜೇಶ್​ ರಾಮನಾಥ್​ ಸಂಗೀತ; ಲಿರಿಕಲ್​ ವಿಡಿಯೋ ರಿಲೀಸ್​

2017ರ ಬಳಿಕ ಕಾರಣಾಂತರಗಳಿಂದ ಚಿತ್ರರಂಗದಿಂದ ಕೊಂಚ ದೂರ ಸರಿದಿದ್ದ ರಾಜೇಶ್​ ರಾಮನಾಥ್​ ಅವರು ಈಗ ಮತ್ತೆ ಕಮ್​ಬ್ಯಾಕ್​ ಮಾಡಿದ್ದಾರೆ. ‘ಕಣ್ಣಾಮುಚ್ಚೆ’ ಸಿನಿಮಾಗೆ ಸಂಗೀತ ನಿರ್ದೇಶನ ಮಾಡುವುದರ ಜೊತೆಗೆ ಒಂದು ಹಾಡಿಗೆ ಅವರು ಧ್ವನಿ ನೀಡಿದ್ದಾರೆ. ಈ ಸಿನಿಮಾಗೆ ಲೋಕಲ್​ ಲೋಕಿ ನಿರ್ದೇಶನ ಮಾಡಿದ್ದಾರೆ.

‘ಕಣ್ಣಾಮುಚ್ಚೆ’ ಸಿನಿಮಾಗೆ ರಾಜೇಶ್​ ರಾಮನಾಥ್​ ಸಂಗೀತ; ಲಿರಿಕಲ್​ ವಿಡಿಯೋ ರಿಲೀಸ್​
‘ಕಣ್ಣಾಮುಚ್ಚೆ’ ಸಿನಿಮಾ ಹಾಡು ಬಿಡುಗಡೆ ಸಮಾರಂಭ
ಮದನ್​ ಕುಮಾರ್​
|

Updated on: Dec 21, 2023 | 7:15 PM

Share

‘ಕೃಷಿ ಸ್ಟುಡಿಯೋಸ್’, ‘ಸಚಿತ್ ಫಿಲಿಂಸ್’ ಮತ್ತು ‘ಶಿವ ಸಿನಿಮಾಸ್’ ಮೂಲಕ ‘ಕಣ್ಣಾಮುಚ್ಚೆ’ ಸಿನಿಮಾ (Kanna Muchche movie) ನಿರ್ಮಾಣ ಆಗಿದೆ. ವಿತರಕ ವೆಂಕಟ್​ ಗೌಡ ಅವರ ಪತ್ನಿ ಮೀನಾ ವೆಂಕಟ್ ಅವರು ಇದಕ್ಕೆ ಬಂಡವಾಳ ಹೂಡಿದ್ದಾರೆ. ಜಿ.ವಿ. ವೆಂಕಟೇಶ್​ ಬಾಬು, ಲೋಕೇಶ್ ಎನ್.ಬಿ. ಅವರು ಸಹ ನಿರ್ಮಾಪಕರಾಗಿದ್ದಾರೆ. ಅನೇಕ ಸಿನಿಮಾಗಳಿಗೆ ಹಾಡು ಬರೆದಿರುವ ಲೋಕಲ್ ಲೋಕಿ (Local Loki) ಅವರು ‘ಕಣ್ಣಾಮುಚ್ಚೆ’ ಸಿನಿಮಾಗೆ ಕಥೆ, ಚಿತ್ರಕಥೆ, ಸಾಹಿತ್ಯ ಬರೆದು ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಈ ಸಿನಿಮಾದ ಆರು ಹಾಡುಗಳ ಪೈಕಿ, ಮೂರು ಗೀತೆಗಳ ಲಿರಿಕಲ್ ವಿಡಿಯೋ ಬಿಡುಗಡೆ ಮಾಡಲಾಗಿದೆ. ಡ್ಯಾನ್ಸರ್ ಆಗಿರುವ ರವಿಕೃಷ್ಣ ಅವರು ಈ ಚಿತ್ರಕ್ಕೆ ಹೀರೋ. ಅವರಿಗೆ ಜೋಡಿಯಾಗಿ ಸೀರಿಯಲ್​ ನಟಿ ತೇಜಸ್ವಿನಿ ಆನಂದ್​ ಕುಮಾರ್ ಅಭಿನಯಿಸಿದ್ದಾರೆ.

