AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯುಐ’ ಸಿನಿಮಾ ನೋಡಲಿದ್ದಾರೆ ಯಶ್ ಮತ್ತು ರಜನೀಕಾಂತ್

Rajinikanth: ಉಪೇಂದ್ರ ನಟನೆಯ ‘ಯುಐ’ ಸಿನಿಮಾ ಇಂದು ಬಿಡುಗಡೆ ಆಗಿದೆ. ಸಿನಿಮಾ ಬಿಡುಗಡೆಗೆ ಮುಂಚೆ ನಟರಾದ ಆಮಿರ್ ಖಾನ್ ಮತ್ತು ತೆಲುಗು ನಟ ನಾಗಾರ್ಜುನ ಅವರುಗಳು ಸಿನಿಮಾದ ಪ್ರಚಾರ ಮಾಡಿದ್ದಾರೆ. ಇದೀಗ ನಟರಾದ ರಜನೀಕಾಂತ್ ಹಾಗೂ ಯಶ್ ಅವರುಗಳು ಉಪೇಂದ್ರ ಅವರ ಬೆಂಬಲಕ್ಕೆ ನಿಂತಿದ್ದಾರೆ.

‘ಯುಐ’ ಸಿನಿಮಾ ನೋಡಲಿದ್ದಾರೆ ಯಶ್ ಮತ್ತು ರಜನೀಕಾಂತ್
Ui Kannada Movie
ಮಂಜುನಾಥ ಸಿ.
|

Updated on: Dec 20, 2024 | 8:01 PM

Share

ಉಪೇಂದ್ರ ನಟನೆಯ ‘ಯುಐ’ ಸಿನಿಮಾ ಇಂದು ಬಿಡುಗಡೆ ಆಗಿದೆ. ಸಿನಿಮಾದ ಬಿಡುಗಡೆಗೆ ಮುನ್ನ, ಖ್ಯಾತ ಬಾಲಿವುಡ್ ನಟ ಆಮಿರ್ ಖಾನ್ ಮತ್ತು ತೆಲುಗಿನ ಸ್ಟಾರ್ ನಟ ಅಕ್ಕಿನೇನಿ ನಾಗಾರ್ಜುನ ಅವರುಗಳು ಪ್ರಚಾರ ಮಾಡಿದ್ದರು. ಆಮಿರ್ ಖಾನ್ ಅಂತೂ ಸಿನಿಮಾದ ಟ್ರೈಲರ್ ಬಗ್ಗೆ ವಿಶೇಷ ವಿಡಿಯೋ ಮಾಡಿ ಹಾಕಿ, ಉಪೇಂದ್ರ ಅವರ ಪ್ರತಿಭೆಯನ್ನು ಕೊಂಡಾಡಿದ್ದರು. ನಾಗಾರ್ಜುನ ಸಹ ತಮ್ಮ ಬಿಗ್​ಬಾಸ್ ಶೋಗೆ ಉಪೇಂದ್ರ ಅವರನ್ನು ಅತಿಥಿಯಾಗಿ ಕರೆಸಿ ‘ಯುಐ’ ಸಿನಿಮಾದ ಪ್ರಚಾರ ಮಾಡಿಸಿದ್ದರು. ಇದೀಗ ನಟರಾದ ಯಶ್ ಮತ್ತು ರಜನೀಕಾಂತ್ ಅವರೇ ‘ಯುಐ’ ಸಿನಿಮಾದ ಪರ ನಿಂತಿದ್ದಾರೆ.

ರಜನೀಕಾಂತ್ ಅವರು ಉಪೇಂದ್ರ ಅವರಿಗಾಗಿ ಒಂದು ಹೆಜ್ಜೆ ಮುಂದಿಟ್ಟು ಬಂದಿದ್ದು, ಚೆನ್ನೈನಲ್ಲಿ ನಾಳೆ (ಡಿಸೆಂಬರ್ 21) ‘ಯುಐ’ ಸಿನಿಮಾದ ತಮಿಳು ಆವೃತ್ತಿಯನ್ನು ನೋಡಲಿದ್ದಾರೆ. ಆ ಮೂಲಕ ಉಪೇಂದ್ರ ಅವರಿಗೆ ಬೆಂಬಲ ನೀಡಲಿದ್ದಾರೆ. ರಜನೀಕಾಂತ್ ಅವರು ತಮಿಳಿನ ಸ್ಟಾರ್ ನಟರ ಸಿನಿಮಾಗಳಿಗೆ ಪ್ರಚಾರ ಮಾಡುವುದು, ಬೆಂಬಲ ನೀಡುವುದು ಬಹಳ ಕಡಿಮೆ. ಆದರೆ ಇದೀಗ ಉಪೇಂದ್ರ ಅವರಿಗಾಗಿ ಚಿತ್ರಮಂದಿರಕ್ಕೆ ಬಂದು ಸಿನಿಮಾ ನೋಡಲು ರಜನೀಕಾಂತ್ ಮುಂದಾಗಿದ್ದಾರೆ.

