Dwarakish: ‘ದ್ವಾರಕೀಶ್​ ನಿಧನದಿಂದ ತೀವ್ರ ನೋವಾಗಿದೆ’: ಕಂಬನಿ ಮಿಡಿದ ರಜನಿಕಾಂತ್​

ಸ್ಟಾರ್​ ನಟ ರಜನಿಕಾಂತ್​ ಮತ್ತು ದ್ವಾರಕೀಶ್​ ಅವರ ನಡುವೆ ಉತ್ತಮ ಒಡನಾಟ ಇತ್ತು. ರಜನಿಕಾಂತ್​ ಅಭಿನಯಿಸಿದ್ದ ‘ಅಡುತ ವಾರಿಸು’ ಚಿತ್ರಕ್ಕೆ ದ್ವಾರಕೀಶ್​ ಬಂಡವಾಳ ಹೂಡಿದ್ದರು. 1983ರಲ್ಲಿ ಆ ಸಿನಿಮಾ ಬಿಡುಗಡೆ ಆಗಿತ್ತು. ಇಂದು (ಏ.16) ಅಗಲಿದ ತಮ್ಮ ಗೆಳೆಯನಿಗೆ ರಜನಿಕಾಂತ್​ ಸಂತಾಪ ಸೂಚಿಸಿದ್ದಾರೆ. ಸೋಶಿಯಲ್ ಮೀಡಿಯಾ ಮೂಲಕ ಅವರು ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

Dwarakish: ‘ದ್ವಾರಕೀಶ್​ ನಿಧನದಿಂದ ತೀವ್ರ ನೋವಾಗಿದೆ’: ಕಂಬನಿ ಮಿಡಿದ ರಜನಿಕಾಂತ್​
ರಜನಿಕಾಂತ್​, ದ್ವಾರಕೀಶ್​
Follow us
|

Updated on: Apr 16, 2024 | 4:13 PM

ಖ್ಯಾತ ನಟ ದ್ವಾರಕೀಶ್​ ಅವರ ನಿಧನಕ್ಕೆ (Dwarakish Death) ಅನೇಕ ಸೆಲೆಬ್ರಿಟಿಗಳು ಕಂಬನಿ ಮಿಡಿದಿದ್ದಾರೆ. ಕನ್ನಡ ಚಿತ್ರರಂಗ ಮಾತ್ರವಲ್ಲದೇ ಪರಭಾಷೆಯಲ್ಲೂ ದ್ವಾರಕೀಶ್​ ಅವರು ಕೆಲಸ ಮಾಡಿದ್ದರು. ನಿರ್ಮಾಪಕನಾಗಿ ಅವರು ಸಾಕಷ್ಟು ಖ್ಯಾತಿ ಹೊಂದಿದ್ದರು. ಸೂಪರ್​ ಸ್ಟಾರ್​ ರಜನಿಕಾಂತ್​ ಜೊತೆಗೂ ದ್ವಾರಕೀಶ್​ (Dwarakish) ಅವರು ಸಿನಿಮಾ ಮಾಡಿದ್ದರು. ಇಂದು (ಏಪ್ರಿಲ್​ 16) ದ್ವಾರಕೀಶ್​ ನಿಧನಕ್ಕೆ ರಜನಿಕಾಂತ್​ (Rajinikanth) ಸಂತಾಪ ಸೂಚಿಸಿದ್ದಾರೆ. ಸೋಶಿಯಲ್​ ಮೀಡಿಯಾ ಮೂಲಕ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಅಗಲಿದ ಗೆಳೆಯನ ಆತ್ಮಕ್ಕೆ ರಜನಿಕಾಂತ್​ ಶಾಂತಿಕೋರಿದ್ದಾರೆ.

