AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​ ಸಾವಿನಲ್ಲೂ ಲಾಭ ಮಾಡಲು ಪ್ರಯತ್ನಿಸಿದ್ರಾ ರಜನಿಕಾಂತ್​? ಸಿಟ್ಟಾದ ಜನರಿಂದ ಕಟು ಟೀಕೆ

Rajinikanth: ತಮ್ಮ ಪುತ್ರಿಯ ಹೊಸ ಆ್ಯಪ್​ ಅನ್ನು ಪ್ರಮೋಟ್​ ಮಾಡುವ ಸಲುವಾಗಿ ಅದರಲ್ಲೇ ಪುನೀತ್ ರಾಜ್​ಕುಮಾರ್​​ಗೆ ರಜನಿಕಾಂತ್​ ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಇದನ್ನು ನೆಟ್ಟಿಗರು ತೀವ್ರವಾಗಿ ವಿರೋಧಿಸಿದ್ದಾರೆ.

ಪುನೀತ್​ ಸಾವಿನಲ್ಲೂ ಲಾಭ ಮಾಡಲು ಪ್ರಯತ್ನಿಸಿದ್ರಾ ರಜನಿಕಾಂತ್​? ಸಿಟ್ಟಾದ ಜನರಿಂದ ಕಟು ಟೀಕೆ
ರಜನಿಕಾಂತ್​, ಪುನೀತ್​ ರಾಜ್​ಕುಮಾರ್​
TV9 Web
| Edited By: |

Updated on:Nov 11, 2021 | 8:29 AM

Share

ಡಾ. ರಾಜ್​ಕುಮಾರ್​ (Dr. Rajkumar) ಕುಟುಂಬದ ಜೊತೆಗೆ ನಟ ರಜನಿಕಾಂತ್​ (Rajinikanth) ಅವರಿಗೆ ಇರುವ ಬಾಂಧವ್ಯ ಎಂಥದ್ದು ಎಂಬುದನ್ನು ಹೊಸದಾಗಿ ಹೇಳಬೇಕಾದ್ದಿಲ್ಲ. ಬಹುಕಾಲದಿಂದಲೂ ಅಣ್ಣಾವ್ರ ಫ್ಯಾಮಿಲಿ ಜೊತೆ ತಲೈವಾ ಅತ್ಮೀಯವಾಗಿದ್ದಾರೆ. ಆದರೆ ಈಗ ಪುನೀತ್​ ರಾಜ್​ಕುಮಾರ್​ (Puneeth Rajkumar) ಅಭಿಮಾನಿಗಳು ರಜನಿಕಾಂತ್​ ವಿರುದ್ಧ ತಿರುಗಿ ಬಿದ್ದಿದ್ದಾರೆ. ಹೃದಯಾಘಾತದಿಂದ ನಿಧನರಾದ ಪುನೀತ್​ಗೆ ಸಂತಾಪ ಸೂಚಿಸುವ ಭರದಲ್ಲಿ ರಜನಿ ಒಂದು ಎಡವಟ್ಟು ಮಾಡಿದ್ದಾರೆ. ಅದು ನೆಟ್ಟಿಗರಿಗೆ ಕಿಂಚಿತ್ತೂ ಹಿಡಿಸಿಲ್ಲ. ಹಾಗಾಗಿ ಸೋಶಿಯಲ್​ ಮೀಡಿಯಾದಲ್ಲಿ ಹಿಗ್ಗಾಮುಗ್ಗಾ ಕ್ಲಾಸ್​ ತೆಗೆದುಕೊಳ್ಳಲಾಗುತ್ತಿದೆ. ಇಷ್ಟೆಲ್ಲಾ ವಿವಾದಕ್ಕೆ ಕಾರಣ ಆಗಿರುವುದು ರಜನಿಕಾಂತ್​ ಪುತ್ರಿ ಸೌಂದರ್ಯಾ ಅವರ Hoote ಆ್ಯಪ್​!

ಪುನೀತ್​ ರಾಜ್​ಕುಮಾರ್​ ಇಹಲೋಕ ತ್ಯಜಿಸಿದ ಸಂದರ್ಭದಲ್ಲಿ ರಜನಿಕಾಂತ್​ ಅವರು ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಹಾಗಾಗಿ ಅವರು ಬೆಂಗಳೂರಿಗೆ ಬರಲು ಸಾಧ್ಯವಾಗಿರಲಿಲ್ಲ. ಈಗ ಅವರು ಚೇತರಿಸಿಕೊಂಡಿದ್ದು, ಪುನೀತ್​ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಆದರೆ ಅದಕ್ಕಾಗಿ ಅವರು ಆಯ್ಕೆ ಮಾಡಿಕೊಂಡಿರುವುದು ಪುತ್ರಿಯ Hoote ಆ್ಯಪ್. ಮಗಳ ಆ್ಯಪ್​ ಪ್ರಮೋಟ್​ ಮಾಡುವ ಸಲುವಾಗಿ ಅದರಲ್ಲೇ ಪುನೀತ್​ಗೆ ರಜನಿಕಾಂತ್​ ಶ್ರದ್ಧಾಂಜಲಿ ಅರ್ಪಿಸಿರುವುದನ್ನು ನೆಟ್ಟಿಗರು ವಿರೋಧಿಸಿದ್ದಾರೆ. ‘ನಿಮ್ಮಂಥ ದಿಗ್ಗಜ ನಟರಿಂದ ಇದನ್ನು ನಾವು ನಿರೀಕ್ಷಿಸಿರಲಿಲ್ಲ’ ಎಂದು ಜನರು ನೇರವಾಗಿ ಟೀಕಿಸಿದ್ದಾರೆ.

