AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jailer: ಮಂಗಳೂರಿನಲ್ಲಿ ‘ಜೈಲರ್​’ ಶೂಟಿಂಗ್; ಒಟ್ಟಿಗೆ ಕುಳಿತು ಹರಟೆ ಹೊಡೆದ ಶಿವಣ್ಣ-ರಜನಿ

ರಜನಿಕಾಂತ್ ಅವರು ಸೋಮವಾರ (ಫೆಬ್ರವರಿ 13) ಮಂಗಳೂರಿಗೆ ಆಗಮಿಸಿದ ವಿಡಿಯೋ ವೈರಲ್ ಆಗಿತ್ತು. ಸೋಮವಾರ ಸಂಜೆ ಶಿವಣ್ಣ ಹಾಗೂ ರಜನಿಕಾಂತ್ ಒಟ್ಟಾಗಿ ಕುಳಿತು ಹರಟೆ ಹೊಡೆದಿದ್ದಾರೆ.

Jailer: ಮಂಗಳೂರಿನಲ್ಲಿ ‘ಜೈಲರ್​’ ಶೂಟಿಂಗ್; ಒಟ್ಟಿಗೆ ಕುಳಿತು ಹರಟೆ ಹೊಡೆದ ಶಿವಣ್ಣ-ರಜನಿ
‘ಜೈಲರ್’ ಚಿತ್ರದ ಶೂಟಿಂಗ್​ನಲ್ಲಿ ರಜನಿ-ಶಿವಣ್ಣ
ರಾಜೇಶ್ ದುಗ್ಗುಮನೆ
|

Updated on:Feb 14, 2023 | 7:12 AM

Share

ಶಿವರಾಜ್​ಕುಮಾರ್ (Shivarajkumar) ಅವರ 125ನೇ ಸಿನಿಮಾ ‘ವೇದ’ ಕಳೆದ ವರ್ಷಾಂತ್ಯಕ್ಕೆ ತೆರೆಗೆ ಬಂತು. ಇಷ್ಟು ವರ್ಷ ಚಿತ್ರರಂಗದಲ್ಲಿ ಇದ್ದ ಹೊರತಾಗಿಯೂ ಅವರು ಪರಭಾಷೆಯ ಸಿನಿಮಾಗಳನ್ನು ಒಪ್ಪಿಕೊಂಡಿರಲಿಲ್ಲ. ಆದರೆ, ಈಗ ಅವರು ತಮ್ಮ ನಿರ್ಧಾರ ಬದಲಾಯಿಸಿಕೊಂಡಿದ್ದಾರೆ. ತಮಿಳು, ತೆಲುಗಿನಿಂದ ಬರುವ ಒಳ್ಳೆಯ ಆಫರ್​ಗಳನ್ನು ಒಪ್ಪಿ ಅವರು ನಟಿಸುತ್ತಿದ್ದಾರೆ. ರಜನಿಕಾಂತ್ (Rajinikanth) ನಟನೆಯ ‘ಜೈಲರ್​’ ಚಿತ್ರದಲ್ಲಿ ಶಿವರಾಜ್​ಕುಮಾರ್ ಅವರು ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಈ ಚಿತ್ರದ ಶೂಟಿಂಗ್ ಮಂಗಳೂರಿನಲ್ಲಿ ನಡೆಯುತ್ತಿದೆ. ರಜನಿಕಾಂತ್ ಹಾಗೂ ಶಿವಣ್ಣ ಒಟ್ಟಾಗಿ ಕಾಣಿಸಿಕೊಂಡ ಫೋಟೋ ವೈರಲ್ ಆಗಿದೆ.

ರಜನಿಕಾಂತ್ ಅವರು ಸೋಮವಾರ (ಫೆಬ್ರವರಿ 13) ಮಂಗಳೂರಿಗೆ ಆಗಮಿಸಿದ ವಿಡಿಯೋ ವೈರಲ್ ಆಗಿತ್ತು. ಸೋಮವಾರ ಸಂಜೆ ಶಿವಣ್ಣ ಹಾಗೂ ರಜನಿಕಾಂತ್ ಒಟ್ಟಾಗಿ ಕುಳಿತು ಹರಟೆ ಹೊಡೆದಿದ್ದಾರೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದು ರಜನಿಕಾಂತ್ ನಟನೆಯ 169ನೇ ಸಿನಿಮಾ.

ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ‘ಜೈಲರ್​’ ಸಿನಿಮಾ ಸೆಟ್ಟೇರಿದೆ. ಖ್ಯಾತ ನಿರ್ಮಾಣ ಸಂಸ್ಥೆ ‘ಸನ್​ ಪಿಕ್ಚರ್ಸ್​’ ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ. ರಜನಿಕಾಂತ್​ ಅವರ ಫಸ್ಟ್​ ಲುಕ್​ ಪೋಸ್ಟರ್​ ಗಮನ ಸೆಳೆದಿತ್ತು. ಶಿವರಾಜ್​ಕುಮಾರ್ ಅವರ ಲುಕ್​ ರಿಲೀಸ್ ಆಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ‘ಜೈಲರ್​’ ಚಿತ್ರದಲ್ಲಿ ರಜನಿಕಾಂತ್​ ಎದುರು ಶಿವಣ್ಣ ವಿಲನ್​ ಆಗಿ ಕಾಣಿಸಿಕೊಳ್ಳುತ್ತಾರೆ ಎನ್ನಲಾಗಿದೆ. ಆದರೆ, ಈ ಬಗ್ಗೆ ಸ್ಪಷ್ಟನೆ ಸಿಕ್ಕಿಲ್ಲ. ಇದೇ ಮೊದಲ ಬಾರಿಗೆ ಅವರಿಬ್ಬರೂ ಒಟ್ಟಾಗಿ ಕಾಣಿಸಿಕೊಳ್ಳುತ್ತಿದ್ದಾರೆ ಅನ್ನೋದು ವಿಶೇಷ. ಈ ಕಾರಣಕ್ಕೂ ಸಿನಿಮಾ ಹೈಪ್ ಸೃಷ್ಟಿ ಮಾಡಿದೆ.

ಇದನ್ನೂ ಓದಿ
Image
ವಿಶೇಷ ಫೋಟೋ ಹಂಚಿಕೊಂಡು ದೀಪಾವಳಿ ವಿಶ್ ಮಾಡಿದ ನಟಿ ತಮನ್ನಾ
Image
Tamannaah Bhatia: ತೆಲುಗಿನಲ್ಲಿ ‘ನಿಧಿಮಾ‘ ಆಗಿ ಕಾಣಿಸಿಕೊಳ್ಳುತ್ತಿರುವ ತಮನ್ನಾ ಭಾಟಿಯಾ; ನಟಿಯ ಅಂದದ ಫೋಟೋಗಳು ಇಲ್ಲಿವೆ
Image
ಸಮುದ್ರ ತೀರದಲ್ಲಿ ಜೋಕಾಲಿ ಆಡುತ್ತ ವೆಕೇಶನ್ ಎಂಜಾಯ್ ಮಾಡಿದ ನಟಿ ತಮನ್ನಾ
Image
ತಮನ್ನಾ ರೀತಿ ಡ್ಯಾನ್ಸ್​ ಮಾಡ್ತಾರಾ ಈ ಸೆಲೆಬ್ರಿಟಿಗಳು? ಹೊಸ ಸವಾಲು ಹಾಕಿದ ‘ಮಿಲ್ಕಿ ಬ್ಯೂಟಿ’

‘ಜೈಲರ್​’ ಸಿನಿಮಾದ ತೆರೆಹಿಂದೆ ಘಟಾನುಘಟಿ ತಂತ್ರಜ್ಞರು ಕೆಲಸ ಮಾಡುತ್ತಿದ್ದಾರೆ. ಖ್ಯಾತ ನಿರ್ದೇಶಕ ನೆಲ್ಸನ್​ ದಿಲೀಪ್​ ಕುಮಾರ್ ಅವರು ಈ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಅವರು ಈ ಮೊದಲು ದಳಪತಿ ವಿಜಯ್ ನಟನೆಯ ‘ಬೀಸ್ಟ್’ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದರು. ಜನಪ್ರಿಯ ಸಂಗೀತ ನಿರ್ದೇಶಕ ಅನಿರುದ್ಧ್​ ರವಿಚಂದರ್​ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ತಮನ್ನಾ ಈ ಚಿತ್ರಕ್ಕೆ ನಾಯಕಿ.

ಇದನ್ನೂ ಓದಿ:  ‘ಜೈಲರ್​’ ಚಿತ್ರದಲ್ಲಿ ತಮನ್ನಾ ಭಾಟಿಯಾ ನಟನೆ; ಶಿವಣ್ಣ, ರಜನಿಕಾಂತ್​ ಸಿನಿಮಾಗೆ ‘ಮಿಲ್ಕಿ ಬ್ಯೂಟಿ’ ಎಂಟ್ರಿ

ಶಿವರಾಜ್​ಕುಮಾರ್ ಅವರು ಬ್ಯುಸಿ ಹೀರೋ ಎನಿಸಿಕೊಂಡಿದ್ದಾರೆ. 8 ಚಿತ್ರಗಳು ಅವರ ಕೈಯಲ್ಲಿವೆ. ‘ಕ್ಯಾಪ್ಟನ್​ ಮಿಲ್ಲರ್​’ ಹೆಸರಿನ ತಮಿಳು ಸಿನಿಮಾದಲ್ಲಿ ಅವರು ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:11 am, Tue, 14 February 23

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!