‘ಪ್ರೀತಿಯಲ್ಲಿ ಒಂದು ಹೊಸ ಆಯಾಮ’ ಎಂಬ ಟ್ಯಾಗ್​ಲೈನ್​ ಮೂಲಕ ‘ಕಣ್ಣಾಮುಚ್ಚೆ’ ಚಿತ್ರ ಕುತೂಹಲ ಮೂಡಿಸಿದೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಇರುವ ಕಲಾವಿದರ ಸಂಘದ ಕಟ್ಟಡದಲ್ಲಿ ಅದ್ದೂರಿಯಾಗಿ ಸಾಂಗ್​ ರಿಲೀಸ್​ ಕಾರ್ಯಕ್ರಮ ಜರುಗಿತು. ನಿರ್ಮಾಪಕರ ತಾಯಿ ಈ ಹಾಡುಗಳನ್ನು ಬಿಡುಗಡೆ ಮಾಡಿದರು. ಈ ವೇಳೆ ಹಿರಿಯ ನಟ ಸ್ವಸ್ತಿಕ್​ ಶಂಕರ್ ಕೂಡ ಉಪಸ್ಥಿತರಿದ್ದರು. ಈ ಸಿನಿಮಾಗೆ ರಾಜೇಶ್​ ರಾಮನಾಥ್​ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ.

2017ರ ಬಳಿಕ ಕಾರಣಾಂತಗಳಿಂದ ಚಿತ್ರರಂಗದಿಂದ ಕೊಂಚ ದೂರ ಸರಿದಿದ್ದ ರಾಜೇಶ್​ ರಾಮನಾಥ್​ ಅವರು ಈಗ ಮತ್ತೆ ಕಮ್​ಬ್ಯಾಕ್​ ಮಾಡಿದ್ದಾರೆ. ಈ ಸಿನಿಮಾಗೆ ಸಂಗೀತ ನಿರ್ದೇಶನ ಮಾಡುವುದರ ಜೊತೆ ಒಂದು ಹಾಡಿಗೆ ಧ್ವನಿ ನೀಡಿದ್ದಾರೆ. ‘ಎ2 ಮ್ಯೂಸಿಕ್’ ಮೂಲಕ ಹಾಡುಗಳು ಬಿಡುಗಡೆ ಆಗಿವೆ. ನಿರ್ದೇಶಕ ಲೋಕಲ್​ ಲೋಕಿ ಅವರಿಗೆ ಇದು ಎರಡನೇ ಸಿನಿಮಾ. ಮೊಬೈಲ್​ ಅಂಗಡಿ ಹುಡುಗನ ಪ್ರೇಮ್​ ಕಹಾನಿಯನ್ನು ಅವರು ಈ ಸಿನಿಮಾದ ಮೂಲಕ ಹೇಳಲಿದ್ದಾರೆ.

ಇದನ್ನೂ ಓದಿ: ರಜನಿಕಾಂತ್ ಗೆಳೆಯ ರಾಜ್‌ ಬಹದ್ದೂರ್ ಕಡೆಯಿಂದ ‘ಗಾರುಡಿಗ’ ಚಿತ್ರಕ್ಕೆ ಸಿಕ್ತು ಶುಭ ಹಾರೈಕೆ

ಉಗ್ರಂ ರವಿ, ಕೃಷ್ಣ, ನಾಗೇಂದ್ರ ಅರಸ್, ಪ್ರಶಾಂತ್​ ಸಿದ್ದಿ, ಮಮತಾ, ಜಯಸೂರ್ಯ ಸೇರಿದಂತೆ ಅನೇಕ ಕಲಾವಿದರು ಪಾತ್ರವರ್ಗದಲ್ಲಿ ಇದ್ದಾರೆ. ಜಗನ್ ಬಾಬು ಅವರ ಛಾಯಾಗ್ರಹಣ, ಇ.ಎಸ್. ಈಶ್ವರ್ ಅವರ ಸಂಕಲನ ಈ ಸಿನಿಮಾಗಿದೆ. ಈ ಚಿತ್ರದಲ್ಲಿ ಮಧ್ಯಮ ವರ್ಗದ ಪ್ರೇಮಿಗಳ ಕಥೆ ಇದ್ದರೂ ದೃಶ್ಯಗಳು ಶ್ರೀಮಂತವಾಗಿ ಮೂಡಿಬಂದಿವೆ ಎಂದು ನಿರ್ಮಾಪಕರು ಹೇಳಿದ್ದಾರೆ.

ಬೆಂಗಳೂರು, ಹೆಸರುಘಟ್ಟ, ರಾಮನಗರ ಮುಂತಾದ ಕಡೆಗಳಲ್ಲಿ 45 ದಿನಗಳ ಕಾಲ ಶೂಟಿಂಗ್​ ಮಾಡಲಾಗಿದೆ. ಸೆನ್ಸಾರ್​ ಮಂಡಳಿಯಿಂದ ‘ಕಣ್ಣಾಮುಚ್ಚೆ’ ಸಿನಿಮಾಗೆ ಈಗಾಗಲೇ ‘ಯು/ಎ’ ಪ್ರಮಾಣಪತ್ರ ಸಿಕ್ಕಿದೆ. 2024ರ ಫೆಬ್ರವರಿ ವೇಳೆಗೆ ಚಿತ್ರ ಬಿಡುಗಡೆ ಆಗುವ ನಿರೀಕ್ಷೆ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