ರಜನಿಕಾಂತ್​ ಅವರಿಗೆ ದಾದಾಸಾಹೇಬ್​ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಲಾದ ದಿನವೇ Hoote ಆ್ಯಪ್ ಲಾಂಚ್​ ಆಗಿತ್ತು. ಇದೊಂದು ವಾಯ್ಸ್​ ಬೇಸ್ಡ್​ ಸೋಶಿಯಲ್​ ಮೀಡಿಯಾ ಆ್ಯಪ್​ ಆಗಿದ್ದು, ಧ್ವನಿ ಮೂಲಕ ನಮ್ಮ ಆಲೋಚನೆಗಳನ್ನು ಹಂಚಿಕೊಳ್ಳಬಹುದು. ಇದರ ಮೂಲಕವೇ ಪುನೀತ್​ಗೆ ರಜನಿಕಾಂತ್​ ಶ್ರದ್ಧಾಂಜಲಿ ಅರ್ಪಿಸಿ, ಅದರ ಲಿಂಕ್​ ಅನ್ನು ಟ್ವಿಟರ್​ನಲ್ಲಿ ಶೇರ್​ ಮಾಡಿಕೊಂಡಿದ್ದಾರೆ.

‘ಪುನೀತ್​ ನನ್ನ ಕಣ್ಣಮುಂದೆ ಬೆಳೆದ ಪ್ರೀತಿಪಾತ್ರ ಮತ್ತು ಪ್ರತಿಭಾವಂತ ಮಗು. ಯಶಸ್ಸಿನ ಉತ್ತುಂಗದಲ್ಲಿ ಇರುವಾಗಲೇ ನಮ್ಮನ್ನು ಅವರು ಅಗಲಿದರು. ಕನ್ನಡ ಚಿತ್ರರಂಗಕ್ಕೆ ಇದು ತುಂಬಲಾರದ ನಷ್ಟ. ಅವರ ಕುಟುಂಬಕ್ಕೆ ಸಾಂತ್ವನ ಹೇಳಲು ಮಾತುಗಳೇ ಬರುತ್ತಿಲ್ಲ. ಪುನೀತ್​ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ರಜನಿಕಾಂತ್​ ಹೇಳಿದ್ದಾರೆ. ಆದರೆ ಇದಕ್ಕಾಗಿ ಅವರು ಬೇರೆಲ್ಲಾ ಸೋಶಿಯಲ್​ ಮೀಡಿಯಾ ಬಿಟ್ಟು, ಪುತ್ರಿಯ Hoote ಆ್ಯಪ್​ ಬಳಸಿರುವುದು ಸ್ವಾರ್ಥ ಮತ್ತು ಲಾಭದ ಉದ್ದೇಶದಿಂದ ಎಂದು ಜನರು ಟೀಕಿಸುತ್ತಿದ್ದಾರೆ.

ಪುನೀತ್​ ನಿಧನದ ಬಳಿಕ ಕೆಲವು ಡೈಯಾಗ್ನಾಸ್ಟಿಕ್​ ಕೇಂದ್ರಗಳು ಕೂಡ ಇದೇ ರೀತಿ ಲಾಭ ಪಡೆಯಲು ಪ್ರಯತ್ನಿಸಿದ್ದವು. ಬ್ಯಾನರ್​ ಮೂಲಕ ಪುನೀತ್​ ರಾಜ್​ಕುಮಾರ್​ಗೆ ಶ್ರದ್ಧಾಂಜಲಿ ಅರ್ಪಿಸಿ, ಅದೇ ಬ್ಯಾನರ್​ನಲ್ಲಿ ತಮ್ಮ ಡೈಯಾಗ್ನಾಸ್ಟಿಕ್​ ಕೇಂದ್ರದಲ್ಲಿ ಹೃದಯಕ್ಕೆ ಸಂಬಂಧಿಸಿದ ಪರೀಕ್ಷೆಗಳಿಗೆ ಎಷ್ಟೆಷ್ಟು ದರ ಇದೆ ಎಂಬ ಜಾಹೀರಾತನ್ನು ಪ್ರಕಟಿಸಿದ್ದರು. ಅದು ಕೂಡ ಜನರ ಆಕ್ರೋಶಕ್ಕೆ ಕಾರಣ ಆಗಿತ್ತು.

ಇದನ್ನೂ ಓದಿ:

Rajinikanth: ರಜನಿಕಾಂತ್​ಗೆ ಹೃದಯದ ಸಮಸ್ಯೆ; ಆಸ್ಪತ್ರೆಗೆ ದಾಖಲಾಗಿರುವ ತಲೈವಾ ಆರೋಗ್ಯ ಸ್ಥಿತಿ ಈಗ ಹೇಗಿದೆ?

‘ಅಪ್ಪು ಸರ್​ ವಿಚಾರದಲ್ಲಿ ಮರಣ ಎಂಬ ಪದ ಬಳಸೋಕೆ ನಾನು ಇಷ್ಟಪಡಲ್ಲ’: ರಚಿತಾ ರಾಮ್​​

Published On - 7:51 am, Thu, 11 November 21

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