AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dwarakish: ‘ದ್ವಾರಕೀಶ್​ ನಿಧನದಿಂದ ತೀವ್ರ ನೋವಾಗಿದೆ’: ಕಂಬನಿ ಮಿಡಿದ ರಜನಿಕಾಂತ್​

ಸ್ಟಾರ್​ ನಟ ರಜನಿಕಾಂತ್​ ಮತ್ತು ದ್ವಾರಕೀಶ್​ ಅವರ ನಡುವೆ ಉತ್ತಮ ಒಡನಾಟ ಇತ್ತು. ರಜನಿಕಾಂತ್​ ಅಭಿನಯಿಸಿದ್ದ ‘ಅಡುತ ವಾರಿಸು’ ಚಿತ್ರಕ್ಕೆ ದ್ವಾರಕೀಶ್​ ಬಂಡವಾಳ ಹೂಡಿದ್ದರು. 1983ರಲ್ಲಿ ಆ ಸಿನಿಮಾ ಬಿಡುಗಡೆ ಆಗಿತ್ತು. ಇಂದು (ಏ.16) ಅಗಲಿದ ತಮ್ಮ ಗೆಳೆಯನಿಗೆ ರಜನಿಕಾಂತ್​ ಸಂತಾಪ ಸೂಚಿಸಿದ್ದಾರೆ. ಸೋಶಿಯಲ್ ಮೀಡಿಯಾ ಮೂಲಕ ಅವರು ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

Dwarakish: ‘ದ್ವಾರಕೀಶ್​ ನಿಧನದಿಂದ ತೀವ್ರ ನೋವಾಗಿದೆ’: ಕಂಬನಿ ಮಿಡಿದ ರಜನಿಕಾಂತ್​
ರಜನಿಕಾಂತ್​, ದ್ವಾರಕೀಶ್​
ಮದನ್​ ಕುಮಾರ್​
|

Updated on: Apr 16, 2024 | 4:13 PM

Share

ಖ್ಯಾತ ನಟ ದ್ವಾರಕೀಶ್​ ಅವರ ನಿಧನಕ್ಕೆ (Dwarakish Death) ಅನೇಕ ಸೆಲೆಬ್ರಿಟಿಗಳು ಕಂಬನಿ ಮಿಡಿದಿದ್ದಾರೆ. ಕನ್ನಡ ಚಿತ್ರರಂಗ ಮಾತ್ರವಲ್ಲದೇ ಪರಭಾಷೆಯಲ್ಲೂ ದ್ವಾರಕೀಶ್​ ಅವರು ಕೆಲಸ ಮಾಡಿದ್ದರು. ನಿರ್ಮಾಪಕನಾಗಿ ಅವರು ಸಾಕಷ್ಟು ಖ್ಯಾತಿ ಹೊಂದಿದ್ದರು. ಸೂಪರ್​ ಸ್ಟಾರ್​ ರಜನಿಕಾಂತ್​ ಜೊತೆಗೂ ದ್ವಾರಕೀಶ್​ (Dwarakish) ಅವರು ಸಿನಿಮಾ ಮಾಡಿದ್ದರು. ಇಂದು (ಏಪ್ರಿಲ್​ 16) ದ್ವಾರಕೀಶ್​ ನಿಧನಕ್ಕೆ ರಜನಿಕಾಂತ್​ (Rajinikanth) ಸಂತಾಪ ಸೂಚಿಸಿದ್ದಾರೆ. ಸೋಶಿಯಲ್​ ಮೀಡಿಯಾ ಮೂಲಕ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಅಗಲಿದ ಗೆಳೆಯನ ಆತ್ಮಕ್ಕೆ ರಜನಿಕಾಂತ್​ ಶಾಂತಿಕೋರಿದ್ದಾರೆ.