ಇನ್ನು ನಟ ಯಶ್ ಅವರು ಸಹ ಉಪೇಂದ್ರ ಅವರ ‘ಯುಐ’ ಸಿನಿಮಾವನ್ನು ಮುಂಬೈನಲ್ಲಿ ವೀಕ್ಷಿಸಲಿದ್ದಾರೆ. ನಟ ಯಶ್, ‘ಟಾಕ್ಸಿಕ್’ ಸಿನಿಮಾದ ಚಿತ್ರೀಕರಣಕ್ಕಾಗಿ ಮುಂಬೈನಲ್ಲಿ ವಾಸ್ತವ್ಯ ಹೂಡಿದ್ದಾರೆ. ಸತತವಾಗಿ ‘ಟಾಕ್ಸಿಕ್’ ಸಿನಿಮಾದ ಚಿತ್ರೀಕರಣ ಚಾಲ್ತಿಯಲ್ಲಿದೆ. ಚಿತ್ರೀಕರಣದ ನಡುವೆ ಬಿಡುವು ಪಡೆದುಕೊಂಡು ಮುಂಬೈನ ಚಿತ್ರಮಂದಿರವೊಂದರಲ್ಲಿ ‘ಯುಐ’ ಸಿನಿಮಾದ ಹಿಂದಿ ಆವೃತ್ತಿಯನ್ನು ನಟ ಯಶ್ ವೀಕ್ಷಿಸಲಿದ್ದಾರೆ.

ಇದನ್ನೂ ಓದಿ:ರಜನೀಕಾಂತ್​ರನ್ನು ಮಹಾಭಾರತದ ಪಾತ್ರಕ್ಕೆ ಹೋಲಿಸಿದ ಉಪೇಂದ್ರ

ಉಪೇಂದ್ರ ಅವರು ತಮಿಳಿನ ಸಿನಿಮಾ ‘ಕೂಲಿ’ಯಲ್ಲಿ ನಟಿಸುತ್ತಿದ್ದಾರೆ. ಆ ಸಿನಿಮಾದ ನಾಯಕ ರಜನೀಕಾಂತ್, ಅದೇ ಸಿನಿಮಾದಲ್ಲಿ ಬಾಲಿವುಡ್ ನಟ ಆಮಿರ್ ಖಾನ್, ತೆಲುಗಿನ ನಟ ನಾಗಾರ್ಜುನ ಅವರುಗಳು ಸಹ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಉಪೇಂದ್ರ ಅವರಿಗೆ ವಿಶೇಷ ಪಾತ್ರವಿದೆ. ಇದೇ ಕಾರಣಕ್ಕೆ ನಟರಾದ ರಜನೀಕಾಂತ್, ಆಮಿರ್ ಖಾನ್ ಮತ್ತು ನಾಗಾರ್ಜುನ ಅರುಗಳು ‘ಕೂಲಿ’ ಸಿನಿಮಾದ ತಮ್ಮ ಸಹನಟ ಉಪೇಂದ್ರ ಅವರ ಹೊಸ ಸಿನಿಮಾಕ್ಕೆ ಬೆಂಬಲ ಸೂಚಿಸಿ ಪ್ರಚಾರ ಮಾಡಿಕೊಟ್ಟಿದ್ದಾರೆ.

ಉಪೇಂದ್ರ ನಟಿಸಿ ನಿರ್ದೇಶನ ಮಾಡಿರುವ ‘ಯುಐ’ ಸಿನಿಮಾ ಇಂದು ಬಿಡುಗಡೆ ಆಗಿದೆ. ಸಿನಿಮಾದ ಬಗ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸಿನಿಮಾಕ್ಕೆ ಲಹರಿ ವೇಲು ಮತ್ತು ಕೆಪಿ ಶ್ರೀಕಾಂತ್ ಬಂಡವಾಳ ಹೂಡಿದ್ದಾರೆ. ಸಿನಿಮಾಕ್ಕೆ ಎಪಿ ಅರ್ಜುನ್ ಅವರ ಸಂಗೀತ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