AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajinikanth: ನಟ ರಜನಿಕಾಂತ್​ ಮೇಲೆ 50 ಸಾವಿರ ರೂಪಾಯಿ ಸುರಿಯಲು ಕಾದು ಕುಳಿತ ಅಭಿಮಾನಿ

Puneeth Rajkumar | Karnataka Ratna: ‘ರಜನಿಕಾಂತ್​ ನಟನೆಯ ಪ್ರತಿ ಚಿತ್ರವನ್ನೂ ನೋಡಿದ್ದೇವೆ. ಅವರನ್ನು ನೋಡಲು ನಾವು ಬರೀ ಕೈಯಲ್ಲಿ ಬಂದಿಲ್ಲ. ದುಡ್ಡು ತೆಗೆದುಕೊಂಡು ಬಂದಿದ್ದೇವೆ’ ಎಂದು ಅಭಿಮಾನಿಯೊಬ್ಬರು ಹೇಳಿದ್ದಾರೆ.

Rajinikanth: ನಟ ರಜನಿಕಾಂತ್​ ಮೇಲೆ 50 ಸಾವಿರ ರೂಪಾಯಿ ಸುರಿಯಲು ಕಾದು ಕುಳಿತ ಅಭಿಮಾನಿ
ರಜನಿಕಾಂತ್​ ಅಭಿಮಾನಿ ಬಿಲಾಲ್​ ಅಹ್ಮದ್​
TV9 Web
| Edited By: |

Updated on:Nov 01, 2022 | 4:21 PM

Share

ನಟ ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರಿಗೆ ‘ಕರ್ನಾಟಕ ರತ್ನ’ (Karnataka Ratna) ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ಇದರಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲು ರಜನಿಕಾಂತ್​ ಅವರು ಬೆಂಗಳೂರಿಗೆ ಬಂದಿದ್ದಾರೆ. ರಜನಿಕಾಂತ್​ (Rajinikanth) ಅವರಿಗೆ ಅಪಾರ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಎಲ್ಲ ರಾಜ್ಯದಲ್ಲೂ, ಎಲ್ಲ ದೇಶದಲ್ಲೂ ‘ತಲೈವಾ’ ನಟನೆಯ ಸಿನಿಮಾಗಳು ಸದ್ದು ಮಾಡಿವೆ. ಅವರನ್ನು ಒಮ್ಮೆಯಾದರೂ ನೇರವಾಗಿ ನೋಡಬೇಕು ಎಂಬುದು ಎಲ್ಲ ಅಭಿಮಾನಿಗಳ ಆಸೆ. ಅಂಥ ಆಸೆಯನ್ನು ಈಡೇರಿಸಿಕೊಳ್ಳಬೇಕು ಎಂಬ ಉದ್ದೇಶದಿಂದ ಅಭಿಮಾನಿಯೊಬ್ಬರು ಬೆಂಗಳೂರಿನ ಖಾಸಗಿ ಹೋಟೆಲ್​ ಎದುರು ಕಾದು ಕುಳಿತಿದ್ದಾರೆ. ತಮ್ಮ ನೆಚ್ಚಿನ ನಟನ ಮೇಲೆ 50 ಸಾವಿರ ರೂಪಾಯಿ ಸುರಿಯಬೇಕು ಎಂಬ ಆಸೆಯನ್ನೂ ಅವರು ಇಟ್ಟುಕೊಂಡಿದ್ದಾರೆ.

ಪ್ರತಿಯೊಬ್ಬರ ಅಭಿಮಾನಿಯ ಭಾವನೆಗಳು ಬೇರೆ ಬೇರೆ ರೀತಿಯಲ್ಲಿ ಇರುತ್ತವೆ. ಅನೇಕ ಸಂದರ್ಭಗಳಲ್ಲಿ ಇಂಥದ್ದೆಲ್ಲ ಅತಿರೇಕ ಎನಿಸುವುದೂ ಉಂಟು. ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ರಜನಿಕಾಂತ್​ ಉಳಿದುಕೊಂಡಿದ್ದಾರೆ. ಆ ಹೋಟೆಲ್​ ಮುಂಭಾಗ ಅಭಿಮಾನಿಗಳು ಜಮಾಯಿಸಿದ್ದಾರೆ. ಅಚ್ಚರಿ ಎಂದರೆ ಬಿಲಾಲ್​ ಅಹ್ಮದ್ ಎಂಬ ಅಭಿಮಾನಿಯು ಜೇಬಿನಲ್ಲಿ ಬರೋಬ್ಬರಿ 50 ಸಾವಿರ ರೂಪಾಯಿ ಹಣ ತಂದಿದ್ದಾರೆ. ರಜನಿಕಾಂತ್​ ಸಿಕ್ಕರೆ ಅವರ ಮೇಲೆ ದುಡ್ಡಿ ಮಳೆ ಸುರಿಸಬೇಕು ಎಂಬುದು ಇವರ ಪ್ಲ್ಯಾನ್​. ಒಂದು ವೇಳೆ ರಜನಿಕಾಂತ್​ ಸಿಗದಿದ್ದರೆ, ಕನಿಷ್ಠ ಪಕ್ಷ ಅವರ ಕಾರಿನ ಮೇಲಾದರೂ ಹಣ ಸುರಿಯಬೇಕು ಎಂದು ಆಸೆ ಇಟ್ಟುಕೊಂಡಿದ್ದಾರೆ. ಈ ಬಗ್ಗೆ ಟಿವಿ9 ಜೊತೆ ಮಾತನಾಡಿದ್ದಾರೆ.

‘ರಜನಿಕಾಂತ್​ ಮತ್ತು ಡಾ. ರಾಜ್​ಕುಮಾರ್​ ನಡುವೆ ಮೊದಲಿನಿಂದಲೂ ಬಾಂಧವ್ಯ ಇದೆ. ಇಂದು ಬೆಂಗಳೂರಿಗೆ ಅವರು ಬಂದಿರುವುದರಿಂದ ನಮಗೆ ಹಬ್ಬದ ವಾತಾವರಣ ನಿರ್ಮಾಣ ಆಗಿದೆ. ಅವರ ಪ್ರತಿ ಸಿನಿಮಾವನ್ನೂ ನೋಡಿ ನಾವು ಎಂಜಾಯ್​ ಮಾಡಿದ್ದೇವೆ. ಅವರನ್ನು ನೋಡಲು ನಾವು ಬರೀ ಕೈಯಲ್ಲಿ ಬಂದಿಲ್ಲ. ದುಡ್ಡು ತೆಗೆದುಕೊಂಡು ಬಂದಿದ್ದೇವೆ. ಅವರ ಮೇಲೆ ದುಡ್ಡಿನ ಮಳೆ ಸುರಿಸುತ್ತೇವೆ. ಅಷ್ಟು ಅಭಿಮಾನ ನಮಗೆ ಇದೆ’ ಎಂದು ಬಿಲಾಲ್​ ಅಹ್ಮದ್ ಹೇಳಿದ್ದಾರೆ.

ಇದನ್ನೂ ಓದಿ
Image
Puneeth Rajkumar: ಪುನೀತ್​ ರಾಜ್​ಕುಮಾರ್ ಇಲ್ಲದೇ ಕಳೆಯಿತು 11 ತಿಂಗಳು; ಸಮಾಧಿ ಬಳಿ ಕಣ್ಣೀರು ಹಾಕಿದ ಫ್ಯಾನ್ಸ್​
Image
ಹೊಸಪೇಟೆ ಪುನೀತ್ ಪುತ್ಥಳಿಗೆ ವಿನಯ್ ರಾಜ್​ಕುಮಾರ್ ಮಾಲಾರ್ಪಣೆ
Image
Kantara: ‘ಕಾಂತಾರ’ ಚಿತ್ರಕ್ಕೆ ಪುನೀತ್​ ಹೀರೋ ಆಗ್ಬೇಕಿತ್ತು; ಆ ಸ್ಥಾನಕ್ಕೆ ರಿಷಬ್ ಶೆಟ್ಟಿ ಬಂದಿದ್ದು ಹೇಗೆ? ಇಲ್ಲಿದೆ ಉತ್ತರ
Image
ಪುನೀತ್ ಜನ್ಮದಿನ ಇನ್ಮುಂದೆ ‘ಸ್ಫೂರ್ತಿ ದಿನ’; ಸಚಿವ ಸುನೀಲ್ ಕುಮಾರ್ ಮನವಿ ಪುರಸ್ಕರಿಸಿದ ಸಿಎಂ ಬೊಮ್ಮಾಯಿ

‘ಸಿನಿಮಾಗಳಲ್ಲಿ ರಜನಿಕಾಂತ್​ ಅವರು ಸ್ಟೈಲಿಶ್​ ಆಗಿ ಕಾಣಿಸಿಕೊಳ್ಳುತ್ತಾರೆ. ಆದರೆ ರಿಯಲ್​ ಲೈಫ್​ನಲ್ಲಿ ತುಂಬ ಸರಳತೆ ಮೆರೆಯುತ್ತಾರೆ. ರಜನಿಕಾಂತ್​ ಅವರು ಕೊಡುಗೈ ದಾನಿ. ಅವರ ಕಾಲಿಗೆ ಬೀಳಲು ನಾವು ಸಿದ್ಧರಿದ್ದೇವೆ’ ಎಂದಿದ್ದಾರೆ ಬಿಲಾಲ್​ ಅಹ್ಮದ್.

ವಿಧಾನಸೌಧದ ಮುಂಭಾಗದಲ್ಲಿ ಪುನೀತ್​ ರಾಜ್​ಕುಮಾರ್​ ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಅವರ ಪರವಾಗಿ ಪತ್ನಿ ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಈ ಕ್ಷಣಕ್ಕೆ ರಜನಿಕಾಂತ್ ಸಾಕ್ಷಿ ಆಗುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:21 pm, Tue, 1 November 22

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!