‘ನನ್ನ ಆತ್ಮೀಯ ಗೆಳೆಯ ದ್ವಾರಕೀಶ್​ ನಿಧನದಿಂದ ನನಗೆ ತೀವ್ರ ನೋವಾಗಿದೆ. ಹಾಸ್ಯನಟನಾಗಿ ಅವರು ವೃತ್ತಿಜೀವನ ಆರಂಭಿಸಿದ್ದರು. ನಂತರ ದೊಡ್ಡ ನಿರ್ಮಾಪಕನಾಗಿ, ನಿರ್ದೇಶಕನಾಗಿ ಬೆಳೆದು ನಿಂತರು. ಆ ಎಲ್ಲ ಸಂಗತಿಗಳು ಈಗ ನೆನಪಾಗುತ್ತಿವೆ. ಅವರ ಆಪ್ತರು ಮತ್ತು ಕುಟುಂಬದವರಿಗೆ ನನ್ನ ಸಂತಾಪಗಳು’ ಎಂದು ರಜನಿಕಾಂತ್​ ಅವರು ‘ಎಕ್ಸ್​’ (ಟ್ವಿಟರ್​) ಮೂಲಕ ಬರೆದುಕೊಂಡಿದ್ದಾರೆ.

ರಜನಿಕಾಂತ್​ ‘ಎಕ್ಸ್​’ (ಟ್ವಿಟರ್​) ಪೋಸ್ಟ್​:

ರಜನಿಕಾಂತ್​ ಮತ್ತು ದ್ವಾರಕೀಶ್​ ನಡುವೆ ಒಳ್ಳೆಯ ಒಡನಾಟ ಇತ್ತು. ರಜನಿ ನಟಿಸಿದ್ದ ‘ಅಡುತ ವಾರಿಸು’ ಸಿನಿಮಾವನ್ನು ದ್ವಾರಕೀಶ್​ ಅವರು ನಿರ್ಮಾಣ ಮಾಡಿದ್ದರು. ಆ ಸಿನಿಮಾ 1983ರಲ್ಲಿ ಬಿಡುಗಡೆ ಆಗಿತ್ತು. ಶ್ರೀದೇವಿ ಕೂಡ ಆ ಚಿತ್ರದಲ್ಲಿ ಅಭಿನಯಿಸಿದ್ದರು. ಇಂದು ತಮ್ಮ ಗೆಳೆಯನ ಅಗಲಿಕೆಗೆ ರಜನಿಕಾಂತ್​ ಅವರು ಸಂತಾಪ ಸೂಚಿಸಿದ್ದಾರೆ. ಹಾಗೆಯೇ ಅನೇಕ ನಟ-ನಟಿಯರು, ತಂತ್ರಜ್ಞರು ದ್ವಾರಕೀಶ್​ ಅವರ ಅಂತಿಮ ದರ್ಶನ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಅಣ್ಣಾವ್ರಿಗೆ 2 ಸಿನಿಮಾ ಮಾತ್ರ ನಿರ್ಮಿಸಿದ ದ್ವಾರಕೀಶ್; ವಿಷ್ಣು ಜತೆ ಹಲವು ಚಿತ್ರ ಮಾಡಿದ್ದೇಕೆ?

ಬುಧವಾರ (ಏಪ್ರಿಲ್​ 17) ಬೆಳಗ್ಗೆ 7 ಗಂಟೆಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ದ್ವಾರಕೀಶ್​ ಅವರ ಪಾರ್ಥಿವ ಶರೀರ ಇಡಲಾಗುವುದು. 11 ಗಂಟೆವರೆಗೂ ಅಂತಿಮ ದರ್ಶನಕ್ಕೆ ಅವಕಾಶ ಇರಲಿದೆ. 11 ಗಂಟೆ ಬಳಿಕ ಚಾಮರಾಜಪೇಟೆಯಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು ಎಂಬ ಮಾಹಿತಿ ಇದೆ. ‘ದ್ವಾರಕೀಶ್​ ಚಿತ್ರ’ ಸಂಸ್ಥೆಯ ಮೂಲಕ 50ಕ್ಕೂ ಅಧಿಕ ಸಿನಿಮಾಗಳನ್ನು ದ್ವಾರಕೀಶ್​ ಅವರು ನಿರ್ಮಾಣ ಮಾಡಿದ್ದರು. ಆ ಮೂಲಕ ಅನೇಕರಿಗೆ ಅವಕಾಶ ನೀಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