AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜನಿಕಾಂತ್ ಗೆಳೆಯ ರಾಜ್‌ ಬಹದ್ದೂರ್ ಕಡೆಯಿಂದ ‘ಗಾರುಡಿಗ’ ಚಿತ್ರಕ್ಕೆ ಸಿಕ್ತು ಶುಭ ಹಾರೈಕೆ

‘ಗಾರುಡಿಗ’ ಸಿನಿಮಾದಲ್ಲಿ ಹಳ್ಳಿಯ ಯುವಕನಾಗಿ ಮಾಗಡಿ ಮೂಲದ ರುದ್ವಿನ್ ಅವರು ನಟಿಸಿದ್ದಾರೆ. ನಾಯಕಿಯಾಗಿ ಎರಡು ಶೇಡ್‌ಗಳು ಇರುವ ಪಾತ್ರದಲ್ಲಿ ಮಾನಸಾ ನಟಿಸಿದ್ದಾರೆ. ಅರ್ಚನಾ, ಅರ್ಜುನ್, ಸೋನು, ಮೋಹನ್, ಗಿರೀಶ್, ಸಂಜು ಸೇರಿದಂತೆ ಅನೇಕರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಚಿತ್ರದ ಹಾಡು ಬಿಡುಗಡೆ ಆಗಿದೆ.

ರಜನಿಕಾಂತ್ ಗೆಳೆಯ ರಾಜ್‌ ಬಹದ್ದೂರ್ ಕಡೆಯಿಂದ ‘ಗಾರುಡಿಗ’ ಚಿತ್ರಕ್ಕೆ ಸಿಕ್ತು ಶುಭ ಹಾರೈಕೆ
‘ಗಾರುಡಿಗ’ ಕನ್ನಡ ಸಿನಿಮಾ ತಂಡ
ಮದನ್​ ಕುಮಾರ್​
|

Updated on: Nov 13, 2023 | 9:05 PM

Share

ಚಿತ್ರರಂಗಕ್ಕೆ ಬರುವ ಹೊಸಬರ ಸಂಖ್ಯೆಗೆ ಕೊರತೆಯಿಲ್ಲ. ಈಗ ‘ಗಾರುಡಿಗ’ (Gaarudiga) ಶೀರ್ಷಿಕೆಯ ಚಿತ್ರದಲ್ಲಿ ಕೂಡ ಅನೇಕ ಹೊಸಬರು ಎಂಟ್ರಿ ನೀಡುತ್ತಿದ್ದಾರೆ. ಈ ಸಿನಿಮಾದ ಪ್ರಮೋಷನ್​ ಕಾರ್ಯಗಳಿಗೆ ಚಾಲನೆ ನೀಡಲಾಗಿದೆ. ಅದರ ಮೊದಲ ಹಂತವಾಗಿ ಸಾಂಗ್​ ರಿಲೀಸ್​ ಕಾರ್ಯಕ್ರಮ ಮಾಡಲಾಗಿದೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕಲಾವಿದರ ಸಂಘದ ಕಟ್ಟಡದಲ್ಲಿ ಗ್ರ್ಯಾಂಡ್​ ಆಗಿ ಈ ಕಾರ್ಯ್ರಕಮ ನಡೆಯಿತು. ‘ಸೂಪರ್ ಸ್ಟಾರ್’ ರಜನಿಕಾಂತ್ ಅವರ ಆಪ್ತ ಗೆಳೆಯರಾದ ರಾಜ್‌ ಬಹದ್ದೂರ್ (Raj Bahadur) ಅವರು ಈ ಸಮಾರಂಭಕ್ಕೆ ಆಗಮಿಸಿ, ಚಿತ್ರತಂಡಕ್ಕೆ ಶುಭ ಕೋರಿದ್ದು ವಿಶೇಷ. ‘ಗಾರುಡಿಗ’ ಸಿನಿಮಾ ಬಗ್ಗೆ ಇಲ್ಲಿದೆ ಒಂದಷ್ಟು ಮಾಹಿತಿ..

ವಕೀಲರಾಗಿರುವ ಡಾ. ಎಂ. ವೆಂಕಟಸ್ವಾಮಿ ಅವರು ‘ಎಂ.ವಿ. ಫಿಲ್ಮ್ಸ್​’ ಸಂಸ್ಥೆಯ ಮೂಲಕ ‘ಗಾರುಡಿಗ’ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ವಿಧ ಆರ್. ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಏನು ಈ ಸಿನಿಮಾದ ಕಥೆ ಎಂಬ ಬಗ್ಗೆ ಚಿತ್ರತಂಡದವರು ಮಾಹಿತಿ ಹಂಚಿಕೊಂಡಿದ್ದಾರೆ. ‘ರೈತನಾಗಿದ್ದವನು ನಗರಕ್ಕೆ ಬಂದು ತನ್ನ ಬುದ್ಧಿಶಕ್ತಿಯ ಬಲದಿಂದ ಒಂದು ಚಕ್ರವ್ಯೂಹವನ್ನು ಯಾವ ರೀತಿ ಭೇದಿಸುತ್ತಾನೆ ಎಂಬುದು ಈ ಚಿತ್ರದಲ್ಲಿದೆ’ ಎಂದು ತಂಡವರು ಹೇಳಿಕೊಂಡಿದ್ದಾರೆ.

