AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ರಜನೀಕಾಂತ್, ಅಣ್ಣಾವ್ರ ಹಿಟ್ ಸಿನಿಮಾ ಚಿತ್ರೀಕರಿಸಿದ ಸ್ಥಳದಲ್ಲೇ ಚಿತ್ರೀಕರಣ

Rajinikanth: ರಜನೀಕಾಂತ್​ ಬೆಂಗಳೂರಿಗೆ ಆಗಾಗ್ಗೆ ಬರುತ್ತಲೇ ಇರುತ್ತಾರೆ. ಇಲ್ಲಿ ಅವರ ಆತ್ಮೀಯ ಗೆಳೆಯರಿದ್ದಾರೆ. ಇದೀಗ ರಜನೀಕಾಂತ್ ಮೈಸೂರಿಗೆ ಬಂದಿದ್ದಾರೆ. ಮೈಸೂರಿಗೆ ಬಂದಿರುವುದು ಸಿನಿಮಾ ಚಿತ್ರೀಕರಣಕ್ಕಾಗಿ. ಮೈಸೂರಿನ ಬಳಿ ಹುಲ್ಲೇನಹಳ್ಳಿಯಲ್ಲಿ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿ ಆಗಿದ್ದಾರೆ. ವಿಶೇಷವೆಂದರೆ ಅಣ್ಣಾವ್ರ ಸೂಪರ್ ಹಿಟ್ ಸಿನಿಮಾದ ಚಿತ್ರೀಕರಣವೂ ಇದೇ ಸ್ಥಳದಲ್ಲಿ ಆಗಿತ್ತು.

ಮೈಸೂರಿನಲ್ಲಿ ರಜನೀಕಾಂತ್, ಅಣ್ಣಾವ್ರ ಹಿಟ್ ಸಿನಿಮಾ ಚಿತ್ರೀಕರಿಸಿದ ಸ್ಥಳದಲ್ಲೇ ಚಿತ್ರೀಕರಣ
Jailer
ಮಂಜುನಾಥ ಸಿ.
|

Updated on: Jun 20, 2025 | 4:01 PM

Share

ನಟ ರಜನೀಕಾಂತ್​ಗೂ (Rajinikanth) ಕರ್ನಾಟಕಕ್ಕೂ ಕರುಳು-ಬಳ್ಳಿ ಸಂಬಂಧ. ಕರ್ನಾಟದವರೇ ಆಗಿರುವ ರಜನೀಕಾಂತ್ ನೆಲೆ ಕಂಡುಕೊಂಡಿದ್ದು ತಮಿಳುನಾಡಿನಲ್ಲಿ. ಆದರೆ ಕರ್ನಾಟಕವನ್ನು ವಿಶೇಷವಾಗಿ ಬೆಂಗಳೂರನ್ನು ಅವರು ಮರೆತಿಲ್ಲ. ರಜನೀಕಾಂತ್ ಅವರ ಬಾಲ್ಯ, ಯೌವ್ವನ ಕಳೆದ ಬೆಂಗಳೂರಿಗೆ ಆಗಾಗ್ಗೆ ಭೇಟಿ ನೀಡುತ್ತಿರುತ್ತಾರೆ. ತಮ್ಮ ಹಳೆಯ ಗೆಳೆಯರೊಟ್ಟಿಗೆ ಸಮಯ ಕಳೆಯುತ್ತಿರುತ್ತಾರೆ. ಇದೀಗ ರಜನೀಕಾಂತ್ ಮೈಸೂರಿಗೆ ಬಂದಿದ್ದಾರೆ. ಈ ಬಾರಿ ಬಂದಿರುವುದು ಸಿನಿಮಾ ಚಿತ್ರೀಕರಣಕ್ಕಾಗಿ. ಅದೂ ಅಣ್ಣಾವ್ರ ಸೂಪರ್ ಹಿಟ್ ಸಿನಿಮಾ ಒಂದರ ಚಿತ್ರೀಕರಣ ನಡೆದ ಜಾಗದಲ್ಲಿಯೇ ರಜನೀಕಾಂತ್ ಚಿತ್ರೀಕರಣ ನಡೆಸುತ್ತಿದ್ದಾರೆ.

‘ಜೈಲರ್ 2’ ಸಿನಿಮಾದ ಚಿತ್ರೀಕರಣಕ್ಕಾಗಿ ರಜನೀಕಾಂತ್ ಅವರು ಮೈಸೂರಿಗೆ ಬಂದಿದ್ದಾರೆ. ಮೈಸೂರಿನ ಬಳಿಯ ಹುಲ್ಲೇನಹಳ್ಳಿ ಬಳಿ ಸೇತುವೆಯ ಮೇಲೆ ಚಿತ್ರೀಕರಣ ನಡೆಯುತ್ತಿದೆ. ಇಲ್ಲಿ ಆಕ್ಷನ್ ಸೀನ್ ಒಂದರ ಚಿತ್ರೀಕರಣ ಚಾಲ್ತಿಯಲ್ಲಿದ್ದು, ಸುಮಾರು ಮೂರು-ನಾಲ್ಕು ದಿನಗಳ ಕಾಲ ಸಿನಿಮಾದ ಚಿತ್ರೀಕರಣ ಇದೇ ಸ್ಥಳದಲ್ಲಿ ನಡೆಯಲಿದೆ ಎನ್ನಲಾಗುತ್ತಿದೆ.

ಹುಲ್ಲೇನಹಳ್ಳಿಯ ಸೇತುವೆಯ ಮೇಲೆ ಚಿತ್ರೀಕರಣ ನಡೆಯುತ್ತಿದ್ದು, ವಿಶೇಷವೆಂದರೆ ಸುಮಾರು 40 ವರ್ಷದ ಹಿಂದೆ ಇದೇ ಸ್ಥಳದಲ್ಲಿ ಡಾ ರಾಜ್​​ಕುಮಾರ್ ನಟನೆಯ ಬ್ಲಾಕ್ ಬಸ್ಟರ್ ಸಿನಿಮಾ ‘ಹೊಸಬೆಳಕು’ ಚಿತ್ರೀಕರಣ ನಡೆದಿತ್ತು. ಹೊಸಬೆಳಕು ಸಿನಿಮಾದ ಹಾಡೊಂದರ ಚಿತ್ರೀಕರಣವನ್ನು ಇದೇ ಹುಲ್ಲೇನಹಳ್ಳಿ ಸೇತುವೆಯ ಬಳಿ ಮಾಡಲಾಗಿತ್ತು. ಇದೀಗ ರಜನೀಕಾಂತ್ ಅವರು ‘ಜೈಲರ್ 2’ ಸಿನಿಮಾದ ಚಿತ್ರೀಕರಣವನ್ನು ಅದೇ ಸ್ಥಳದಲ್ಲಿ ಮಾಡುತ್ತಿದ್ದಾರೆ.

‘ಜೈಲರ್’ ಸಿನಿಮಾದ ಮೊದಲ ಭಾಗದ ಕೆಲ ದೃಶ್ಯಗಳ ಚಿತ್ರೀಕರಣವನ್ನು ಮಂಡ್ಯದಲ್ಲಿ ಮಾಡಲಾಗಿತ್ತು. ಆ ಚಿತ್ರೀಕರಣದಲ್ಲಿ ನಟ ಶಿವರಾಜ್ ಕುಮಾರ್ ಸಹ ಭಾಗವಹಿಸಿದ್ದರು. ಈಗ ನಡೆಯುತ್ತಿರುವ ಚಿತ್ರೀಕರಣದಲ್ಲಿ ಶಿವಣ್ಣ ಭಾಗವಹಿಸುತ್ತಾರೆಯೋ ಇಲ್ಲವೇ ಎಂಬ ಬಗ್ಗೆ ಖಾತ್ರಿ ಇಲ್ಲ. ಕೆಲ ವಾರಗಳ ಹಿಂದೆ ಇದೇ ಸಿನಿಮಾದ ಚಿತ್ರೀಕರಣ ಕೇರಳದಲ್ಲಿ ನಡೆದಿತ್ತು. ಕೇರಳದಲ್ಲಿ ರಜನೀಕಾಂತ್, ರಮ್ಯಕೃಷ್ಣ ಇನ್ನೂ ಹಲವಾರು ಕಲಾವಿದರು ಚಿತ್ರೀಕರಣದಲ್ಲಿ ಭಾಗಿ ಆಗಿದ್ದರು.

ಇದನ್ನೂ ಓದಿ:ರಜನೀಕಾಂತ್ ಆಪ್ತ, ಹಿರಿಯ ನಟ ರಾಜೇಶ್ ನಿಧನ

‘ಜೈಲರ್’ ಸಿನಿಮಾ 2023 ರಲ್ಲಿ ಬಿಡುಗಡೆ ಆಗಿ ದೊಡ್ಡ ಹಿಟ್ ಆಗಿತ್ತು. ಆ ಸಿನಿಮಾನಲ್ಲಿ ರಜನೀಕಾಂತ್ ಜೊತೆಗೆ ಶಿವರಾಜ್ ಕುಮಾರ್, ಮೋಹನ್​​ಲಾಲ್, ಜಾಕಿ ಶ್ರಾಫ್, ಕಿಶೋರ್, ತಮನ್ನಾ ಭಾಟಿಯಾ, ಸುನಿಲ್ ಇನ್ನೂ ಹಲವಾರು ನಟರು ನಟಿಸಿದ್ದರು. ‘ಜೈಲರ್ 2’ ಸಿನಿಮಾನಲ್ಲಿಯೂ ಶಿವಣ್ಣ, ಮೋಹನ್​ಲಾಲ್, ಜಾಕಿ ಶ್ರಾಫ್ ಅವರುಗಳು ಇರಲಿದ್ದು, ಇವರ ಜೊತೆಗೆ ಬಾಲಕೃಷ್ಣ ಸಹ ಇರಲಿದ್ದಾರೆ ಎನ್ನಲಾಗುತ್ತಿದೆ. ಸಿನಿಮಾವನ್ನು ನೆಲ್ಸನ್ ನಿರ್ದೇಶನ ಮಾಡುತ್ತಿದ್ದಾರೆ. ಅನಿರುದ್ಧ್ ರವಿಚಂದ್ರನ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಬಂಡವಾಳ ತೊಡಗಿಸಿರುವುದು ಕಲಾನಿಧಿ ಮಾರನ್.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್