‘ನನ್ನ ಆತ್ಮೀಯ ಗೆಳೆಯ ದ್ವಾರಕೀಶ್​ ನಿಧನದಿಂದ ನನಗೆ ತೀವ್ರ ನೋವಾಗಿದೆ. ಹಾಸ್ಯನಟನಾಗಿ ಅವರು ವೃತ್ತಿಜೀವನ ಆರಂಭಿಸಿದ್ದರು. ನಂತರ ದೊಡ್ಡ ನಿರ್ಮಾಪಕನಾಗಿ, ನಿರ್ದೇಶಕನಾಗಿ ಬೆಳೆದು ನಿಂತರು. ಆ ಎಲ್ಲ ಸಂಗತಿಗಳು ಈಗ ನೆನಪಾಗುತ್ತಿವೆ. ಅವರ ಆಪ್ತರು ಮತ್ತು ಕುಟುಂಬದವರಿಗೆ ನನ್ನ ಸಂತಾಪಗಳು’ ಎಂದು ರಜನಿಕಾಂತ್​ ಅವರು ‘ಎಕ್ಸ್​’ (ಟ್ವಿಟರ್​) ಮೂಲಕ ಬರೆದುಕೊಂಡಿದ್ದಾರೆ.

ರಜನಿಕಾಂತ್​ ‘ಎಕ್ಸ್​’ (ಟ್ವಿಟರ್​) ಪೋಸ್ಟ್​:

ರಜನಿಕಾಂತ್​ ಮತ್ತು ದ್ವಾರಕೀಶ್​ ನಡುವೆ ಒಳ್ಳೆಯ ಒಡನಾಟ ಇತ್ತು. ರಜನಿ ನಟಿಸಿದ್ದ ‘ಅಡುತ ವಾರಿಸು’ ಸಿನಿಮಾವನ್ನು ದ್ವಾರಕೀಶ್​ ಅವರು ನಿರ್ಮಾಣ ಮಾಡಿದ್ದರು. ಆ ಸಿನಿಮಾ 1983ರಲ್ಲಿ ಬಿಡುಗಡೆ ಆಗಿತ್ತು. ಶ್ರೀದೇವಿ ಕೂಡ ಆ ಚಿತ್ರದಲ್ಲಿ ಅಭಿನಯಿಸಿದ್ದರು. ಇಂದು ತಮ್ಮ ಗೆಳೆಯನ ಅಗಲಿಕೆಗೆ ರಜನಿಕಾಂತ್​ ಅವರು ಸಂತಾಪ ಸೂಚಿಸಿದ್ದಾರೆ. ಹಾಗೆಯೇ ಅನೇಕ ನಟ-ನಟಿಯರು, ತಂತ್ರಜ್ಞರು ದ್ವಾರಕೀಶ್​ ಅವರ ಅಂತಿಮ ದರ್ಶನ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಅಣ್ಣಾವ್ರಿಗೆ 2 ಸಿನಿಮಾ ಮಾತ್ರ ನಿರ್ಮಿಸಿದ ದ್ವಾರಕೀಶ್; ವಿಷ್ಣು ಜತೆ ಹಲವು ಚಿತ್ರ ಮಾಡಿದ್ದೇಕೆ?

ಬುಧವಾರ (ಏಪ್ರಿಲ್​ 17) ಬೆಳಗ್ಗೆ 7 ಗಂಟೆಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ದ್ವಾರಕೀಶ್​ ಅವರ ಪಾರ್ಥಿವ ಶರೀರ ಇಡಲಾಗುವುದು. 11 ಗಂಟೆವರೆಗೂ ಅಂತಿಮ ದರ್ಶನಕ್ಕೆ ಅವಕಾಶ ಇರಲಿದೆ. 11 ಗಂಟೆ ಬಳಿಕ ಚಾಮರಾಜಪೇಟೆಯಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು ಎಂಬ ಮಾಹಿತಿ ಇದೆ. ‘ದ್ವಾರಕೀಶ್​ ಚಿತ್ರ’ ಸಂಸ್ಥೆಯ ಮೂಲಕ 50ಕ್ಕೂ ಅಧಿಕ ಸಿನಿಮಾಗಳನ್ನು ದ್ವಾರಕೀಶ್​ ಅವರು ನಿರ್ಮಾಣ ಮಾಡಿದ್ದರು. ಆ ಮೂಲಕ ಅನೇಕರಿಗೆ ಅವಕಾಶ ನೀಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