‘ಗಾರುಡಿಗ’ ಸಿನಿಮಾದ ಹಾಡು:

‘ಶ್ರೀಮಂತ ಕುಟುಂಬದ ಹುಡುಗರು ಘೋರ ಅಪಘಾತಗಳನ್ನು ಮಾಡಿ, ಅದನ್ನು ಮುಚ್ಚಿಟ್ಟು ಆರಾಮಾಗಿ ಇರುತ್ತಾರೆ. ಆದರೆ ಅವರ ಬದುಕಿನಲ್ಲಿ ಬದಲಾವಣೆ ಆಗುತ್ತದೆ. ಹೀರೋ ತನ್ನ ಚಾಣಾಕ್ಷತನದಿಂದ ಕೆಲಸ ಸಾಧಿಸುತ್ತಾನೆ. ಆ ಶ್ರೀಮಂತರನ್ನು ಅಪರಾಧದ ಸ್ಥಳಕ್ಕೆ ಕರೆದುಕೊಂಡು ಹೋಗಿ, ಅವರಿಂದಲೇ ತಪ್ಪನ್ನು ಒಪ್ಪಿಕೊಳ್ಳುವಂತೆ ಮಾಡುತ್ತಾನೆ. ಆ ಮೂಲಕ ಗೆಲುವು ಕಾಣುತ್ತಾನೆ. ಆ ಬಳಿಕ ದುಷ್ಟರಿಗೆ ಶಿಕ್ಷೆ ಆಗುತ್ತಾ ಎಂಬುದು ಕುತೂಹಲ. ಮನಸಾಕ್ಷಿಗಿಂತಲೂ ದೊಡ್ಡದು ಯಾವುದೂ ಇಲ್ಲ ಎಂಬುದನ್ನು ಈ ಸಿನಿಮಾದಲ್ಲಿ ತೋರಿಸಲಾಗಿದೆ’ ಎಂದು ‘ಗಾರುಡಿಗ’ ತಂಡದವರು ಹೇಳಿದ್ದಾರೆ.

ಇದನ್ನೂ ಓದಿ: ಯೋಗರಾಜ್​ ಭಟ್​ ಧ್ವನಿಯಲ್ಲಿ ಮೂಡಿಬಂತು ‘ಬೆಂಬಿಡದ ನಾವಿಕ’ ಟೀಸರ್​; ಏನಿದರ ಕಥೆ?

ಈ ಸಿನಿಮಾದಲ್ಲಿ ಹಳ್ಳಿಯ ಯುವಕನಾಗಿ ಮಾಗಡಿ ಮೂಲದ ರುದ್ವಿನ್ ಅವರು ನಟಿಸಿದ್ದಾರೆ. ನಾಯಕಿಯಾಗಿ ಎರಡು ಶೇಡ್‌ಗಳು ಇರುವ ಪಾತ್ರದಲ್ಲಿ ಮಾನಸಾ ನಟಿಸಿದ್ದಾರೆ. ಅರ್ಚನಾ, ಅರ್ಜುನ್, ಸೋನು, ಮೋಹನ್, ಗಿರೀಶ್, ಸಂಜು ಸೇರಿದಂತೆ ಅನೇಕರು ಈ ಚಿತ್ರದಲ್ಲಿ ನಟಿಸಿದ್ದಾರೆ. ಬೆಂಗಳೂರು, ಚಿಕ್ಕಬಳ್ಳಾಪುರ, ದೇವನಹಳ್ಳಿ, ದೊಡ್ಡಬಳ್ಳಾಪುರ, ಆನೇಕಲ್, ಹೊಸಪೇಟೆ, ಕನಕಪುರ, ಹಾರೋಹಳ್ಳಿ ಮುಂತಾದೆಡೆ ಶೂಟಿಂಗ್​ ಮಾಡಲಾಗಿದೆ. ‘ಬಡವರ ಮಕ್ಕಳು ಬರುತ್ತಿದ್ದೇವೆ. ಪ್ರೀತಿ ಕೊಡಿ’ ಎಂದು ‘ಗಾರುಡಿಗ’ ಟೀಮ್​ ಕೇಳಿಕೊಂಡಿದೆ. ಚಿತ್ರದ ಬಿಡುಗಡೆಗೆ ತಯಾರಿ ನಡೆಯುತ್ತಿದೆ. ಎಂ. ಸಂಜೀವ್‌ ರಾವ್ ಅವರು ಸಂಗೀತ ನಿರ್ದೇಶನ, ಅನಿರುದ್ದ್-ಭರತ್ ಅವರು ಛಾಯಾಗ್ರಹಣ ಮಾಡಿದ್ದಾರೆ. ಭಾರ್ಗವ್-ಚೆಲುವಮೂರ್ತಿ ಅವರು ಸಂಕಲನದ ಜವಾಬ್ದಾರಿ ನಿಭಾಯಿಸಿದ್ದಾರೆ. ವಿಧ ಆರ್., ಎಂ. ಸಂಜೀವ್‌ ರಾವ್ ಸಾಹಿತ್ಯ ಬರೆದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು